ಮಡಿಕೇರಿ ಜ.4 : ಪ್ರಸಕ್ತ(2022-23) ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಜನವರಿ, 01 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2022 ರ ಜನವರಿ, 01 ರಿಂದ ಡಿಸೆಂಬರ್, 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು 2023 ರ ಜನವರಿ, 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮಡಿಕೇರಿ, ಕೊಡಗು ಜಿಲ್ಲೆ…
ಲೇಖಕ: admin
ಮಡಿಕೇರಿ ಜ.5 : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ದಿಕ್ಕರಿಸಿದ್ದಾರೆ. ಇದು ಕನ್ನಡಿಗರ ಸಮ್ಮೇಳನವಲ್ಲ, ಆಲ್ ಪಾರ್ಟಿ ಲೀಡರ್ಸ್ ಅಸೋಸಿಯೇಷನ್ ನ ರಾಜಕೀಯ ಸಮ್ಮೇಳನ ಎಂದು ಅವರು ಕಿಡಿ ಕಾರಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ.ಗಳ ಬೃಹತ್ ಮೊತ್ತದ ಅನುದಾನವನ್ನು ನೀಡಿದೆ. ಆದರೆ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ನಡೆಸಿಲ್ಲ, ಮಾರ್ಗಸೂಚಿಯನ್ನು ನೀಡಿಲ್ಲ. ಊಟ, ತಿಂಡಿ, ಬಾಜ, ಬಜಂತ್ರಿ, ಏಲಕ್ಕಿ ಮಾಲೆ ಇಷ್ಟೇ ಸಮ್ಮೇಳನವೇ ಎಂದು ಪ್ರಶ್ನಿಸಿದರು. ಸಮ್ಮೇಳನದಲ್ಲಿ ಸುಮಾರು 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ, ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಜಾನಪದ ವಿದ್ವಾಂಸ ಡಾ.ಕರೀಂ ಖಾನ್, ಅಖಿಲ ಭಾರತ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಉನ್ನತ ಪ್ರಶಸ್ತಿಗಳನ್ನು ಪಡೆದವರನ್ನು ಕೂಡ ಸನ್ಮಾನಿತರ ಪಟ್ಟಿಯಲ್ಲಿ ಸೇರಿಸಿಲ್ಲ. ಹಿಂದಿನ ಸಮ್ಮೇಳನಗಳಲ್ಲಿ ದಲಿತ ಸಮಾವೇಶ ನಡೆಯುತ್ತಿತ್ತು, ಆದರೆ…
ಮಡಿಕೇರಿ ಜ.4 : ಇದೇ ಜ.28 ರಂದು ಮಡಿಕೇರಿ ತಾಲ್ಲೂಕಿನ 11 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಟ್ಟಗೇರಿಯ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ನುಡಿಜಾತ್ರೆಗೆ ಎಲ್ಲರೂ ಕೈಜೋಡಿಸುವಂತೆ ಶಾಸಕರು ಹಾಗೂ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಕೋರಿದ್ದಾರೆ. ಬೆಟ್ಟಗೇರಿಯ ಉದಯ ಪ್ರೌಢಶಾಲೆ ಸಭಾಂಗಣದಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕು 11 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಮ್ಮೇಳನ ಯಶಸ್ಸಿಗೆ ಸಹಕರಿಸುವಂತೆ ಶಾಸಕರು ಮನವಿ ಮಾಡಿದರು. ‘ಅಂತ್ಯತ ಕಡಿಮೆ ಖರ್ಚಿನಲ್ಲಿ ಅಕ್ಷರ ಜಾತ್ರೆಯನ್ನು ಯಶಸ್ಸುಗೊಳಿಸಲು ಎಲ್ಲರೂ ಶ್ರಮಿಸಬೇಕು. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹೀಗೆ ಎಲ್ಲರೂ ನಾಡು ನುಡಿಗೆ ಕೈಜೋಡಿಸುವಂತೆ ಶಾಸಕರು ಕೋರಿದರು.’ ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿರಿಸಿ ಕುಟುಂಬದಂತೆ ಎಲ್ಲರೂ ಕಾರ್ಯಕ್ರಮ ಯಶಸ್ಸಿಗೆ ಮುಂದಾಗಬೇಕು.…
ಮಡಿಕೇರಿ ಡಿ.30 : ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಹೆಸರಾಂತ ಕಿಡ್ನಿ ತಜ್ಞ ವೈದ್ಯರಾದ ಡಾ.ಎಂ.ಎ.ಕಾರ್ಯಪ್ಪ ಅವರು ಬುಧವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ಮಾಡಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದರು. ಕಿಡ್ನಿಗೆ ಸಂಬಂಧಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು ದೇಶದಲ್ಲಿ ಇರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು. ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು. ಕಳೆದ ಮೂರು ವರ್ಷದಲ್ಲಿ ಕೋವಿಡ್ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಬರಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಡಾ.ಕಾರ್ಯಪ್ಪ ಅವರು ಹೇಳಿದರು. ಶಾಸಕ ಎಂ.ಪಿ.ಅಪ್ಪಚ್ಚು…
ಮಡಿಕೇರಿ ಜ.4 : ನೀರು ಕುಡಿಯಲೆಂದು ಬಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಹೋರಿ ಕರುವನ್ನು ಶಕ್ತಿ ಮತ್ತು ಯುಕ್ತಿ ಬಳಸಿ ಬಾಲಕನೊಬ್ಬ ರಕ್ಷಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದೆ. ಕಿಬ್ಬೆಟ್ಟ ಗ್ರಾಮದ 9 ನೇ ತರಗತಿ ವಿದ್ಯಾರ್ಥಿ ಕೆ.ಎಂ.ರೋಹನ್ ಎಂದಿನAತೆ ಬುಧವಾರ ಬೆಳಗ್ಗೆ ಸೋಮವಾರಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಗೆ ತೆರಳುತ್ತಿದ್ದಾಗ ಕೆರೆಯಲ್ಲಿ ಹೋರಿ ಕರು ಮುಳುಗಿರುವ ದೃಶ್ಯ ಕಂಡು ಬಂದಿದೆ. ಏನು ಮಾಡಬೇಕೆಂದು ತಿಳಿಯದೆ ಪಕ್ಕದಲ್ಲೇ ಇದ್ದ ಮನೆಗೆ ಮರಳಿದ ಬಾಲಕ ತಂದೆಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಇಬ್ಬರು ಸ್ಥಳಕ್ಕೆ ಬಂದು ನೋಡಿದಾಗ ಹೋರಿ ಕರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿರುವುದು ಕಂಡು ಬಂದಿದೆ. ಪರಿಸ್ಥಿತಿಯ ಗಂಭೀರತೆ ಅರಿತು ಎಚ್ಚೆತ್ತುಕೊಂಡ ರೋಹನ್ ಕೊಕ್ಕೆ ಕೋಲೊಂದನ್ನು ಹಿಡಿದು ಕೆರೆಯಲ್ಲಿದ್ದ ಕರುವಿನ ಮೂಗುದಾರಕ್ಕೆ ಸಿಕ್ಕಿಸಿದ್ದಾನೆ. ನಂತರ ಸುಮಾರು 25 ಮೀಟರ್ ದೂರಕ್ಕೆ ಕರುವನ್ನು ಎಳೆದು ತಂದಿದ್ದಾನೆ. ಕೆರೆಗೆ ಮೆಟ್ಟಿಲು ಅಥವಾ ಬೇರೆ ಯಾವುದೇ ಮಾರ್ಗವಿಲ್ಲದ…
ವಿರಾಜಪೇಟೆ ಜ.4 : ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಪರಿಶೀಲಿಸಿ ಶ್ರೇಯಾಂಕವನ್ನು ನೀಡುವ ಸಲುವಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ನ್ಯಾಕ್ ಸಂಸ್ಥೆಯ ಪದಾಧಿಕಾರಿಗಳು ಭೇಟಿ ನೀಡಿದರು. ಎರಡು ದಿನಗಳ ಭೇಟಿಯ ಅಂಗವಾಗಿ ಮೂವರು ತಜ್ಞರನ್ನು ಒಳಗೊಂಡ ತಂಡವು ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ.ಅವರು ಕಾಲೇಜಿನ ಸಮಗ್ರ ವಿವರಗಳನ್ನು ಒಳಗೊಂಡ ಪಿಪಿಟಿ ಯನ್ನು ಮಂಡನೆ ಮಾಡಿದರು. ಕಾಲೇಜಿನ ಐಕ್ಯೂಎಸಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ತಮ್ಮ ವಿಭಾಗದ ಕಳೆದ ಐದು ವರ್ಷದ ಚಟುವಟಿಕೆಗಳಿಗೆ ಸಂಬಂದಿಸಿದ ವಿಚಾರಗಳನ್ನು ಮಂಡಿಸಿದರು. ನಂತರ ಕಾಲೇಜಿನಲ್ಲಿ ಇರುವ ಸೌಲಭ್ಯಗಳು ಮತ್ತು ಕಟ್ಟಡದ ಪರಿಶೀಲನೆ ನಡೆಸಿದ ತಂಡವು ಎಲ್ಲಾ ವಿಭಾಗಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿದರು. ನಂತರ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ, ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿ ವರ್ಗದವರ ಜೊತೆ ಸಂವಾದ ನಡೆಸಿದರು. ಇದೇ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ವಿರಾಜಪೇಟೆಯ ಶಾಸಕ ಕೆ.ಜಿ.ಬೋಪಯ್ಯ ಆಗಮಿಸಿ ನ್ಯಾಕ್…
ಮಡಿಕೇರಿ ಜ.4 : ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತಶ್ರಯದಲ್ಲಿ ಜ.23 ರಂದು ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಪಂದ್ಯಾವಳಿ ಆರಂಭವಾಗಲಿದ್ದು, ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗೆ ಭಾಗವಹಿಸುವ ಕ್ರೀಡಾ ಪಟುಗಳು ಜ.22ರ ಒಳಗಾಗಿ ನೋಂದಾಯಿಸಿಕೊಳ್ಳುವಂತೆ ನೇತಾಜಿ ಯುವ ಮಂಡಲದ ಪ್ರಮುಖರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9480251938, 8431168783, 8762066118, 6361059178 ಸಂಪರ್ಕಿಸಬಹುದಾಗಿದೆ.
ವಿರಾಜಪೇಟೆ ಜ.4 : ರಾಜ್ಯ ಸರಕಾರ ಇದೀಗ ಜಾರಿಗೆ ತಂದಿರುವ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡನೆಯಿಂದ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಗಣನೀಯ ಪ್ರಮಾಣದಲ್ಲಿ ಕುಂಠಿತವಾಗಲಿದೆ. ಆದ್ದರಿಂದ ಆಡಳಿತರೂಢ ಪಕ್ಷದ ಜಿಲ್ಲೆಯ ಶಾಸಕರು ಕೂಡಲೇ ಮಧ್ಯ ಪ್ರವೇಶಿಸಿ ಸರಕಾರಕ್ಕೆ ನೈಜತೆಯನ್ನು ಮನವರಿಕೆ ಮಾಡಿಕೊಡಬೇಕು. ಅದರ ಮೂಲಕ ಇದನ್ನು ಜಾರಿಗೊಳಿಸುವ ಸಂದರ್ಭದಲ್ಲಿ ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯಬೇಕು ಎಂದು ಕೊಡಗು ಜಿ.ಪಂ. ಮಾಜಿ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ. ಎನ್. ಪ್ರತ್ಯು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 29 ಜಿ.ಪಂ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜಿ.ಪಂ ಕ್ಷೇತ್ರ 25ಕ್ಕೆ ಕುಸಿದಿದೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಇದೊಂದು ಬಹುದೊಡ್ಡ ದುರಂತವಾಗಲಿದೆ. ಕೊಡಗಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯಗಳ…
ಮಡಿಕೇರಿ ಜ.4 : ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುವ ಮೂಲಭೂತ ಅಂಶವಾಗಿರುವ ಹಿನ್ನೆಲೆಯಲ್ಲಿ, ತನ್ನ ಅಧಿಕಾರದ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಾಲೇಜುಗಳ ಆರಂಭ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜು ಸೇರಿದಂತೆ ಚಿಕ್ಕ ಅಳುವಾರದಲ್ಲಿ ಕೊಡಗು ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಪ್ರಾಮಾಣಿಕವಾಗಿ ಶ್ರಮಿಸಿರುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಂಯುಕ್ತಾಶ್ರದಯಲ್ಲಿ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಮಡಿಕೇರಿ, ಗೋಣಿಕೊಪ್ಪಲು ಮತ್ತು ಸೋಮವಾರಪೇಟೆಗಳಲ್ಲಿ ಮಾತ್ರ ಪದವಿ ಕಾಲೇಜುಗಳಿದ್ದವಾದರೆ, ತಾನು ಅಧಿಕಾರದಲ್ಲಿ ಇದ್ದ ಸಂದರ್ಭ, ಡಿ.ಹೆಚ್. ಶಂಕರಮೂರ್ತಿ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ 162 ಪ್ರಥಮ ದರ್ಜೆ ಕಾಲೇಜುಗಳನ್ನು ರಾಜ್ಯದ ವಿವಿಧೆಡೆ ಆರಂಭಿಸಲಾಯಿತು. ಅದರ ಫಲ ಸ್ವರೂಪವಾಗಿ ನಾಪೋಕ್ಲು, ವಿರಾಜಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರಥಮ ದರ್ಜೆ ಕಾಲೇಜುಗಳು ಆರಂಭವಾಗಿ ಗಾಮೀಣ…
ಮಡಿಕೇರಿ ಜ.4 : ಸ್ವಚ್ಛ, ಪ್ರಾಮಾಣಿಕ, ಗೌರವ, ಘನತೆಯುಳ್ಳ ಸರ್ಕಾರಿ ಸೇವೆಗಳನ್ನು ಪಡೆಯುವುದು ಸ್ವಾಭಿಮಾನಿ ಕನ್ನಡಿಗರ ಹಕ್ಕು. ಅದನ್ನು ಸಾಕಾರಗೊಳಿಸಲೆಂದೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯಾದ್ಯಂತ “ಕರುನಾಡು ಕಟ್ಟೋಣ” ಅಭಿಯಾನವನ್ನು ಆರಂಭಿಸಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧುಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಲಂಚ ಮತ್ತು ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕಿ, ಮದ್ಯ ನಿಷೇಧ, ಉತ್ತಮ ಸರ್ಕಾರಿ ಆಸ್ಪತ್ರೆ ನಿರ್ಮಿಸುವ ಮೂಲಕ ಪ್ರತಿಯೊಬ್ಬರೂ ಘನತೆಯಿಂದ ಬದುಕಬಹುದಾದ ವಾತಾವರಣ ಸೃಷ್ಟಿಸುವುದಾಗಿ ಭರವಸೆ ನೀಡಿದರು. ಕೊಡಗಿನಲ್ಲಿ ದಶಕಗಳಿಂದಲೂ ಜ್ವಲಂತ ಸಮಸ್ಯೆಗಳಿದ್ದು, ಇಲ್ಲಿವರೆಗೂ ಪರಿಹಾರ ಕಂಡಿಲ್ಲ. ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣದಿಂದ ಪ್ರಾಕೃತಿಕ ವಿಕೋಪ ಉಂಟಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ಜನತೆ ಕೆಆರ್ಎಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇ ಆದಲ್ಲಿ ಉತ್ತಮ ಬದಲಾವಣೆ ಕಾಣಲು ಸಾಧ್ಯ ಎಂದ ಅವರು, ಪಕ್ಷವು…






