ಮಡಿಕೇರಿ ಮಾ.11 : ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆಯುತ್ತಿರುವ 19ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಗಾಂಧಿ ಕ್ರಿಕೆಟರ್ಸ್ ಕಂಡಕರೆ ತಂಡದ ಜರ್ಸಿಯನ್ನು ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಗೌಡ ಬಿಡುಗಡೆಗೊಳಿಸಿದರು. ಕಂಡಕರೆಯಲ್ಲಿ ಗಾಂಧಿ ಯುವಕ ಸಂಘದ ಅಧ್ಯಕ್ಷರಾದ ಷರೀಫ್ ಪಿ.ಎಂ ಗಾಂಧಿ ಕ್ರಿಕೆಟರ್ಸ್ ತಂಡದ ಆಟಗಾರರಿಗೆ ವಿತರಿಸಿದರು. ಈ ಸಂದರ್ಭ ಗಾಂಧಿ ಯುವಕ ಸಂಘದ ಸ್ಥಾಪಕ ಪತ್ರಕರ್ತ ಇಸ್ಮಾಯಿಲ್ ಕಂಡಕರೆ,ಪ್ರಧಾನ ಕಾರ್ಯದರ್ಶಿ ಇರ್ಷಾದ್ ಕೆ.ಎಂ,ಉಪಾಧ್ಯಕ್ಷ ಸವಾದ್ ಉಸ್ಮಾನ್ ಈ.ಯು, ಅಫ್ನಾನ್ ಪಿ.ಎಂ, ಸಲ್ಮಾನ್, ಖರೀಮ್, ಮುಬಶ್ಶಿರ್, ಸಹೀರ್, ರಿಯಾಸ್, ಕಂಡಕರೆ ನಿವಾಸಿ ಶುಕೂರ್ ಇದ್ದರು.
ಲೇಖಕ: admin
ಮಡಿಕೇರಿ ಮಾ.10 : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಇಂದು ಕೊಡಗು ಜಿಲ್ಲೆಯನ್ನು ಪ್ರವೇಶಿಸಿತು. ಕೇಸರಿಮಯವಾದ ಗೋಣಿಕೊಪ್ಪಲಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾವಿರಾರು ಕಾರ್ಯಕರ್ತರು ಸಾಕ್ಷಿಯಾದರು. ಜಯಘೋಷಗಳೊಂದಿಗೆ ಮುಖ್ಯ ರಸ್ತೆಯಲ್ಲಿ ಯಾತ್ರೆ ಸಾಗಿತು. ಸಾವಿರಾರು ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರಮೋದಿ ಅವರಿಗೆ ಜಯಕಾರ ಹಾಕಿದರು. ನಂತರ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಭಾರತೀಯ ಜನತಾ ಪಾರ್ಟಿ ಜಾತಿವಾದಿ ಪಕ್ಷವಲ್ಲ ರಾಷ್ಟ್ರವಾದಿ ಪಕ್ಷ, ಬಿಜೆಪಿಗೆ ಕೋಮುವಾದಿ ಪಟ್ಟ ಕಟ್ಟಿದವರೇ ಜಾತಿವಾದಿಗಳು ಎಂದು ಗುಡುಗಿದರು. ಸಿದ್ದರಾಮಯ್ಯ ಅವರು ಕುರುಬರೆಲ್ಲ ನನ್ನ ಹಿಂದೆ ಬನ್ನಿ ಎಂದರೆ, ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗರೆಲ್ಲ ನನ್ನ ಹಿಂದೆ ಬನ್ನಿ ಎಂದು ಕರೆ ನೀಡುತ್ತಿದ್ದಾರೆ. ಇದರಲ್ಲೇ ಅರ್ಥವಾಗುತ್ತದೆ ಜಾತಿಯ ವಾದಿಗಳು ಯಾರೆಂದು. ಸಿದ್ದರಾಮಯ್ಯ ಅವರಿಗೆ ಕುರುಬರು, ದಲಿತರು, ಇತರ ಜನಾಂಗಗಳ ಬೆಂಬಲ ಇಲ್ಲ ಎನ್ನುವುದು ಖಾತ್ರಿಯಾಗಿ ಅಲ್ಪಸಂಖ್ಯಾತರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ…
ಮಡಿಕೇರಿ ಮಾ.10 : ಮಹಿಳಾ ದಿನಾಚರಣೆ ಅಂಗವಾಗಿ ಕೊಡವ ಕೂಟಾಳಿಯಡ ಕೂಟದಿಂದ ಹಿರಿಯ ಕಲಾವಿದೆ ಮೈತಾಡಿ ಗ್ರಾಮದ ಕುಂಡಚ್ಚಿರ ಜಾಜಿ ಮುತ್ತಣ್ಣ ಅವರನ್ನು ಮನೆಗೆ ತೆರಳಿ ಸನ್ಮಾನಿಸಲಾಯಿತು. ಕಿರಿಯ ವಯಸ್ಸಿನಲ್ಲಿ ಉಮ್ಮತ್ತಾಟ್, ಪೌರಾಣಿಕ ನಾಟಕ, ಕೊಡವ ಹಾಡುಗಳನ್ನು ಕಲೆಯಾಗಿ ರೂಪಿಸಿಕೊಂಡು 75ರ ಇಳಿ ವಯಸ್ಸಿನಲ್ಲೂ ಕಿರಿಯರಿಗೆ ತರಬೇತಿ ನೀಡುತ್ತಿರುವ ಕುಂಡಚ್ಚಿರ ಜಾಜಿ ಮುತ್ತಣ್ಣ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಕೂಟದ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ ರಜನ್ ಮಾತನಾಡಿ, ಸೇವೆ, ಸಾಧನೆ ಮೂಲಕ ಸಾಕಷ್ಟು ಮಹಿಳೆಯರು ಸಮಾಜಕ್ಕೆ ತಮ್ಮದೇ ಆದ ಕಾಣಿಕೆ ನೀಡುತ್ತಿದ್ದಾರೆ. ಇಂತಹವರನ್ನು ಮಹಿಳಾ ದಿನಾಚರಣೆ ಅಂಗವಾಗಿ ಗೌರವಿಸಲಾಗುತ್ತಿದೆ ಎಂದರು. ಕೂಟದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಸಲಹೆಗಾರ ಚಂಗುಲಂಡ ಸೂರಜ್, ಸಾಂಸ್ಕೃತಿಕ ನಿರ್ದೇಶಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸದಸ್ಯ ಕಾಳಮಂಡ ರಾಬಿನ್ ಅಚ್ಚಮ್ಮ ಇದ್ದರು.
ಕುಶಾಲನಗರ, ಮಾ.10 : ಟಿಬೆಟಿಯನ್ ನೂತನ ವರ್ಷ ಆಚರಣೆ ಅಂಗವಾಗಿ ಸಮೀಪದ ಬೈಲುಕುಪ್ಪೆ ಟಿಬೆಟಿನ್ ನಿರಾಶ್ರಿತ ಶಿಬಿರದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ಬೈಲುಕುಪ್ಪೆಯ ಗೋಲ್ಡನ್ ಟೆಂಪಲ್ ಆವರಣದಲ್ಲಿ ಬೃಹತ್ ಪರದೆಗಳ ಅನಾವರಣ ಕಾರ್ಯಕ್ರಮ ಕೂಡ ನಡೆಯಿತು. ಧಾರ್ಮಿಕ ಗುರುಗಳಾಗಿದ್ದ ಗುರು ಪದ್ಮ ಸಂಭವ ಮತ್ತು ಅಧಿಕ ಆಯುಷ್ಯ ನೀಡುತ್ತದೆ ಎಂದು ನಂಬಿಕೆ ಹೊಂದಿರುವ ಅಮಿತಾಯುಶ್ ಚಿತ್ರಪರದೆಗಳನ್ನು ಅನಾವರಣಗೊಳಿಸಲಾಯಿತು.
ಬೆಂಗಳೂರು ಮಾ.10 : ಕಾಫಿ ಪುಡಿಯೊಂದಿಗೆ ಚಿಕೋರಿ ಬೆರೆಸುವ ಪ್ರಕ್ರಿಯೆ ಒಂದು ಕಲಬೆರಕೆಯಾಗಿದೆ. ಆದ್ದರಿಂದ ಕಾಫಿ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಚಿಕೋರಿಯನ್ನು ನಿಷೇಧಿಸಬೇಕೆಂದು ಚಿಹಾಕೊ ಕಾಫಿ ಸಹಕಾರ ಸಂಗಮ ಸಂಘಟನೆಯ ಸಂಸ್ಥಾಪಕ ಎಸಳೂರು ಉದಯಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ಕಾಫಿ ಮಂಡಳಿಯ ಕಾರ್ಯದರ್ಶಿ ಜಗದೀಶ್ ಅವರಿಗೆ ಇಂದು ಮನವಿ ಸಲ್ಲಿಸಿದರು. ಹಿಂದೆ ಕಾಫಿ ಮಂಡಳಿಯಲ್ಲಿದ್ದ ಭ್ರಷ್ಟರಿಂದ ಚಿಕೋರಿಯನ್ನು ಕಾಫಿ ಪುಡಿಯೊಂದಿಗೆ ಬೆರೆಸುವ ವಂಚನೆಗೆ ಅವಕಾಶ ಮಾಡಿಕೊಡಲಾಗಿತ್ತು. ಇದು ಬೆಳೆಗಾರರು ಮತ್ತು ಕಾಫಿ ಗ್ರಾಹಕರಿಬ್ಬರಿಗೂ ಅಪಾರ ಕಷ್ಟ ನಷ್ಟಗಳನ್ನು ತಂದಿದೆ. ಆದ್ದರಿಂದ ಈಗಲಾದರೂ ಕಾಫಿ ಮಂಡಳಿ ಮತ್ತು ಸದಸ್ಯರು ಎಚ್ಚೆತ್ತುಕೊಂಡು ಚಿಕೋರಿಯನ್ನು ನಿಷೇಧಿಸಬೇಕು. ಇದರಿಂದ ಕಾಫಿಯ ಆಂತರಿಕ ಮಾರುಕಟ್ಟೆ ಅಭಿವೃದ್ಧಿಗೆ ಹೆಬ್ಬಾಗಿಲು ತೆರೆದಂತಾಗುತ್ತದೆ. ಅಲ್ಲದೆ ಕಾಫಿ ಪ್ರಿಯ ಗ್ರಾಹಕರಿಗೂ ಪರಿಶುದ್ಧವಾದ ಕಾಫಿ ಪುಡಿ ಲಭ್ಯವಾಗಲು ದಾರಿಮಾಡಿಕೊಟ್ಟಂತಾಗುತ್ತದೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಆರೋಗ್ಯದ ದೃಷ್ಟಿಯಿಂದಲೂ ಕಾಫಿ ಪುಡಿಯೊಂದಿಗೆ ಚಿಕೋರಿ ಬೆರೆಸುವುದರಿಂದ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಚಿಕೋರಿ ಬೆರೆಸಿದ ಕಾಫಿ…
ಮಡಿಕೇರಿ ಮಾ.10 : ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗುಹ್ಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪವೇ ನಿರ್ಮಾಣವಾಗಿರುವ ನೂತನ ಬಡಾವಣೆಗೆ ನೇತಾಜಿ ಬಡಾವಣೆ ಎಂದು ನಾಮಕರಣ ಮಾಡಲಾಗಿದ್ದು, ನಾಮಫಲಕವನ್ನು ಸಿದ್ದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ತುಳಸಿ ಗಣಪತಿ ಅನಾವರಣಗೊಳಿಸಿದರು. ಈ ಸಂದರ್ಭ ಪಿಡಿಓ ಮನ್ ಮೋಹನ್, ಗ್ರಾ.ಪಂ ಸದಸ್ಯರುಗಳಾದ ಆನಂದ್, ಲೋಕೇಶ್,ಹಸ್ಸನ್, ಪ್ರೇಮಾ ಗೋಪಾಲ್, ಪೂರ್ಣಿಮಾ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಮಡಿಕೇರಿ ಮಾ.10 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬೂತ್ ಸಂಖ್ಯೆ 203 ಹಾಗೂ 204ರಲ್ಲಿ ಬೂತ್ ಅಧ್ಯಕ್ಷ ಹಸೈನ್ ಹಾಗೂ ಎಂ.ಎಂ.ಯಾಕುಬ್ ಮುಂದಾಳತ್ವದಲ್ಲಿ ತ್ಯಾಗರಾಜ ನಗರದ ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್ನ್ನು ಮನೆ ಮನೆಗೆ ವಿತರಿಸಿದರು. ಈ ಸಂದರ್ಭ ಕೆಪಿಸಿಸಿ ಮಾದ್ಯಮ ಸಂವಹನ ವಕ್ತಾರರು ಹಾಗೂ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್…
ಮಡಿಕೇರಿ ಮಾ.10 : ಕೊಡಗು ಜಿಲ್ಲೆಯಲ್ಲಿ ಮಾ.12 ರಂದು ನಡೆಯುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ 6 ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಸಂಯುಕ್ತ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು…
ಮಡಿಕೇರಿ ಮಾ.10 : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಮತ್ತು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ದೊಡ್ಡೇಗೌಡ ಜಗದ್ವಿಖ್ಯಾತ ವಿಜ್ಞಾನಿ ಸರ್. ಸಿ.ವಿ.ರಾಮನ್ ಅವರು ವಿಜ್ಞಾನಕ್ಕೆ ನೀಡಿರುವ ಕೊಡುಗೆಯನ್ನು ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸಿಕೊಳ್ಳುವುದು ತುಂಬಾ ಅವಶ್ಯಕ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂತಹ ವ್ಯಕ್ತಿತ್ವ ಹಾಗೂ ಆದರ್ಶವನ್ನಾಗಿಸಿ ಅವರ ಹೆಜ್ಜೆಯಲ್ಲಿ ಸಾಗಬೇಕು ಎಂದರು. ಶಾಲೆಯ ಉಪ ಪ್ರಾಂಶುಪಾಲರಾದ ನಳಿನಿ ಮಾತನಾಡಿ ಸರ್.ಸಿ.ವಿ.ರಾಮನ್ ಅವರ ಜೀವನ ಮತ್ತು ಸಾಧನೆಯನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತಾ ವೈಜ್ಞಾನಿಕ ಮನೋಭಾವದ ಜೊತೆಗೆ ಸಾಮಾಜಿಕ ಕಳಕಳಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು. ಕೊಡಗು ಜಿಲ್ಲಾ ಪಂಚಾಯತ್ ಎನ್.ಆರ್.ಡಿ.ಎಂ.ಎಸ್. ಅಧಿಕಾರಿ ಸೂರಜ್, ‘ರಾಷ್ಟ್ರೀಯ ವಿಜ್ಞಾನ ದಿನʼದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಇತರೆ…
ಮಡಿಕೇರಿ ಮಾ.10 : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು. ಸುಮಾರು 4.90 ಲಕ್ಷ ರೂ ವೆಚ್ಚದಲ್ಲಿ ನಗರಸಭಾ ನಿಧಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಮಡಿಕೇರಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು 40 ಕೋಟಿ ರೂ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು. ನಗರಸಭಾ ನಿಧಿಯಿಂದ 4.90 ಲಕ್ಷ ರೂ ವೆಚ್ಚದಲ್ಲಿ ಮಡಿಕೇರಿ ನಗರದ ಎಲ್ಲಾ ವಾರ್ಡ್ಗಳಲ್ಲಿ ‘ನಾಮಫಲಕ’ ಅಳವಡಿಸಲಾಗುತ್ತಿದೆ ಎಂದು ಅಪ್ಪಚ್ಚು ರಂಜನ್ ಅವರು ಮಾಹಿತಿ ನೀಡಿದರು. 2022-23 ನೇ ಸಾಲಿನ 15 ನೇ ಹಣಕಾಸು ಆಯೋಗದ ಅನುದಾನದಡಿ ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಸುಮಾರು 11.84 ಲಕ್ಷ ರೂ ವೆಚ್ಚದಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಿಕೇಂದ್ರಿಕೃತ ತ್ಯಾಜ್ಯ ಗೊಬ್ಬರ ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ…






