ಹಾವೇರಿ: ನಗರದ ಕನಕ-ಶರೀಫ-ಸರ್ವಜ್ಞ ವೇದಿಕೆ ಮುಂಭಾಗ ರಾಷ್ಟ್ರಧ್ವಜ, ನಾಡ ಧ್ವಜ ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಧ್ವಜಾರೋಹಣ ಮಾಡುವ ಮೂಲಕ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹೀರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು, ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.
ಲೇಖಕ: admin
ಮಡಿಕೇರಿ ಜ.6 : ಹಾಕತ್ತೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಗ್ಗೊಡ್ಲು ಗ್ರಾಮದಲ್ಲಿ ಬೂತ್ ವಿಜಯ್ ಅಭಿಯಾನ ನಡೆಯಿತು. ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕರ್ತರ ಮನೆಯ ಮುಂದೆ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಬೂತ್ ವಿಜಯ್ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶಕ್ತಿಕೇಂದ್ರದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಸೋಮವಾರಪೇಟೆ ಜ.6 : ಕಾಯಕಯೋಗಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.9ರಂದು ಪಟ್ಟಣದ ಆನೆಕೆರೆ ಸಮೀಪ ನಿರ್ಮಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಮಹೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9ಗಂಟೆಗೆ ಜೇಸಿ ವೇದಿಕೆಯಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ ನಡೆಯಲಿದೆ. 111 ಪೂರ್ಣಕುಂಭ ಕಳಸ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಲಿದ್ದಾರೆ. 10ಗಂಟೆಗೆ ತಂಗುದಾಣ ಉದ್ಘಾಟನೆ ಹಾಗೂ 11ಗಂಟೆಗೆ ಸಾಕ್ಷಿ ಕನ್ವೆನ್ಷನ್ ಹಾಲ್ನಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ತುಮಕೂರು, ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯಸಾನಿದ್ಯ ವಹಿಸಲಿದ್ದಾರೆ. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಬಸವಪಟ್ಟಣ ತೊಂಟದಾರ್ಯ…
ಸೋಮವಾರಪೇಟೆ,ಜ.6 : ಪುಷ್ಪಗಿರಿ ವನ್ಯಜೀವಿ ವಿಭಾಗದಿಂದ ನೂತನವಾಗಿ ಗಡಿ ಗುರುತು ಮಾಡಿರುವುದು ಸಮರ್ಪಕವಾಗಿಲ್ಲ ಎಂದು ಕೊತ್ನಳ್ಳಿ ಗ್ರಾಮಸ್ಥರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಂದಾಯ, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ಸಭೆ ಕೊತ್ನಳ್ಳಿ ಗ್ರಾಮದಲ್ಲಿ ನಡೆಯಿತು. ನೂತನವಾಗಿ ಗಡಿ ಕಲ್ಲುಗಳನ್ನು ನಿಲ್ಲಿಸಿರುವ ಜಾಗವು ಜನವಸತಿ ಹಾಗೂ ಕೃಷಿ ಪ್ರದೇಶಕ್ಕೆ ಹತ್ತಿರವಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಗೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆ ಹಿಂದೆ ಇದ್ದ ಗಡಿಯನ್ನೇ ಮುಂದುವರೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ನಂತರ ಅಧಿಕಾರಿಗಳು ಮತ್ತು ಗ್ರಾಮಸ್ಥರು ಅರಣ್ಯ ಪ್ರದೇಶಕ್ಕೆ ತೆರಳಿ ಗಡಿ ಗುರುತು ಮಾಡಿರುವ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭ ಹೊಸದಾಗಿ ಅಳವಡಿಸಿರುವ ಗಡಿಗೆ ಜಿಪಿಎಸ್ ಪಾಯಿಂಟ್ ಬಂದಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ 8 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದ್ದುದು ಇದೀಗ 11 ಸಾವಿರಕ್ಕೆ ಏರಿಕೆಯಾಗಿದೆ. ಇಡೀ ಗ್ರಾಮಗಳನ್ನು ಅರಣ್ಯಕ್ಕೆ ಸೇರ್ಪಡೆಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಹಶಿಲ್ದಾರ್ ಎಸ್.ಎನ್. ನರಗುಂದ್, ಎಡಿಎಲ್ಆರ್ ವಿರೂಪಾಕ್ಷ, ಪುಷ್ಪಗಿರಿ ವನ್ಯ ಜೀವಿ ವಿಭಾಗದ…
ಸುಂಟಿಕೊಪ್ಪ,ಜ.6: ಮಡಿಕೇರಿ ನಗರದಲ್ಲಿ ಭಿಕ್ಷಾಟನೆ ಮಾಡುತ್ತಾ ಅಲೆಯುತ್ತಿದ್ದ ನಾಲ್ವರು ನಿರಾಶ್ರಿತರನ್ನು 7ನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ತೊಂಡೂರು ಗ್ರಾಮದ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದ ಅಧ್ಯಕ್ಷ ರಮೇಶ್ ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಈಸ್ಟ್ ಪಾಯಿಂಟ್ ವಿದ್ಯಾಸಂಸ್ಥೆಯ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಮಡಿಕೇರಿ ನಗರದಲ್ಲಿದ್ದ ಗೋಪಿ, ಕಿರಣ್, ದಲಾಯಿ ಹಾಗೂ ಸರಸಮ್ಮ ರಕ್ಷಿಸಲ್ಪಟ್ಟವರು. ಇವರು ಗುಣಮುಖರಾಗಿ ಚೇತರಿಸಿ ಕೊಂಡ ನಂತರ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದಲ್ಲಿ ಆಶ್ರಯ ನೀಡುವುದಾಗಿ ರಮೇಶ್ ತಿಳಿಸಿದರು. ಈ ಸಂದರ್ಭ ಆಶ್ರಮದ ಜಯಂತಿ ಶಿವು ಹಾಗೂ ಮಾಹಿತಿ ನೀಡಿದ ಪೊಲೀಸ್ ಇಲಾಖೆಯವರು ಹಾಜರಿದ್ದರು. ಸಾರ್ವಜನಿಕರು ಇವರ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜ.6 : ಜಿಲ್ಲಾ ಬಿಜೆಪಿ ಹಾಗೂ ಮಡಿಕೇರಿ ನಗರ ಬಿಜೆಪಿ ವತಿಯಿಂದ ನಗರದ ರಾಜರಾಜೇಶ್ವರಿ ನಗರ ಉಕ್ಕಡ ಭಾಗದಲ್ಲಿ ಬೂತ್ ಅಭಿಯಾನ ನಡೆಯಿತು. ಈ ಸಂದರ್ಭ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯ ಎಸ್.ಸಿ.ಸತೀಶ್, ಪ್ರಮುಖರಾದ ಅರುಣ್ ಕುಮಾರ್ ಮತ್ತಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಕುಶಾಲನಗರ ಜ.5 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ 86ನೇ ಸಮ್ಮೇಳನಕ್ಕೆ ಆಯ್ಕೆಯಾಗಿರುವ ಚುಟುಕು ಕವಿ, ಸಾಹಿತಿ ಹಾ.ತಿ. ಜಯಪ್ರಕಾಶ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಪೂಜಾರಿ, ಗೌರವಾಧ್ಯಕ್ಷರಾದ ಫ್ಯಾನ್ಸಿ ಮುತ್ತಣ್ಣ, ಕುಶಾಲನಗರ ತಾಲೂಕು ಅಧ್ಯಕ್ಷ ನಾಗೇಗೌಡ, ಹೋಬಳಿ ಅಧ್ಯಕ್ಷ ಹರೀಶ್ಅಕ್ಷರ, ನಗರಾಧ್ಯಕ್ಷ ಹರ್ಷ, ಪ್ರಮುಖರಾದ ಸತೀಶ್ಕುಮಾರ್, ಮಂಜುನಾಥ್, ಗೀತಾಲಿಂಗಪ್ಪ, ಸರಳಾ ರಾಮಣ್ಣ ಮತ್ತುರೋಷನ್ ಇದ್ದರು.
ಕುಶಾಲನಗರ ಜ.5 : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ವಿಜ್ಞಾನ ಮೇಳಗಳು ಪೂರಕವಾಗಿವೆ ಎಂದು ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗೀತಾ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಇಂತಹ ವಿಜ್ಞಾನ ಮೇಳ ಆಯೋಜಿಸುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಿಜ್ಞಾನಮೇಳ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿತುಂಬಲು ಸಾಧ್ಯ ಎಂದರು. ಫಾತೀಮಾ ಕಾನ್ವೆಂಟ್ ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್ ಸ್ಪಂದನ ಮಾತನಾಡಿ, ಮಕ್ಕಳಲ್ಲಿ ಚಿಕ್ಕಂದಿನಲ್ಲಿಯೇ ವಿಜ್ಞಾನ ಚಿಂತನೆಗಳನ್ನು ಮೂಡಿಸುವಂತದ್ದು ಅವಶ್ಯಕತೆ ಇದೆ.ಪಠ್ಯದ ಜೊತೆಗೆ ಪ್ರಾಯೋಗಿಕವಾಗಿ ಜ್ಞಾನದೊರೆಯಲು ವಿಜ್ಞಾನ ಮೇಳ ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ವೈಜ್ಞಾನಿಕವಾಗಿ ಮಕ್ಕಳಲ್ಲಿ ಹೆಚ್ಚಿನ ಜ್ಞಾನ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಯಾರಿಸಿಕೊಂಡು ಬಂದ ವಿಜ್ಞಾನ ವಸ್ತುಗಳ ಮಾದರಿ ಪ್ರದರ್ಶಿಸಿ, ಅವುಗಳ ಬಗ್ಗೆ ವಿವರಣೆ ನೀಡಿದರು. ಫಾತಿಮ ಕಾನ್ವೆಂಟ್ ಶಾಲೆಯ ಡಾ.ಸಿಸ್ಟರ್ ಜೆಸ್ವಿನಾ, ಸಿಸ್ಟರ್ ತೆರೇಸ್…
ಮಡಿಕೇರಿ ಜ.5 : ಕೂಡಿಗೆ ಗ್ರಾ.ಪಂ ಮಾಸಿಕ ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಕೆಲವು ಸದಸ್ಯರು ಆರೋಪ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿ ಪ್ರತಿಭಟನೆ ನಡೆಸಿದರು. ಪಂಚಾಯಿತಿ ಅಧ್ಯಕ್ಷೆ ಮಂಗಳ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 15ನೇ ಹಣಕಾಸು ಯೋಜನೆಯ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಅಧ್ಯಕ್ಷರು ಚೆಕ್ಗಳಿಗೆ ಸಹಿ ಹಾಕುತ್ತಿಲ್ಲ ಎಂದು ಆರೋಪಿಸಿ ಸದಸ್ಯರಾದ ಟಿ.ಪಿ ಹಮೀದ್, ಅರುಣ್ರಾವ್, ಅನಂತ್, ಶಿವಕುಮಾರ್, ಚಂದ್ರು, ಪಲ್ಲವಿ ಮತ್ತು ವಾಣಿ ಅವರುಗಳು ಸಭೆಯಲ್ಲಿ ಅಧ್ಯಕ್ಷರೊಂದಿಗೆ ಮಾತಿನ ಚಕಮಕಿ ನಡೆಸಿ ನಂತರ ಸಭಾ ನಡಾವಳಿಕೆ ಪುಸ್ತಕದೊಂದಿಗೆ ಸಭಾತ್ಯಾಗ ಮಾಡಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷರು ಸಭೆಯನ್ನು ಮುಂದೂಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಮಂಗಳ ಪ್ರಕಾಶ್ 15ನೇ ಹಣಕಾಸು ಯೋಜನೆಯ ಕಾಮಗಾರಿಗಳು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಕಾಮಗಾರಿ ಪರಿಶೀಲನೆಗೆ ಅಧಿಕಾರಿಗಳು ಲಭ್ಯವಿಲ್ಲದಕಾರಣ ವಿಳಂಭವಾಗಿದೆ. ಸಾರ್ವಜನಿಕರಿಂದ ದೂರು ಮೇರೆಗೆ ಭುವನಗಿರಿ ವ್ಯಾಪ್ತಿಯಲ್ಲಿ ನಡೆದಕಾಮಗಾರಿ ದುರುಪಯೋಗ ಪ್ರಕರಣ ಸೇರಿದಂತೆ ಪಂಚಾಯಿತಿಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಣಾಧಿಕಾರಿಗಳ…
ಮಡಿಕೇರಿ ಜ.5 : ಜಿಲ್ಲಾ ದಿವ್ಯಾಂಗರ ಒಕ್ಕೂಟ ಹಾಗೂ ಮಡಿಕೇರಿ ನಗರಸಭೆ ಸಂಯುಕ್ತಾಶ್ರಯದಲ್ಲಿ ದಿವ್ಯಾಂಗರ ದಿನಾಚರಣೆ ಹಾಗೂ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಿತು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಪೌರಾಯುಕ್ತ ವಿಜಯ, ಜಿ.ಪಂ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಡಾ.ಆಕಾಶ್, ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷೆ ಎನ್.ಕೆ.ಈಶ್ವರಿ, ಉಪನಿರ್ದೇಶಕ ಮಂಜುನಾಥ್, ವಿಕಲಚೇತನ ಕಲ್ಯಾಣ ಅಧಿಕಾರಿ ವಿಮಲಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೆಂಕಟೇಶ್, ವೈದ್ಯಧಿಕಾರಿ ಡಾ.ರೂಪೇಶ್, ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಪ್ರಮುಖರಾದ ರವಿಗೌಡ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಂಘದ ಪದಾಧಿಕಾರಿ ಆಯಿಷಾ ಮಾಡಿದರು. ಮೀನಕುಮಾರಿ ಸ್ವಾಗತಿಸಿ, ಲೋಹಿತ್ ಗೌಡ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಿವ್ಯಾಂಗರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ…






