ಮಡಿಕೇರಿ ಜ.31 : ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ನಿಗಧಿಪಡಿಸುವಂತೆ ಒತ್ತಾಯಿಸಿ ಫೆ.14 ರಂದು ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10.30 ಗಂಟೆಗೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಮೂಲಕ ತೆರಳಿ `ವಿಧಾನಸೌಧ’ ಕ್ಕೆ ಮುತ್ತಿಗೆ ಹಾಕಲಾಗುವುದು. ಕೊಡಗು ಜಿಲ್ಲೆಯಿಂದ ಸುಮಾರು 200ಕ್ಕೂ ಹೆಚ್ಚು ಗ್ರಾ.ಪಂ ನೌಕರರು ತೆರಳಲಿದ್ದಾರೆ ಎಂದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾ.ಪಂ ನೌಕರರ ಬದುಕಿಗೆ ಸಂಕಷ್ಟ ಎದುರಾಗಿದೆ. ಸರ್ಕಾರ ಘೋಷಿಸಿರುವ ಕನಿಷ್ಠ ವೇತನ ಬೆಲೆ ಏರಿಕೆಗನುಗುಣವಾಗಿ ಇಲ್ಲದಿರುವುದರಿಂದ ಕಾನೂನು ಬದ್ಧ ಕನಿಷ್ಟ ವೇತನ ನೀಡಬೇಕು, ಪಿಂಚಣಿ, ಆರೋಗ್ಯಭತ್ಯೆ, ಅನುಮೋದನೆ, ಮೃತರ ಕುಟುಂಬಕ್ಕೆ ಅನುಕಂಪ ನೇಮಕಾತಿ, ಸೇವಾ ಭದ್ರತೆ ಮತ್ತಿತರ ಬೇಡಿಕೆಗಳು ಇನ್ನೂ ಕೂಡ ಈಡೇರದೆ ಇರುವುದು ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.…
ಲೇಖಕ: admin
ಮಡಿಕೇರಿ ಜ.31 : ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಫೆ.1 ರಿಂದ ರಾಜ್ಯವ್ಯಾಪಿ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ.ಈರಪ್ಪ, ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ ಎಂದು ಆರೋಪಿಸಿದರು. ಈ ಬಾರಿ ಬೇಡಿಕೆ ಈಡೇರುವವರೆಗೆ ನೀರು ಸರಬರಾಜುದಾರರು, ಡಾಟಾ ಆಪರೇಟರ್ಗಳು, ಸ್ವಚ್ಛತಾ ಕಾರ್ಮಿಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ. ಮಡಿಕೇರಿಯಲ್ಲಿ ಕೂಡ ನಗರಸಭೆಯ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು ಎಂದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಸರಬರಾಜಿಗೆ ಬದಲಿ ವ್ಯವಸ್ಥೆಯನ್ನು ಮಾಡಲಾಗಿದ್ದು, ನಗರದ ಸ್ವಚ್ಛತಾ ಕಾರ್ಯಗಳನ್ನು ಸ್ಥಳಗಿತಗೊಳಿಸಲಾಗುವುದು. ಸಾರ್ವಜನಿಕರು ನೌಕರರ ಸಮಸ್ಯೆಯನ್ನು ಅರಿತು ಸಹಕರಿಸುವಂತೆ ಮನವಿ ಮಾಡಿದರು. ಸರ್ಕಾರ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಡಾಟ ಆಪರೇಟರುಗಳು…
ಸುಂಟಿಕೊಪ್ಪ ಜ.31 : ಕೊಡಗರಹಳ್ಳಿ, ಕಂಬಿಬಾಣೆ, ಚಿಕ್ಲಿಹೊಳೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕೊಡಗರಹಳ್ಳಿಯ ಸಂಜೀವಗಲ್ಲಿಯಲ್ಲಿ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಈ ವ್ಯಾಪ್ತಿಯ ಮಣ್ಣು ಎರೆಮಣ್ಣಾದ ಹಿನ್ನಲೆಯಲ್ಲಿ ಡಾಂಬರೀಕರಣ ಮಾಡಿದರೂ ಅದು ನಿಲ್ಲದೆ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ದುಸ್ತರವೆನ್ನಿಸಿತ್ತು. ಆದ್ದರಿಂದ ಕಾಂಕ್ರೀಟ್ ರಸ್ತೆಗೆ ಅನುಮೋದನೆ ಪಡೆದು ಈಗಾಗಲೇ 2 ಹಂತದ ಕಾಮಗಾರಿ ಪೂರೈಸಿದ್ದು, ಇದೀಗ ಮೂರನೇ ಹಂತದ ಮುಂದುವರಿದ ಕಾಮಗಾರಿಯನ್ನು ರೂ 1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಗಮನ ಹರಿಸುವಂತೆ ಸಲಹೆ ನೀಡಿದರು. ಸೋಮವಾರಪೇಟೆ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡಾ.ಶಶಿಕಾಂತ್ ರೈ ಮಾತನಾಡಿ ಈಗಾಗಲೇ ರಸ್ತೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಸರಿಸುಮಾರು 2 ಕಿ.ಮೀ.ರಸ್ತೆ ಬಾಕಿಯಿದ್ದು ಇದನ್ನು ಕೂಡ ಶಾಸಕರು ಅದಷ್ಟು ಅನುದಾನ ಒದಗಿಸುವ ಮೂಲಕ ರಸ್ತೆ ಕಾವiಗಾರಿಯನ್ನು ಪೂರ್ಣಗೊಳಿಸಬೇಕೆಂದು ಮನವಿ ಮಾಡಿದರು. ತಕ್ಷಣ ಪ್ರತಿಕ್ರಿಯಿಸಿದ ಶಾಸಕರು 2 ತಿಂಗಳ ಒಳಗಾಗಿ ಅನುದಾನ…
ಮಡಿಕೇರಿ ಜ.31 : ಕೊಡಗು ಜಿಲ್ಲಾ ಎಸ್ಕೆಎಸ್ಎಸ್ಎಫ್ ಸಂಘಟನೆ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ರಕ್ಷಣೆಗೆ ಸೌಹರ್ದತೆಯ ಸಂಕಲ್ಪ ಎಂಬ ಘೋಷವಾಕ್ಯದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಸೌಹರ್ದ ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಬಾಲಸುಬ್ರಮಣ್ಯ ಕಂಜರ್ಪಣೆ ಮಾತನಾಡಿ, ಜಾತಿ, ಮತಗಳು ಧರ್ಮವಲ್ಲ. ನಾವು ಬದುಕುವ ಶೈಲಿ ಧರ್ಮವಾಗಿದೆ. ನಾವು ಸಜ್ಜನರಾಗಿ ಬದುಕಿ ಬಾಳಿದರೆ ಧರ್ಮ ಉಳಿಯುತ್ತದೆ. ಎಲ್ಲರೂ ನಮ್ಮವರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಸಮಾಜದ ಶಾಂತಿ ಉಳಿಸಲು ನಾವೆಲ್ಲರು ಒಂದಾಗಬೇಕು. ದೇವರು ನಿಗದಿತ ಜಾಗದಲ್ಲಿಲ್ಲ. ಎಲ್ಲಾ ಕಡೆಗಳಲ್ಲಿ ನಾವು ಮಾಡುವ ಒಳ್ಳೆ ಕೆಲಸಗಳಲ್ಲಿ ದೇವರನ್ನು ನೋಡಬಹುದು. ದುಡ್ಡಿನಿಂದ ಎಲ್ಲವನ್ನೂ ಪಡೆಯಬಹುದು ಎಂಬುದು ಸುಳ್ಳು, ಹಣದಿಂದ ನೆಮ್ಮದಿ, ಆರೋಗ್ಯ ಸಿಗುವುದಿಲ್ಲ. ಸತ್ಕಾರ್ಯಗಳಿಂದ ನೆಮ್ಮದಿಯ ಬದುಕು ಪಡೆಯಬಹುದು ಎಂದರು. ಕ್ರೈಸ್ತ ಧರ್ಮಗುರು ಫ್ರಾನ್ಸಿಸ್ ಚರಕಲ್ ಮಾತನಾಡಿ, ಜನರ ಭಾವನೆಗಳ ಅಡಿಯಲ್ಲಿ ಭಾರತದ ಸಂವಿಧಾನ ನಿಂತಿದೆ. ಸಂವಿಧಾನದ ಮೌಲ್ಯ ಎತ್ತಿಹಿಡಿಯುವ ಕೆಲಸಬಾಗಬೇಕಾಗಿದೆ. ಪ್ರತಿಯೊಬ್ಬರು ಸೌಹರ್ದತೆಯಿಂದ ಬದುಕುವ ಮೂಲಕ ಶಾಂತಿಯುತ ಹಾಗೂ ಸುಭದ್ರ ಭಾರತ…
ಮಡಿಕೇರಿ ಜ.31 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಫೆ.1 ರಂದು ಜಠರರೋಗ, ಲಿವರ್, ಪಿತ್ತಕೋಶ ಮತ್ತು ಪ್ಯಾಂಕ್ರಿಯಾಟಿಕ್ ಕಾಯಿಲೆಗಳ ತಪಾಸಣೆ ನಡೆಯಲಿದೆ. ಗ್ಯಾಸ್ಟ್ರೋಎಂಟೆರಾಲಜಿ ಮತ್ತು ಹೆಪಟಾಲಜಿ ತಜ್ಞ ಡಾ. ದೇವರಾಜ ಆರ್. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ವಿರಾಜಪೇಟೆಯ ಕೂರ್ಗ್ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಮಧ್ಯಾಹ್ನ 12.30 ರಿಂದ 2ರ ವರೆಗೆ ನಾರಾಯಣ ಮೆಡಿಕಲ್ ಸೆಂಟರ್ (ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್) ನಲ್ಲಿ ದೊರೆಯಲಿದ್ದಾರೆ. ಕರುಳಿನ ಕಾಯಿಲೆಗಳು, ಕಾಮಲೆ, ವಾಂತಿಯಲ್ಲಿ ರಕ್ತ, ಗುದನಾಳದ ರಕ್ತಸ್ರಾವ, ಎದೆಯುರಿ, ಡೆಸ್ಫೇಜಿಯಾ, ಜೀರ್ಣಾಂಗದ ಸಮಸ್ಯೆಗಳು, ಪಿತ್ತಕೋಶ ಮತ್ತು ಪ್ಯಾಂಕ್ರಿಯಾಟಿಕ್ ಅಸ್ವಸ್ಥತೆಗಳ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8904258788, 8197623892, 9008475258, 8904736606 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.31 : ಚುನಾವಣೆ ಸಂಬಂಧ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಮಡಿಕೇರಿ ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ಹೆಚ್.ಡಿ.ಕೋಟೆ ತಾಲ್ಲೂಕಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಕುಂದಾಪುರದ ಕಿರಣ್ ಗೌರಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ್ ರನ್ನಾಗಿ ಹೊಸನಗರದ ರಾಜೀವ್ ವಿ.ಎಸ್ ಅವರನ್ನು ಸರ್ಕಾರ ನಿಯೋಜಿಸಿದೆ.
ಚೆಯ್ಯಂಡಾಣೆ ಜ.31 : ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಮಟ್ಟದ ಮಕ್ಕಳ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ನಡೆಯಿತು. ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಚೆಯ್ಯಂಡಾಣೆ , ಕರಡ, ಕಡಂಗ, ಎಡಪಾಲ, ಕಿಕ್ಕರೆ, ಕೊಕೇರಿ, ಪೊನ್ನೋಲ ಶಾಲೆಯ ಒಟ್ಟು 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಣಿತ ಸ್ಪರ್ಧೆಯಲ್ಲಿ ಭಾಗವಹಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗ್ರಾ.ಪಂ ವತಿಯಿಂದ ಪ್ರಥಮ, ದ್ವಿತೀಯ,ತೃತೀಯ ಬಹುಮಾನ ವಿತರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಮುಖ್ಯ ಶಿಕ್ಷಕಿ ಮೀನಾ ಹಾಗೂ ಗ್ರಾ.ಪಂ ವ್ಯಾಪ್ತಿಯ 7 ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ಅಶ್ರಫ್
ಮಡಿಕೇರಿ ಜ.31 : ನಾರಾಯಣ ಸೂಪರ್ಸ್ಪೆಷಾಲಿಟಿ ಒಡಿಪಿ ಸೆಂಟರ್ ವತಿಯಿಂದ ಫೆ.1 ರಂದು ಕುಶಾಲನಗರದಲ್ಲಿ ಗರ್ಭಿಣಿ ಮತ್ತು ಸ್ತ್ರೀರೋಗ ತಪಾಸಣೆ ನಡೆಯಲಿದೆ. ಕುಶಾಲನಗರದ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರಾದ ಡಾ.ಆರತಿ ಸಂತೋಷ್ ಆರ್, ಪ್ರಸೂತಿಯ ತುರ್ತುಸ್ಥಿತಿಗಳು, ಕಿಬ್ಬೊಟ್ಟೆಯ ಗರ್ಭಕಂಠದ ತೊಂದರೆ, ಬಂಜೆತನ ನಿರ್ವಹಣೆ, ಟ್ಯೂಬೆಕ್ಟಮಿ, ಮೈಯೋಮೆಕ್ಟಮಿ, ಅಪಾಯದ ಗರ್ಭಧಾರಣೆ, ಶಸ್ತ್ರ ಚಿಕಿತ್ಸಾ ಹೆರಿಗೆ, ಹಿಸ್ಟರೋಸ್ಕೋಪಿ, ಗರ್ಭಕಂಠದ ಲ್ಯಾಪರೋಸ್ಕೋಪಿಕ್ ವಿಧಾನದ ಕುರಿತು ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8904258788, 9008475258 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.31 : ಏಜೆಂಟ್ ಮಾಡಿದ ವಂಚನೆಯಿoದ ಕುವೈತ್ ನಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಕೊಡಗು ಜಿಲ್ಲಾಡಳಿತ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮೂಲಕ ತೆರಳಿದ್ದರು. ಏಜೆಂಟ್ ವಂಚನೆ ಮಾಡಿದ ಪರಿಣಾಮ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ದೂರು ಸ್ವೀಕೃತವಾದ ತಕ್ಷಣ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ, ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಕರೆ ತರುವ ಜವಾಬ್ದಾರಿ ವಹಿಸಲಾಗಿತ್ತು. ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿತ್ತು. ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಭಾರತಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ.…
ವಿರಾಜಪೇಟೆ ಜ.31 : ಮನೆಯ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿ ಹಾನಿಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಂಜಾನೆ ವೇಳೆ ದಟ್ಟ ಮಂಜಿನ ವಾತಾವರಣದಲ್ಲಿ ಕಾಡಾನೆ ದಾಳಿ ಮಾಡಿದ್ದು, ಕಾರು ಜಖಂಗೊAಡಿದೆ. ಗ್ರಾಮದ ನಿವಾಸಿ ಶ್ರೀಧರ ಅವರ ಪುತ್ರ ಕುಶ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಕಳೆದ ಹಲವು ತಿಂಗಳುಗಳಿoದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಕಾಫಿ ತೋಟ ಸೇರಿದಂತೆ ಕೃಷಿ ಭೂಮಿಗಳನ್ನು ಧ್ವಂಸ ಮಾಡಿದೆ. ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ಅರಣ್ಯ ಇಲಾಖೆ ಅರಣ್ಯದಂಚಿನಲ್ಲಿ ಬೃಹತ್ ಕಂದಕ ನಿರ್ಮಾಣ ಮಾಡುತ್ತಿದೆ. ಅರಣ್ಯದಿಂದ ಗ್ರಾಮಕ್ಕೆ ಬಂದಿರುವ ಕಾಡಾನೆಗಳನ್ನು ಕಾಡಿಗಟ್ಟದೆ ಕಂದಕ ನಿರ್ಮಾಣ ಮಾಡುತ್ತಿರುವುದು ಅವೈಜ್ಞಾನಿಕ ಕ್ರಮ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮುಂದುವರೆದಿದ್ದು, ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.






