ಲೇಖಕ: admin

ವಿರಾಜಪೇಟೆ ಫೆ.1 :   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪ್ರೊ. ಕವಿತಾ ರೈ  ಅವರ ಮಾರ್ಗದರ್ಶನದಲ್ಲಿ  ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ   ಎಂ.ಎನ್.ಹೇಮಂತ್    ಮಂಡಿಸಿದ ಕೊಡವ ಹಾಗೂ ತುಳು ಸಂಸ್ಕೃತಿಗಳ ತೌಲನಿಕ ಅಧ್ಯಯನ ಎಂಬ ಸಂಶೋಧನಾ ವಿಷಯಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ. ಆ ಪ್ರಯುಕ್ತ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ  ರೆ. ಫಾ. ಐಸಾಕ್ ರತ್ನಕರ್ ಹಾಗೂ ಕಾಲೇಜು ಆಡಳಿತ ಮಂಡಳಿಯ ವತಿಯಿಂದ  ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ರೆ. ಫಾ. ಐಸಾಕ್ ರತ್ನಕರ್  ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ  ಹೇಮಂತ್ ಅವರಿಗೆ ಡಾಕ್ಟರೇಟ್ ಪದವಿ ದೊರಕಿರುವುದು ಸಂತಸ ತಂದಿದೆ. ಇಡೀ ವಿದ್ಯಾಸಂಸ್ಥೆಗೆ ಹೆಮ್ಮೆ ಎಂದರು.

Read More

ಮಡಿಕೇರಿ ಫೆ.1 : ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ಮೈಸೂರು-ಕೊಡಗು ಲೊಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯೂ ಪ್ರಥಮ ಸ್ಥಾನ ಗಳಿಸುವ ಮೂಲಕ ಸರ್ಕಾರದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರದೇಶಾಭಿವೃದ್ಧಿ ನಿಧಿಯಡಿ 12.14 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಪೈಕಿ ರೂ.11.87 ಕೋಟಿ ವೆಚ್ಚದ ಕಾಮಗಾರಿಗಳನ್ನು ಶಿಫಾರಸ್ಸು ಮಾಡಿದ್ದರು. ರೂ.11.74 ಕೋಟಿ ವೆಚ್ಚವಾಗಿದ್ದು, ರೂ.40 ಲಕ್ಷ ಮಾತ್ರ ಉಳಿಕೆಯಾಗಿದೆ. ಪ್ರತಾಪ್ ಸಿಂಹ ಅವರ ಅನುದಾನ ಬಳಕೆ ಪ್ರಮಾಣ ಶೇ.121.60 ರಷ್ಟಿದೆ. ಇವರು ಕೋವಿಡ್ ಪೂರ್ವದಲ್ಲೂ ಅನುದಾನ ಬಳಕೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದರು. ಸಂಸದರ ಪ್ರತಿ ಕ್ಷೇತ್ರಕ್ಕೆ ವಾರ್ಷಿಕ ಅನುದಾನ ಬಿಡುಗಡೆಯಾಗುತ್ತದೆ. ಆಯಾ ಕ್ಷೇತ್ರದ ಸಂಸದರು ವಿವಿಧ ಕಾಮಗಾರಿಗಳಿಗೆ ಅನುದಾನ ಶಿಫಾರಸು ಮಾಡಬಹುದು.

Read More

ಮಡಿಕೇರಿ ಫೆ.1 : ಆಟೋ ಮಾಲೀಕರು ಮತ್ತು ಚಾಲಕರ ಸಂಘ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ 1 ಲಕ್ಷ ರೂ. ದೇಣಿಗೆ ನೀಡುವುದಾಗಿ ಪುಸ್ತಕದಲ್ಲಿ ಬರೆದು ಭರವಸೆ ನೀಡಿದ್ದ ರಾಜಕಾರಣಿಯೊಬ್ಬರು ನಂತರ ಹಣ ನೀಡದೆ ಸತಾಯಿಸಿದ್ದಾರೆ ಎಂದು ಕೊಡಗು ಜಿಲ್ಲಾ ಹಾಗೂ ಮಡಿಕೇರಿ ನಗರ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ಜ.26 ರಂದು ಕ್ರೀಡಾಕೂಟ ಮತ್ತು ಡ್ಯಾನ್ಸ್ ಮೇಳವನ್ನು ಆಯೋಜಿಸಲಾಗಿತ್ತು. ಇದಕ್ಕೆ 1 ಲಕ್ಷ ರೂ. ನೀಡುವುದಾಗಿ ಜಿಲ್ಲೆಯ ರಾಜಕಾರಣಿಯೊಬ್ಬರು ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅವರಿಂದ ಹಣ ಬಂದಿರುವುದಿಲ್ಲವೆAದು ಬೇಸರ ವ್ಯಕ್ತಪಡಿಸಿದರು. ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದ ಕಾರಣ ಹಣದ ಅವಶ್ಯಕತೆ ಇತ್ತು, ಆದರೆ ಈ ರಾಜಕಾರಣಿಯ ಭರವಸೆ ಹುಸಿಯಾದ ನಂತರ ಅನಿವಾರ್ಯವಾಗಿ ನಾವು ವರ್ತಕರು ಹಾಗೂ ಸಾರ್ವಜನಿಕರಿಂದ ಆರ್ಥಿಕ ನೆರವು ಕೋರಬೇಕಾಯಿತು. ಇದಕ್ಕೆ ಉತ್ತಮ ಸ್ಪಂದನೆ ದೊರೆತು ಕಾರ್ಯಕ್ರಮವೂ ಯಶಸ್ವಿಯಾಯಿತು. ಆದರೆ ಹುಸಿ ಭರವಸೆ…

Read More

ಮಡಿಕೇರಿ ಫೆ.1 : ಕಕ್ಕಬೆ ಸ್ಟೆಪ್ಸ್ ಸಂಸ್ಥೆ ವತಿಯಿಂದ ಪ್ರಥಮ ಬಾರಿಗೆ ಫೆ.26 ರಂದು ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರಿಗಾಗಿ ರಾಜ್ಯ ಮಟ್ಟದ ನಾಕೌಟ್ ಮಾದರಿಯ CATAPULT (ಕ್ಯಾಟರ್ ಬಿಲ್) ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಡಿ.ಸಂತು ಸುಬ್ರಮಣಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಕಬೆಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗಲಿದೆ ಎಂದರು. 18 ವರ್ಷದೊಳಗಿನ ಮಕ್ಕಳು ಹಾಗೂ ಹಿರಿಯರಿಗೆ ಎರಡು ವಿಭಾಗಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಮೊದಲ ರೌಂಡ್ 10 ಸೆಕೆಂಡಿಗೆ 50 ಅಡಿ ದೂರದ ಗುರಿ ಹೊಂದಿದ್ದು, ಒಬ್ಬರಿಗೆ ಎರಡು ಅವಕಾಶ ನೀಡಲಾಗುವುದು. 2ನೇ ಸುತ್ತಿಗೆ ಆಯ್ಕೆಯಾದವರಿಗೆ ಒಂದೇ ಅವಕಾಶ ನೀಡಲಾಗುವುದೆಂದು ತಿಳಿಸಿದರು. ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಲೆನ್ಸ್ ಹಾಗೂ ಲೇಸರ್ ಕ್ಯಾಟರ್ ಬಿಲ್‍ಗಳಿಗೆ ಅವಕಾಶ ಇಲ್ಲ. ಗಾಜಿನ ಗೋಲಿ ಹೊರತುಪಡಿಸಿ ಇತರ ಕ್ಯಾಟರ್ ಬಿಲ್ ಬಾಲ್‍ಗಳಿಗೆ ಅವಕಾಶ ನೀಡಲಾಗುವುದು…

Read More

ಮಡಿಕೇರಿ ಫೆ.1 :  , ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಖ್ಯಾತ ಆಧ್ಯಾತ್ಮಿಕ ಬರಹಗಾರ ಕೆ. ಕೇಶವ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿರಾಜಪೇಟೆ ಪುರಭವನದಲ್ಲಿ  ಕ.ಸಾ.ಪ ಪ್ರಮುಖರು ಹಾಗೂ ಪದಾಧಿಕಾರಿಗಳು ಕೇಶವ ಭಟ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭ ಕಸಾಪ ತಾಲೂಕು ಕೋಶಾಧಿಕಾರಿ  ಶಬರೀಶ್ ಶೆಟ್ಟಿ ಮಾತನಾಡಿ, ವಿರಾಜಪೇಟೆ ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ  ಕೇಶವ ಭಟ್ ಅಪಾರ ಹಿಂದಿ ಜ್ಞಾನವನ್ನು ಹೊಂದಿದ್ದು, ಸಂತ ಅನ್ನಮ್ಮ ಶಾಲೆಯಲ್ಲಿ ಹಿಂದಿ ಅಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಸದ್ಗುರು ಅಪ್ಪಯ್ಯ ಸ್ವಾಮಿ ಅವರ ಪ್ರೇರಣೆಯಿಂದ ಪ್ರಭಾವಿತರಾಗಿ ಸನಾತನ ಧರ್ಮ ಎಂಬ ಮೊದಲ ಕೃತಿಯನ್ನು ಪ್ರಕಟಿಸಿದರು. ಉಪನಿಷತ್ತುಗಳಿಗೆ ವ್ಯಾಖ್ಯಾನಗಳನ್ನು ಬರೆಯುತ್ತಿದ್ದರು. ಸರ್ಕಾರಿ ಪದವಿಪೂರ್ವ ಕಾಲೇಜು ವಿರಾಜಪೇಟೆಯಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಹೀಗೆ ಆಧ್ಯಾತ್ಮ ಸಂತ ರಾಗಿ  ನಿಧನರಾಗಿರುವುದು ಸಾಹಿತ್ಯ ಲೋಕಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದರು. ಈ ಸಂದರ್ಭದಲ್ಲಿ…

Read More

ಮಡಿಕೇರಿ ಫೆ.1 :  ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆಯ ಕೂರ್ಗ್ ಹಂಟರ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಮೊದಲನೇ ವರ್ಷದ ಹೊನಲು ಬೆಳಕಿನ 5+2 ಕಾಲ್ಚೆಂಡು ಪಂದ್ಯಾವಳಿ ಪೊನ್ನತ್ಮೊಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾ.3 ರಿಂದ 5 ವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಮೊದಲು ನೋಂದಣಿ ಮಾಡಿಕೊಳ್ಳುವ 48 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮೈದಾನ ಶುಲ್ಕ 2,200 ನಿಗದಿಪಡಿಸಲಾಗಿದ್ದು, 1200 ರೂ. ಮುಂಗಡವಾಗಿ ಪಾವತಿಸಿ ತಂಡವನ್ನು ನೋಂದಣಿ ಮಾಡಿಕೊಳ್ಳಬೇಕು. ಪ್ರಥಮ 33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 22,222 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ ಕೂಡ ಟ್ರೋಫಿ ನೀಡಲಾಗುತ್ತಿದೆ. ಅದಲ್ಲದೇ ವೈಯಕ್ತಿಕ ಬಹುಮಾನ ಕೂಡ ಇದ್ದು, ಆಸಕ್ತ ತಂಡಗಳು ಫೆ.20 ರೊಳಗೆ ತಂಡವನ್ನು  7022368775,9611251311,9448792008  ಸಂಖ್ಯೆಗೆ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

Read More

ಮಡಿಕೇರಿ ಫೆ.1 : ನೌಕರಿಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮಡಿಕೇರಿ ನಗರಸಭಾ ಗುತ್ತಿಗೆ ನೌಕರರು ಕೆಲಸವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ. ನಗರಸಭಾ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುತ್ತಿರುವ ನೌಕರರು ಹಾಗೂ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ.ಈರಪ್ಪ ಮಾತನಾಡಿ ಸರ್ಕಾರ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಡಾಟ ಆಪರೇಟರುಗಳು ಸೇರಿದಂತೆ 15 ಸಾವಿರಕ್ಕು ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡು ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದರು. ಹೊರಗುತ್ತಿಗೆ ನೌಕರರನ್ನು ಪೌರಕಾಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸುವವರೆಗೆ ಮುಷ್ಕರ ಮುಂದುವರೆಯಲಿದೆ ಎಂದು ತಿಳಿಸಿದರು. ನೀರು ಸರಬರಾಜುದಾರರು, ಡಾಟಾ ಆಪರೇಟರ್‍ಗಳು, ಸ್ವಚ್ಛತಾ ಕಾರ್ಮಿಕರು ಕೆಲಸವನ್ನು ಸ್ಥಗಿತಗೊಳಿಸಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. ಉಪಾಧ್ಯಕ್ಷ ಎ.ಎ.ಬೋಪಣ್ಣ, ಕಾರ್ಯದರ್ಶಿ ಟಿ.ಬಿ.ರಮೇಶ್ ಕುಟ್ಟಪ್ಪ, ಖಜಾಂಚಿ ಎಂ.ಎ.ಕಬೀರ್ ಅಹಮ್ಮದ್,…

Read More

ನಾಪೋಕ್ಲು ಫೆ.1 : ನಾಪೋಕ್ಲು ಕೊಡವ ಸಮಾಜ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಈ ರಸ್ತೆಯಲ್ಲಿ ನಿಲ್ಲುತ್ತಿರುವ ಕೊಳಚೆ ನೀರು ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಪೋಕ್ಲು ಪಂಚಾಯಿತಿ ಈ ಬಗ್ಗೆ ಗಮನಹರಿಸಿ ರಸ್ತೆಯ ಗುಂಡಿಯನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೆ ವಾಹನಗಳ ನಿಲುಗಡೆ ವ್ಯವಸ್ಥೆಯನ್ನು ಸುಗಮಗೊಳಿಸಲು ಪೊಲೀಸ್ ಇಲಾಖೆ ಸೂಕ್ತ ಯೋಜನೆಯನ್ನು ರೂಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.  ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಫೆ.1 : ಕಾಫಿ ಮಂಡಳಿಯಿಂದ ಕೊಡಗು ಜಿಲ್ಲೆಯಲ್ಲಿ ಕಾಫಿ ಉತ್ಪಾದನೆಯನ್ನು ಹೆಚ್ಚಿಸಲು ರೈತರಿಗೆ ಅಗತ್ಯವಾದ ನೀರಾವರಿ ಸೌಲಭ್ಯ, ಪೈಪುಗಳು ಹಾಗೂ ಪಂಪ್ ಸೆಟ್ಗಳನ್ನು ಖರೀದಿಸಲು ಅಗತ್ಯ ಸಹಾಯಧನ ನೀಡಲಾಗುವುದು. ಮಾತ್ರವಲ್ಲದೆ ಹಳೆತೋಟವನ್ನು ಹೊಸ ತೋಟವನ್ನಾಗಿ ಮಾರ್ಪಡಿಸಲು ಸಹಾಯಧನ ಪಡೆಯಲು ಮಾ.31ರೊಳಗೆ ಬೆಳೆಗಾರರು ತಮಗೆ ಅಗತ್ಯವಿರುವಂತಹ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಕಾಫಿ ಮಂಡಳಿಯ ಉಪನಿರ್ದೇಶಕ ಡಾ. ಚಂದ್ರಶೇಖರ್ ತಿಳಿಸಿದರು. ನಾಪೋಕ್ಲುವಿನಲ್ಲಿ ಕಾಫಿ ಮಂಡಳಿ ಹಾಗೂ ಬೆಳೆಗಾರರ ನಡುವೆ ಏರ್ಪಟ್ಟ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಫಿಯ ತೋಟಗಳಿಗೆ ಅನಾವಶ್ಯಕ ರಾಸಾಯನಿಕ ಗೊಬ್ಬರ ಬಳಕೆಯನ್ನು ತಪ್ಪಿಸಬೇಕು. ಕಾಫಿ ಗಿಡಗಳ ನಿರ್ವಹಣೆ ಕಾಫಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ ಎಂದ ಚಂದ್ರಶೇಖರ್ ರೈತರಿಗೆ ಸಿಕ್ಕುವ ಸೌಲಭ್ಯಗಳು, ಮತ್ತು ಕಾಫಿ ತೋಟದ ನಿರ್ವಹಣೆ, ಮಣ್ಣು ಪರೀಕ್ಷೆ ಸಮಗ್ರ ಮಾಹಿತಿ ಹಾಗೂ ಮುಂದಿನ ದಿನಗಳಲ್ಲಿ ರೈತರ ತೋಟಗಳಿಗೆ ಭೇಟಿ ನೀಡಿ ಮಣ್ಣು ಪರೀಕ್ಷೆ ಮಾಡುವುದು ಹಾಗೂ ಕಪಾತು ತರಬೇತಿ ನೀಡಲಾಗುವುದು ಎಂದು…

Read More

ಮಡಿಕೇರಿ ಜ.31 :  ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಕರುಣ್ ಕಾಳಯ್ಯ ಮೈಸೂರು ಮಿತ್ರ ದಿನ ಪತ್ರಿಕೆಯಲ್ಲಿ ಬರೆದ ‘ಮಂಜಿನ ನಗರಿಯಲ್ಲಿ ವೀರ ಸೇನಾನಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ’ ಎಂಬ ವಿಶೇಷ ವರದಿಗೆ ರಾಜ್ಯಪ್ರಶಸ್ತಿ ಬಂದಿದ್ದು, ಪ್ರಸ್ತುತ ಶಕ್ತಿ ದಿನ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More