ಮಡಿಕೇರಿ ಜ.31 : ಪೊನ್ನಂಪೇಟೆ ತಾಲ್ಲೂಕು, ನಿಟ್ಟೂರು ಮತ್ತು ಬಾಳಲೆ ಗ್ರಾಮಗಳನ್ನು ಸಂಪರ್ಕಿಸುವ, ರೂ.10 ಕೋಟಿ ವೆಚ್ಚದಲ್ಲಿ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಲ್ಲೂರು ಸೇತುವೆಯ ಕಾಮಗಾರಿಯನ್ನು ಗ್ರಾಮಸ್ಥರೊಂದಿಗೆ ಶಾಸಕ ಕೆ.ಜಿ.ಬೋಪಯ್ಯ ಪರಿಶೀಲಿಸಿದರು. ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ, ಸ್ಥಳದಲ್ಲಿದ್ದ ಎಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಇದೇ ಸಂದರ್ಭ ಸೂಚಿಸಿದರು.
ಲೇಖಕ: admin
ಮಡಿಕೇರಿ ಜ.31 : ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಟ್ಟೂರು-ಕಾನೂರು ಕುಟ್ಟ ಮುಖ್ಯ ರಸ್ತೆ ಕಾಮಗಾರಿ ರೂ.1 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,ಜಿ.ಪಂ ವ್ಯಾಪ್ತಿಯಲ್ಲಿದ್ದ ರಸ್ತೆಯನ್ನು ಇದೀಗ ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಭಾಗದ ಜನತೆ ಈ ರಸ್ತೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ನಿಟ್ಟೂರು ಗ್ರಾ.ಪಂ ಆಡಳಿತ ಮಂಡಳಿ ಒಂದು ತಂಡವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನಾರ್ಹವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೊಲ್ಲಿಹಾಡಿಯ 8 ಗಿರಿಜನ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ ಮಾಡಿದರು. ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ಸದಸ್ಯರುಗಳಾದ ಚಕ್ಕೇರ ಸೂರ್ಯ ಅಯ್ಯಪ್ಪ, ಅಮ್ಮಣಿ, ಅಕ್ರಮ ಸಕ್ರಮ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಕಾಡೇಮಾಡ ಗಿರೀಶ್ ಗಣಪತಿ, ಸದಸ್ಯರಾದ ಮಾಪಂಗಡ ಯಮುನಾ ಚಂಗಪ್ಪ, ಪಿ. ಡಿ. ಓ ಮನಮೋಹನ್ ಆರ್.ಯಂ.ಸಿ ಮಾಜಿ ಅಧ್ಯಕ್ಷ ಮಾಚಂಗಡ ಸುಜಾ ಪೂಣಚ್ಚ, ಅದೇಂಗಡ ವಿನು ಚಂಗಪ್ಪ, …
ವಿರಾಜಪೇಟೆ ಜ.31 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂ.ಎನ್. ಹೇಮಂತ್ ಕುಮಾರ್ ಅವರು ಸಲ್ಲಿಸಿದ್ದ ಮಹಾಪ್ರಬಂಧವನ್ನು ಪಿಎಚ್.ಡಿ ಪದವಿಗಾಗಿ ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರೊ.ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ಹೇಮಂತ್ ಕುಮಾರ್ ಎಂ.ಎನ್. ಅವರು ‘ಕೊಡವ ಹಾಗೂ ತುಳು ಸಂಸ್ಕೃತಿಗಳ ತೌಲನಿಕ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ. ಎಂ.ಎನ್. ಹೇಮಂತ್ ಕುಮಾರ್ ವಿರಾಜಪೇಟೆಯ ಸಂತ ಅನ್ನಮ್ಮ ಪ.ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೋಮವಾರಪೇಟೆ ಜ.31 : ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಪ್ರಶಸ್ತಿ ಪ್ರದಾನ ಹಾಗೂ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಶಕ್ತಿ ಬಲಿಷ್ಠವಾಗಿದಲ್ಲಿ ಮಾತ್ರ ಶಕ್ತಿದಾಯಕ ದೇಶ ಕಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುವ ಕೆಲಸವನ್ನು ಜೇಸಿ ಸಂಸ್ಥೆ ಮಾಡುತ್ತಿವೆ. ಕೇವಲ ತರಗತಿಯೊಳಗಿನ ಶಿಕ್ಷಣ ಜೀವನ ರೂಪಿಸುವುದಿಲ್ಲ. ಶಿಕ್ಷಣದೊಂದಿಗೆ ಇತರ ಸಾಮಾಜಿಕ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಜೇಸಿ ಸಂಸ್ಥೆಯ ಅಧ್ಯಕ್ಷ ಎಂ.ಎ.ರುಬಿನಾ ಮಾತನಾಡಿ, ಯುವ ಜನರಿಗೆ ನಾಯಕತ್ವ ಬೆಳೆಸುವ ಕೆಲಸ ಜೇಸಿ ಸಂಸ್ಥೆ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿಲು ಪ್ರಬಂಧ, ರಸಪ್ರಶ್ನೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುತ್ತಿದೆ ಎಂದರು. ಪತ್ರಕರ್ತರಾದ ಹಿರಿಕರ ರವಿ ಹಾಗೂ ಪೊಲೀಸ್ ಮುಖ್ಯ ಪೇದೆ ಎ.ಎನ್. ರಮೇಶ…
ಸೋಮವಾರಪೇಟೆ,ಜ.31: ಕಾರ್ಮಿಕ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಗುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಟ್ಯಾಬ್ ವಿತರಣೆ ಮಾಡಿದರು. ತಾಲೂಕಿನಲ್ಲಿ 120 ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಫಲಾನುಭವಿಗಳೆಂದು ಗುರುತಿಸಲಾಗಿದ್ದು, ಶಾಸಕರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ಹಂತವಾಗಿ 77 ಮಂದಿಗೆ ಟ್ಯಾಬ್ ವಿತರಿಸಲಾಯಿತು. ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕಿ ಕೆ.ಎನ್. ಲೀನಾ, ಸಿಬ್ಬಂದಿಗಳಾದ ದರ್ಶನ್, ಪವಿತ್ರ ಸೇರಿದಂತೆ ಇತರರು ಹಾಜರಿದ್ದರು.
ಸೋಮವಾರಪೇಟೆ,ಜ.31 : ಆಯುಷ್ ಇಲಾಖೆಯ ಮೂಲಕ ರೂ. 60ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು. ಹೋಮಿಯೋಪತಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡಿರುವ ಪ್ರಥಮ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಂಜನ್, ಯಾವುದೇ ಅಡ್ಡಪರಿಣಾಮವಿಲ್ಲದೇ ನೈಸರ್ಗಿಕ ಗಿಡಮೂಲಿಕೆಗಳಿಂದ ಚಿಕಿತ್ಸೆ ನೀಡುವ ಹೋಮಿಯೋಪತಿ ಚಿಕಿತ್ಸಾ ಪದ್ಧತಿಯ ಬಗ್ಗೆ ಜನರು ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಮಾಡಿದ್ದಾರೆ. ವಿಶ್ವದ 194 ದೇಶಗಳಲ್ಲಿ ಯೋಗ ಖ್ಯಾತಿಯಾಗಿದೆ. ಯೋಗ ದಿನಾಚರಣೆ ಆಚರಿಸಲ್ಪಡುತ್ತಿದೆ. ಪ್ರಾಚೀನ ಪರಂಪರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕ್ರಮವನ್ನು ಉಳಿಸುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ತಾಲೂಕು ತಹಶಿಲ್ದಾರ್ ಎಸ್.ಎನ್. ನರಗುಂದ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿ.ಪಂ.ಸಹಾಯಕ ಕಾರ್ಯಪಾಲಕ…
ಮಡಿಕೇರಿ ಜ.31 : ಕನ್ನಡದ ಖ್ಯಾತ ಕತೆಗಾರ, ಕವಿ, ವಿಮರ್ಶಕ, ಕೆ.ವಿ.ತಿರುಮಲೇಶ್ ಹಾಗೂ ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕ ಕೆ.ಕೇಶವಭಟ್ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಇಬ್ಬರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್ ಸಂತಾಪ ವ್ಯಕ್ತಪಡಿಸಿದರು.
ಮಡಿಕೇರಿ ಜ.30 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ. ರಾಮರಾಜನ್ ಅವರು ಇಂದು ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಕ್ಯಾ. ಎಂ.ಎ ಅಯ್ಯಪ್ಪ ಅವರಿಂದ ಅಧಿಕಾರ ವಹಿಸಿಕೊಂಡರು.
ನಾಪೋಕ್ಲು ಜ.30 : ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಎಸ್ಎಫ್) ಎಮ್ಮೆಮಾಡು ಈಸ್ಟ್ ಶಾಖೆಯ 2023-24 ನೇ ಸಾಲೀನ ನೂತನ ಅಧ್ಯಕ್ಷರಾಗಿ ಮುಹಮ್ಮದ್ ನಿಝಾರ್ ಜೌಹರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎ.ಎನ್ ಮುಹಮ್ಮದ್ ಸಿನಾನ್, ಕೋಶಾಧಿಕಾರಿಯಾಗಿ ಕನ್ನಡಿಯಂಡ ಖಾಲಿದ್, ಸದಸ್ಯರಾಗಿ ಫಾರೂಕ್ ಸಖಾಫಿ, ನೌಶಾದ್, ಮುಹ್ಸಿನ್, ಅಸ್ಕರ್, ಮುರ್ಶಿದ್,ಅನಸ್,ಆಸಿಫ್, ಅಜೀರ್ , ಝಿಯಾದ್, ಮುತ್ತಲಿಬ್,ಸೈಫುದ್ದೀನ್ , ಇಸ್ ಹಾಕ್,ಮನಾಫ್, ಮರ್ಝೂಕ್,ಫರ್ಹಾನ್ , ಜಸೀಮ್, ಶಫೀಕ್, ಅಝೀಝ್,ಝಕ್ರಿಯ , ನಾಝಿಂ ಆಯ್ಕೆಯಾದರು. ಎಮ್ಮೆಮಾಡು ಕೂರುಳಿ ಗ್ರಾಮದಲ್ಲಿ ಎಸ್ ಎಸ್ ಎಫ್ ಎಮ್ಮೆಮಾಡು ಈಸ್ಟ್ ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಆಯ್ಕೆಮಾಡಲಾಯಿತು. ಈ ಸಂಧರ್ಭ ಎಸ್ ಜೆ ಎಮ್ ಕೊಡಗು ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಸಖಾಫಿ , ಮಡಿಕೇರಿ ಡಿವಿಷನ್ ಕೋಶಾಧಿಕಾರಿ ಝಕ್ರಿಯ ಜೌಹರಿ, ಉಸ್ತುವಾರಿಯಾಗಿ ಅಯ್ಯಂಗೇರಿ ರಾಶಿದ್ ಅನ್ವಾರಿ, ಶಾಫಿ ಸಾದಾತ್ ನಗರ, ಎಸ್.ವೈ.ಎಸ್. ಸದಸ್ಯರಾದ ಇಬ್ರಾಹಿಂ ಸಅದಿ, ಶಫೀಕ್ ಮುಸ್ಲಿಯರ್, ಎಸ್.ಎಸ್. ಎಫ್. ಮಾಜಿ ಕೋಶಾಧಿಕಾರಿ ರಶೀದ್ ,…
ಮಡಿಕೇರಿ ಜ.30 : ಜಿಲ್ಲಾಡಳಿತದ ಕೇಂದ್ರ ಸ್ಥಾನ ಮಡಿಕೇರಿಯಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಗಾಳಿಬೀಡು ಮತ್ತು ವಣಚಲು ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿವೆ. ಮುಂದಿನ 10 ದಿನಗಳೊಳಗೆ ರಸ್ತೆಯನ್ನು ಡಾಂಬರೀಕರಣ ಮಾಡದಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಸ್ಥಳೀಯ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ರಸ್ತೆ ಅವ್ಯವಸ್ಥೆ ಕುರಿತು ಗಮನ ಸೆಳೆದಿರುವ ಸ್ಥಳೀಯರಾದ ನಲ್ಲಪಟ್ಟಿರ ಸಂಗಮ್ ಅಯ್ಯಪ್ಪ, ದಿಶಾಂತ್ ಕೋಚನ, ಕಲ್ಲುಮುಟ್ಲು ಸದಾನಂದ, ಕರಕರನ ಮನೋಜ್ ಹಾಗೂ ಗ್ರಾಮಸ್ಥರು ಜಿಲ್ಲಾ ಕೇಂದ್ರ ಸ್ಥಾನದ ಪಕ್ಕದಲ್ಲೇ ಇರುವ ರಸ್ತೆಯನ್ನು ನಿರ್ಲಕ್ಷಿಸಿರುವುದು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅನೇಕ ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ರಸ್ತೆ ದುರಸ್ತಿ ಪಡಿಸುವಂತೆ ಮನವಿ ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಗ್ರಾ.ಪಂ ಮೂಲಕ ಸರ್ಕಾರಕ್ಕೆ ಸಾಕಷ್ಟು ತೆರಿಗೆ ಹಣ ಸಂಗ್ರಹವಾಗುತ್ತದೆ. ಅಲ್ಲದೆ ಈ ಭಾಗದಲ್ಲಿ ರೆಸಾರ್ಟ್, ಹೋಂಸ್ಟೇ ಸೇರಿದಂತೆ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳ ಮೂಲಕವೂ ಅಧಿಕ ತೆರಿಗೆ ಪಾವತಿಯಾಗುತ್ತದೆ. ಆದರೆ ಆಡಳಿತ…






