ಲೇಖಕ: admin

ಮಡಿಕೇರಿ ಮಾ.10 : ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಎ.ವಿ ಶಾಲೆಯಿಂದ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ ಸಾಗಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸಿಲಿಂಡರ್‍ಗಳ ಅಣುಕು ಶವಯಾತ್ರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ನಗರ ಪ್ರದೇಶ ಮಾತ್ರವಲ್ಲದೇ ಹಳ್ಳಿಗಳಲ್ಲೂ ದಿನನಿತ್ಯ ಅಡುಗೆ ಅನಿಲಕ್ಕೆ ಜನರು ಅವಲಂಬಿತರಾಗಿದ್ದಾರೆ. ರೂ.450 ಇದ್ದ ಅಡುಗೆ ಇದೀಗ ರೂ.1140 ಕ್ಕೆ ಏರಿಕೆ ಮಾಡಲಾಗಿದೆ. ಹೀಗಾದರೆ ಜನಸಾಮಾನ್ಯರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಗಣೇಶ್, ಮದ್ಯಮ ವರ್ಗದ ಜನ, ಬಡವರು, ಆಟೋ ಚಾಲಕರು, ಕಾರು ಚಾಲಕರು, ಕೂಲಿ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೊಂದರೆಯಾಗಲಿದ್ದು, ಸರ್ಕಾರ ಬಡವರ ಮೇಲಿನ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಪ್ರಧಾನ…

Read More

ನಾಪೋಕ್ಲು ಮಾ.10 :  ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ. ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್ ಆಂಡ್ ಎಸ್ ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲಿಕತ್ವದ ಬೆಂಗಳೂರು ರೈಲ್ವೇಸ್ ತಂಡವನ್ನು ಮಣಿಸಿ ಪರವಂಡ ಸಿರಾಜ್ ಮಾಲಿಕತ್ವದ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬೆಂಗಳೂರು ರೈಲ್ವೇಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಗೊಂಡಿತು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹಾಗೂ ಕಾಂಗ್ರೆಸ್ಸಿನ ಯುವನಾಯಕ ಮಂತರ್ ಗೌಡ ಚೆಂಡಿನ ಪ್ರಯೋಗದೊಂದಿಗೆ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಕೊಡಗು ಕ್ರೀಡೆಗೆ ಪ್ರಸಿದ್ಧವಾದ ಜಿಲ್ಲೆಯಾಗಿದೆ. ಆದರೂ ಗ್ರಾಮ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸಮರ್ಪಕ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಲು…

Read More

ಮಡಿಕೇರಿ ಮಾ.10 : ಕರಿಕೆ ಗ್ರಾಮದ ಕುಂಡತ್ತಿಕಾನ ಅರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕವಾಗಿ ಹಬ್ಬಿದೆ. ಇಂದು ಮಧ್ಯಾಹ್ನ ಗ್ರಾಮದ ಪಟ್ಟಿ ದೇವಯ್ಯ ಎಂಬವರ ಮನೆ ಸಮೀಪ ಬಿದಿರಿಗೆ ಬೆಂಕಿ ಹತ್ತಿಕೊಂಡಿದ್ದು,  ಕಾಡಿಚ್ಚು ವ್ಯಾಪಕವಾಗಿ ಉರಿಯುತ್ತಿದೆ.  ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ವ್ಯಾಪಕವಾಗಿ ಹಬ್ಬಿದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ.

Read More

ಮಡಿಕೇರಿ ಮಾ.10 : ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಸುಂಕದಳ್ಳಿ ಗ್ರಾಮ ನಿವಾಸಿ ನಿಶಾಂತ್.ಎಸ್.ಜಿ.(20) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ ಇದ್ದ 170 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ತನಿಖಾ ತಂಡ ರಚಿಸಲಾಗಿತ್ತು. ಮಾ.9ರಂದು ಕುಶಾಲನಗರ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಈ ತಂಡಕ್ಕೆ ಖಚಿತ ಮಾಹಿತಿ ಲಭಿಸಿತ್ತು. ದಾಳಿ ನಡೆಸಿದ ಆರೋಪಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಸೋಮವಾರಪೇಟೆ ಡಿವೈಎಸ್‍ಪಿ ಗಂಗಾಧರಪ್ಪ. ಆರ್.ವಿ, ಕುಶಾಲನಗರ ನಗರ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಶ್ರೀಕಾಂತ್, ಉಪ ನಿರೀಕ್ಷಕ ಲೋಹಿತ್, ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ :::…

Read More

ಸುಂಟಿಕೊಪ್ಪ,ಮಾ.10 : ಗ್ರಾ.ಪಂ ಗಳು ಜನರ ಆಶೋತ್ತರಗಳನ್ನು ಈಡೇರಿಸುವ ದೇವಾಲಯವಿದ್ದಂತೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ನಿರ್ಮಿಸಲಾದ ನೂತನ ಗ್ರಾ.ಪಂ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ನಿಧಿಯಿಂದ 5 ಲಕ್ಷ 12 ಸಾವಿರ ರೂ, 4ನೇ ಹಣಕಾಸು ನಿಧಿಯಿಂದ 7 ಲಕ್ಷ ರೂ.15ನೇ ಹಣಕಾಸು ನಿಧಿಯಿಂದ 8 ಲಕ್ಷ ರೂ ಶಾಸಕರ ನಿಧಿಯಿಂದ ರೂ. 5 ಲಕ್ಷ, ಎಂಜಿಎಸ್ ಶಾಸಕರ ನಿಧಿಯಿಂದ ರೂ.16 ಲಕ್ಷ, ಜಿ.ಪಂ.ನಿಂದ ರೂ.10 ಲಕ್ಷ ವೆಚ್ಚದಲ್ಲಿ ಉತ್ತಮವಾದ ಗ್ರಾ.ಪಂ.ಕಟ್ಟಡ ನಿರ್ಮಾಣವಾಗಿದೆ. ತಾ.ಪಂ.ಅನುದಾನ 5 ಲಕ್ಷ ರೂ.ನಿಂದ ಡಿಜಿಟಲ್ ಗ್ರಂಥಾಲಯ, ಪ್ರತ್ಯೇಕ ನಿಧಿಯಿಂದ 5 ಲಕ್ಷ ರೂ.ವೆಚ್ಚದ ಶೌಚಾಲಯ ನಿರ್ಮಾವಾಗಿದೆ. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ (275) ಗ್ರೇಡ್ 1 ಸುಂಟಿಕೊಪ್ಪ ಗ್ರಾ.ಪಂ ಗೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಡಿ 3 ಕೋಟಿ ರೂ. ಮಂಜೂರಾತಿಯಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಬಿಜೆಪಿ ಸರಕಾರ ಎಲ್ಲಾ ಧರ್ಮ ಜಾತಿ, ಪಂಗಡ…

Read More

ಮಡಿಕೇರಿ ಮಾ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ಘಟಕದ ಕಾರ್ಯಕಾರಿಣಿ ಸಭೆ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸುವಂತೆ ತಿಳಿಸಿದರು. ಕಾಂಗ್ರೆಸ್ ಪಕ್ಷದ ಸಾಧನೆಗಳಾದ ಉಳುವವನಿಗೆ ಭೂಮಿ, ಸೂರು ಇಲ್ಲದವನಿಗೆ ಸೂರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಬೇಕು. ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದುಡಿದ ಕಾಂಗ್ರೆಸ್ ಪಕ್ಷವನ್ನು ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸಲು ಶ್ರಮವಹಿಸುವಂತೆ ಕರೆ ನೀಡಿದರು. ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೊಡಗಿನಲ್ಲಿರುವ 34 ಹಿಂದುಳಿದ ವರ್ಗ, 18 ಉಪ ಜಾತಿಗಳನ್ನು ಮುಖ್ಯವಾಹಿನಿಗೆ ತರಬೇಕು. ಪಕ್ಷದ ಸಾಧನೆ ಮತ್ತು ಕಾಂಗ್ರೆಸ್ ಆಡಳಿತ ನೀಡಿದ ಜನೋಪಯೋಗಿ ಕೊಡುಗೆಗಳನ್ನು ಈ ವರ್ಗಕ್ಕೆ ತಿಳಿಸುವಂತೆ ಹೇಳಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ…

Read More

ಕುಶಾಲನಗರ, ಮಾ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆಗಳ ಮೂಲಕ ಸಮಾಜದಲ್ಲಿ ಬೃಹತ್ ಬದಲಾವಣೆ ಕಂಡು ಬಂದಿದೆ ಎಂದು ವೇದಿಕೆಯ ಪ್ರಾದೇಶಿಕ ನಿರ್ದೇಶಕ  ವಿವೇಕ್ ಪಾಯಸ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ನಡೆದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯಲ್ಲಿ 2022-23 ನೇ ವರ್ಷದ ಕ್ರಿಯಾಯೋಜನೆಯ ಮತ್ತು ಅನುದಾನದ ಕುರಿತು ಮಾಹಿತಿ ನೀಡಿ ಮಾತನಾಡಿದರು. ಮಧ್ಯವರ್ಜನ ಶಿಬಿರಗಳ ಮೂಲಕ ಲಕ್ಷಾಂತರ ಸಂಖ್ಯೆಯ ಮದ್ಯ ವ್ಯಸನಿಗಳನ್ನು ಪಾನಮುಕ್ತರಾಗಿಸುವುದರೊಂದಿಗೆ ಶಾಶ್ವತ ಪರಿಹಾರ ಶಿಬಿರಗಳ ಮೂಲಕ ಲಭಿಸಿದೆ.  ವಲಯಕ್ಕೊಂದು ನವ ಜೀವನ ಸಮಿತಿ ನಿರ್ಮಾಣ ಮಾಡುವುದರೊಂದಿಗೆ ಸ್ವಾಸ್ಥ್ಯ ಸಮಾಜ ನಿರ್ಮಾಣದ ಕಲ್ಪನೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮೂಲಕ ಆಗಲಿದೆ ಎಂದರು. ಎಲ್ಲಾ ವಲಯ ಹಂತಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಜನರ ಮತ್ತು ಗ್ರಾಮಗಳ ಅಭಿವೃದ್ಧಿಗೆ ಕ್ರಿಯಾಯೋಜನೆ, ಶಿಬಿರಗಳು ನಡೆಯಲಿವೆ  ಎಂದು ತಿಳಿಸಿದರು. ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ವ್ಯಾಪ್ತಿಯ ಸಮಗ್ರ ವರದಿಯನ್ನು ಅರಕಲಗೂಡು ಪಿರಿಯಾಪಟ್ಟಣ, ಸೋಮವಾರಪೇಟೆ, ಮತ್ತಿತರ ವ್ಯಾಪ್ತಿಯ ಯೋಜನೆ ಅಧಿಕಾರಿಗಳು ನೀಡಿದರು.…

Read More

ಮಡಿಕೇರಿ ಮಾ.10 : ಮೂರು ವರ್ಷಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯಿಂದ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ನೆಲ್ಯಹುದಿಕೇರಿಯ ನಲ್ವತ್ತುಎಕರೆ ಗ್ರಾಮದಲ್ಲಿ ಪೀಪಲ್ಸ್ ಫೌಂಡೇಷನ್ ವತಿಯಿಂದ 25 ಮನೆಗಳನ್ನು ನಿರ್ಮಿಸಲಾಗಿದೆ. ಇದರ ಹಸ್ತಾಂತರ ಕಾರ್ಯಕ್ರಮ ಮಾ.13 ರಂದು ನಡೆಯಲಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‍ನ ವಲಯ ಸಂಚಾಲಕರು ಹಾಗೂ ಯೋಜನೆಯ ವಲಯ ಮೇಲ್ವಿಚಾರಕರಾದ ಯು. ಅಬ್ದುಸ್ಸಲಾಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಾಅತೆ ಇಸ್ಲಾಮಿ ಹಿಂದ್‍ನ ಅಧೀನ ಸಂಸ್ಥೆ ಪೀಪಲ್ಸ್ ಫೌಂಡೇಶನ್ ಮೂಲಕ ಸುಮಾರು 6 ಲಕ್ಷ ವೆಚ್ಚದ 25 ಮನೆಗಳ ‘ಪೀಪಲ್ಸ್ ವಿಲೇಜ್ ಕೊಡಗು’ವನ್ನು ಎಂ.ಕೆ. ಅಶ್ರಫ್ ಅವರ ಉಸ್ತುವಾರಿಯಲ್ಲಿ ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಪ್ರತಿ ಮನೆ 500 ಚದರ ಅಡಿ ವಿಸ್ತೀರ್ಣದ್ದಾಗಿದ್ದು, 3.50 ಸೆಂಟ್ಸ್ ಜಾಗವನ್ನು ಹೊಂದಿದೆ. ಈ ಮನೆಗಳನ್ನು ಜಾತಿ ಮತ ಭೇದವಿಲ್ಲದೆ ಎಲ್ಲಾ ಸಮುದಾಯಕ್ಕೆ ಸೇರಿದ ಸಂತ್ರಸ್ತ ಕುಟುಂಬಗಳಿಗೆ ವಿತರಿಸಲಾಗುವುದೆಂದು ಹೇಳಿದರು. ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಸಂಕಷ್ಟಗಳು ತಲೆದೋರಿ ಮನೆಗಳನ್ನು ಕಳೆದುಕೊಂಡು ಹಲವರು ನಿರಾಶ್ರಿತರಾದ…

Read More

ಮಡಿಕೇರಿ ಮಾ.10 : ಕೊಡವ ಹಾಕಿ ಅಕಾಡೆಮಿಯ 2022-23ನೇ ಸಾಲಿನ ಮಹಾಸಭೆಯು ಮಾ.13 ರಂದು ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ತಪ್ಪದೆ ಹಾಜರಾಗುವಂತೆ ಅಕಾಡೆಮಿ ಉಪಾಧ್ಯಕ್ಷ ಕುಕ್ಕೇರ ಜಯಾ ಚಿಣ್ಣಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಂತಾಪ ಸೂಚನೆ, ಕಳೆದ ಮಹಾಸಭೆಯ ವರದಿ ವಾಚನ, ಆಡಳಿತ ಮಂಡಳಿಯ ವರದಿ ವಾಚನ, ಜಮಾ ಖರ್ಚು, ಅಪ್ಪಚಟ್ಟೋಳಂಡ ಹಾಕಿ ಉತ್ಸವಕ್ಕೆ ಬೆಂಬಲ ಸೂಚಿಸುವುದು ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ದಿ.ಪಾಂಡಂಡ ಕುಟ್ಟಪ್ಪ (ಕುಟ್ಟಣಿ) ಅವರು 1997ರಲ್ಲಿ ಅಕಾಡೆಮಿಯನ್ನು ಪ್ರಾರಂಭಿಸಿದ್ದು, ಪ್ರಸ್ತುತ 406 ಕುಟುಂಬಗಳು ಸದಸ್ಯತ್ವ ಪಡೆದುಕೊಂಡಿವೆ. ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ 9110808009 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ::: ಹಾಕಿ ಉತ್ಸವ ::: 23ನೇ ವರ್ಷದ ಕೊಡವ ಕುಟುಂಬಗಳ ನಡುವಣ ಪ್ರತಿಷ್ಠಿತ…

Read More

ಮಡಿಕೇರಿ ಮಾ.10 : ಜನ್ಮ ದಿನಾಂಕದ ಕುರಿತು ತಾವು ಸುಳ್ಳು ಮಾಹಿತಿ ನೀಡಿರುವುದಾಗಿ ವ್ಯಕ್ತಿಯೊಬ್ಬರು ತಮ್ಮ ವಿರುದ್ಧ ನೀಡಿರುವ ದೂರು ಅರ್ಥಹೀನವಾಗಿದೆ. ಪ್ರತಿ ಚುನಾವಣೆ ಸಂದರ್ಭ ವ್ಯವಸ್ಥಿತ ಗ್ಯಾಂಗ್ ಷಡ್ಯಂತ್ರ ನಡೆಸುತ್ತಿದ್ದು, ಇದಕ್ಕೆಲ್ಲ ನಾನು ಜಗ್ಗಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ ತಂದೆ ಹೆಬ್ಬೆಟ್ಟು, ಅವರು ಹೇಳಿದ ಜನ್ಮ ದಿನಾಂಕವನ್ನೇ ನಾನು ಅನುಸರಿಸುತ್ತಿದ್ದೇನೆ. ಚುನಾವಣಾ ಆಯೋಗ ನಮ್ಮ ವಯಸ್ಸನ್ನು ಕೇಳುತ್ತದೆ ಹೊರತು ಹುಟ್ಟಿದ ಇಸವಿಯನ್ನು ಕೇಳುವುದಿಲ್ಲ. ಮಾಹಿತಿ ಸಲ್ಲಿಸುವ ಸಂದರ್ಭ ಗಡಿಬಿಡಿಯಲ್ಲಿ ಸ್ವಲ್ಪ ಹೆಚ್ಚು, ಕಮ್ಮಿ ಆಗಿರಬಹುದು. ಇದು ದೊಡ್ಡ ಅಪರಾಧವೇನಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿ ಚುನಾವಣೆ ಬಂದಾಗಲೂ ಗ್ಯಾಂಗ್ ಒಂದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಲೇ ಬರುತ್ತಿದೆ. ಕಳೆದ ಚುನಾವಣೆಯಲ್ಲಿ ನನ್ನ ಮನೆ ಅರಣ್ಯ ಭಾಗದಲ್ಲಿದೆ ಎಂದು ಆರೋಪಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತು, ಇದೀಗ ನನ್ನ ಜನ್ಮ ದಿನಾಂಕದ ಬಗ್ಗೆ ತಕರಾರು ತೆಗೆದಿದ್ದಾರೆ, ಇದಕ್ಕೆಲ್ಲ…

Read More