ಲೇಖಕ: admin

ಮಡಿಕೇರಿ ಜ.30 :  ಕಾಲು ಸ್ವಾದೀನ ಕಳೆದುಕೊಂಡಿದ್ದ ಕೆ.ಡಿ.ಗೋಪಾಲ ಅವರಿಗೆ ಕೋಪಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ ಪರಿಹಾರ ವಿತರಿಸಲಾಯಿತು. ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಪರಿಶಿಷ್ಟ ಜಾತಿ, ಪಂಗಡದವರಿಗೆ, ವಿಶೇಷ ಚೇತನರಿಗೆ, ದುರ್ಬಲ ವರ್ಗದ ಕುಟುಂಬಗಳಿಗೆ ಪರಿಹಾರದಡಿ ಕಾಯ್ದಿರಿಸಿದ ರೂ.5 ಸಾವಿರ ಚೆಕ್‍ಅನ್ನು ಕೋಪಟ್ಟಿ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗೆ ವಿತರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಸಿ.ಯು.ಸವಿತಾ, ಸದಸ್ಯ ದಿನೇಶ್, ಪಿಡಿಓ ಯಾದವ್, ಅಂಗನವಾಡಿ ಶಿಕ್ಷಕಿ ಸಿ.ಕೆ.ನಿರ್ಮಲ ಹಾಗೂ ಸಾರ್ವಜನಿಕರು ಹಾಜರಿದ್ದರು.

Read More

ಮಡಿಕೇರಿ ಜ.30 : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ನಗರದಲ್ಲಿ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ  ಸಬ್​ ಇನ್ಸ್​ಪೆಕ್ಟರ್​ ರಾಕೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟ್ರಗೀತೆ ಹಾಡಿ ಗಮನ ಸೆಳೆದರು. ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಜಿಲ್ಲಾ ಜಾನಪದ ಪರಿಷತ್…

Read More

ಮಡಿಕೇರಿ ಜ.30 : ರೈತಾಪಿ ವರ್ಗದ ಜೀವನಾಡಿಯಾಗಿರುವ ಸಹಕಾರಿ ಕ್ಷೇತ್ರವನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ರೈತ ಸಹಕಾರಿಗಳಿಂದಲೇ ಸ್ಥಾಪನೆಗೊಂಡ ಸಹಕಾರಿ ಕ್ಷೇತ್ರ ಉಳಿದರೆ ಮಾತ್ರ ಕೃಷಿಕ ವರ್ಗ ಉಳಿಯಲು ಸಾಧ್ಯ. ಸಹಕಾರಿ ಕ್ಷೇತ್ರದ ಪ್ರಗತಿಗಾಗಿ ಸರ್ಕಾರ ಕೂಡ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಬಾರ್ಡ್ ಸಹಾಯಧನವನ್ನು ಒದಗಿಸುತ್ತಿದ್ದು, ಇದೆಲ್ಲವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಹಕಾರ ಸಂಘದ ಮೂಲಕ ದೊರೆಯುವ ಅನುಕೂಲಗಳನ್ನು ಪಡೆದು ರೈತರು ಕೂಡ ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಮಾತನಾಡಿ, ವಿದೇಶಗಳಲ್ಲಿ ಯಾಂತ್ರೀಕೃತ ಪದ್ಧತಿಯಡಿ ಕೃಷಿ ಕಾರ್ಯ ನಡೆಯುತ್ತಿದೆ. ಬೆಟ್ಟಗುಡ್ಡಗಳಿಂದ ಕೂಡಿದ ಕೊಡಗು ಜಿಲ್ಲೆಯಲ್ಲಿ ಇದು ಕಷ್ಟಸಾಧ್ಯವಾದರೂ ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು ಬೆಳೆಗಾರರು ತಂತ್ರಜ್ಞಾನ ಹಾಗೂ ಯಂತ್ರಗಳನ್ನು…

Read More

ಮಡಿಕೇರಿ ಜ.30 : ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕ ನೀತಿ ಪುರ್ನರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನಿಸಿದೆ. ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುರ್ನರಚಿಸಲು ನಿರ್ಧರಿಸಲಾಗಿದೆ. ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಇವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ. ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ.…

Read More

ಮಡಿಕೇರಿ ಜ.30 : ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.(ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ್ಥಿಗಳು ಫೆಬ್ರವರಿ, 15 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1 ಲಕ್ಷ. ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಕ್ಟೋಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸು 17ಳಿ ರಿಂದ 20 ವರ್ಷಗಳ…

Read More

ಮಡಿಕೇರಿ ಜ.30 : ಪ್ರಸಕ್ತ (2022-23) ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲೆಯ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ ಆಧಾರ ಯೋಜನೆಯಿದ್ದು ಈ ಯೋಜನೆಯಡಿ ಬ್ಯಾಂಕ್ ಮೂಲಕ ರೂ.50 ಸಾವಿರ ಮತ್ತು ಇಲಾಖೆಯಿಂದ ಶೇ.50 ಸಬ್ಸಿಡಿ (ಸಹಾಯಧನ) ಸೇರಿ ರೂ.1 ಲಕ್ಷ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಹಿಂದೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು, ಆದರೆ ಆನ್‍ಲೈನ್ ಮೂಲಕ ವಿಲೇ ಮಾಡಲು ತಾಂತ್ರಿಕ ತೊಂದರೆ ಹಾಗೂ ಸಮಯದ ಅಭಾವವಿರುವುದರಿಂದ ಅರ್ಜಿಗಳನ್ನು ಕಚೇರಿಗೆ ಫೆಬ್ರವರಿ, 06 ರೊಳಗೆ ಭೌತಿಕವಾಗಿ (ಆಫ್‍ಲೈನ್‍ನಲ್ಲಿ) ಸಲ್ಲಿಸಲು ತಿಳಿಸಿದೆ. ಜಿಲ್ಲೆಯ 18 ರಿಂದ 55 ವಯೋಮಿತಿಯೊಳಗಿನ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829 ನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಸೋಮವಾರಪೇಟೆ  ಜ.30 : ಗೌಡಳ್ಳಿಯ ಅಜ್ಜಳ್ಳಿ , ಕೋಟೆಯೂರು ಗ್ರಾಮದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿಯವರ ಸಾನಿದ್ಯದಲ್ಲಿ  ಜೋಡಿ ಬಸವೇಶ್ವರ ನೂತನ ದೇವಾಲಯಕ್ಕೆ  ಶಂಕುಸ್ಥಾಪನೆ ನೆರವೇರಿತು. ಪೂಜಾ ಕಾರ್ಯಗಳನ್ನು ಗ್ರಾ.ಪಂ  ಸದಸ್ಯ, ನವೀನ್ ಅಜ್ಜಳ್ಳಿ ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲೋಹಿತ್, ದಿಲೀಪ್, ಮಧು, ವಸಂತ , ರವಿ ಹಾಗೂ ಭರತ್ ಇದ್ದರು.

Read More

ಶನಿವಾರಸಂತೆ ಜ.30 :  ಭಾರತಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಘಟಕ, ಕೊಡಗು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿಯ ಆರೋಗ್ಯ ಅಭಿಯಾನ ಜಿಲ್ಲಾ ಮತ್ತು ತಾಲೂಕು ಘಟಕದ  ಸಂಯುಕ್ತ ಆಶ್ರಯದಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜು ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ   ಕುಶಾಲನಗರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಕಾರ್ಯಕ್ರಮದ ಮಹತ್ವ ಕುರಿತು ಮಾಹಿತಿ ನೀಡಿ-ಹದಿ ಹರೆಯದ ಹೆಣ್ಣು ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿರುತ್ತದೆ,  ಹೆಣ್ಣು ಮಕ್ಕಳು ದೈಹಿಕ ಆರೋಗ್ಯ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದ ಅವರು ಹೆಣ್ಣು ಮಕ್ಕಳು ಪೌಷ್ಠಿಕಾಂಶ ಒಳಗೊಂಡಿರುವ ಮತ್ತು ಸಮತೋಲನ ಪ್ರಕಾರದಲ್ಲಿ ಆಹಾರವನ್ನು ಸೇವಿಸಬೇಕು ಇದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ ಸಲಹೆ ನೀಡಿದರು. ಹದಿ ಹರೆಯದ ಹೆಣ್ಣು ಮಕ್ಕಳು ದೈಹಿಕವಾಗಿ ಮತ್ತು  ಮಾನಸಿಕ ಒತ್ತಡ ಎದುರಿಸುತ್ತಾರೆ ಇಂತಹ ಸಂದರ್ಭದಲ್ಲಿ ತಮ್ಮ ತಾಯಿಯ ಜೊತೆಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡು ಮಾನಸಿಕ ಮತ್ತು ದೈಹಿಕ ಸಮಸ್ಯೆಯನ್ನು…

Read More

ವಿರಾಜಪೇಟೆ ಜ.30 : ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಘಟಕ ನೀಡುವ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿಗೆ ವಿರಾಜಪೇಟೆ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ ಗೀತಾಂಜಲಿ ಹಾಗೂ ಟಿ.ಕೆ. ವಾಮನ, ಹಾತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಸಿ.ಸಿ.ಭಾರತಿ ಆಯ್ಕೆಗೊಂಡಿದ್ದಾರೆ. ಫೆ.11 ರಂದು ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.30 : ನಗರದಲ್ಲಿರುವ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನಲ್ಲಿ ಬ್ಯಾಂಕ್ ನ ಸಮಗ್ರ ಸೌಲಭ್ಯಗಳ ಮಾಹಿತಿ ಒಳಗೊಂಡ ‘ಡಿಜಿಟಲ್ ಮಾಹಿತಿ ಪ್ರಚಾರ’ ಫಲಕಕ್ಕೆ ಚಾಲನೆ ನೀಡಲಾಯಿತು. ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಡಿಜಿಟಲ್ ಪ್ರಚಾರ ಫಲಕವನ್ನು ಉದ್ಘಾಟಿಸಿ ಮಾತನಾಡಿ, ಮಡಿಕೇರಿಯಲ್ಲಿರುವ ಕೇಂದ್ರ ಬ್ಯಾಂಕ್ ನಲ್ಲಿ ಕೇಂದ್ರೀಕೃತಗೊಂಡಿರುವ ಡಿಜಿಟಲ್ ವ್ಯವಸ್ಥೆಯ ಮಾಹಿತಿಯು ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್‍ಗಳ 22 ಶಾಖೆಗಳಲ್ಲಿಯೂ ಟಿವಿ ಪರದೆಯ ಮೂಲಕ ಕಾಣಲಿದೆ. ಈ ಮೂಲಕ ಬ್ಯಾಂಕ್ ಗ್ರಾಹಕರಿಗೆ ಸುಲಭವಾಗಿ ಬ್ಯಾಂಕ್‍ನಿಂದ ದೊರಕುವ ಸಾಲ ಸೌಲಭ್ಯಗಳು, ಠೇವಣಿ ಬಡ್ಡಿದರಗಳು, ವಿವಿಧ ರೀತಿಯ ಸೌಲಭ್ಯಗಳ ಸಮಗ್ರ ಮಾಹಿತಿ ದೊರಕುವುದು ಸುಲಭ ಸಾಧ್ಯವಾಗಲಿದೆ ಎಂದರು. 19 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ತಂತ್ರಜ್ಞಾನದ ಮಾಹಿತಿ ಫಲಕ ಅಳವಡಿಸಿದ್ದೇವೆ, ಅಂತೆಯೇ ರಾತ್ರಿ,ಯಲ್ಲಿಯೂ ಜನರ ಗಮನ ಸೆಳೆಯುವ ಡಿಜಿಟಲ್ ಫಲಕವನ್ನೂ 1.60 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾಗಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು. ಕೊಡಗು ಜಿಲ್ಲೆಯಲ್ಲಿರುವ 23 ರಾಷ್ಟ್ರೀಕೃತ ಮತ್ತು…

Read More