ಲೇಖಕ: admin

ಮಡಿಕೇರಿ ಏ.10 :  ಕಾರು ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ  ಸೀಗೆತೋಡುವಿನಲ್ಲಿ ನಡೆದಿದೆ. ತಿರುಪತಿಯಿಂದ ಗೋಣಿಕೊಪ್ಪಲು ಮಾರ್ಗವಾಗಿ ಮೂರ್ನಾಡುವಿಗೆ ತೆರಳುತ್ತಿದ್ದ ಕಾರಿಗೆ ಪಿರಿಯಾಪಟ್ಟಣದಿಂದ ಗೋಣಿಕೊಪ್ಪಲಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದೆ. ಅದೃಷ್ಟವಶಾತ್  ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಏ.9 : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ ನಡೆಸಿರುವ 5, 7, 10 ಹಾಗೂ 12ನೇ ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ಜಿಲ್ಲೆಯ 2800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಮಟ್ಟದ RANK ಪಟ್ಟಿ ಈ ಕೆಳಗಿನಂತಿದೆ. 12ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಪಾಲಿಬೆಟ್ಟ ಮದ್’ರಸ ವಿದ್ಯಾರ್ಥಿನಿಗಳಾದ ಇರ್ಫಾನ ಹಾಗೂ ರಿಝ್ವಾನಾ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದರೆ ಫಾರಿಸಾ ಆಝಾದ್ ನಗರ ತೃತೀಯ ಸ್ಥಾನವನ್ನು ಪಡೆದರು. 10ನೇ ತರಗತಿಯಲ್ಲಿ ಫರೀದಾ ಕುಂಜಿಲ ಪ್ರಥಮ ಸ್ಥಾನ ಗಳಿಸಿದರೆ ನಾಪೋಕ್ಲುವಿನ ಝಿಯಾ ಝೈನಬ ಹಾಗೂ ಅಮ್ಮತ್ತಿಯ ಮುಹಮ್ಮದ್ ಅಜ್’ನಾಸ್ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಂಡರು. ಏಳನೇ ತರಗತಿಯಲ್ಲಿ ರಿಶಾನಾ ಪಾಲಿಬೆಟ್ಟ ಹಾಗೂ ಫಾತಿಮಾ ಐಫಾ ಆಝಾದ್ ನಗರ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದರೆ ಮೂರ್ನಾಡುವಿನ ಹಬೀಬ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಐದನೇ ತರಗತಿಯಲ್ಲಿ 7ನೇ ಹೊಸಕೋಟೆಯ ಇಝಾನ್ ಫೆಬಿನ್ ಪ್ರಥಮ ಸ್ಥಾನವನ್ನು ಪಡೆದರೆ ಮುಹಮ್ಮದ್ ಆಶಿಖ್…

Read More

ಸೋಮವಾರಪೇಟೆ ಏ.9 : ಕಳೆದ ಒಂದೂವರೆ ದಶಕಗಳಿಂದ ಗ್ರಾಮದ ರಸ್ತೆಗೆ ಅನುದಾನ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಸುಳಿಮಳ್ತೆ ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿದ ಗ್ರಾಮಸ್ಥರು, ತೀರ್ಮಾನ ತೆಗದುಕೊಂಡು ಗ್ರಾಮದ ಮುಖ್ಯರಸ್ತೆಗೆ ಮತದಾನ ಬಹಿಷ್ಕಾರದ ಬ್ಯಾನರ್ ಕಟ್ಟಿದ್ದರು. ಹೊನವಳ್ಳಿ ಜಂಕ್ಷನ್‌ನಿಂದ ಸುಳಿಮಳ್ತೆ ಮಾರ್ಗವಾಗಿ ದೊಡ್ಡಮಳ್ತೆ ಹೊನ್ನಮ್ಮನ ಕೆರೆ ಜಂಕ್ಷನ್ ತನಕ ರಸ್ತೆ ಕಾಮಗಾರಿಗೆ ಅನುದಾನ ಕೋರಲಾಗಿತ್ತು. ಆದರೆ ಇದುವರೆಗೆ ಜನಪ್ರತಿನಿಧಿಗಳು ಅನುದಾನ ಕಲ್ಪಿಸದೆ ಅನ್ಯಾಯ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಕೃಷಿಕರು ವಾಸಿಸುವ ಗ್ರಾಮ, ರಸ್ತೆ ಗುಂಡಿಬಿದ್ದು ವಾಹನ ಚಾಲನೆ ಕಷ್ಟಕರವಾಗಿದೆ. ಕೃಷಿ ಫಸಲನ್ನು ಸಾಗಿಸಲು ಕಷ್ಟವಾಗುತ್ತಿದೆ. ಪ್ರತಿವರ್ಷ ಗೌರಿ-ಗಣೇಶ ಹಬ್ಬದಂದು ಐತಿಹಾಸಿಕ ಹಿನ್ನೆಲೆಯುಳ್ಳ ದೊಡ್ಡಮಳ್ತೆ ಗ್ರಾಮದಲ್ಲಿರುವ ಹೊನ್ನಮ್ಮನ ಕೆರೆ ಜಾತ್ರೆಗೆ ಸಾವಿರಾರು ಜನರು ಸೇರುತ್ತಾರೆ. ಹೆಚ್ಚಿನ ಜನರು ಇದೇ ರಸ್ತೆಯನ್ನು ಅವಲಂಭಿಸಿದ್ದಾರೆ. ಆದರೂ ರಸ್ತೆಗೆ ಅನುದಾನ ಕಲ್ಪಿಸದೆ ಅನ್ಯಾಯವೆಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಗೋವಿಂದ, ಹಿರಿಯರಾದ ಎಸ್.ಆರ್.ಪುಟ್ಟರಾಜು, ಹೊನವಳ್ಳಿ ಚಂದ್ರಶೇಖರ್,…

Read More

ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಿಂದ ಕೆರೆಕೊಪ್ಪ ಮಾರ್ಗವಾಗಿ ನಗರಳ್ಳಿ ಮತ್ತು ಶಾಂತಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಭಾನುವಾರ ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿದರು. ಈ ರಸ್ತೆಯು ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟವನ್ನು ತಲುಪಲು ಹತ್ತಿರದ ಮಾರ್ಗವಾಗಿದ್ದು ಅತೀ ಹೆಚ್ಚು ಪ್ರವಾಸಿಗರ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿರುವ ಕಾರಣದಿಂದ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನದ ಮೂಲಕ ಗುಂಡಿ ಮುಚ್ಚಿದರು. ಶ್ರಮದಾನದಲ್ಲಿ ಯು.ಕೆ.ಸೋಮಶೇಖರ್, ಸಿ.ಕೆ.ನಾಗರಾಜ್, ಕೆ.ಕೆ.ಲಕ್ಷ್ಮೀಕಾಂತ ಕೆ,ಡಿ.ಗಿರೀಶ್, ಸಿ.ಸಿ.ದಯಾನಂದ, ಪ್ರದೀಪ್ ಕುಮಾರ್, ಗಣೇಶ್, ದಿನೇಶ್ ಭಾಗವಹಿಸಿದ್ದರು.

Read More

ಸೋಮವಾರಪೇಟೆ ಏ.9 : ಚಿಲ್ಲರೆ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಚಿಲ್ಲರೆ ಅಂಗಡಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 17.280 ಲೀ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಐಗೂರು ಸಮೀಪದ ಯಡವಾರೆ ಗ್ರಾಮ ನಿವಾಸಿಯೊಬ್ಬರು  ತನ್ನ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದ ಅಧಿಕಾರಿಗಳು ಈಚೆಗೆ ದಾಳಿ ನಡೆಸಿದ್ದರು. ಉಪ ವಿಭಾಗ ಅಬಕಾರಿ ಅಧೀಕ್ಷಕರಾದ ಆರ್.ಎಂ. ಚೈತ್ರಾ ಅರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

Read More

ಸೋಮವಾರಪೇಟೆ ಏ.9 : ಸೋಮವಾರಪೇಟೆ ತಾಲ್ಲೂಕಿನ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಕರೆಯಲ್ಪಡುವ ನಗರಳ್ಳಿ ಸುಗ್ಗಿ ಉತ್ಸವದ ಪ್ರಯುಕ್ತ ಸುಗ್ಗಿ ಆಚರಣೆಯ ವಿಧಿವಿಧಾನದಂತೆ ದೇವಿಯ ತವರೂರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಸಂಜೆ ದೀಪಗಳನ್ನು ತಂದು ಪೂಜಿಸಿದರು. ಅನಾದಿ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಗ್ರಾಮದ ಮನೆಯಿಂದ ಗ್ರಾಮಸ್ಥರು ಸಾಮೂಹಿಕವಾಗಿ ದೀಪಗಳನ್ನು ಇಟ್ಟು ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ನಂತರ ದೇವರಕಟ್ಟೆಯಲ್ಲಿ ಗ್ರಾಮಸ್ಥರು ಸುಗ್ಗಿ ಕುಣಿತದೊಂದಿಗೆ ಪೂಜಾ ಕಾರ್ಯ ನಡೆಸಿದರು. ಕೂತಿ ಗ್ರಾಮದ ಅಧ್ಯಕ್ಷ ಎಚ್.ಡಿ. ಮೋಹನ್, ಉಪಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ವಿನೋದ್ ಕುಮಾರ್, ಖಜಾಂಚಿ ಕಿಶನ್, ಗ್ರಾಮದ ಪಟೇಲರಾದ ಬಸವರಾಜ್, ಹಿರಿಯರಾದ ಕೆ.ಟಿ. ಪರಮೇಶ್, ಗಣೇಶ್, ದಿನೇಶ್, ಗಿರೀಶ್, ಅರ್ಚಕ ಅನಂತರಾಮ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಏ.9 : ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ಪ್ರತಿಷ್ಠಿತ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ನಮ್ಮೆ’ಯಲ್ಲಿ ಕುಪ್ಪಂಡ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಎದುರಾಳಿ ತಂಡದ ವಿರುದ್ಧ ಸಮಬಲ ಪ್ರದರ್ಶನ ನೀಡಿದರೂ ಶೂಟ್‌ಔಟ್‌ನಲ್ಲಿ ಕೇವಲ 2 ಗೋಲು ದಾಖಲಿಸಿದ ಕುಲ್ಲೇಟಿರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇಂದು ನಡೆದ ಅಂತಿಮ ಪಂದ್ಯಾವಳಿಯನ್ನು ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಬೆಳ್ಳಿಯ ಹಾಕಿ ಸ್ಟಿಕ್‌ನಿಂದ ಬೆಳ್ಳಿಯ ಹಾಕಿ ಚೆಂಡನ್ನು ಹೊಡೆಯುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ರೋಚಕ ಪಂದ್ಯಾಟದಲ್ಲಿ ಕುಪ್ಪಂಡ ತಂಡ ಮೊದಲ ಕ್ವಾಟರ್‌ನಲ್ಲಿ 1 ಗೋಲು ಗಳಿಸಿ ಮುನ್ನಡೆ ಪಡೆಯಿತು. ರಭಸದ ಪ್ರದರ್ಶನ ನೀಡಿದ ಕುಲ್ಲೇಟಿರ ತಂಡ ದ್ವಿತೀಯಾರ್ಧದಲ್ಲಿ ಎದುರಾಳಿ ಕುಪ್ಪಂಡ ವಿರುದ್ದ 1 ಗೋಲು ದಾಖಲಿಸಿ ಸಮಬಲ ಸಾಧಿಸಿತು. ಆದರೆ ನಿಗಧಿತ ಅವಧಿಯಲ್ಲಿ ಇತ್ತಂಡಗಳಿಗೆ ಒಟ್ಟು 11 ಪೆನಾಲ್ಟಿ ಕಾರ್ನರ್ ಅವಕಾಶ ದೊರೆಯಿತಾದರೂ, ಯಾವುದೇ…

Read More

ಮಡಿಕೇರಿ ಏ.9 : ಪೋಷಕರು ಮಕ್ಕಳಿಗೆ ಹಾಕಿ ಕ್ರೀಡೆಯಲ್ಲಿ ಒಲವು ಮೂಡಿಸುವ ಮೂಲಕ ಪ್ರೋತ್ಸಾಹಿಸಬೇಕು, ಆ ಮೂಲಕ ಭವಿಷ್ಯದ ದಿನಗಳಲ್ಲಿ ಕೊಡಗಿನಿಂದ ಹೆಚ್ಚು ಮಂದಿ ಆಟಗಾರರು ಭಾರತ ಹಾಕಿ ತಂಡವನ್ನು ಪ್ರತಿನಿಧಿಸುವಂತಾಗಬೇಕು ಎಂದು ಭಾರತ ಹಾಕಿ ತಂಡದ ಮಾಜಿ ನಾಯಕ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತ, ಒಲಿಂಪಿಯನ್ ಧನ್‌ರಾಜ್ ಪಿಳ್ಳೆ ಕರೆ ನೀಡಿದರು. ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿತ 23ನೇ ವರ್ಷದ ಕೊಡವ ಕೌಟುಂಬಿಕ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ನಮ್ಮೆ 2023’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದು ಕಾಲದಲ್ಲಿ ಭಾರತ ಹಾಕಿ ತಂಡದಲ್ಲಿ 8ರಿಂದ 10 ಮಂದಿ ಕೊಡಗಿನ ಆಟಗಾರರು ಇರುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಈ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅವರು ವಿಷಾಧಿಸಿದರು. ಮಕ್ಕಳು, ಯುವಕರಲ್ಲಿ ಹಾಕಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲು ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಸಹಕಾರಿಯಾಗಿದೆ. ಇಂತಹ ಕ್ರೀಡಾಕೂಟಗಳಿಂದ ಮತ್ತಷ್ಟು ಯುವ ಹಾಕಿಪಟುಗಳು ರಾಜ್ಯ ಮತ್ತು ರಾಷ್ಟ್ರವನ್ನು ಪ್ರತಿನಿಧಿಸುವಂತಾಗಲಿ ಎಂದು…

Read More

ಮಡಿಕೇರಿ ಏ.9 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ. ತೆರೆದ ಜೀಪ್ ನಲ್ಲಿ ಸಫಾರಿ ನಡೆಸಿದ ಅವರು ವನ್ಯಜೀವಿಗಳನ್ನು ವೀಕ್ಷಿಸಿದರು. ಮೋದಿ ಅವರು ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿನಲ್ಲಿ ಕಾಡಿನಲ್ಲಿ ಮಿಂಚಿದರು. ಒಟ್ಟು 9 ವಾಹನಗಳು ಪ್ರಧಾನಿ ಅವರ ಜೊತೆಗಿದ್ದು, ಸಫಾರಿ ಮುಗಿಸಿ ತಮಿಳುನಾಡಿನ ತೆಪ್ಪಕಾಡಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಡಿಕೇರಿ ಏ.9 : ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ಮೇ 7, 8 ಮತ್ತು 9 ರಂದು ನಡೆಯಬೇಕಾಗಿದ್ದ ಉರೂಸ್ ನ್ನು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುoದೂಡಲ್ಪಟ್ಟ ಉರೂಸ್ ಮೇ 14, 15 ಮತ್ತು 16 ರಂದು ಉಲಮಾ-ಉಮಾರ, ಸಾದತುಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.

Read More