ಮಡಿಕೇರಿ ಮಾ.11 : ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಸಂಸ್ಥಾಪಕ ಅಧ್ಯಕ್ಷ ಮೂಕಳೇರ ಲಕ್ಷ್ಮಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರದ ರೈತಭವನದಲ್ಲಿ ಆಯೋಜಿಸಿರುವ ಛಾಯಾ ಸಮ್ಮಿಲನ- 2023 ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಛಾಯಗ್ರಾಹಕರ ಕ್ಷೇಮಾಭಿವೃದ್ಧಿ ಸಂಘವನ್ನು 2009 ರಲ್ಲಿ ಸ್ಥಾಪಿಸಿ ಸ್ಥಾಪಕ ಅಧ್ಯಕ್ಷರಾದ ಪೊನ್ನಂಪೇಟೆಯ ಸುಮನ ಸ್ಟುಡಿಯೋದ ಮಾಲೀಕ ಮೂಕಳೇರ ಲಕ್ಷ್ಮಣ್ ದಂಪತಿಯವರನ್ನು ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಛಾಯಾಗ್ರಾಹಕ ಸಂಘದ ಅಧ್ಯಕ್ಷ ಪರಮೇಶ್, ಉಪಾಧ್ಯಕ್ಷ ಹೆಚ್.ಎಸ್ ನಾಗೇಶ್, ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್. ವಸಂತ್ , ತಾಲೂಕು ಸಂಘದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಮಾ.11 : ಸಿದ್ದಾಪುರದ ಕೂರ್ಗ್ ಸ್ಟಾರ್ ವತಿಯಿಂದ ಏ.2 ಮತ್ತು 3 ರಂದು ಜಿಲ್ಲಾ ಮಟ್ಟದ ಮುಕ್ತ ಕ್ಯಾರಂ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕೂರ್ಗ್ ಸ್ಟಾರ್ಸ್ ಯೂಟ್ಯೂಬ್ ಚಾನೆಲ್ ಪ್ರಮುಖ ಅಜಿತ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೆಲ್ಯಹುದಿಕೇರಿಯ ವಿ ಎಸ್ ಎಸ್ ಎನ್ ಸಭಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ಸಿಂಗಲ್ಸ್ ಪ್ರಥಮ ಬಹುಮಾನ 4999 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 2499 ನಗದು ಮತ್ತು ಟ್ರೋಫಿ, ಡಬಲ್ಸ್ ಪ್ರಥಮ ಬಹುಮಾನ 9999 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 4999 ನಗದು ಮತ್ತು ಟ್ರೋಫಿ ನೀಡಲಾಗುವುದು. ಆಸಕ್ತ ತಂಡಗಳು ಮಾ.26 ರೊಳಗೆ ಹೆಸರನ್ನು 7204577605 ಗೆ ನೋಂದಾಯಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.
ವಿರಾಜಪೇಟೆ ಮಾ.11 : ವಿರಾಜಪೇಟೆ ಸಮೀಪದ ಮಲೆತಿರಿಕೆ ಬೆಟ್ಟದ ಶ್ರೀ ಮಲೆ ಮಹಾದೇಶ್ವರ ದೇವರ ವಾರ್ಷಿಕ ಹಬ್ಬವು ಮಾ.15 ರಿಂದ 20 ರವರಗೆ ನಡೆಯಲಿದ್ದು, ಮಾ.18 ರಂದು ದೊಡ್ಡ ಹಬ್ಬ ನಡೆಯಲಿ ಎಂದು ದೇವಾಲಯ ಟ್ರಸ್ಟ್ ಅಧ್ಯಕ್ಷ ವಾಟೆರೀರ ಪೂವಯ್ಯ ತಿಳಿಸಿದ್ದಾರೆ. ಮಾ.15 ರಂದು ಸಂಜೆ ನಾಲ್ಕು ಗಂಟೆಗೆ ಕುಂದಿರ ಐನ್ ಮನೆಯಿಂದ ಭಂಡಾರ ಬರುವುದು, ಸಂಜೆ 7 ಗಂಟೆಗೆ ಕೊಡಿಮರ ನಿಲ್ಲಿಸುವುದು, ರಾತ್ರಿ 8 ಗಂಟೆಗೆ ಮಹಾಪೂಜೆ ನಂತರ ಅನ್ನದಾನ ನಡೆಯಲಿದೆ. ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ನಾಗದೇವಾಲಯದಲ್ಲಿ ವಿಶೇಷ ಪೂಜೆ, ಅಪರಾಹ್ನ ಅನ್ನದಾನ ನಡೆಯಲಿದೆ. ರಾತ್ರಿ 8 ಗಂಟೆಗೆ ಕಾಪು, ನಂತರ ಮಹಾಪೂಜೆ ಬಳಿಕ ಅನ್ನದಾನ ನಡೆಯಲಿದೆ. ಮಾ.17 ರಂದು 11 ಗಂಟೆಗೆ ಮಕ್ಕಾಟ್ ಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಅನ್ನದಾನ ನಡೆಯಲಿದೆ. ರಾತ್ರಿ 8 ಗಂಟೆಗೆ ಇರ್ ಬೊಳಕ್ ಮಹಾಪೂಜೆ, ಬಳಿಕ ಅನ್ನದಾನ ನಡೆಯಲಿದೆ. ಮಾ.18 ರಂದು ದೊಡ್ಡ ಹಬ್ಬ ನಡೆಯಲಿದ್ದು, ಅಪರಾಹ್ನ 12ಕ್ಕೆ ನೆರಪು,…
ಮಡಿಕೇರಿ ಮಾ.11 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ ನಡೆಯಿತು. ಪಕ್ಷದ ಮುಖಂಡರಾದ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಅವರನ್ನು ಒಳಗೊಂಡ ವಿಜಯಸಂಕಲ್ಪ ರಥದ ಮೆರವಣಿಗೆ, ನಗರದ ಮಾರುಕಟ್ಟೆ ಬಳಿಯ ಚೌಡೇಶ್ವರಿ ದೇವಸ್ಥಾನದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದವರೆಗೆ ನಡೆಯಿತು. ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ, ಮಾತನಾಡಿದ ಪಕ್ಷದ ಮುಖಂಡ ಕೆ.ಎಸ್.ಈಶ್ವರಪ್ಪ, ಇಲ್ಲಿಯವರೆಗೆ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಈ ಬಾರಿ 150 ಸ್ಥಾನಗಳನ್ನು ಪಡೆದು ಪುರ್ಣಬಹುಮತದೊಂದಿಗೆ ಸರ್ಕಾರ ರಚನೆಗೆ ಜನತೆ ಬಿಜೆಪಿಯನ್ನು ಆಶೀರ್ವದಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ಅವರು ಈ ಹಿಂದೆ ಎಲ್ಲೆಲ್ಲಿ ಇಂತಹ ಯಾತ್ರೆ ಮಾಡಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್ ಪರಾಭವಗೊಂಡಿದೆ. ಉತ್ತರಪ್ರದೇಶದಲ್ಲಿ ಸೋತ ಕಾಂಗ್ರೆಸ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲೂ ಪರಾಭವಗೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಎಲ್ಲಿದೆಯೆಂದು…
ಸೋಮವಾರಪೇಟೆ ಮಾ.11 : ಕೊಡಗಿನಲ್ಲೂ ಶರುವಾಯ್ತು ಲಿಂಗಾಯತ, ಪಂಚಮಸಾಲಿ ಮೀಸಲಾತಿ ಕಿಚ್ಚು. ವೀರಶೈವ ಲಿಂಗಾಯತರೆಲ್ಲಾ ಒಂದೇ ಇಲ್ಲಿ ಉಪ ಜಾತಿಗಳ ಸುಳಿವಿಲ್ಲ ಅಂದುಕೊಂಡವರಿಗೆ ಈಗ ಲಿಂಗಾಯತ ಪಂಚಮ ಸಾಲಿ ಮೀಸಲಾತಿ ಹೋರಾಟದಲ್ಲಿ ಜಿಲ್ಲೆಯ ಯುವಕರು ಭಾಗವಹಿಸುವ ಮೂಲಕ ಶಾಕ್ ನೀಡಿದ್ದಾರೆ. ಲಿಂಗಾಯತ ಪಂಚಮ ಸಾಲಿ ಜನಾಂಗವನ್ನ 2 ಎ ಮೀಸಲಾತಿ ನೀಡಬೇಕೆಂದು ಜಗದ್ಗುರು ಬಸವ ಜಯಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ 53 ದಿನಗಳಿಂದ ನಡೆಯುತ್ತಿರುವ ಪ್ರತಿಭಟನಾ ಧರಣಿ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಹೋರಾಟದ ಪ್ರಮುಖ ಮೋಹನ್ ನೇತೃತ್ವದಲ್ಲಿ ಕಾರ್ಯದರ್ಶಿ ಅಜ್ಜಳ್ಳಿ ರವಿ, ವೀರಶೈವ ಮಹಾ ಸಭಾದ ಸೋಮವಾರಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಆದರ್ಶ,ಲಿಖಿತ್,ಶಿವಶಂಕರ್,ಕುಮಾರ್,ಉದಯ,ಪ್ರತಾಪ್ ಹಾಗೂ ಪ್ರಶಾಂತ್ ಸೇರಿದಂತೆ ಹಲವು ಮಂದಿ ಭಾಗವಹಿಸಿ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.11 : ಹಿರಿಯ ಸಾಹಿತಿ ಬೊವ್ವೇರಿಯಂಡ ಚಿಣ್ಣಪ್ಪ ನಿಧನಕ್ಕೆ ಕೊಡವಾಮೆರ ಕೊಂಡಾಟ ಸಂಘಟನೆ ಸಂತಾಪ ವ್ಯಕ್ತಪಡಿಸಿದೆ. ಬೊವ್ವೇರಿಯಂಡ ಚಿಣ್ಣಪ್ಪ ಅವರು ಭಾರತದ ಪ್ರಥಮ ಜಾನಪದ ಸಂಗ್ರಹ ಕೃತಿ ಪಟ್ಟೋಲೆ ಪಳಮೆಯ ಸಂಪಾದಕ ನಡಿಕೇರಿಯಂಡ ಚಿಣ್ಣಪ್ಪ ಅವರ ಮೊಮ್ಮಗ, ಪಟ್ಟೋಲೆ ಪಳಮೆ ಕೃತಿಯ ತರ್ಜುಮೆ ಮತ್ತು ಕೊಡವ ಐನ್ ಮನೆಗಳ ಕುರಿತು ವಿಶೇಷ ಅಧ್ಯಯನ ಕೃತಿ ರಚನೆಯೊಂದಿಗೆ ಸಾಹಿತ್ಯ ಲೋಕಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಹಿರಿಯ ಮುತ್ಸದ್ದಿ ಸಾಹಿತಿಯ ಅಗಲಿಕೆಯು ಸಾಹಿತ್ಯ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಅವರ ಸ್ಮರಣಾರ್ಥ ಕೊಡವಾಮೆರ ಕೊಂಡಾಟ ಸಂಘಟನೆಯು ತನ್ನ ದೈನಂದಿನ ಚಟುವಟಿಕೆಯನ್ನು ಸ್ಥಗಿತಗೊಳಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ನಾಪೋಕ್ಲು ಮಾ.11 : ಕುಂಜಿಲ ಪಯ್ ನರಿ ಸುನ್ನಿ ಮುಸ್ಲಿಂ ಜಮಾಯತ್ ವತಿಯಿಂದ ಪಯ್ ನರಿ ವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯ ನಂತರ ಜಮಾಯತ್ ಅಧ್ಯಕ್ಷ ಶೌಕತ್ ಆಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಯತ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ, ಪ್ರಮುಖರಾದ ನಿಸಾರ್ ಅಸನಿ, ಅಬ್ದುಲ್ ಸಖಾಫಿ ,ಹುಸೇನ್ ಮೌಲವಿ ಹಾಗೂ ಧರ್ಮ ಗುರುಗಳು, ಜಮಾಯತ್ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ರಾತ್ರಿ ಕೊಲ್ಲಂನ ಡಾ. ಮಹಮ್ಮದ್ ಫಾರೂಕ್ ಅವರಿಂದ ಉಪನ್ಯಾಸ ನಡೆಯಿತು. ಮಾ.13 ರಂದು ಮಧ್ಯಾಹ್ನ 1.15 ಕ್ಕೆ ಸಾರ್ವಜನಿಕ ಸೌಹಾರ್ದ ಸಮ್ಮೇಳನ ನಡೆಯಲಿದ್ದು, ಅಬ್ದುಲ್ ರಶೀದ್ ಜೈನಿ ಮುಖ್ಯ ಭಾಷಣ ಮಾಡಲಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮಾ.11 : ಜೆಡಿಎಸ್ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯು ಮಾ.15 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರ (ಟೌನ್ ಹಾಲ್ ) ನಲ್ಲಿ ಸಭೆ ನಡೆಯಲಿದ್ದು, ವಿವಿಧ ಘಟಕದ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರು, ಬೂತ್ ಮಟ್ಟದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ತಿಳಿಸಿದ್ದಾರೆ.
ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ, ಚಾಮರಾನಗರದ ಮಾಜಿ ಸಂಸದ ಆರ್.ಧ್ರುವನಾರಾಯಣ (62) ವಿಧಿವಶರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದ ಅವರು ಹೃದಯಾಘತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಸುಂಟಿಕೊಪ್ಪ,ಮಾ.10: ಗ್ರಾಮ ದೇವರ 4ನೇ ವರ್ಷದ ವಾರ್ಷಿಕ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸುಂಟಿಕೊಪ್ಪದ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ, ರಾಮ ಸೇವಾ ಸಮಿತಿ, ಅಯ್ಯಪ್ಪ ದೇವಾಲಯ, ಗೌರಿ ಗಣೇಶೋತ್ಸವ, ಮಸಣಕಮ್ಮ ದೇವಸ್ಥಾನ, ವೃಕ್ಷೋದ್ಭವ ಗಣಪತಿ ದೇವಾಲಯ, ಟಿಸಿಎಲ್ ಚಾಮುಂಡೇಶ್ವರಿ ದೇವಸ್ಥಾನ, ಶ್ರೀದೇವಿ ಅಣ್ಣಪ್ಪ ದೇವಾಲಯ, ಬಾಳೆಕಾಡು ಮುತ್ತಪ್ಪ ದೇವಸ್ಥಾನ ಸಮಿತಿಗಳ ಸಹಭಾಗಿತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಗ್ರಾಮ ದೇವರ ವಾರ್ಷಿಕ ಪೂಜೋತ್ಸವದ ಅಂಗವಾಗಿ ತಳಿರು ತೋರಣ ವಿವಿಧ ಬಗೆಯ ಬಣ್ಣ ಹೂಗಳಿಂದ ಸಿಂಗರಿಸಲಾಗಿತ್ತು. ಅರ್ಚಕ ಗಣೇಶ್ ಭಟ್ ಪೂಜಾ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಸ್ಥಳ ಶುದ್ಧಿ ಕಳಸದೊಂದಿಗೆ ಕುಂಕುಮ ಪೂಜೆ, ಅಲಂಕಾರ ಪೂಜೆ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಬೆಳಿಗ್ಗೆ 10.30 ಗಂಟೆಯ ನಂತರ ಗ್ರಾಮ ದೇವರಿಗೆ ಹರಕೆ ಸಮರ್ಪಣೆ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಭಕ್ತರು ಗ್ರಾಮ ದೇವತೆಗೆ ಹರಕೆ ಒಪ್ಪಿಸಿದರು. ಸಮಿತಿಯ ದಿನು ದೇವಯ್ಯ, ಎ.ಶ್ರೀಧರ್ ಕುಮಾರ್, ಸುರೇಶ್ ಗೋಪಿ, ಪಟ್ಟೆ ಮನೆ…






