ಲೇಖಕ: admin

ಮಡಿಕೇರಿ ಮಾ.9 :  ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿ.ಐ.ಟಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಬಿಜೆಪಿ ಕೃಷಿ ಮಹೋರ್ಚದ ನಿರ್ದೇಶಕಿ  ಯಮುನಾ ಅಶೋಕ್ ಚಂಗಪ್ಪ,  ಸ್ತ್ರೀ – ಪುರುಷರಿಬ್ಬರು ಸಮಾನರು, ಆಡು ಮುಟ್ಟದ ಸೊಪ್ಪಿಲ್ಲ ಸ್ತ್ರೀ ಪ್ರವೇಶಿಸದ ಕ್ಷೇತ್ರವಿಲ್ಲ ಎಂಬ ಮಾತಿನಂತೆ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ವೈಜ್ಞಾನಿಕ, ವೈಮಾನಿಕ ಬಾಹ್ಯಾಕಾಶ ಹೀಗೆ ಹಲವಾರು ಕ್ಷೇತ್ರದಲ್ಲಿ ಸ್ತ್ರೀ ಪುರುಷರಿಗೆ ಸರಿಸಮಾನವಾಗಿ ತನ್ನ ಅಸ್ತಿತ್ವವನ್ನು ಸ್ಥಾಪಿಸಿದ್ದಾರೆ ಎಂದು ತಿಳಿಸಿದರು. ಮಹಿಳಾ ಸಾಧಕಿಯರ ವಿಚಾರಧಾರೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಸಿ.ಐ.ಟಿ.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜು,   ಮಹಿಳೆಯರ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ರೋಹಿಣಿ ತಿಮ್ಮಯ್ಯ ಮತ್ತು ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಐ.ಕೆ.ಯಮುನ   ನೇತೃತ್ವದಲ್ಲಿ  ನಡೆದ ಕಾರ್ಯಕ್ರಮದಲ್ಲಿ   ಸಿ.ಐ.ಟಿ.ಪ್ರಾಧ್ಯಾಪಕ ವೃಂದ, ಬೋಧಕೇತರ ವೃಂದ, ವಿದ್ಯಾರ್ಥಿ ವೃಂದ ಪಾಲ್ಗೊಂಡಿದ್ದರು. 

Read More

ಮಡಿಕೇರಿ ಮಾ.9 : ಕೆದಕಲ್ ಶ್ರೀ ಭದ್ರಕಾಳೇಶ್ವರಿ ದೇವಾಲಯದ ವಾರ್ಷಿಕೋತ್ಸವವು ಮಾ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿ, ದೇವರ ದರ್ಶನ ಹಾಗೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.

Read More

ನಾಪೋಕ್ಲು ಮಾ.9 : ಮಡಿಕೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮದ ಹಳೆ ತಾಲೂಕು ಅಂಗನವಾಡಿ ಶಿಕ್ಷಕಿ ಭಾಗ್ಯವತಿ ಉತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪಡೆದರು. ಇವರು ಕೇಂದ್ರ ನಿರ್ವಹಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯಿಂದ ಸಿಗುವ ಸೌಲಭ್ಯ ಹಾಗೂ ಶಿಕ್ಷಣ ನೀಡಿದ್ದಾರೆ. ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳನ್ನು ರಚಿಸಿ ಮಹಿಳೆಯರಿಗೆ ಉತ್ತಮ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಮಹಿಳೆಯರು ಅಭಿವೃದ್ಧಿ ಹೊಂದುವಲ್ಲಿ ಕಾರಣಕರ್ತರಾಗಿದ್ದಾರೆ. ಮಾತೃವಂದನಾ, ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಫಲಾನುಭವಿಯವರಿಗೆ ದೊರಕಿಸಿಕೊಟ್ಟಿದ್ದಾರೆ. ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತದಿಂದ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ನೀಡಲಾಗಿದೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಮಾ.9 : ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆ ಸಲ್ಲಿಸಿದರು. ದೇವಾಲಯದಲ್ಲಿ ತುಲಾಭಾರ ಸೇವೆ ಬಳಿಕ, ಭಕ್ತರಿಂದ ಕಾಫಿ, ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಲಾಯಿತು. ನಂತರ ದೇವಾಲಯದಲ್ಲಿ ಮಹಾಪೂಜೆ, ಎತ್ತುಪೋರಾಟ ಜರುಗಿತು. ಅಪರಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಬಳಿಕ ದೇವರ ನೃತ್ಯಬಲಿ ಜರುಗಿತು. ತಂತ್ರಿ ಸಂತೋಷ್ ಹೆಬ್ಬಾರ್, ಅರ್ಚಕರಾದ ಸುರೇಶ್ ಶರ್ಮ, ರಮೇಶ್ ಶರ್ಮ ಹಾಗೂ ಸುಧೀರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಆನಂತರ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಉತ್ಸವದಲ್ಲಿ ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಬದಂಚೆಟ್ಟೀರ ನಾಣಯ್ಯ, ಕೈಯ್ಯಂದಿರ ರಮೇಶ್, ಆಡಳಿತ ಮಡಳಿ ಅಧ್ಯಕ್ಷ ಮುಂಡ0ಡ ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ…

Read More

ಮಡಿಕೇರಿ ಮಾ.9 : ಭಾರತೀಯ ವಾಯುಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗಿನ ಯುವತಿ ಫ್ಲೈಟ್ ಲೆಫ್ಟಿನೆಂಟ್ ಆಗಿದ್ದ ಐನಂಡ ಡಾ.ಬಿ.ಕಾವೇರಮ್ಮ ಅವರು ಇದೀಗ ಬಡ್ತಿ ಹೊಂದಿ ಸ್ಕ್ವಾಡ್ರನ್ ಲೀಡರ್ ಆಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು ಉತ್ತರ ಪ್ರದೇಶದ ವಾಯುನೆಲೆಗೆ ನಿಯುಕ್ತಿಗೊಂಡಿದ್ದಾರೆ. ಪೊನ್ನಂಪೇಟೆಯ ಐನಂಡ ಬೋಪಣ್ಣ ಹಾಗೂ ಭಾರತಿ ದಂಪತಿ ಪುತ್ರಿಯಾಗಿರುವ ಇವರು ಮುಕ್ಕಾಟಿರ ಭರತ್ ಬಿದ್ದಯ್ಯ ಅವರ ಪತ್ನಿ.

Read More

ನಾಪೋಕ್ಲು ಮಾ.9 : ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವೈನಾಟ್ ಕುಲವನ್ ದೈವಸ್ಥಾನದ ವಯನಾಟ್ ಕುಲವನ್ ದೈವ ಕಟ್ಟು ಮಹೋತ್ಸವ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. 300 ವರ್ಷಗಳ ನಂತರ 50 ಲಕ್ಷ ರೂ.ವೆಚ್ಚದಲ್ಲಿ ಮಹೋತ್ಸವ ನಡೆದಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀ ಶಾಸ್ತಾವು ದೇವಸ್ಥಾನದಿಂದ ಹಸಿರುವಾಣಿ ಮೆರವಣಿಗೆ ಮೂಲಕ ಚಾಲನೆ ನೀಡಲಾಯಿತು. ಮುಂಜಾನೆಯಿಂದಲ್ಲೇ ಶ್ರೀ ಕಾರ್ನೋನ್ ದೈವ, ಶ್ರೀ ಕೋರಚ್ಚನ್ ದೈವ, ಶ್ರೀ ಕಂಡನಾರ್ ಕೇಳನ್ ದೈವ, 2ರಿಂದ ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ ನಡೆಯಿತು. ಅಪರಾಹ್ನ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ ನಡೆಯಿತು. ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ವೈಷ್ಣವಾಂಶ, ಶೈವಾಂಶ ಶಕ್ತಿಯ ವಿವಿಧ ಅವತಾರ ಶಕ್ತಿಯನ್ನು, ದೈವಗಳನ್ನು ಕೋಲ ರೂಪದಲ್ಲಿ ಆರಾಧಿಸಲಾಗುತ್ತಿದ್ದು, ಅವುಗಳಲ್ಲಿ ವಯನಾಟ್ ಕುಲವನ್ ಸಹ ಒಂದು. ಚೈತನ್ಯ ಮೂರ್ತಿ ಶ್ರೀ ಪರಮಶಿವನ ಅಂಶಾವತಾರದ ಆದಿ…

Read More

ಬೆಂಗಳೂರು ಮಾ.9 :  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತೃದಲ್ಲಿ ಆಯೋಜಿಸಿದ್ದ ಮಹಾಲಕ್ಷ್ಮೀ ಉತ್ಸವ 2023 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಇದೇ ಸಂದರ್ಭ  ಪದ್ಮಭೂಷಣ ಡಾ.ರಾಜ್ ಕುಮಾರ್ ರವರ ಪ್ರತಿಮೆ ಅನಾವರಣ  ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಗೋಪಾಲಯ್ಯ, ಮಾಜಿ ಶಾಸಕ ನೆ.ಲ ನರೇಂದ್ರಬಾಬು, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ದ್ಮೀನಾರಾಯಣ, ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ, ಚಲನಚಿತ್ರ ನಟ ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಮಾ.9 : ಅರಣ್ಯ ಇಲಾಖೆಯ ನಿವೃತ್ತ ನೌಕರ ಬೆಟ್ಟಗೇರಿಯ ಚಾಳಿಯಂಡ ಸುರೇಶ್ ಚಂಗಪ್ಪ (64) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಮಡಿಕೇರಿ ಮಾ.8 : ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಮಾರ್ಚ್ 12 ರಂದು ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲಿಸಿದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸೂಕ್ತ ವ್ಯವಸ್ಥೆಗಳ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ ನೀಡಿದರು. ಸಚಿವ ಗೋಪಾಲಯ್ಯ, ಮಂಡ್ಯ ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ನವದೆಹಲಿ ಮಾ.8 : ಅಗ್ನಿವೀರ್ ಯೋಜನೆಯಡಿ, ಸಂಕುಚಿತ ಸಮಯದ ಚೌಕಟ್ಟಿನಲ್ಲಿ ತರಬೇತಿಯನ್ನು ಪೂರ್ಣಗೊಳಿಸಬೇಕು. ದೈಹಿಕ ಕಂಡೀಷನಿಗ್, ಶಸ್ತಾಸ್ತ್ರ ತರಬೇತಿ, ಸಣ್ಣ ಶಸ್ತ್ರಾಸ್ತ್ರಗಳ ನಿರ್ವಹಣೆ ಮತ್ತು ಮಿಲಿಟರಿ ಪೋಲೀಸ್‌ನ ಇತರ ಕಾರ್ಯಾಚರಣೆಯ ಅಂಶಗಳೂ ಅಗ್ನಿವೀರ್ ನಲ್ಲಿ ಅಡಕವಾಗಿರುತ್ತದೆ. ದೇಶ ಸೇವೆಯ “ಅಗ್ನಿವೀರ್” ಪರಿಕಲ್ಪನೆಯಡಿ ಲಕ್ಷಾಂತರ ಯುವ ಆಕಾಂಕ್ಷಿಗಳು ತರಬೇತಿಗಾಗಿ ಮುಂದೆ ಬಂದಿದ್ದಾರೆ. ಅಗ್ನಿವೀರ್ ನೇಮಕಾತಿಗಳ ಎರಡನೇ ಬ್ಯಾಚ್ ಆಗಿದ್ದು, ಕೇಂದ್ರದಲ್ಲಿ 350 ಕ್ಕೂ ಹೆಚ್ಚು ಅಗ್ನಿವೀರ್ ತರಬೇತಿ ನಡೆಯುತ್ತಿದೆ. ಮೊದಲ ಬ್ಯಾಚ್ ಪ್ರಸ್ತುತ ಹತ್ತನೇ ವಾರದ ತರಬೇತಿಯಲ್ಲಿದೆ, ಇಲ್ಲಿ ಎಲ್ಲರೂ ಪುರುಷರೇ ಇದ್ದಾರೆ. ಎರಡನೇ ಬ್ಯಾಚ್ ನಲ್ಲಿ 100 ಯುವತಿಯರು ಹಾಗೂ 140 ಪುರುಷ ನೇಮಕಾತಿ ನಡೆಯಲಿದೆ. ಮಾರ್ಚ್ 1 ರಿಂದಲೇ ತರಬೇತಿ ಪ್ರಾರಂಭವಾಗಿದ್ದು, 31 ವಾರಗಳ ತರಬೇತಿ ನಡೆಯಲಿದೆ. ತರಬೇತಿ ಬಳಿಕ ಯುವಕ, ಯುವತಿಯರು ಕಾರ್ಪ್ಸ್ ಆಫ್ ಮಿಲಿಟರಿ ಪೋಲೀಸ್ (ಸಿಎಂಪಿ) ಆಗಿ ಹೊರಹೊಮ್ಮಲಿದ್ದಾರೆ. ದೈನಂದಿನ ಕರ್ತವ್ಯಗಳು ಮಿಲಿಟರಿ ಪೋಲೀಸರ ಪಾತ್ರವನ್ನು ಹೋಲುತ್ತವೆ. ಕಂಟೋನ್ಮೆಂಟ್‌ನ ಶಿಸ್ತು, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗಳನ್ನು…

Read More