ವಿರಾಜಪೇಟೆ ಜ.30 : ವಿರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ಥಳಿಯ ಪುರಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ನೃತ್ಯಾ ಸ್ಪರ್ಧಾ ಕಾರ್ಯಕ್ರಮದಲ್ಲಿ ಅರಮೇರಿಯ ಎಸ್ಎಂಎಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ನೃತ್ಯ ಸ್ಪರ್ಧೆಯಲ್ಲಿ ಶ್ರೇಯ ಮತ್ತು ತಂಡ ಪ್ರಥಮ ಸ್ಥಾನ ಹಾಗೂ ತಷ್ಮಾ ಮತ್ತು ತಂಡ ತೃತೀಯ ಸ್ಥಾನ ಪಡೆದರೆ ಛಧ್ಮ ವೇಶ ಸ್ಪರ್ಧೆಯಲ್ಲಿ ಕೆ.ಎನ್. ದೀಕ್ಷಾ ಪ್ರಥಮ ಸ್ಥಾನ ಗಳಿಸಿರುವುದಾಗಿ ಶಾಲಾ ಪ್ರಾಂಶುಪಾಲರು ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಗುರುಗಳಾದ ಹೇಮಾವತಿ ಕಾಂತರಾಜ್, ಕಾವ್ಯಶ್ರೀ ನೃತ್ಯಾಭ್ಯಾಸ ಕಲಿಸುತ್ತಿದ್ದಾರೆ. ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.
ಲೇಖಕ: admin
ಮಡಿಕೇರಿ ಜ.30 : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು, ನಿರ್ದೇಶಕರು, ಕಾಲೇಜು ಉಪನ್ಯಾಸಕರು ಸನ್ಮಾನಿಸಿ ಗೌರವಿಸಿದರು. ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕಿಯಾಗಿರುವ ರಾಣಿ ಮಾಚಯ್ಯ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಎಲ್ಲರು ಸಂತಸ ವ್ಯಕ್ತಪಡಿಸಿ, ಅನಿಸಿಕೆ ಹಂಚಿಕೊಂಡರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಫೀ.ಮಾ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ನನ್ನ ತಂಡವನ್ನು ಪ್ರತಿನಿಧಿಸಿ ರಾಜ್ಯ ಹನ್ನೆರಡು ಜಿಲ್ಲೆ, ದೇಶದ 13 ರಾಜ್ಯದಲ್ಲಿ ಪ್ರದರ್ಶನ ನೀಡಿದ್ದಾರೆ. ನನಗೆ ಸಂದಿರುವ ಪ್ರಶಸ್ತಿಗೆ ನನ್ನ ಎಲ್ಲಾ ವಿದ್ಯಾರ್ಥಿಗಳು ಕಾರಣ ಎಂದರು. ಜಾತಿ, ಧರ್ಮ ಭೇದವಿಲ್ಲದೆ ಎಲ್ಲಾ ವರ್ಗದ ಮಂದಿ ನನಗೆ ಸಹಕಾರ ನೀಡಿದ್ದಾರೆ. ಕೊಡವ ವಿದ್ಯಾರ್ಥಿಗಳು ಮಾತ್ರವಲ್ಲದೆ ಇತರೆ ಜನಾಂಗ,…
ಮಡಿಕೇರಿ ಜ.30 : ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ಕ್ಲಬ್ ಮಹೇಂದ್ರ ಸಹಯೋಗದಲ್ಲಿ ನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ನಡೆಯಿತು. ನಗರದ ಸುದರ್ಶನ ವೃತದಿಂದ ಖಾಸಗಿ ಬಸ್ ನಿಲ್ದಾಣದವರೆಗೆ 20ಕ್ಕೂ ಹೆಚ್ಚು ಪೊಲೀಸರಿಂದ ಬೈಕ್ ಜಾಥ ನಡೆಯಿತು. ಜಾಥದಲ್ಲಿ ಅಪಘಾತದ ಬಗ್ಗೆ ಹಾಗೂ ಟ್ರಾಫೀಕ್ ನಿಯಮ ಸರಿಯಾಗಿ ಪಾಲಿಸುವಂತೆ ವಾಹನ ಸವಾರರಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಾಗೂ ಕ್ಲಬ್ ಮಹೀಂದ್ರದ ಸಿಬ್ಬಂದಿಗಳು ಭಾಗಿಯಾಗಿದ್ದರು.
ವಿರಾಜಪೇಟೆ ಜ.30 : ವಿದ್ಯಾರ್ಥಿಗಳು ತಮ್ಮ ಜೀವನದ ಭವಿಷ್ಯವನ್ನು ಕ್ರೀಡೆಯಲ್ಲಿಯೇ ರೂಪಿಸಿ ಕೊಳ್ಳುವಂತಾಗಬೇಕು ಎಂದು ಭಾರತದ ಪ್ರತಿಷ್ಟಿತ ಫುಟ್ಬಾಲ್ ಲೀಗ್ನಲ್ಲಿ ಅನುಭವದ ಐಎಸ್ಎಲ್ ಆಟಗಾರ ತಮಿಳುನಾಡಿನ ಧನ್ಪಾಲ್ ಗಣೇಶ್ ಹೇಳಿದರು. ವಿರಾಜಪೇಟೆ ನಗರದ ಪ್ರಗತಿ ವಿದ್ಯಾಸಂಸ್ಥೆಯ ಮೈದಾನದಲ್ಲಿ 8 ರಿಂದ 13 ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮಕ್ಕಳ ಮುಂದಿನ ಭವಿಷ್ಯಕ್ಕೆ ಫುಟ್ಬಾಲ್ ಕ್ರೀಡೆಯು ಸಹಕಾರಿಯಾಗಲಿದ್ದು ಉತ್ತಮ ಕ್ರೀಡಾಪಟುಗಳಾಗಿ ಜಿಲ್ಲೆ, ರಾಜ್ಯ , ನಂತರ ರಾಷ್ರಮಟ್ಟದಲ್ಲಿಯು ಭಾಗವಹಿಸುವಂತೆ ಧನ್ಪಾಲ್ ಹಾರೈಸಿದರು. ಪ್ರಗತಿ ಶಾಲಾ ಮುಖ್ಯಸ್ಥರು ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ 8 ರಿಂದ 13 ವರ್ಷದ ಮಕ್ಕಳಿಗೆ ಫುಟ್ಬಾಲ್ ಪಂದ್ಯಾವಳಿ ಬಗ್ಗೆ ಮಾಹಿತಿ ನೀಡುವ ಮೂಲಕ ಕಳೆದ ನಾಲ್ಕು ವಾರಗಳಿಂದಲು ಈ ಮೈದಾನದಲ್ಲಿ ವಿದ್ಯಾರ್ಥಿಗಳ 18 ತಂಡಗಳ ಪಂದ್ಯಾವಳಿ ನಡೆಯುತ್ತಿದ್ದು ನಂತರ ಅಮ್ಮತ್ತಿಯ ಮೈದಾನದಲ್ಲಿ ಅಂತಿಮ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ. ಕೊಡಗು ಫುಟ್ಬಾಲ್ ಅಷೋಸಿಯೇಶನ್…
ಮಡಿಕೇರಿ ಜ.30 : ಕನ್ನಡಕ್ಕೆ ಬೇರೆ ಭಾಷೆಯವರಿಂದ ಯಾವುದೇ ತೊಂದರೆ ಇಲ್ಲ. ಕನ್ನಡಿಗರಿಂದಲೇ ತೊಂದರೆ ಇರುವುದು. ಕನ್ನಡಿಗರು ಕನ್ನಡ ಮಾತನಾಡಿದರೆ ಸಾಕು ಕನ್ನಡ ಉಳಿದು ಬೆಳೆಯುತ್ತದೆ ಎಂದು ಗೋಣಿಕೊಪ್ಪಲಿನ ಉದ್ಯಮಿ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ನುಡಿದರು. ಗೋಣಿಕೊಪ್ಪಲಿನ ನವಮಿ ಸಭಾಂಗಣದಲ್ಲಿ ನಡೆದ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಉದ್ಘಾಟನಾ ಸಮಾರಂಭದಲ್ಲಿ ಹೋಬಳಿ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಕನ್ನಡದ ಬೆಳವಣಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೋಬಳಿ ಮಟ್ಟದಲ್ಲೂ ಘಟಕಗಳನ್ನು ರಚಿಸಿಕೊಂಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಜವಾಬ್ದಾರಿ ನೀಡಿದರು. ನಂತರ ಘಟಕದ ಎಲ್ಲಾ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಸ್ವೀಕರಿಸುವ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಘಟಕದ ನೂತನ ಗೌರವ ಕಾರ್ಯದರ್ಶಿಯಾಗಿ ತಿರುನೆಲ್ಲಿಮಾಡ…
ವಿರಾಜಪೇಟೆ ಜ.30 : ಕ್ರೀಡಾ ಚಟುವಟಿಕೆಗಳು ಕ್ರೀಡಾಪಟುಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ಗೆಳೆತನ ಹಾಗೂ ಸವಾಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಚಾಣಕ್ಯ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಎಂ.ಬಿ. ಮಾಚಮ್ಮ ಅಭಿಪ್ರಾಯಪಟ್ಟರು. ಪಟ್ಟಣದ ಚಾಣಕ್ಯ ಎಜುಕೇಷನ್ ಟ್ರಸ್ಟ್ ವತಿಯಿಂದ ಐಮಂಗಲದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾಸಂಸ್ಥೆಗಳು ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳು ಪಠ್ಯಕ್ಕೆ ಪೂರಕವಾಗಿ ಆಯೋಜನೆಗೊಂಡರೆ ಇನ್ನಷ್ಟು ಉತ್ತಮ ಫಲಿತಾಂಶವನ್ನು ಕಾಣಲು ಸಾಧ್ಯ ಎಂದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಾಣಕ್ಯ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ ಸಿ.ಎನ್.ಕವಿತಾ ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಅಥವಾ ಕ್ರೀಡಾಕೂಟಗಳು ಬೆಳೆಸುತ್ತವೆ. ಕ್ರೀಡೆಗಳು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಗಟ್ಟಿಗೊಳಿಸಲು ಸಹಕಾರ ನೀಡುತ್ತವೆ ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಎಂ.ಎಸ್.ಸುಬ್ಬಯ್ಯ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದಷ್ಟು ಒಳಿತು. ಇದು ಶಿಕ್ಷಣದೊಂದಿಗೆ ಏಳಿಗೆಯನ್ನು…
ಮಡಿಕೇರಿ ಜ.30 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಫೆ.4 ರಂದು ಮಡಿಕೇರಿಯಲ್ಲಿ ಸಾರ್ವಜನಿಕರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಮುಖರು ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಆಸ್ಪತ್ರೆ ಕಾರ್ಯದರ್ಶಿ ಕುಪ್ಪಂಡ ರಾಜಪ್ಪ, ಕೊಡಗು ಪ್ರೆಸ್ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಗು ಜಿಲ್ಲಾ ಘಟಕ, ಅಶ್ವಿನಿ ಆಸ್ಪತ್ರೆ, ಮೈಸೂರು ಸುಯೋಗ್ ಆಸ್ಪತ್ರೆ, ಮಡಿಕೇರಿಯ ವಾಕ್ ಹಾಗೂ ಶ್ರವಣ ಇನ್ಪ್ಲಾಂಟ್ ಕ್ಲಿನಿಕ್ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ತನಕ ನುರಿತ ವೈದ್ಯರಿಂದ ವಿವಿಧ ರೀತಿಯ ತಪಾಸಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಅಶ್ವಿನಿ ಆಸ್ಪತ್ರೆಯಲ್ಲಿ ಈಗಾಗಲೇ ಅಗತ್ಯ ವೈದ್ಯಕೀಯ ಸೇವೆಗಳು ದೊರೆಯುತ್ತಿವೆ. ಮುಂದಿನ ದಿನಗಳಲ್ಲಿ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಇದರಿಂದ ಜಿಲ್ಲೆಯ ಜನರಿಗೆ ಮತ್ತಷ್ಟು ವೈದ್ಯಕೀಯ ಸೇವೆ ದೊರೆಯಲಿದೆ ಎಂದ ಅವರು, ಸಾರ್ವಜನಿಕರು ಉಚಿತ ಆರೋಗ್ಯ…
ಮಡಿಕೇರಿ ಜ.30 : ಚೆಟ್ಟಳ್ಳಿಯ ಪ್ರೌಡಶಾಲಾ ಮೈದಾನದಲ್ಲಿ ಬಟ್ಟೀರ ಕುಟುಂಬಸ್ಥರ ಸಮ್ಮುಖದಲ್ಲಿ ಈಗಲ್ ಐಸ್ ಸೂಟರ್ಸ್ ಬಟ್ಟೀರ ತೆಂಗಿನಕಾಯಿ ಗುಂಡುಹೊಡೆಯುವ ಸ್ಪರ್ಧೆ ನಡೆಯಿತು. ಹಿರಿಯರಾದ ಬಟ್ಟೀರ ದೇವಯ್ಯ, ನಿವೃತ್ತ ಏರ್ಫೋರ್ಸ್ ಅಧಿಕಾರಿ ಪುತ್ತರಿರ ಗಣೇಶ್ ಭೀಮಯ್ಯ, ಬಟ್ಟಿರ ಬೋಪಯ್ಯ, ಬಟ್ಟೀರ ರಕ್ಷುಕಾಳಪ್ಪ, ಮಂಗಳೂರು ಬಜ್ಪೆಯ ಸಿಮ್ಸನ್ಸ್ ಹೌಸ್ ನ ಮಾಲೀಕ ರಾಯ್ ಪ್ರಕಾಶ್ ಸಿಮ್ಸನ್ಸ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬಟ್ಟೀರ ರಕ್ಷು ಕಾಳಪ್ಪ, ಸಿಮ್ಸಸನ್, ಬಟ್ಟೀರ ಮುತ್ತಣ್ಣ ತೆಂಗಿನಕಾಯಿಗೆ ಗುಂಡುಹೊಡೆದು ಶೂಟಿಂಗ್ ಸ್ಪರ್ಧೆಗೆ ಚಾಲನೆ ನೀಡಿದರು. ಚೆಟ್ಟಳ್ಳಿಯ ಬಟ್ಟೀರ ಕುಟುಂಬದವರು ಕೊಡವ ಸಂಪ್ರದಾಯ ಉಡುಪಿನಲ್ಲಿ ಪಾಲ್ಗೊಂಡಿದ್ದರು. ಸಮಾರೋಪ: ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವುಕುಮಾರ್ ನಾಣಯ್ಯ ಮಾತನಾಡಿ, ನಾಪೋಕ್ಲುವಿನಲ್ಲಿ ಒಳಾಂಗಣ ಶೂಟಿಂಗ್ ಕೇಂದ್ರ ಸ್ಥಾಪಿಸಲು ಸರಕಾರಕ್ಕೆ ಒತ್ತಾಯಿಸಿದ್ದು ಮುಂದಿನ ಚುನಾವಣೆ ಕಳೆದ ನಂತರ ಶೂಟಿಂಗ್ ಕೇಂದ್ರ ಸ್ಥಾಪನೆಗೆ ಪ್ರಯತ್ನಿಸುವುದಾಗಿ ತಿಳಿಸಿದರು. ಚೆಟ್ಟಳ್ಳಿ ಪ್ರೌಡಶಾಲಾ ಸಂಚಾಲಕ ಹಾಗೂ ಚೆಟ್ಟಳ್ಳಿ…
ಮಡಿಕೇರಿ ಜ.30 : ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.6 ರಂದು ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ನಗರದ ಸಂತಜೋಸೆಫರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಸಂಜೆ 6.30ಕ್ಕೆ ಶುರುವಾಗುವ ನಾಟಕಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕಾರ್ಕಳದ ಯಕ್ಷರಂಗಾಯಣ ಅಭಿನಯಿಸುವ ‘ಪರಶುರಾಮ’ ಸಾತ್ವಿಕ ನಾಟಕವನ್ನು ಶಶಿರಾಜ್ ಕಾವೂರು ರಚಿಸಿದ್ದು, ಡಾ.ಜೀವನ್ರಾಂ ಸುಳ್ಯ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿಬರಲಿದೆ.
ಕುಶಾಲನಗರ ಜ.29 : ಕುಶಾಲನಗರ ತಾಲ್ಲೂಕು ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಫೆ.3 ರಂದು ನಡೆಯಲಿರುವ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್ ಭಾನುವಾರ ಬಿಡುಗಡೆಗೊಳಿಸಿದರು. ಕುಶಾಲನಗರ ತಾಲ್ಲೂಕು ರಚನೆಯಾದ ನಂತರ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಜೈವರ್ಧನ್ ಮನವಿ ಮಾಡಿದರು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪುರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಪುರಸಭೆ ವತಿಯಿಂದ ನಗರದ ಅಲಂಕಾರ ಮಾಡಲಾಗುವುದು ಎಂದರು. ಹಣಕಾಸು ಉಪ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಹಲವು ದಶಕಗಳ ಹೋರಾಟದ ಪ್ರತಿಫಲದಿಂದ ರಚನೆಗೊಂಡ ನಂತರ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕುಶಾಲನಗರ ತಾಲ್ಲೂಕು ಪ್ರಥಮ ಸಮ್ಮೇಳನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಎಂದರು. ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ,ಎಲ್ಲರೂ ಸಮ್ಮೇಳನದ ಯಶಸ್ವಿಗೆ ಸಹಕರಿಸಬೇಕು ಎಂದರು. ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿದರು. ಜಿಲ್ಲಾ ಕಸಾಪ ಸಹ ಕಾರ್ಯದರ್ಶಿ ಡೆನಿಸ್…






