ವಿರಾಜಪೇಟೆ ಮಾ.9 : ಪುರಸಭೆ ವಿರೋಧ ಪಕ್ಷದ ಸದಸ್ಯರಿಗೆ ಅಭಿವೃದ್ದಿ ಕಾರ್ಯ ಬೇಕಾಗಿಲ್ಲ. ಕಾರ್ಯಸೂಚಿಯಲ್ಲಿ ಇಲ್ಲದ ವಿಷಯಗಳನ್ನು ಪ್ರಸ್ತಾಪಿಸಿ ಸಭೆಗೆ ಅಡ್ಡಿ ಪಡಿಸುವುದು ಇವರ ನಿತ್ಯ ಕಾಯಕವಾಗಿದೆ ಎಂದು ಬಿಜೆಪಿ ಸದಸ್ಯ ಸುಭಾಷ್ ಮಹಾದೇವ್ ಆರೋಪಿಸಿದರು. ವಿರೋಧ ಪಕ್ಷದ ಸದಸ್ಯರ ಹದ್ದು ಮೀರಿದ ವರ್ತನೆಯನ್ನು ತಡೆಯಲು ಸಾಧ್ಯವಿಲ್ಲದೆ ಪುರಸಭೆಯ ಬಜೆಟ್ ಪೂರ್ವಬಾವಿ ಸಭೆಯನ್ನು ಅಧ್ಯಕ್ಷರು ಮುಂದೂಡಿದ ಬಳಿಕ ಮಾತನಾಡಿ, ಕಳೆದ ಸಭೆಯಲ್ಲಿ ನಿರ್ಣಯ ಪುಸ್ತಕದಲ್ಲಿ ಸಹಿ ಮಾಡಿ ಕಾರ್ಯಸೂಚಿಯಲ್ಲಿ ಇಲ್ಲದ ವಿಷಯವನ್ನು ಪ್ರಸ್ತಾಪಿಸಿ ಸಭೆಯಿಂದ ಹೊರನಡೆದರು. ಈ ಬಾರಿ ಕೂಡ ಅದನ್ನೆ ಮಾಡಿದ್ದಾರೆ. ಅಂಗಡಿ ಮಾಲೀಕರು ತಮ್ಮ ಅಂಗಡಿಯ ಮುಂದೆ ದಿನಗಟ್ಟಲೆ ವಾಹನವನ್ನು ತಂದು ನಿಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದಿಂದ ಬರುವ ಸಾರ್ವಜನಿಕರು ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದಾರೆ. ಪಟ್ಟಣದಲ್ಲಿ ಪೇ ಪಾರ್ಕಿಂಕ್ ಮಾಡಿದರೆ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತದೆ. ಪುರಸಭೆಗೂ ಆದಾಯ ಬರುತ್ತದೆ. ಇದ್ಯಾವುದಕ್ಕೆ ಅವಕಾಶ ಕೊಡದ ವಿರೋಧ ಪಕ್ಷದವರು ಪ್ರತಿ ಸಭೆಯಲ್ಲಿ ಗದ್ದಲ ಏರ್ಪಡಿಸಿ ಅಭಿವೃದ್ಧಿ ಕಾರ್ಯಗಳಿಗೆ ಕಂಟಕಪ್ರಾಯರಾಗುತ್ತಿದ್ದಾರೆ ಎಂದು…
ಲೇಖಕ: admin
ಮಡಿಕೇರಿ ಮಾ.9 : ಕುಂಜಿಲದಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಪಯ್ನರಿ ವಲಿಯುಲ್ಲಾಹ್ ಅವರ ವಾರ್ಷಿಕ ಉರೂಸ್ ಸಮಾರಂಭವು ಮಾ.10 ರಿಂದ 16ರ ವರೆಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಯ್ನರಿ ಸುನ್ನೀ ಮುಸ್ಲಿಂ ಜಮಾಅತ್ ಮಾಜಿ ಕಾರ್ಯದರ್ಶಿ ಪಿ.ಎಂ.ಅಜೀಜ್ ಮಾಸ್ಟರ್, ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಮಾ.10 ರಂದು ಮಧ್ಯಾಹ್ನ 2 ಗಂಟೆಗೆ ಪಯ್ನರಿ ಸುನ್ನಿ ಮುಸ್ಲಿ ಜಮಾಅತ್ ನ ಅಧ್ಯಕ್ಷ ಶೌಕತ್ ಆಲಿ ಉರೂಸ್ ಧ್ವಜಾರೋಹಣ ನೆರವೇರಿಸಲಿದ್ದು, ಪಯ್ನರಿ ಜಮಾಅತ್ ಖತೀಬರಾದ ನಿಝಾರ್ ಅಹ್ಸನಿ ಮಖಾಂ ಅಲಂಕಾರ ನೇತೃತ್ವ ವಹಿಸಲಿದ್ದಾರೆ. ರಾತ್ರಿ 8.30 ಗಂಟೆಗೆ ಅಂತರಾಷ್ಟ್ರೀಯ ವಾಗ್ಮಿ ಡಾ.ಫಾರೂಖ್ ನಈಮಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮಾ.11 ರಂದು ರಾತ್ರಿ 8.30 ಗಂಟೆಗೆ ಆಶಿಖ್ ಧಾರಿಮಿ ಉಪನ್ಯಾಸ ನೀಡಲಿದ್ದು, ಮಾ.12 ರಂದು ರಾತ್ರಿ 8 ಗಂಟೆಗೆ ಸ್ವಾದಿಖ್ ಫಾಳಿಲಿ ಮತ್ತು ಸಂಗಡಿಗರಿಂದ ಬೃಹತ್ ಬುರ್ದಾ ಮಸ್ಲಿಸ್ ನಡೆಯಲಿದೆ. ಮಾ.13 ರಂದು ಮಧ್ಯಾಹ್ನ 1.15 ಗಂಟೆಗೆ ಸಯ್ಯಿದ್ ಶಿಹಾಬುದ್ಧೀನ್ ಅಲ್ ಐದರೂಸಿ…
ವಿರಾಜಪೇಟೆ ಮಾ.9 : ವಿರಾಜಪೇಟೆ ಬ್ರಹ್ಮಗಿರಿ ಸಹೋದಯ ಸಂಸ್ಥೆ ವತಿಯಿಂದ ಅರಮೇರಿ ಎಸ್ಎಂಎಸ್ ವಿದ್ಯಾಪೀಠದಲ್ಲಿ ವಸುಂಧರ ವಿಜ್ಞಾನ ದಿನ ಆಚರಿಸಲಾಯಿತು. ಜಿಲ್ಲೆಯ ಸಿಬಿಎಸ್ಇ ಶಾಲೆಗಳ 6ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಜಾಗತಿಕ ಯೋಗ ಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನದ ಬಗ್ಗೆ ಪ್ರದರ್ಶನ ಸಂಗೀತ, ನಾಟಕ, ನೃತ್ಯದ ಮೂಲಕ ಸಂದೇಶ ಸಾರಿದರು. ನೀರು, ಮಣ್ಣು, ಶಾಕ, ಗಾಳಿ, ಸಸ್ಯವರ್ಗ, ಪ್ರಾಣಿ ವರ್ಗ ವಿಷಯದಲ್ಲಿ ಭೂಮಂಡಲ ರಕ್ಷಣೆಗೆ ಯುವ ಪೀಳಿಗೆಯ ಪಾತ್ರದ ಕುರಿತು ಜಾಗೃತಿ ಮೂಡಿಸಿದರು. ಎಸ್ಎಂಎಸ್ ವಿದ್ಯಾಸಂಸ್ಥೆಯ ಪಾಂಚಜನ್ಯ ಬ್ಯಾಂಡ್ ಪಡೆ, ವಿರೋಚನಾ ನೃತ್ಯ ತಂಡದಿಂದ ಪ್ರದರ್ಶನ ನೀಡಲಾಯಿತು. ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ.ಕಣ್ಣನ್ ಮಾತನಾಡಿ, ವೈಜ್ಞಾನಿಕ ಮನೋಭಾವ ಅವಶ್ಯ ಎಂದರು. ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಮತ್ತು ವಿಜ್ಞಾನದ ಸಂಬಂಧವನ್ನು ತಿಳಿಸಿಕೊಟ್ಟರು. ಬ್ರಹ್ಮಗಿರಿ ಸಹೋದಯ ಸಂಸ್ಥೆ ಅಧ್ಯಕ್ಷೆ ಕೆ.ಎಸ್.ಸುಮಿತ್ರಾ, ನ್ಯಾಷನಲ್ ಅಕಾಡೆಮಿ ಪ್ರಾಂಶುಪಾಲ ಜೆ.ಎನ್.ಪುಷ್ಪ, ಅಂಕುರ್ ಪಬ್ಲಿಕ್ ಶಾಲೆ ವ್ಯವಸ್ಥಾಪಕ ರತ್ನ ಚರ್ಮಣ, ಎಸ್ಎಂಎಸ್ ಪ್ರಾಂಶುಪಾಲ…
ಮಡಿಕೇರಿ ಮಾ.9 : ಸೋಮವಾರಪೇಟೆ ಪಟ್ಟಣದ ಕುರಿ, ಕೋಳಿ ಮತ್ತು ಹಸಿ ಮೀನು ಮಾರುಕಟ್ಟೆ ಅವ್ಯವಸ್ಥೆಗಳಿಂದ ಕೂಡಿದೆ ಎಂದು ಸ್ಥಳೀಯ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುಸ್ಥಿತಿಯಲ್ಲಿರುವ ಮಾರುಕಟ್ಟೆಗೆ ಹರಾಜು ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಿದ್ದಾರೆ. ಇಂದು ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಪಂಚಾಯ್ತಿ ಅಧ್ಯಕ್ಷ ಚಂದ್ರು ಅವರ ಅಧ್ಯಕ್ಷತೆ ಯಲ್ಲಿ ನಡೆದ 2023-24ನೇ ಸಾಲಿನ ವಿವಿಧ ಮಾರುಕಟ್ಟೆ ಹರಾಜು ಪ್ರಕ್ರಿಯೆ ಸಂದರ್ಭ ವರ್ತಕರು ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದರು. ಮಾಂಸದ ಮಾರುಕಟ್ಟೆ ಕಟ್ಟಡ ಸೋರುತ್ತಿದೆ, ಸಮರ್ಪಕವಾಗಿ ನೀರು ಹರಿಯುವುದಿಲ್ಲ, ತ್ಯಾಜ್ಯ ಹಾಕಲು ಸೂಕ್ತ ಜಾಗವಿಲ್ಲ. ಸಮಸ್ಯೆ ಕುರಿತು ಪಂಚಾಯ್ತಿ ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ನಾವು ಲಕ್ಷಗಟ್ಟಲೆ ಹರಾಜು ಕರೆದು ವ್ಯಾಪಾರ ಮಾಡುತ್ತೇವೆ, ಆದರೆ ಬೇರೆಯವರು ಹೊರ ಜಿಲ್ಲೆಯಿಂದ ಬಂದು ಕೋಳಿ ವ್ಯಾಪಾರ ಮಾಡುತ್ತಾರೆ, ಮೀನುಗಾರರು ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡುತ್ತಾರೆ. ಇದರಿಂದಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸುವಂತ್ತಾಗಿದೆ. ಮತ್ತೊಂದೆಡೆ ಪಕ್ಕದ ಚೌಡ್ಲೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಡಿಮೆ ದರಕ್ಕೆ…
ವಿರಾಜಪೇಟೆ ಮಾ.9 : ವಿರಾಜಪೆಟೆಯ ಪುರಸಭೆಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆಯಲ್ಲಿ ವಾಹನ ನಿಲುಗಡೆ ಶುಲ್ಕ ವಿಧಿಸುವ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಗದ್ದಲ ಉಂಟಾಗಿ ಪರಸ್ಪರ ದಿಕ್ಕಾರ ಕೂಗಿ, ಸಭೆ ಮೊಟಕುಗೊಳಿಸುವ ಘಟನೆ ನಡೆಯಿತು. ಪುರಸಭೆ ಅಧ್ಯಕ್ಷೆ ಸುಸ್ಮೀತಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ, ಕಳೆದ ಬಾರಿ ನಾವು ವಾಹನ ನಿಲುಗಡೆ ಶುಲ್ಕವನ್ನು ರದ್ದುಪಡಿಸಿದ್ದೇವೆ. ಆದರೆ ಈ ಬಾರಿ ಅದನ್ನು ಅಳವಡಿಸಿ ಬದ್ರೀಯಾ ಜಂಕ್ಷನ್ನಿಂದ ಗೋಣಿಕೊಪ್ಪ ಸಂಪರ್ಕ ರಸ್ತೆ, ಕಿತ್ತೂರು ರಾಣಿ ಚನ್ನಮ್ಮ ರಸ್ತೆ, ಗಾಂಧಿನಗರ ರಸ್ತೆಗೆ ವಾಹನ ಶುಲ್ಕ ನಿಗದಿಗೆ ಆಕ್ಷೇಪ ವ್ಯಕ್ತಪಡಿಸಿ ಇದು ಜನರಿಗೆ ಹೊರೆಯಾಗಲಿದ್ದು ಇದನ್ನು ಕೈ ಬಿಡುವಂತೆ ಒತ್ತಾಯಿಸಿದರು. ಬಿಜೆಪಿಯ ನಾಮಕರಣ ಸದಸ್ಯ ಕೂತಂಡ ಸಚಿನ್ ಕುಟ್ಟಯ್ಯ ಪಟ್ಟಣದಲ್ಲಿ ವಾಹನ ನಿಲುಗಡೆ ಸಮಸ್ಯೆ ತೀವ್ರವಾಗಿದೆ. ಅಂಗಡಿ ಮಾಲಿಕರ ವಾಹನವನ್ನು ಬೆಳಗ್ಗಿನಿಂದ ಸಂಜೆವರೆಗೆ ನಿಲ್ಲಿಸುತ್ತಾರೆ. ಕೆಲವರು ಬೆಳಿಗ್ಗೆ…
ಮಡಿಕೇರಿ ಮಾ.9 : ಅಗ್ನಿ ಆಕಸ್ಮಿಕದಿಂದ ಹಾಸಿಗೆ ಮಳಿಗೆಯೊಂದು ಸಂಪೂರ್ಣವಾಗಿ ಹಾನಿಗೀಡಾಗಿರುವ ಘಟನೆ ಇಂದು ಬೆಳಗ್ಗೆ ಮಹದೇವಪುರದ ಬೆಳ್ಳಂದೂರು ಕೈಕೊಂಡ್ರಹಳ್ಳಿ ಎಂಬಲ್ಲಿ ನಡೆದಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಹಾಸಿಗೆ ಮಳಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾಲು ಬೆಂಕಿಗಾಹುತಿಯಾಗಿದೆ. ಅಕ್ಕಪಕ್ಕದ ಮಳಿಗೆಗಳಿಗೆ ಬೆಂಕಿ ವ್ಯಾಪಿಸದಂತೆ ತಡೆಯಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.
ಮಡಿಕೇರಿ ಮಾ.9 : ಅರಣ್ಯದಿಂದ ಹಾದಿ ತಪ್ಪಿ ಬಂದು ಜನ ವಸತಿ ಪ್ರದೇಶದಲ್ಲಿ ಓಡಾಡುತ್ತಿದ್ದ ಸಾರಂಗವನ್ನು ಶ್ವಾನಗಳ ಗುಂಪು ದಾಳಿ ಮಾಡಿ ಕೊಂದು ಹಾಕಿದ ಘಟನೆ ಚಿತ್ರದುರ್ಗ ಸಮೀಪದ ಚಳ್ಳಕೆರೆ ತಾಲ್ಲೂಕಿನ ಬಕ್ಕಂಬುಡಿ ಗ್ರಾಮದಲ್ಲಿ ನಡೆದಿದೆ. ಶ್ವಾನಗಳು ದಾಳಿ ಮಾಡಿದಾಗ ಸ್ಥಳೀಯರು ಸಾರಂಗವನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ವನ್ಯಜೀವಿಗೆ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರು. ಆದರೆ ಚಿಕಿತ್ಸೆ ಫಲಿಸದೆ ಸಾರಂಗ ಮೃತಪಟ್ಟಿತು.
ವಿರಾಜಪೇಟೆ ಮಾ.9 : ಪುರಸಭೆಯ ಆಡಳಿತ ಸದಸ್ಯರು ಅವೈಜ್ಞಾನಿಕವಾಗಿ ಪೇ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದರಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಬೀಳುತ್ತಿದೆ. ಅಧ್ಯಕ್ಷರು ಆಡಳಿತ ಪಕ್ಷ ಸದಸ್ಯರು ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪಟ್ಟಡ ರಂಜಿ ಪೂಣಚ್ಚ ಆರೋಪಿಸಿದರು. ಪುರಸಭೆಯ ಬಜೆಟ್ ಪೂರ್ವಭಾವಿ ಸಭೆಯನ್ನು ಅಧ್ಯಕ್ಷರು ಮುಂದೂಡಿದ ಬಳಿಕ ಮಾತನಾಡಿ, ವಾಹನ ಶುಲ್ಕ ಎತ್ತಾವಳಿ ಟೆಂಡರ್ ಪ್ರಕ್ರಿಯೆಗೆ ನಮ್ಮ ವಿರೋಧ ಇದೆ. ಈಗಾಗಲೇ ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಪೇ ಪಾರ್ಕಿಂಗ್ ಮಾಡುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ಹೊರೆಯಾಗುತ್ತಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದಡಿಯಲ್ಲಿ ನಂಬಿಕೆ ಇಲ್ಲದ ಅಧ್ಯಕ್ಷರು ಬಹುಮತ ಸಾಬಿತು ಪಡಿಸಲು ಅವಕಾಶ ನೀಡಲಿಲ್ಲ. ವಿರೋಧ ಪಕ್ಷದ ವಿರೋಧದ ನಡುವೆಯು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದರೆ ಕಾನೂನು ರೀತಿಯ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭವಿರೋಧ ಪಕ್ಷ ಸದಸ್ಯ ಡಿ.ಪಿ ರಾಜೇಶ್, ಸಿ.ಕೆ ಪೃಥ್ವಿನಾಥ್, ರಾಫಿ, ಮತೀನ್, ಅಗಸ್ಟಿನ್ ಬೆನ್ನಿ, ರಜನಿಕಾಂತ್, ಫಸಿಯಾ ತಬಸಮ್ ಪೇ ಪಾರ್ಕಿಂಗ್…
ಮಡಿಕೇರಿ ಮಾ.9 : ರೈತ ವರನನ್ನು ಮದುವೆಯಾಗುವ ವಧುವಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ರೈತರ ಮಕ್ಕಳಿಗೆ ಹೆಣ್ಣು ನೀಡಿ ಮದುವೆ ಮಾಡಿಕೊಡಲು ಯಾರೂ ಮುಂದೆ ಬರುತ್ತಿಲ್ಲ. ವಧು ಕೂಡ ರೈತ ವರನನ್ನು ವರಿಸಲು ಆಸಕ್ತಿ ತೋರುತ್ತಿಲ್ಲ. ಆದ್ದರಿಂದ ರೈತರ ಮಕ್ಕಳನ್ನು ಮದುವೆಯಾಗುವಂತೆ ಪ್ರೇರೆಪಿಸಲು ವಧುವಿಗೆ 2ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದರು. ಈ ಬಾರಿ ಜೆಡಿಎಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ಮಾ.9 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಜನಾಂಗ ಬಾಂಧವರ (ಅರಭಾಷಿಗ) ವಧು-ವರರ ಸಮಾವೇಶ ಮಾ.11 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 9449476171, 9739495381 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.






