ಲೇಖಕ: admin

ಕುಶಾಲನಗರ ಡಿ.3 :  ಸೋಮವಾರ ರಾತ್ರಿ ಲಿಂಗೈಕ್ಯರಾದ ಬಿಜಾಪುರದ ಜ್ಞಾನ ಯೋಗಾಶ್ರಮದ ಸಂತ ಸಿದ್ದೇಶ್ವರ ಸ್ವಾಮೀಜಿಗಳ ಸಂತಾಪ ಸಭೆ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಸದಾ ಶ್ವೇತ ವಸ್ತ್ರಧಾರಿಗಳಾಗಿ ಸರಳವಾಗಿ ಬದುಕು ನಡೆಸಿದವರು. ನಿತ್ಯವೂ ಪ್ರವಚನಗಳ ಮೂಲಕ ಸಹಸ್ರಾರು ಭಕ್ತರ ಬದುಕನ್ನು ಕಟ್ಟಿದ ಶ್ರೀಗಳು ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ನಡೆದಾಡುವ ದೇವರಾದರು ಎಂದು ಬಣ್ಣಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಭಕ್ತರ ಪಾಲಿನ ನಿಜದೈವ ಸಿದ್ದೇಶ್ವರ ಶ್ರೀಗಳು ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ, ಮಹಾವೀರ ಮೊದಲಾದ ಶ್ರೇಷ್ಟ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದ ಶ್ರೀಗಳು ಪ್ರತಿದಿನ ಆಶ್ರಮದ ಆವರಣದಲ್ಲಿ ಮುಂಜಾನೆ ಸಮಯ ನೀಡುತ್ತಿದ್ದ ಪ್ರವಚನಕ್ಕೆ ಭಕ್ತರ ದಂಡೇ ಕಾದಿರುತ್ತಿತ್ತು . ಹಾಗಾಗಿ ಶ್ರೀಗಳ ಅಗಲಿಕೆಯಿಂದ ಭಕ್ತ ಕುಲ ಬಡವಾಗಿದೆ ಎಂದರು. ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ವಿಜೇತ್, ಹೆಬ್ಬಾಲೆ ಹೋಬಳಿ ಕಸಾಪ ಅಧ್ಯಕ್ಷ ಮಣಜೂರು…

Read More

ಕುಶಾಲನಗರ ಜ.3 : ಕುಶಾಲನಗರ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಕನ್ನಡ ಹಬ್ಬವಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕೆಂದು ಪ್ರಥಮ ಸಾಹಿತ್ಯ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ವುರಂಜನ್ ಕರೆನೀಡಿದ್ದಾರೆ. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಸಮ್ಮೇಳನದ ಅಂಗವಾಗಿ ಊರಿನ ಕಟ್ಟಡಗಳು, ಬೀದಿಗಳನ್ನು ಅಲಂಕರಿಸುವ ಮೂಲಕ ಸಮ್ಮೇಳನವನ್ನು ವ್ಯವಸ್ಥಿತವಾಗಿ, ಯಶಸ್ವಿಯಾಗಿ ನಡೆಸುವ ಸಂಬಂಧ ಸಾರ್ವಜನಿಕರು ಹಾಗು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸಾಹಿತ್ಯ, ಕಲೆ, ಸಂಸ್ಕøತಿ ಬೆಳಗಲು ವಿದ್ಯಾರ್ಥಿಗಳ ಪಾತ್ರ ಹಾಗೂ ಸಮ್ಮೇಳನದ ಮೆರವಣಿಗೆಯ ರೂಪುರೇμÉಗಳ ಕುರಿತು ಸಲಹೆ ನೀಡಿದರು.ಸಮ್ಮೇಳನಕ್ಕೆ ಅಗತ್ಯವಿರುವ ಆರ್ಥಿಕ ಕ್ರೋಢಿಕರಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕುಶಾಲನಗರದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಜಾತಿ, ಮತ ಭೇದಗಳನ್ನು ಲೆಕ್ಕಿಸದೆ ಸರ್ವರೂ ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ನಿಕಟಪೂರ್ವಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ…

Read More

ಕುಶಾಲನಗರ ಜ.3 : ರಾಜ್ಯದಲ್ಲಿ ಒಕ್ಕಲಿಗರಿಗೆ ಸೂಕ್ತ ಸ್ಥಾನಮಾನ ಸಿಗಲು ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರೇ ಕಾರಣ ಎಂದು ಆದಿಚುಂಚನಗಿರಿ ಮಠದ ಹಾಸನ ಮತ್ತು ಕೊಡಗು ಜಿಲ್ಲೆಯ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಮತ್ತು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡ, ರಾಷ್ಟ್ರ ಕವಿ ಕುವೆಂಪು ಹಾಗೂ ಸಮುದಾಯದ ಮಾರ್ಗದರ್ಶಕರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಒಕ್ಕಲಿಗ ಜನಾಂಗದ ಹೆಮ್ಮೆಯ ವ್ಯಕ್ತಿಗಳಾಗಿದ್ದು, ಈ ಮೂವರಿಗೂ ಒಕ್ಕಲಿಗರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ದೂರದೃಷ್ಟಿ ಇತ್ತು. ಕೆಂಪೇಗೌಡ ಬೆಂಗಳೂರನ್ನು ಕಟ್ಟಿದರೆ, ಕುವೆಂಪು ವಿಶ್ವಮಾನವ ಸಂದೇಶ ಸಾರಿದರು. ಸಮುದಾಯದ ಏಳಿಗೆಗೆ ವೇದಿಕೆಯ ಅಗತ್ಯತೆಯೊಂದಿಗೆ ಸಂಘಟನಾ ಶಕ್ತಿ ಮೂಲಕ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಒಕ್ಕಲಿಗರು ಉನ್ನತ ಸ್ಥಿತಿಗೆ ತಲುಪಬೇಕು ಎನ್ನುವುದು ಶ್ರೀ…

Read More

ಮಡಿಕೇರಿ ಜ.3 :  ಕನ್ನಡ ಚಿತ್ರರಂಗದಲ್ಲಿ ಕೊಡಗಿನ ಹತ್ತಾರು ಪ್ರತಿಭೆಗಳು ಮಿಂಚಿದ್ದಾರೆ. ಈಗಲೂ ಮಿಂಚುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮೂಲತಃ ಇಬ್ಬನಿವಲವಾಡಿ ಗ್ರಾಮದ ಮಾಲೆರ ಪ್ರಮೋದ್ ಬೋಪಣ್ಣ ಹೊಸ ಎಂಟ್ರಿಯಾಗಿದ್ದಾರೆ. ಇವರು ನಾಯಕ ನಟನಾಗಿ ಬಣ್ಣ ಹಚ್ಚಿರುವ ಮರೆಯದೆ ಕ್ಷಮಿಸು ಕನ್ನಡ ಚಲನಚಿತ್ರ ಇದೇ ಜ.6ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಆರ್.ವಿ.ಎಸ್ ಪ್ರೊಡಕ್ಷನ್ ಬ್ಯಾನರ್ ನಡಿ , ವಿ. ಶಿವರಾಂ ನಿರ್ಮಾಣದ, ಕೆ. ರಾಘವ್ ನಿರ್ದೇಶನದ ಮರೆಯದೆ ಕ್ಷಮಿಸು ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಸದ್ಯ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರತಂಡ ಇದೀಗ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ರಿಷಿಕೇಶ್ ಛಾಯಾಗ್ರಹಣ , ಆರೋನ್ ಕಾರ್ತಿಕ್ ವೆಂಕಟೇಶ್, ಕ್ರಿಸ್ಟೋಫರ್ ಸಂಗೀತ, ಧನುಷ್ ಸಂಕಲನ ಈ ಚಿತ್ರಕ್ಕಿದೆ. ಉದಯ ಟಿವಿಯಲ್ಲಿ ವಾರ್ತಾ ವಾಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಮೋದ್, ಬಳಿಕ ಹಲವು ಧಾರವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಮರೆಯದೆ ಕ್ಷಮಿಸು ಚಿತ್ರದ ಮೂಲಕ ನಾಯಕನಟನಾಗಿ ಬಡ್ತಿ ಪಡೆದಿದ್ದಾರೆ.…

Read More

ವಿರಾಜಪೇಟೆ  ಜ.3 :  ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಕಾಳೇಘಾಟ್ ಕಳಿಯಾಟ್ ಮಹೋತ್ಸವವು ಜ.11 ರಿಂದ 13ರ ವರೆಗೆ ಜರುಗಲಿದೆ ಎಂದು ಆಡಳಿತ ಮಂಡಳಿಯು ತಿಳಿಸಿದೆ. ಜ.11 ರಂದು ಬೆಳಿಗ್ಗೆ ಗಣಹೋಮ , ಉಷಾಪೂಜೆ , ಉಚ್ಚಪೂಜೆ , ದೀಪಾರಾಧನೆ , ಅತ್ತಾಳಪೂಜೆ ಹಾಗೂ ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.12 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.13 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ.  ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಮಡಿಕೇರಿ ಜ.3 : ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ 11 ನೇ ಸಮ್ಮೇಳನದ ಸ್ವಾಗತ ಸಮಿತಿ ಸಭೆಯು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಉಪಸ್ಥಿತಿಯಲ್ಲಿ ಜನವರಿ, 4 ರಂದು ಮಧ್ಯಾಹ್ನ 3.30 ಗಂಟೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರು ಮತ್ತು ತಾಲ್ಲೂಕು ಕಸಾಪ ಅಧ್ಯಕ್ಷ  ನವೀನ್ ಅಂಬೆಕಲ್ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ…

Read More

ಮಡಿಕೇರಿ ಜ.3 : ಪ್ರಸಕ್ತ (2022-23) ಸಾಲಿನ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಸಂಸ್ಥೆಗಳಿಂದ ಹಾಗೂ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022-23ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಜ.1, 2022 ರಿಂದ ಡಿಸೆಂಬರ್ 31, 2022ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು…

Read More

ಮಡಿಕೇರಿ ಜ.3 : ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು 2022 ರ ಡಿಸೆಂಬರ್, 31 ರವರೆಗೆ ಮಾನ್ಯತೆ ಇರುವ, ವಿಕಲಚೇತನರ ಪಾಸ್‍ಗಳನ್ನು 2023 ರ ಫೆಬ್ರವರಿ, 28 ರವರೆಗೆ ಮಾನ್ಯ ಮಾಡಲಾಗಿದೆ. 2022 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳನ್ನು 2022 ರ ಡಿಸೆಂಬರ್, 26 ರಿಂದ ವಿತರಿಸಲು ಅವಕಾಶ ಕಲ್ಪಿಸಿದ್ದು ಆನ್‍ಲೈನ್‍ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2023 ನೇ ಸಾಲಿನ ಪಾಸುಗಳ ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕ ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಅಥವಾ ಡಿ.ಡಿ.ರೂಪದಲ್ಲಿ ಪಾವತಿಸಿ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829ರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.3  : ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2022-23 ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸಿಯಾಗಿರುವ 20 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ಜನವರಿ, 13 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ(ದೂ.ಸಂ.08272-228427) ಮತ್ತು ಕೊಡಗು ಜಿಲ್ಲೆಯಲ್ಲಿರುವ ಗೃಹರಕ್ಷಕದಳದ ಘಟಕ ಕಚೇರಿಯ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು. ಘಟಕಾಧಿಕಾರಿಗಳ ವಿವರ ಮಡಿಕೇರಿ ಘಟಕ ವೈ.ಎನ್.ಕವನ್‍ಕುಮಾರ್ 9448204356, ಭಾಗಮಂಡಲ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಎಚ್.ಸಿ.ತಿಮ್ಮು 9663765849, ಕುಶಾಲನಗರ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಎಸ್.ಆರ್.ದೇವರಾಜು 9482729233, ಶನಿವಾರಸಂತೆ ಈ.ಬಿ.ಲೋಕೇಶ 9902047075 ಇವರಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು…

Read More