ಲೇಖಕ: admin

ಮೈಸೂರು ಮಾ.8 : ಬೇಸಿಗೆಯ ಹಿನ್ನೆಲೆ ತಾಪಮಾನ ಮಿತಿ ಮೀರುತ್ತಿದೆ. ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶಗಳು ಬೆಂಕಿಗಾಹುತಿಯಾಗುತ್ತಿರುವ ಘಟನೆಗಳು ನಡೆಯುತ್ತಿದ್ದು, ವನ್ಯಜೀವಿಗಳು ಸಾವನ್ನಪ್ಪುತ್ತಿವೆ. ಈ ನಡುವೆ ಮೈಸೂರು ಮೃಗಾಲಯ ಕೂಡ ಅಧಿಕ ತಾಪಮಾನದ ಸಮಸ್ಯೆಯನ್ನು ಎದುರಿಸುತ್ತಿದ್ದು, ಇಲ್ಲಿರುವ ಪ್ರಾಣಿಗಳ ಹಿತಕಾಯುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮೃಗಾಲಯದಲ್ಲಿ 624 ಸಸ್ತನಿಗಳು, 731 ಪಕ್ಷಿಗಳು, 100 ಸರೀಸೃಪಗಳು ಸೇರಿದಂತೆ 1,455 ಪ್ರಾಣಿಗಳಿವೆ. ನಾಲ್ಕು ಬೋರ್ನಿಯನ್ ಒರಾಂಗುಟನ್, ಆರು ಚಿಂಪಾoಜಿಗಳು, ಎರಡು ವೆಸ್ಟರ್ನ್ ಲೋಲ್ಯಾಂಡ್ ಗೊರಿಲ್ಲಾಗಳೂ ಕೂಡ ಇವೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಪ್ರಾಣಿಗಳು ಕೂಡ ತತ್ತರಿಸಿ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳ ಹಿತದೃಷ್ಟಿಯಿಂದ ಸುಮಾರು 130 ವರ್ಷಗಳಷ್ಟು ಹಳೆಯದಾದ ಮೈಸೂರು ಮೃಗಾಲಯದಲ್ಲಿ ಏರ್ ಕೂಲರ್ ಗಳನ್ನು ಅಳವಡಿಸಲಾಗುತ್ತಿದೆ. ಎಸಿಗಳಂತೆಯೇ ಇವು ಕಾರ್ಯನಿರ್ವಹಿಸಲಿವೆ. ಅತಿಯಾದ ತಾಪಮಾನವು ಪ್ರಾಣಿಗಳು ನಿರ್ಜಲೀಕರಣ ಎದುರಿಸುವಂತೆ ಮಾಡುತ್ತದೆ. ಹೀಗಾಗಿ ಇದನ್ನು ತಡೆಗಟ್ಟಲು ಹೆಚ್ಚಿನ ನೀರಿನ ಅಂಶವಿರುವ ಹಣ್ಣುಗಳನ್ನು ಕೂಡ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್…

Read More

ಬೆಂಗಳೂರು ಮಾ.8 : ವಿಮಾನದಲ್ಲಿ ಧೂಮಪಾನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಮಹಿಳೆ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದರು ಎಂದು ಆರೋಪಿಸಲಾಗಿದೆ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಈ ಪ್ರಕರಣ ನಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದರು.

Read More

ಬೆಂಗಳೂರು ಮಾ.8 : ಸಿಗರೇಟ್ ತುಂಡುಗಳನ್ನು ಎಲ್ಲೆಂದರಲ್ಲಿ ಹಾಕುವುದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆಕ್ಷೇಪ ವ್ಯಕ್ತಪಡಿಸಿದೆ. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ತಂಬಾಕು ತಯಾರಕರು ಸೇರಿದಂತೆ ಮಧ್ಯಸ್ಥಗಾರರ ಸಭೆಯನ್ನು ಮಾರ್ಚ್ 15 ರಂದು ಕರೆಯಲಾಗಿದೆ. ಸಿಗರೇಟ್ ತುಂಡು ಕಸ ಹಾಕುವುದಕ್ಕೆ ದಂಡ ವಿಧಿಸಲು ನಿಯಮಗಳನ್ನು ಜಾರಿಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಅವಕಾಶ ನೀಡಲಾಗಿದೆ. ಸಿಗರೇಟ್ ತಯಾರಕರು ಸಿಗರೇಟ್ ತುಂಡುಗಳ ಕಸದಿಂದ ಪರಿಸರ ಮತ್ತು ಆರೋಗ್ಯದ ಅಪಾಯ ಕುರಿತು ಮಾಹಿತಿ ನಮೂದಿಸಬೇಕು. ಸಾರ್ವಜನಿಕ ಪ್ರದೇಶ, ಹೊರಾಂಗಣ, ಒಳಾಂಗಣ ಮತ್ತು ಕೆಲಸದ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಸಂಬoಧಪಟ್ಟ ಅಧಿಕಾರಿಗಳು ದಂಡ ಹಾಕಲಿದ್ದು, ದಂಡ ವಿಧಿಸುವ ನಿಬಂಧನೆಯನ್ನು ಸ್ಥಳೀಯ ಅಧಿಕಾರಿಗಳು ತಮ್ಮ ಬೈಲಾಗಳಲ್ಲಿ ಸೇರಿಸಿಕೊಳ್ಳಬಹುದು ಎಂದು ಮಂಡಳಿ ಹೇಳಿದೆ.

Read More

ಕುಶಾಲನಗರ, ಮಾ.8 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಬೆಳ್ಳಿ‌ ಮಹೋತ್ಸವ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು‌ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ‌ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮಡಿಕೇರಿಯ ರೂಪಾ ಸತೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜಕ್ಕೆ, ತುಂಬಿದ ಕುಟುಂಬಕ್ಕೆ ತಾಯಂದಿರ ಕೊಡುಗೆ ಅಪಾರ. ಎಲ್ಲಾ ಕ್ಷೇತ್ರದಲ್ಲಿ‌ ಮಹಿಳೆ ತನ್ನ ಛಾಪು ಮೂಡಿಸುತ್ತಿದ್ದಾಳೆ. ಕುಟುಂಬದ ಆರೈಕೆ‌ ನಡುವೆ ದೊರೆಯುವ ಬಿಡುವನ್ನು ಉತ್ತಮ‌ ಹವ್ಯಾಸಗಳಿಗೆ ಮೀಸಲಿಡುವ ಮೂಲಕ ಆರೋಗ್ಯಯುತ ಬದುಕಿಗೆ ಹೆಚ್ಚಿನ ಒತ್ತು‌ ನೀಡಬೇಕಿದೆ ಎಂದರು. ಸಾಧನೆಗೆ ಅಡ್ಡಿ ಎಂಬುದು ಯಾವುದು ಇಲ್ಲ. ದೃಢ ಮನಸ್ಸಿನ ಸಂಕಲ್ಪ, ನಿರಂತರ ಅಧ್ಯಯನ, ಪ್ರಯತ್ನಗಳು ಯಶಸ್ಸಿನೆಡೆಗೆ‌‌ ಕೊಂಡೊಯ್ಯುತ್ತದೆ ಎಂದು ಸಲಹೆ ನೀಡಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡಿಗೆ ಕ್ರೀಡಾಶಾಲೆ ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ‌ ಬೋಪಯ್ಯ‌ ಮಾತನಾಡಿ, ಹೆಣ್ಣೆಂದರೆ…

Read More

ಕುಶಾಲನಗರ, ಮಾ.8 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ  ಬೆಳ್ಳಿ‌ ಮಹೋತ್ಸವ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು‌ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕುಶಾಲನಗರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಬೆಳ್ಳಿ‌ ಮಹೋತ್ಸವ ಆಚರಣಾ ಸಮಿತಿ‌ ಮಹಾ ಪೋಷಕ ಜಿ.ರಾಜೇಂದ್ರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂದಿನ ಆಧುನಿಕ‌ ಕಾಲಘಟ್ಟದಲ್ಲಿ‌ ಮಹಿಳೆ ಸಶಕ್ತಳಾಗಿದ್ದಾಳೆ. ಭಾರತದಲ್ಲಿ‌ ಎಲ್ಲಾ ಕ್ಷೇತ್ರದಲ್ಲಿ‌ ಮಹಿಳೆಯರಿಗೆ ಪ್ರಾಧಾನ್ಯತೆ ದೊರೆಯುತ್ತಿದೆ ಎಂದ ಅವರು, ಮಹಿಳೆಯರ ಸೌಂದರ್ಯ ಆರಾಧಿಸುವಂತಾಗಬೇಕು.‌ಆದರೆ ಸೌಂದರ್ಯ ಭಗ್ನಗೊಳಿಸುವ ಕಾರ್ಯ ವಿಷಾದನೀಯ ಬೆಳವಣಿಗೆ ಎಂದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಬೆಳ್ಳಿ ಮಹೋತ್ಸವದ ಅಂಗವಾಗಿ ವಿವಿಧ ರೀತಿಯ‌ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಮಾನಸಕ್ಕೆ ತಲುಪುವಂತಹ ವೈವಿಧ್ಯಮಯ ಕಾರ್ಯಕ್ರಮ ವಿವಿಧೆಡೆ ಜರುಗುತ್ತಿವೆ ಎಂದರು. ಸಮಾನತೆಯ ಉದ್ದೇಶಕ್ಕಾಗಿ ಆರಂಭವಾದ ಮಹಿಳಾ ದಿನಾಚರಣೆ…

Read More

ಮಡಿಕೇರಿ ಮಾ.8 : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ “ಅಂತರರಾಷ್ಟ್ರೀಯ ಮಹಿಳಾ ದಿನ”ವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿತು. ಕೊಡವ ಬುಡಕಟ್ಟು ಜನಾಂಗದ ಮಹಿಳೆಯರು ಹಾಗೂ ಬಾಲಕಿಯರಿಗೆ ಸಾಂವಿಧಾನಿಕ ಹಕ್ಕು ಮತ್ತು ಸಬಲತೆ ನೀಡಬೇಕೆಂದು ಧರಣಿಯ ನೇತೃತ್ವದ ವಹಿಸಿದ್ದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು. ಸಂಸತ್, ವಿಧಾನಸಭೆ, ವಿಧಾನ ಪರಿಷತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗಾಗಿ ಘೋಷಿಸಿರುವ ಶೇ.33 ಸೀಟುಗಳಲ್ಲಿ ಕೊಡವ ಮಹಿಳೆಯರಿಗೆ ಪ್ರತ್ಯೇಕ ಆಂತರಿಕ ಕೋಟಾವನ್ನು ನೀಡಬೇಕು. ಕೊಡವ ಬುಡಕಟ್ಟು ಜನಾಂಗದ ಮಹಿಳೆಯರು ಉತ್ತಮ ಕೃಷಿಕರು. ಆದರೆ ಶೇ.99 ರಷ್ಟು ಕೊಡವ ಮಹಿಳೆಯರು ತಮ್ಮದೇ ಆದ ಕೃಷಿಭೂಮಿಯನ್ನು ಹೊಂದಿಲ್ಲ. ಆದ್ದರಿಂದ ತಮ್ಮ ಸಾಂಸ್ಕೃತಿಕ ಮೂಲವನ್ನು ಹೊಂದಿರುವ ಮಡಿಕೇರಿಯಲ್ಲಿ ಪ್ರತಿ ಕೊಡವತಿಗೆ 5 ಎಕರೆ ಭೂಮಿಯನ್ನು ಕಡ್ಡಾಯವಾಗಿ ಮಂಜೂರು ಮಾಡಬೇಕು. ಇದರಿಂದ ಕೊಡವ ಮಹಿಳೆಯರು ಆರ್ಥಿಕ ಸಬಲತೆಯನ್ನು ಹೊಂದಬಹುದು ಮತ್ತು ವಿವಿಧ ಅಧಿಕಾರವನ್ನು ಅನುಭವಿಸಬಹುದು. ಕೊಡವ ಮಹಿಳೆಯರು…

Read More

ಮಡಿಕೇರಿ ಮಾ.8 : ಮಡಿಕೇರಿ ಬ್ರಹ್ಮಕುಮಾರಿ ಲೈಟ್ ಹೌಸ್‍ಗೆ ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿರುವ ಬ್ರಹ್ಮಕುಮಾರಿ ಶಾಖೆಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ರಾಧ, ರಾಜಸ್ಥಾನದ ಉದಯ್‍ಪುರದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಹಾಗೂ ಡೊಂಗರ್ ಪುರ್‍ನ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಪದ್ಮ ಭೇಟಿ ನೀಡಿದ್ದಾರೆ. ಇವರು ಮೂಲತಃ ಕರ್ನಾಟಕದವರಾಗಿದ್ದು, ಉತ್ತರ ಭಾರತದಲ್ಲಿ ಈಶ್ವರಿಯ ಸೇವೆಯಲ್ಲಿ ತಮ್ಮ ಜೀವನವನ್ನು ಸಮರ್ಪಿತಗೊಳಿಸಿ, ಅನೇಕರಿಗೆ ಆದ್ಯಾತ್ಮಿಕದ ಮಾರ್ಗದರ್ಶಕರಾಗಿದ್ದಾರೆ. ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಜೀ ಅವರು ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಮಹಿಳಾ ದಿನಾಚರಣೆ ಪ್ರಯುಕ್ತ ಸ್ಫೂರ್ತಿದಾಯಕ ನುಡಿಗಳು ಕಾರ್ಯಕ್ರಮ ನಡೆಯಲಿದೆ.

Read More

ಮಡಿಕೇರಿ ಮಾ.8 : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕಕ್ಕಬ್ಬೆ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕುಂಜಿಲ-ಕಕ್ಕಬ್ಬೆ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್-12 ಪಂದ್ಯಾವಳಿಯಲ್ಲಿ ಮೊಬೈಲ್ ಪ್ಯಾಲೆಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಸಿಪಿಜಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ತೃತೀಯ ಬಹುಮಾನವನ್ನು ಚಂಗ್ಸ್ ಕ್ರಿಕೆಟರ್ಸ್ ತಂಡ ಪಡೆದುಕೊಂಡಿತು. ಪ್ರಥಮ ವಿಜೇತ ತಂಡಕ್ಕೆ ರೂ.33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ವಿಜೇತ ತಂಡಕ್ಕೆ ರೂ.22,222 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಲಾಯಿತು. ಮೊಬೈಲ್ ಪ್ಯಾಲೆಸ್ ತಂಡದ ಆಟಗಾರ ರಶೀದ್ ಅವರ ಅಮೋಘ ಸಿಕ್ಸ್ ನಿಂದ ತಂಡ ಗೆಲುವಿನ ನಗೆ ಬೀರಿತು. ವೈಯಕ್ತಿಕ ಬಹುಮಾನ : ಅತ್ಯುತ್ತಮ ಬ್ಯಾಟ್ಸ್‍ಮನ್ ಮಾಮು, ಬೆಸ್ಟ್ ಬೌಲರ್ ಅನ್ನು, ಅತ್ಯುತ್ತಮ ಕೀಪರ್ ಹಾಗೂ ಬೆಸ್ಟ್ ಕ್ಯಾಚರ್ ಅಸ್ರು ಕಮ್ಮಟ್ಟೆ, ಅತ್ಯುತ್ತಮ ಆಲ್ ರೌಂಡರ್ ಸಮೀರ್ ಕೊಚ್ಚೆ, ಮೆನ್ ಆಫ್‍ದಿ ಮೆಚ್ ಅನು ಕಾರ್ಯಕ್ರಮದಲ್ಲಿ ಪ್ರಮುಖರಾದ ಇಸ್ಮಾಯಿಲ್…

Read More

ಮಡಿಕೇರಿ ಮಾ.8 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ಸಹಯೋಗದಲ್ಲಿ ವಲಯ ಮಟ್ಟದ ನಾಟಿ ವೈದ್ಯರ ಸಮಾವೇಶ ಸಂಬಂಧ ಪೂರ್ವಭಾವಿ ಸಭೆಯು ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೊದಲ ಕಾರ್ಯಕ್ರಮವನ್ನು ಮೇ ಅಂತ್ಯದಲ್ಲಿ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರವಿ ಕಾಳಪ್ಪ, ರಾಜ್ಯ ಮಟ್ಟದ ಸಮ್ಮೇಳನ ನಡೆಸುವ ಉದ್ದೇಶ ಮಂಡಳಿಯದ್ದಾಗಿತ್ತು. ಆದರೆ ಅನಿವಾರ್ಯ ಕಾರಣದಿಂದ ಅದಾಗಲಿಲ್ಲ. ವಲಯ ಮಟ್ಟದ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕೆಂದು ಸಲಹೆ ನೀಡಿದರು. ವಿಧಾನಸಭಾ ಚುನಾವಣೆ ಕಳೆದ ಬಳಿಕ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಯಾಗಬೇಕು. ಹೆಸರಿಗೆ ಮಾತ್ರ ಕಾರ್ಯಕ್ರಮವಾಗದೆ, ನಾಟಿ ವೈದ್ಯರಿಂದ ಮಾಹಿತಿ ವಿನಿಮಯವಾಗುವಂತಿರಬೇಕು. ನುರಿತ ನಾಟಿ ವೈದ್ಯರಿಂದ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ನಾಟಿ ವೈದ್ಯರಿಂದ ಸಂವಾದ ಕಾರ್ಯಕ್ರಮವನ್ನೂ ಏರ್ಪಡಿಸಬೇಕೆಂದು ತಿಳಿಸಿದರು. ನಾಟಿ ವೈದ್ಯ ಪದ್ಧತಿಗೆ ಅದರದ್ದೇ ಆದ ಮಹತ್ವ ಇಂದಿಗೂ ಇದೆ. ತಮಗೆ ತಿಳಿದಿರುವ…

Read More

ಮಡಿಕೇರಿ ಮಾ.8 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಪ್ರಯತ್ನದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಪಕ್ಷದ ಸರಣಿ ಕಾರ್ಯಕ್ರಮಗಳು ಆಯೋಜಿತವಾಗಿದೆ. ಮಾ.10 ಮತ್ತು 11 ರಂದು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಯಲಿದೆ. ಇದರೊಂದಿಗೆ ಮಾ.20 ರ ವರೆಗೆ ವಿವಿಧ ಮೋರ್ಚಾಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವಿವಿಧ ಕಾರ್ಯಕ್ರಮಗಳ ಜೊತೆಯಲ್ಲೆ ಮಾ.18 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ‘ಫಲಾನುಭವಿಗಳ ಸಮಾವೇಶ’ ನಡೆಯಲಿದೆ. ಇದರಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದರು. ::: ಸಂಕಲ್ಪ ಯಾತ್ರೆ ::: ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳನ್ನು ಸಂಪರ್ಕಿಸುವ ನಾಲ್ಕು ವಿಜಯ ಸಂಕಲ್ಪ ಯಾತ್ರ್ರೆಗಳು ಈಗಾಗಲೆ ಆರಂಭವಾಗಿದೆ. ಚಾಮರಾಜನಗರದ ಮಲೆಮಹದೇಶ್ವರದಿಂದ ಆರಂಭವಾಗಿರುವ ವಿಜಯ ಸಂಕಲ್ಪಯಾತ್ರೆ ಮಾ.10 ರಂದು ವಿರಾಜಪೇಟೆ ಕ್ಷೇತ್ರದ ಗೋಣಿಕೊಪ್ಪಲು ಮೂಲಕ ಕೊಡಗನ್ನು ಪ್ರವೇಶಿಸಲಿದ್ದು, ರಥಕ್ಕೆ…

Read More