ಲೇಖಕ: admin

ಮಡಿಕೇರಿ ಜ.3 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ವಿತರಿಸಿದರು. ನಗರದ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೆಯೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅತೀ ಹೆಚ್ಚು ಅಂಕ ಪಡೆದ 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದರು. ಬಳಿಕ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಉದ್ಯೋಗ ಪಡೆಯುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಸಮಯವನ್ನು ವ್ಯರ್ಥ ಮಾಡದೆ ಇರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂದು ಪುಟ್ಟರಾಜು ಅವರು ಹೇಳಿದರು. ಕಳೆದ 2022 ರ…

Read More

ಮಡಿಕೇರಿ ಜ.3 : 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ…

Read More

ಮಡಿಕೇರಿ ಜ.3 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಜ.4 ರಂದು ಕೊಡಗಿನಲ್ಲಿ ಲಭ್ಯ ಇರಲಿದ್ದಾರೆ. ಗ್ಯಾಸ್ಟ್ರೋಎಂಟೆರಾಲಜಿ ಮತ್ತು ಹೆಪಟಾಲಜಿ ತಜ್ಞ ಡಾ. ದೇವರಾಜ ಆರ್. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4ರ ವರೆಗೆ ವಿರಾಜಪೇಟೆಯ ಕೂರ್ಗ್ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 2ರ ವರೆಗೆ ನಾರಾಯಣ ಮೆಡಿಕಲ್ ಸೆಂಟರ್ (ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟರ್ ಸೈನ್ಸ್) ನಲ್ಲಿ ದೊರೆಯಲಿದ್ದಾರೆ. ಕರುಳಿನ ಕಾಯಿಲೆಗಳು, ಕಾಮಲೆ, ವಾಂತಿಯಲ್ಲಿ ರಕ್ತ, ಗುದನಾಳದ ರಕ್ತಸ್ರಾವ, ಎದೆಯುರಿ, ಡೆಸ್ಫೇಜಿಯಾ, ಜೀರ್ಣಾಂಗದ ಸಮಸ್ಯೆಗಳು, ಪಿತ್ತಕೋಶ ಮತ್ತು ಪ್ಯಾಂಕ್ರಿಯಾಟಿಕ್ ಅಸ್ವಸ್ಥತೆಗಳ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8884458890, 9513408004, 8197623892 ಸಂಪರ್ಕಿಸಬಹುದಾಗಿದೆ. ಪ್ರಸೂತಿ ಮತ್ತು ಸ್ತ್ರೀ ರೋಗ : ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಕುಶಾಲನಗರದ ನಾರಾಯಣ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಪಾಸಣೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ 4 ಗಂಟೆ…

Read More

ಮಡಿಕೇರಿ ಜ.3 :   ವಿದ್ಯಾರ್ಥಿಗಳು ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಉತ್ತಮ ಭವಿಷ್ಯಕ್ಕೆ ಗ್ರಾಮದಲ್ಲಿರುವ ಅಂಗನವಾಡಿಗಳನ್ನು ವಿದ್ಯಾರ್ಥಿಗಳಿಗೆ ಪೂರಕವಾಗುವ ಗ್ರಂಥಾಲಯವನ್ನಾಗಿ ಮಾರ್ಪಾಡು ಮಾಡಬೇಕು ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಮಾ ಮಹಾದೇವನ್ ಅಭಿಪ್ರಾಯಪಟ್ಟರು. ಹೊದ್ದೂರು ಗ್ರಾ.ಪಂ ಮತ್ತು ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಮತ್ತು  ಕಾನ್ಸಿರಾಂಜೀ ನಗರ ಪಾಲೆಮಾಡಿನ ಸಾವಿತ್ರಿ ಬಾಯಿ ಫುಲೆ ಗ್ರಂಥಾಲಯಕ್ಕೆ ಭೇಟಿ ನೀಡಿದ  ಉಮಾ ಮಹಾದೇವನ್  ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಪ್ರಸಂಶಿಸಿದರು. ಬಳಿಕ ಮಾತನಾಡಿದ ಅವರು ಗ್ರಂಥಾಲಯಗಳಲ್ಲಿ ದೇಶದ ಗಣ್ಯ ವ್ಯಕ್ತಿಗಳು, ಗ್ರಾಮೀಣ ಮಟ್ಟದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು  ಮತ್ತು ಗ್ರಾಮೀಣ ಮಟ್ಟದ ಸಾಧಕರ  ಭಾವಚಿತ್ರಗಳನ್ನು ಅಳವಡಿಸಬೇಕು. ಇದರಿಂದ ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯುತ್ತಾರೆ. ದೇಶದ ಅಭಿವೃದ್ಧಿ ಎಂದರೆ ಇಂದಿನ ವಿದ್ಯಾರ್ಥಿಗಳನ್ನು ಭವಿಷ್ಯ ಭಾರತಕ್ಕೆ ಉತ್ತಮ ಪ್ರಜೆಗಳನ್ನಾಗಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗುವಂತೆ ಮಕ್ಕಳಿಗೆ ಉತ್ತಮ ಬೋಧಕರನ್ನು ಒದಗಿಸಬೇಕು ಮತ್ತು ಕೌಶಲ್ಯ…

Read More

ಮಡಿಕೇರಿ, ಜ.3: ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  ಗಮನ ಸೆಳೆಯಿತು. “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು. ಸಮಾವೇಶದ ಕೇಂದ್ರ ವಿಷಯದಡಿ ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು, ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭ್ಯಾಸಗಳು, ಸ್ವಾವಲಂಬನೆಗಾಗಿ ಪರಿಸರ ವ್ಯವಸ್ಥೆ ಆಧಾರಿತ ವಿಧಾನಗಳು ಹಾಗೂ ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವೀನ್ಯತೆ’ ಎಂಬ ಉಪ…

Read More

ಮಡಿಕೇರಿ ಜ.3 : ನಗರದ ತ್ಯಾಗರಾಜ ಕಾಲೋನಿಯಲ್ಲಿರುವ ‘ತಣಲ್’ ಆಶ್ರಮದ ಪ್ರಯತ್ನದ ಫಲವಾಗಿ ಮಹಿಳೆಯೊಬ್ಬರು 9 ವರ್ಷಗಳ ನಂತರ ತನ್ನ ಪತಿಯ ಜೊತೆಯಾಗಿದ್ದಾರೆ. ಮಾನಸಿಕ ಸಮಸ್ಯೆಯಿಂದಾಗಿ ಕುಟುಂಬದವರಿಂದ ದೂರವಾಗಿದ್ದ ಹರಿಯಾಣ ಮೂಲದ ದರ್ಶನ ಕಳೆದ ನಾಲ್ಕು ವರ್ಷಗಳಿಂದ ‘ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ 32 ವರ್ಷಗಳ ಹಿಂದೆ ದೆಹಲಿ ಮೂಲಕ ಲೆಹರ್ ಸಿಂಗ್ ಎಂಬವರೊಂದಿಗೆ ವಿವಾಹವಾಗಿದ್ದ ದರ್ಶನ. ಸಮಸ್ಯೆಗಳ ನಡುವೆ ದೆಹಲಿಯಲ್ಲಿ ತನ್ನ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದರ್ಶನ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ಪೊಲೀಸ್ ಠಾಣೆಗೆ ದೂರು ನೀಡದರೂ ಯಾವುದೇ ಸುಳಿವು ದೊರೆತ್ತಿರಲಿಲ್ಲ. 2018ರ ಜುಲೈನಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ದರ್ಶನ ಅವರನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು. ಸಾಮಾಜಿಕ ಸಂಸ್ಥೆಯಾಗಿರುವ ತಣಲ್ ಆಕೆಯನ್ನು ಕರೆದುಕೊಂಡು ಬಂದು ಪೋಷಣೆಗೆ ಮುಂದಾಯಿತು. ಇದೀಗ ದರ್ಶನ ಆರೋಗ್ಯದಲ್ಲಿ ಶೇ.80…

Read More

ಮಡಿಕೇರಿ ಜ.3  : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವತೋಮುಖ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಶ್ರೇಯಾಂಕ ನೀಡುವ ಸಲುವಾಗಿ  ಜ.4 ಮತ್ತು 5 ರಂದು  ನ್ಯಾಕ್ ಸಂಸ್ಥೆಯು ಕಾಲೇಜಿನ ಭೇಟಿ ನೀಡುತ್ತಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಕೆ.ಸಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜ.4 ರಂದು  ಮಧ್ಯಾಹ್ನ 12 ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.3 : ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ವತಿಯಿಂದ 8ನೇ ವಾರ್ಷಿಕ ಗ್ರಾಮೀಣ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಎಂ.ಎಸ್.ಕಾಂತಿ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಪರಮೇಶ್ವರ ಪರಿಶಿಷ್ಟ ಪಂಗಡದ ಜನಾಂಗ ಬಾಂಧವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಗ್ರಾಮೀಣ ಕೂಟವನ್ನು ಆಯೋಜಿಸಲಾಗಿದೆ. ಇದು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು. ಯುವಕರು ಯುವತಿಯರು ಸಂಘಟನಾತ್ಮಕವಾಗಿ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಸರ್ಕಾರ ಪರಿಶಿಷ್ಟ ಪಂಗಡದವರಿಗೆ ಹಲವು ಯೋಜನೆಗಳನ್ನು ಜಾರಿಗೆ…

Read More

ಮಡಿಕೇರಿ, ಜ.3 :  ವಿದ್ಯಾರ್ಥಿಗಳು ವಿಜ್ಞಾನಿಗಳ ಅನ್ವೇಷಣೆ ಹಾಗೂ ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಅಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ  ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭಾಶಯ ತಿಳಿಸಿದರು. ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ…

Read More