ಮಡಿಕೇರಿ ಫೆ.1 ಕೇಂದ್ರ ಸರ್ಕಾರ ದೇಶದ ಜನರನ್ನು ಮೂರ್ಖರನ್ನಾಗಿಸಲು ಚುನಾವಣಾ ಗಿಮಿಕ್ ನ ಬಜೆಟ್ ನ್ನು ಮಂಡಿಸಿದೆ. ತೆರಿಗೆದಾರರಿಗೆ ಅನುಕೂಲ ಕಲ್ಪಿಸುವ ಮೂಲಕ ಸರ್ಕಾರ ಉಳ್ಳವರ ಪರವಾಗಿದೆ ಎನ್ನುವುದನ್ನು ಸಾಬೀತು ಪಡಿಸಿದೆ. ಎಲ್ಲೂ ಕೃಷಿಕರು ಹಾಗೂ ಕಾರ್ಮಿಕರ ಪರವಾದ ಸ್ಪಷ್ಟ ನಿಲುವನ್ನು ಸರ್ಕಾರ ಘೋಷಿಸಿಲ್ಲ. ಚಿನ್ನ ಮತ್ತು ಬಟ್ಟೆ ಬೆಲೆಯನ್ನು ದುಬಾರಿಗೊಳಿಸಲಾಗಿದೆ, ಬಡವರು ಮದುವೆ ಮತ್ತಿತರ ಶುಭ ಕಾರ್ಯ ಮಾಡುವಾಗ ಚಿನ್ನಾಭರಣ, ಬಟ್ಟೆಯನ್ನು ಕೊಳ್ಳಬಾರದೆ ? ಬಜೆಟ್ ತುಂಬಾ ಸುಳ್ಳಿನ ಕಂತೆಯೇ ಇದ್ದು, ಜನರ ಕಣ್ಣಿಗೆ ಮಣ್ಣೆರಚುವ ಚುನಾವಣಾ ತಂತ್ರಗಾರಿಕೆ ಎದ್ದು ಕಾಣುತ್ತಿದೆ. ಹೆಚ್ಚು ತೆರಿಗೆ ಪಾವತಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪುಟ್ಟ ಜಿಲ್ಲೆ ಕೊಡಗಿನಂತಹ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಅಭಿವೃದ್ಧಿಗೆ ಯಾವುದೇ ನೆರವು ನೀಡಿಲ್ಲ. (( ಕೆ.ಎಂ.ಗಣೇಶ್, ಅಧ್ಯಕ್ಷರು, ಜಾತ್ಯತೀತ ಜನತಾದಳ, ಕೊಡಗು ಜಿಲ್ಲೆ. ))
ಲೇಖಕ: admin
ಮಡಿಕೇರಿ ಫೆ.1 ಇದೊಂದು ನಿಷ್ಪ್ರಯೋಜಕ ಬಜೆಟ್ ಆಗಿದೆ, ಹಳೆಯ ಯೋಜನೆಗಳನ್ನೇ ಮುಂದುವರೆಸಲಾಗಿದೆ. ಒಂದೆರಡು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ, ಆದರೆ ಇದರ ಸಾಧಕ ಬಾಧಕಗಳನ್ನು ಬಹಿರಂಗ ಪಡಿಸಿಲ್ಲ. ಯೋಜನೆಗಳನ್ನು ಘೋಷಿಸಿದರೆ ಸಾಲದು ಜನಸಾಮಾನ್ಯರಿಗೆ ತಲುಪಬೇಕು. ಬಜೆಟ್ ನ್ನು ಅವಲೋಕಿಸಿದಾಗ ಕೇಂದ್ರ ಸರ್ಕಾರವೇ ಗೊಂದಲದಲ್ಲಿದ್ದಂತ್ತಿದೆ, ಬ್ಯಾಲೆನ್ಸ್ ಮಾಡುವ ಸರ್ಕಸ್ ಮಾಡಿದೆ. ಇದರಿಂದ ಬಡವರು, ಕಾರ್ಮಿಕರು, ಕೃಷಿಕರು ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ಲಾಭವಿಲ್ಲ. (( ಟಿ.ಪಿ.ರಮೇಶ್, ಅಧ್ಯಕ್ಷರು, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ))
ಮಡಿಕೇರಿ ಫೆ.1 : ಇದೊಂದು ಮಾತಿನಲ್ಲೆ ಅರಮನೆ ಕಟ್ಟುವ ಬಜೆಟ್ ಆಗಿದೆ, ದೂರದ ಬೆಟ್ಟ ತೋರಿಸಿ ನುಣ್ಣಗೆ ಇದೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲಾಗಿದೆ. ದೇಶದ ಮಲೆನಾಡು ಪ್ರದೇಶಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಜನಸಾಮಾನ್ಯರು ಹಾಗೂ ಕೃಷಿಕರಿಗೆ ಯಾವುದೇ ಲಾಭವಿಲ್ಲ, ಯೋಜನೆಗಳ ಬಗ್ಗೆ ಸ್ಪಷ್ಟತೆ ಇಲ್ಲ. ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡಲಾಗಿದೆ, ಆದರೆ ಕಳೆದ 9 ವರ್ಷಗಳಲ್ಲಿ ಎಷ್ಟು ಮಂದಿಗೆ ಉದ್ಯೋಗ ನೀಡಿದ್ದಾರೆ ಮತ್ತು ಎಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎನ್ನುವ ಗುಟ್ಟನ್ನು ಸರ್ಕಾರ ಬಹಿರಂಗ ಪಡಿಸುತ್ತಿಲ್ಲ. ಕೃಷಿಕ ವರ್ಗ ಮತ್ತು ಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಸ್ಪಷ್ಟವಾಗಿದೆ. ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ಪ್ರವಾಸೋದ್ಯಮದ ಯಾಪ್ ನ್ನು ಪರಿಚಯಿಸುವ ಕುರಿತು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವುದು ಹಾಸ್ಯಾಸ್ಪದವಾಗಿದೆ. ಈ ಕಾರ್ಯವನ್ನು ಅಧಿಕಾರಿಗಳೇ ಮಾಡುತ್ತಾರೆ, ಘೋಷಣೆಗೊಂದು ಬಜೆಟ್ ವೇದಿಕೆ ಬೇಕಾಗಿರಲಿಲ್ಲ. (( ಕೆ.ಕೆ.ಮಂಜುನಾಥ್ ಕುಮಾರ್, ಅಧ್ಯಕ್ಷರು, ಕೊಡಗು ಜಿಲ್ಲಾ ಪ್ರವಾಸೋದ್ಯಮ ಅವಲಂಬಿತರ ಒಕ್ಕೂಟ ))
ಮಡಿಕೇರಿ ಫೆ.1 : ಬಡವರು ಹಾಗೂ ಉದ್ಯೋಗದಾತರಿಗೆ ಅನುಕೂಲಕರ ಬಜೆಟ್ ಆಗಿದೆ. ಕರ ಕುಶಲ ವಸ್ತುಗಳನ್ನು ತಯಾರಿಸುವವರಿಗೆ ಉತ್ತೇಜನ ನೀಡಲಾಗಿದೆ. ಅಂಚೆ ಕಛೇರಿ ಯೋಜನೆಗಳಲ್ಲಿ ಹೆಚ್ಚು ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ. ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು, ಹಿರಿಯರು, ದಿವ್ಯಾಂಗರು, ಬುಡಕಟ್ಟು ಜನರ ಹಾಗೂ ಯುವಕರ ಹಿತ ಕಾಯುವ ಯೋಜನೆಗಳನ್ನು ಘೋಷಿಸಲಾಗಿದೆ. ಹಸಿದವರಿಗೆ ಅನ್ನ ನೀಡುವ ಯೋಜನೆ ಮುಂದುವರೆದಿದೆ. ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯವೃದ್ಧಿಯಾಗುವುದಲ್ಲದೆ ಪರೋಕ್ಷವಾಗಿ ಸಣ್ಣ ರೈತರಿಗೆ ಪ್ರೋತ್ಸಾಹ ನೀಡಿದಂತ್ತಾಗಿದೆ. ಸಾವಯವ ಗೊಬ್ಬರ ಬಳಕೆಗೆ ಆದ್ಯತೆ ನೀಡಿರುವುದು, ಗ್ರಂಥಾಲಯಗಳ ಹೆಚ್ಚಳ ಮತ್ತು ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. (ಗೀತಾ ಗಿರೀಶ್, ಆರ್ಥಿಕ ಸಲಹೆಗಾರರು, ಮಡಿಕೇರಿ )
ಮಡಿಕೇರಿ ಫೆ.1 : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಷ್ಟ್ರೀಯ ಡಿಫೆನ್ಸ್ ಕಾಲೇಜಿನ ಪ್ರಮುಖರು ಭೇಟಿ ನೀಡಿ ವೀರಸೇನಾನಿ ಜನರಲ್ ತಿಮ್ಮಯ್ಯ ಜೀವನ ಮತ್ತು ಸೇನಾ ಸಾಧನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಏರ್ ವೈಸ್ ಮಾರ್ಷಲ್ ತೇಜ್ ಬೀರ್ ಸಿಂಗ್ ಎವಿಎಸ್ಎಂ, ವಿಎಂ ಎಸ್ಡಿಎಸ್, (ಎಐಆರ್) ಎನ್ಡಿಸಿ ನೇತೃತ್ವದಲ್ಲಿ 18 ಪ್ರಮುಖರು ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಜನರಲ್ ತಿಮ್ಮಯ್ಯ ಅವರ ಸೇನಾ ಸಾಧನೆಯ ಬಗ್ಗೆ ಸಮಗ್ರ ಚಿತ್ರಣ ನೀಡುವ ಸ್ಮಾರಕ ಭವನವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗಿದ್ದು, ಪ್ರತಿಯೊಬ್ಬ ಭಾರತೀಯನೂ ವೀರ ಸೇನಾನಿಯ ಸಾಧನೆಯ ಬಗ್ಗೆ ತಿಳಿದುಕೊಳ್ಳಲು ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡುವಂತಾಗಬೇಕು ಎಂದರು. ಭವಿಷ್ಯದ ಸೇನಾ ನಾಯಕರಿಗೆ ತಿಮ್ಮಯ್ಯ ಸ್ಮಾರಕ ಭವನ ಮಾರ್ಗದರ್ಶನ ನೀಡುವಂತಿದೆ. ಜನರಲ್ ತಿಮ್ಮಯ್ಯ ಭಾರತೀಯ ಸೇನೆಯನ್ನು ಮುನ್ನಡೆಸಿದ ರೀತಿಯೂ, ಈಗಿನ ಸೈನಿಕರಿಗೆ ಪ್ರೇರಣೆ ನೀಡುವಂತಿದೆ ಎಂದು ಏರ್ವೈಸ್ ಮಾರ್ಷಲ್ ತೇಜ್ ಬೀರ್ ಸಿಂಗ್ ಅಭಿಪ್ರಾಯಪಟ್ಟರು. ತಿಮ್ಮಯ್ಯ ಸೇನಾ ಜೀವನದ…
ಮಡಿಕೇರಿ ಫೆ.1 : ನವ ದೆಹಲಿಯ ರಾಷ್ಟ್ರೀಯ ರಕ್ಷಣಾ ಕಾಲೇಜಿನ ನಿಯೋಗವು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂವಾದ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ ನೀಡಿ, ಕೊಡಗು ಜಿಲ್ಲೆಯು 5 ತಾಲ್ಲೂಕು, 16 ಹೋಬಳಿ, 103 ಗ್ರಾಮ ಪಂಚಾಯಿತಿ, 531 ಕಂದಾಯ ಗ್ರಾಮಗಳನ್ನು ಒಳಗೊಂಡಿದ್ದು, 6.13 ಲಕ್ಷ ಜನಸಂಖ್ಯೆ ಹೊಂದಿದೆ ಎಂದು ತಿಳಿಸಿದರು. 16 ಹೋಬಳಿ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಹಾಗೂ ಸ್ಪಂದನಾ ಕೇಂದ್ರಗಳ ಮೂಲಕ ಆಧಾರ್, ಭೂಮಿ, ಮತ್ತಿತರ ಸೇವೆಗಳನ್ನು ಕಲ್ಪಿಸಲಾಗುತ್ತಿದೆ. ಬೆಳೆಹಾನಿ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ 46,099 ಫಲಾನುಭವಿಗಳಿಗೆ 133.26 ಕೋಟಿ ರೂ. ವಿತರಿಸಲಾಗಿದೆ ಎಂದರು. ಗ್ರಾಮ ಒನ್ ಸೇವೆಗಳು ಗ್ರಾ.ಪಂ. ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸಕಾಲ ಯೋಜನೆಯಡಿ ಹಲವು ಸೇವೆಗಳನ್ನು ಕಾಲ ಮಿತಿಯಲ್ಲಿ ಒದಗಿಸಲಾಗುತ್ತಿದೆ ಎಂದರು. ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವುದು,…
ಮಡಿಕೇರಿ ಫೆ.1 : ಎ ರೋಚಾ ಇಂಡಿಯಾದ ಸಂಸ್ಥೆಯು ಸಾರ್ವಜನಿಕ ರಸ್ತೆಗಳಲ್ಲಿ ಕಾಡಾನೆಗಳ ಚಲನವಲನಗಳ ಬಗ್ಗೆ ವಾಹನ ಸವಾರರಿಗೆ ಎಚ್ಚರವಹಿಸಲು ಅರಣ್ಯ ಇಲಾಖೆಯ ಅನುಮತಿಯೊಂದಿಗೆ ‘ಎಲಿಫೆಂಟ್ ಸಿಗ್ನಲ್ ಬೋರ್ಡ್’ ಎಂಬ ನೂತನ ತಂತ್ರಜ್ಞಾನವನ್ನು ಅಳವಡಿಸಿದೆ. ಹಲವು ವರ್ಷಗಳ ಆನೆ-ಮಾನವ ಸಂಘರ್ಷದಿಂದ ಕಾಡಾನೆ ನಿಯಂತ್ರಣಕ್ಕೆ ಕಾಡಾನೆ ಹಿಡಿಯುವ ಕಾರ್ಯಾಚರಣೆ, ವಿದ್ಯುತ್ ಬೇಲಿ, ರೈಲ್ವೇ ಬ್ಯಾರಿಕೇಡ್ ಅಳವಡಿಕೆ, ಆನೆಗೇಟ್, ಕಾಡಾನೆಗಳಿಗೆ ರೇಡಿಯೋ ಕಾಲರ್, ಆರ್ಆರ್ಟಿ ತಂಡದಿಂದ ಕಾಡಾನೆಗಳ ಕಣ್ಗಾವಲು ಸೇರಿದಂತೆ ಹಲವು ಕಾಡಾನೆ ನಿಯಂತ್ರಣ ಕಾರ್ಯಗಳು ನಡೆಯುತ್ತಲೇ ಇವೆ. 2021ರಲ್ಲಿ ಮೊದಲ ಬಾರಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕಾಡಾನೆಗಳ ನಿರಂತರ ಚಲನೆ ಇರುವ ಕಗ್ಗಲಿಪುರದ ಮೂರು ದಾರಿಗಳಲ್ಲಿ ಸ್ಮಾರ್ಟ್ಲೇಜರ್ ಬೇಲಿಗಳನ್ನು ಅಳವಡಿಸಿ ಕಾಡಾನೆಗಳು ದಾಟಿದೊಡನೆ ‘ಸಿಗ್ನಲ್’ ನೀಡುವ ‘ಎಲಿಫೆಂಟ್ ಸಿಗ್ನಲ್ ಬೋರ್ಡ್’ ಅಳವಡಿಸಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಾಡಾನೆಗಳ ಇರುವಿಕೆಯ ಬಗ್ಗೆ ಮುನ್ನೆಚ್ಚರಿಕಾ ಮಾಹಿತಿ ನೀಡುತ್ತದೆ. ಜೊತೆಗೆ ಈ ತಂತ್ರಜ್ಞಾನದಲ್ಲಿ ಮೊಬೈಲ್ ಸಿಮ್ ಅಳವಡಿಸಿರುವುದರಿಂದ ತಕ್ಷಣವೇ ಸಂಬಂಧಪಟ್ಟ ಅರಣ್ಯ ಅಧಿಕಾರಿ ಮೊಬೈಲ್ಗೆ ಕಾಡಾನೆ…
ಮಡಿಕೇರಿ ಫೆ.1 : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಇತಿಹಾಸ ವಿಭಾಗ ಇವರ ಸಹಯೋಗದಲ್ಲಿ ‘ಚಾರಿತ್ರಿಕ ದಾಖಲೆಗಳಲ್ಲಿ ಕೊಡಗು ಜಿಲ್ಲೆಯ ಇತಿಹಾಸ’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ’ಕ್ಕೆ ಕಾಲೇಜು ಸಭಾಂಗಣದಲ್ಲಿ ಪದ್ಮಶ್ರೀ ಪುರಸ್ಕೃತ ರಾದ ಐಮುಡಿಯಂಡ ರಾಣಿ ಮಾಚಯ್ಯ ಚಾಲನೆ ನೀಡಿದರು. ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕಿಂದು ನಗರದ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ, ಮುಂಬೈ ಮಹಿಳಾ ವಿಶ್ವ ವಿದ್ಯಾನಿಲಯ ಹಾಗೂ ಮಹಿಳಾ ಅಧ್ಯಯನ ಸಂಶೋಧನಾ ಕೇಂದ್ರದ ನಿರ್ದೇಶಕರಾದ ವೀಣಾ ಪೂಣಚ್ಚ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಮಡಿಕೇರಿ ಪ್ರಖ್ಯಾತ ಉದ್ಯಮಿ ಶಂಕರ ಪೂಜಾರಿಯಿಂದ ಚಾಲನೆ ನೀಡಲಾಯಿತು. ವಿಚಾರ ಸಂಕಿರಣ ಅಂಗವಾಗಿ ಏರ್ಪಡಿಸಿದ್ದ ಅಜಯ್ ರಾವ್ ನಾಣ್ಯಗಳ ಪ್ರದರ್ಶನವನ್ನು ಅತಿಥಿಗಳಿಂದ ಉದ್ಘಾಟಿಸಿ ವೀಕ್ಷಿಸಿಸಲಾಯಿತು. ತನ್ನದೇ ಆದ ಸಂಸ್ಕೃತಿಯನ್ನು…
ಮಡಿಕೇರಿ ಫೆ.1 : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಡಿ ನಕಲಿ ದಾಖಲಾತಿ ಸೃಷ್ಠಿಸಿ, ಫಲಾನುಭವಿಗಳೆಂದು ನೋಂದಾಯಿತರಾಗಿ ಕಾರ್ಮಿಕರಲ್ಲದವರು ವಿವಿಧ ಧನಸಹಾಯದ ಸೌಲಭ್ಯಗಳನ್ನು ಪಡೆಯುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿರುತ್ತದೆ. ಇವರ ನೋಂದಣಿಯನ್ನು ರದ್ದು ಮಾಡುವಂತೆ ಹಾಗೂ ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಲು ಫೆಬ್ರವರಿ, 25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಂಡು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ಫೆಬ್ರವರಿ, 25 ರವರೆಗೆ ನಕಲಿ ದಾಖಲಾತಿ ಸೃಷ್ಠಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್ಗಳನ್ನು ರದ್ದುಪಡಿಸಲು ‘ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ’ ನಡೆಯಲಿದೆ. ಈ ಅಭಿಯಾನ ದಿನಗಳಲ್ಲಿ ನಕಲಿ ದಾಖಲಾತಿ ಸೃಷ್ಠಿಸಿ ಗುರುತಿನ ಚೀಟಿ ಪಡೆದಿರುವ ಫಲಾನುಭವಿಗಳು ತಮ್ಮ ಸ್ವ-ಇಚ್ಚೆಯಿಂದ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಕಚೇರಿಗೆ ತಮ್ಮ ಗುರುತಿನ ಚೀಟಿಗಳನ್ನು ಹಿಂದಿರುಗಿಸಿದಲ್ಲಿ ಮುಂದಿನ ಕಾನೂನು ಕ್ರಮವನ್ನು…
ಕುಶಾಲನಗರ, ಫೆ.1: ಅನ್ಯರಾಜ್ಯಗಳ ಜನರಿಗೆ ಕನ್ನಡ ಭಾಷೆಯನ್ನು ಕಲಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕನ್ನಡ ಕಲಿಕಾ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಚಿಂತನೆ ಹರಿಸಿದರೆ ಒಳಿತು ಎಂದು ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಆರ್.ನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದ ಸಂದರ್ಭ ಮಾತನಾಡಿ, ಜಿಲ್ಲೆಯಲ್ಲಿ ಉತ್ತರ ಭಾರತ ಸೇರಿದಂತೆ ಅನ್ಯರಾಜ್ಯಗಳ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಕನ್ನಡದ ಬಗ್ಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಲಿಕಾ ಕೇಂದ್ರಗಳು ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತವೆ ಎಂದರು. ಹಿರಿಯ ಪತ್ರಕರ್ತರು ಆಗಿರುವ ಬಿ.ಆರ್ ನಾರಾಯಣ ಅವರನ್ನು ತಾಲೂಕು ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಮತ್ತಿತರರು ಸನ್ಮಾನಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.






