ಮಡಿಕೇರಿ ಮಾ.11 : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಚಿಂತನೆ, ಕಾರ್ಯಕರ್ತರ ಸಂಘಟನಾ ಶಕ್ತಿ, ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಮತ್ತು ರಾಷ್ಟ್ರೀಯ ಚಿಂತನೆಗಳು, ಈ ನಾಲ್ಕು ಪ್ರಮುಖ ಅಂಶಗಳನ್ನು ಮುಂದಿಟ್ಟುಕೊoಡು ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಮತಯಾಚಿಸುವುದಾಗಿ ಹೇಳಿದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ, ಈಗಿನ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಅಭ್ಯುದಯಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗಿದೆ. ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಲೆ, ವಸತಿ ನಿಲಯಗಳಿಗಾಗಿಯೇ ರೂ.108 ಕೋಟಿ ಅನುದಾನವನ್ನು ಒದಗಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ…
ಲೇಖಕ: admin
ಮಡಿಕೇರಿ ಮಾ.11 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ವ್ಯಕ್ತಪಡಿಸಿದೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರ ನೇತೃತ್ವದಲ್ಲಿ ನಡೆದ ಸಂತಾಪ ಸಭೆಯಲ್ಲಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆಯ ಮೂಲಕ ಶಾಂತಿ ಕೋರಿದರು. ಟಿ.ಪಿರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಹಿರಿಯ ನಾಯಕ ಧ್ರುವ ನಾರಾಯಣ್ ಅವರ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಟಿ.ಹೆಚ್.ಉದಯಕುಮಾರ್, ಪ್ರಕಾಶ್ ಆಚಾರ್ಯ, ಜಗದೀಶ್, ಮುದ್ದು ರಾಜು, ಕೆ.ಜಿ.ಪೀಟರ್, ಪ್ರೇಮ ಕೃಷ್ಣಪ್ಪ, ಕೆ.ಆರ್.ದಿನೇಶ್, ಕಲೀಲ್ ಬಾಷಾ, ಎಂ.ಇ.ಫಾರೂಖ್, ರಿಯಾಬ್ವುದ್ದೀನ್, ಆರ್.ಪಿ.ಚಂದ್ರಶೇಖರ್, ಎಂ.ಎನ್.ರವೂಫ್, ಎಂ.ಜಿ.ನಾಗೇಶ್, ಪುಷ್ಪ…
ಮಡಿಕೇರಿ ಮಾ.11 : ಮಡಿಕೇರಿಯ ಬಸ್ ತಂಗುದಾಣವೊAದರ ಬಳಿ ಆನೆಯ ಕಾಲು ಮೂಳೆ, ಗಜಮುತ್ತುವಿನಂತೆ ಇರುವ ಮೊಟ್ಟೆಯಾಕಾರದ ಮೂರು ವಸ್ತುಗಳು ಮತ್ತು ಗಜಮುತ್ತುವಿನಂತೆ ಇರುವ ಮುತ್ತುವೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿ ನಿಜಾಮುದ್ದಿನ್ ಎಂಬಾತನನ್ನು ವಶಕ್ಕೆ ಪಡೆದರು. ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ಚಂದ್ರ ಅವರ ನಿರ್ದೇಶನದಂತೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಮೋಹನ, ಕಾನ್ಸ್ಟೇಬಲ್ ಗಳಾದ ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆ ನಡೆಸಿದರು.
ಮಡಿಕೇರಿ ಮಾ.11 : ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಧಳದಲ್ಲೇ ಸಾವನ್ನಪ್ಪಿದ ಘಟನೆ ಹುದುಗೂರು- ಹಾರಂಗಿ ಮಾರ್ಗವಾಗಿ ಯಡವನಾಡು- ಸೋಮವಾರಪೇಟೆ ಕಡೆಗೆ ತೆರಳುವ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಯಡವನಾಡು ಗ್ರಾಮದ ನಿವಾಸಿ ಪ್ರವೀಣ್ ಅಲಿಯಾಸ್ ದೊರೆಮಣಿ(46) ಎಂದು ಗುರುತಿಸಲಾಗಿದೆ. ಯಡವನಾಡು ಕಡೆಯಿಂದ ಹಾರಂಗಿ ಕಡೆಗೆ ಬರುತ್ತಿದ್ದ ಟಿಪ್ಪರ್ ಹಾಗೂ ಹಾರಂಗಿಯಿoದ ಯಡವನಾಡು ಕಡೆಗೆ ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿಯಾದ ಪರಿಣಾಮ ದೊರೆಮಣಿ ಸ್ಧಳದಲ್ಲೇ ಸಾವಿಗೀಡಾದರು. ಘಟನೆಗೆ ಸಂಬoಧಿಸಿದoತೆ 7ನೇ ಹೊಸಕೋಟೆ ನಿವಾಸಿ ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The new Bengaluru- Mysuru Expressway which will be dedicated to the nation tomorrow (MARCH 12)
ಮಡಿಕೇರಿ ಮಾ.11 : ವಿಧಾನಸಭಾ ಚುನವಾಣೆಗೆ ವಿರಾಜಪೇಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಕಕ್ಕಬ್ಬೆ ಗ್ರಾ.ಪಂ ಮಾಜಿ ಸದಸ್ಯ ಹಾಗೂ ಅಲ್ಪಸಂಖ್ಯಾತರ ಹಿರಿಯ ಮುಖಂಡ ಎಂ.ಎ.ನಾಸಿರ್ ಮಕ್ಕಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸಾಮಾಜಿಕ ಪರಿಸ್ಥಿತಿ ಹದಗೆಡಲು ರಾಜಕೀಯ ಪಕ್ಷಗಳ ಕೊಡುಗೆ ಬಹಳಷ್ಟಿದೆ. ಯಾವುದೇ ರಾಜಕೀಯ ಪಕ್ಷಗಳು ಜನಪರ ತತ್ವ ಸಿದ್ಧಾಂತಗಳಡಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಮತಬ್ಯಾಂಕ್ ಸೃಷ್ಟಿಯಷ್ಟೇ ಅವುಗಳ ಮೂಲ ಉದ್ದೇಶವಾಗಿರುವುದರಿಂದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ. ಈ ಕಾರಣದಿಂದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಗುರಿಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು. ನನ್ನ ಸ್ಪರ್ಧೆ ಖಚಿತವಾಗಿದ್ದು, ಕ್ಷೇತ್ರದಾದ್ಯಂತ ಜನರ ಒತ್ತಡ ಮತ್ತು ಬೆಂಬಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜನರೇ ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದೇನೆ. ರಾಜಕೀಯ ಪಕ್ಷಗಳ ನಡೆಯಿಂದ ಬೇಸತ್ತಿರುವ ಕ್ಷೇತ್ರದ ಜನತೆಗೆ ನನ್ನ ಸ್ಪರ್ಧೆ ಉತ್ತಮ…
ಮಡಿಕೇರಿ ಮಾ.11 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಸಂತಾಪ ಸೂಚಿಸಿದ್ದಾರೆ. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಧ್ರುವ ನಾರಾಯಣ್ ಅವರು ಯುವ ರಾಜಕಾರಣಿಗಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣುತ್ತಿದ್ದ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಭಿವೃದ್ಧಿ ಪರ ಚಿಂತನೆ ಮತ್ತು ಸೌಹಾರ್ದತೆಯ ಪರಿಕಲ್ಪನೆಗೆ ಮಾದರಿಯಾಗಿದ್ದ ಧ್ರುವ ನಾರಾಯಣ್ ಅವರ ಅಗಲಿಕೆ ಅತೀವ ದು:ಖವನ್ನು ತಂದಿದೆ. ವೈಯುಕ್ತಿವಾಗಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲೀಲ್ ಬಾಷ ಬೇಸರ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ, ಮಾ.11: ಉತ್ತರ ಕೊಡಗಿನ ಗಡಿಭಾಗದ ಶಿರಂಗಾಲ ಗ್ರಾಮದಲ್ಲಿ ದ್ವೈವಾರ್ಷಿಕ ಮಂಟಿಗಮ್ಮ ದೇವಿಯ ಗ್ರಾಮ ದೇವತೆ ಹಬ್ಬದ ಉತ್ಸವ ಮತ್ತು ಜಾತ್ರೋತ್ಸವವು ಸಂಭ್ರಮ-ಸಡಗರದಿಂದ ನಡೆಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ಜರುಗುವ ಮಂಟಿಗಮ್ಮ ದೇವಿಯ ಉತ್ಸವದಲ್ಲಿ ಭಕ್ತಾದಿಗಳು ಶ್ರದ್ದಾಭಕ್ತಿಯಿಂದ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಹಬ್ಬದ ಪವಿತ್ರ ಬನದಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭವಾದ ದೇವಿಯ ವಿವಿಧ ಧಾರ್ಮಿಕ ಕೈಂಕರ್ಯಗಳು ಹಾಗೂ ಪೂಜಾ ಕಾರ್ಯಗಳು ಶನಿವಾರ ಹಗಲಿಡೀ ಜರುಗಿದವು. ಭಕ್ತಾದಿಗಳು ಬನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಗ್ರಾಮೀಣ ಭಾಗದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ನೂರಾರು ವರ್ಷಗಳ ಇತಿಹಾಸವಿರುವ ಮಂಟಿಗಮ್ಮ ದೇವಿಯ ಉತ್ಸವದಲ್ಲಿ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನತೆ ಸೇರಿದಂತೆ ನೆರೆಯ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಗಡಿಭಾಗದ ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಕ್ತರು ವಿವಿಧೆಡೆಗಳಿಂದ ಆಗಮಿಸಿದ್ದರು. ಶಿರಂಗಾಲ ಗ್ರಾಮದ ಕೋಟೆಯ ಗದ್ದಿಗೆಯಲ್ಲಿ ಶುಕ್ರವಾರ ರಾತ್ರಿ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ನಂತರ ದೇವಿಯ ಉತ್ಸವಕ್ಕೆ ಚಾಲನೆ ನೀಡಲಾಯಿತು.…
ನಾಪೋಕ್ಲು ಮಾ.11 : ಸರಳ ಸಜ್ಜನಿಕೆಯ ರಾಜಕಾರಣಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಆರ್. ದ್ರುವನಾರಾಯಣ ನಿಧನಕ್ಕೆ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆರ್.ದ್ರುವನಾರಾಯಣ್ ಅವರು ಕೊಡಗು ಜಿಲ್ಲೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಧೀಮಂತ ನಾಯಕ ಜಿಲ್ಲೆಯಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ ಕಾರ್ಯಕರ್ತರಿಗೆ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದರು. ಒಬ್ಬ ಜಾತ್ಯತೀತ ನಾಯಕನನ್ನು ಇಂದು ಕಳೆದು ಕೊಂಡಿದ್ದು ಕೊಡಗು ಜಿಲ್ಲೆಗೆ ಮಾತ್ರವಲ್ಲ ದೇಶದ ಕಾಂಗ್ರೆಸ್ ಪಕ್ಷಕ್ಕೂ ದೊಡ್ಡ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಚಾಮರಾಜ ನಗರದ ಜಿಲ್ಲೆಯಿಂದ ಎರಡು ಬಾರಿ ಶಾಸಕರಾಗಿ, ಲೋಕಸಭಾ ಸದಸ್ಯರಾಗಿ ಮತ್ತು ಕೆ.ಪಿ.ಸಿ.ಸಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಆರ್.ಧ್ರುವನಾರಾಯಣ್ ಅವರ ಅಕಾಲಿಕ ನಿಧನವು ಕಾಂಗ್ರೇಸ್ ಪಕ್ಷಕ್ಕೆ ಅಘಾತವನ್ನುಂಟುಮಾಡಿದ್ದು, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಕುಟುಂಬ…
ವಿರಾಜಪೇಟೆ ಮಾ.11 : ವಿರಾಜಪೇಟೆ ತಾಲೂಕಿನ ವಿ.ಬಾಡಗ ಗ್ರಾಮದ ಪೊವ್ವದಿ ಮಹಿಳಾ ಸಮಾಜದ ವತಿಯಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು. ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಜನಿತಾ ಮಹಿಳಾ ದಿನಾಚರಣೆಯ ವಿಶೇಷತೆ ಬಗ್ಗೆ ಮಾತನಾಡಿದರು. ಪೊವ್ವದಿ ಮಹಿಳಾ ಸಮಾಜದ ಅಧ್ಯಕ್ಷೆ ಪರ್ಲ್ ಮುತಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಅಂತರಾಷ್ಟ್ರೀಯ ಅಥ್ಲೆಟ್ ಚೇಮಿರ ಪ್ರೇಮಾ ಸೀತಮ್ಮ, ಊರಿನ ಹಿರಿಯರಾದ ಅಪ್ಪಂಡೆರಂಡ ಚೋಂದವ್ವ ಪೂವಯ್ಯ ವಿ.ಬಾಡಗ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಕೋಲತಂಡ ಭಾರತಿ ಮಂದಣ್ಣ ಅವರನ್ನು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚೇಮೀರ ಪ್ರೇಮ ಸೀತಮ್ಮ, ತಮ್ಮ ಸಾಧನೆಯ ಬಗ್ಗೆ ಮಾತನಾಡಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಮಾಜದ ಆಡಳಿತ ಮಂಡಳಿ ಸದಸ್ಯರು ಮತ್ತು ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗೆ ಆಟೋಟ ಸ್ಪರ್ಧೆ, ಮನರಂಜನಾ ಕಾರ್ಯಕ್ರಮ ನಡೆಸಲಾಯಿತು.






