ಸುಂಟಿಕೊಪ್ಪ,ಜ.28 : ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ನೀರು ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಿಂದ ಹಸಿರು, ಹಳದಿ, ನೀಲಿ ಕೆಂಪು ಸಮವಸ್ತ್ರದಲ್ಲಿ ಹೊರಟ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಅರುಳ್ ಸೇಲ್ವಕುಮಾರ್, ಶಾಲಾ ಮುಖ್ಯೋಪಾದ್ಯಾಯ ಸೇಲ್ವರಾಜ್, ಉಪಯಾಜಕರಾದ ಚಾಲ್ಸ್ ಚಾಲನೆ ನೀಡಿದರು.
ಲೇಖಕ: admin
ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭ ಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆ ಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ ಹಗ್ಗ ತುಂಡರಿಸಲ್ಪಟ್ಟ ಪರಿಣಾಮ ದಿಮ್ಮಿಗಳು ರಸ್ತೆಗೆ ಉರುಳಿ ಬಿದ್ದಿವೆ. ಇದೇ ವೇಳೆ ಜೋಡುಪಾಲದಿಂದ ಮದೆನಾಡು ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನಕ್ಕೆ ಮರದ ದಿಮ್ಮಿಯೊಂದು ಅಪ್ಪಳಿಸಿದೆ. ದಿಮ್ಮಿ ಗಾಜು ಸೀಳಿ ಒಳಹೊಕ್ಕರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಿಕ್ಅಪ್ ವಾಹನ ಜಖಂಗೊಂಡಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪೋಕ್ಲು ಜ.28 : ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಎಸ್ಎಫ್) ನಾಪೋಕ್ಲು ಶಾಖೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಪಿ.ಐ.ಫಾರೂಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಚೇರಿಯಲ್ಲಿ ಎಸ್ಎಸ್ಎಫ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ಕಾರ್ಯದರ್ಶಿಯಾಗಿ ಟಿ.ಎಂ. ಹಾರಿಸ್, ಕೋಶಾಧಿಕಾರಿಯಾಗಿ ಎಂ. ಎಂ.ಶಾಹಿಲ್, ಸದಸ್ಯರಾಗಿ ಅನೀಸ್, ನಾಸಿರ್ ಮುಸ್ಲಿಯಾರ್,ಫಾಝಿಲ್, ಆಫ್ಸಲ್, ಶಾಮಿಲ್,ಆದಿಲ್ ಮುಸ್ಲಿಯಾರ್, ಫೈಸಲ್,ಫಾಝಿಲ್ ಸಿ.ಎಚ್, ತಷ್ರೀಫ್ ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷ ಅಬ್ದುಲ್ ರಹ್ಮಾನ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಕೆಸಿಎಫ್ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್ ವೈ ಎಸ್ ಕಾರ್ಯದರ್ಶಿ ರಹೀಮ್ ಮಾಸ್ಟರ್, ಎಸ್ಎಸ್ಎಫ್ ಮಡಿಕೇರಿ ಡಿವಿಜನ್ ಸಂಚಾಲಕ ಸಾದಿಕ್ ನಿಜಾಮಿ, ಸೆಕ್ಟರ್ ಸಮಿತಿ ಸದಸ್ಯರಾದ ನೌಶಾದ್, ಇಸ್ಮಾಯಿಲ್, ತ್ವಯಿಬ್ ರಜಾಕ್ ಹಾಗೂ ಎಸ್ಎಸ್ ಎಫ್,ಎಸ್ ವೈ ಎಸ್ ಕಾರ್ಯಕರ್ತರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಜ.28 : ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಕಂಜಿತಂಡ ಕೆ.ಮಂದಣ್ಣ ಧ್ವಜಾರೋಹಣ ನೆರವೇರಿಸಿ, ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಿದ ದಾನಿಗಳನ್ನು ಸ್ಮರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಳಿಮಾಡ ಕಾವೇರಪ್ಪ ಶಾಲೆಯ ಮುಖ್ಯ ದ್ವಾರದಲ್ಲಿ ಗೇಟು ಹಾಗೂ ಕಮಾನು ನಿರ್ಮಿಸಿ ಕೊಡುವುದಾಗಿ ಹೇಳಿದರು. ನಾಮೇರ ನವೀನ್ ಮಾತನಾಡಿ, ಶಾಲೆಯ ಅಭಿವೃದ್ಧಿಗಾಗಿ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದರು. ವಿದ್ಯಾಸಂಸ್ಥೆಯ ಖಜಾಂಚಿ ಉಮೇಶ್ ಕೇಚಮಯ್ಯ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ದಾನಿಗಳ ಸಹಕಾರವನ್ನು ಕೋರಿದರು. ಕ್ರೀಡೋತ್ಸವದ ಪ್ರಯುಕ್ತ ವಿವಿಧ ಕ್ರೀಡಾ ಚುಟವಟಿಕೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾಂಸ್ಥೆಯ ಉಪಾಧ್ಯಕ್ಷ ಕೊಲ್ಲೀರ ಯು.ಬೋಪಣ್ಣ ಕ್ರೀಡೆಯ ಪ್ರಥಮ ಬಹುಮಾನದ ಮೊತ್ತವನ್ನು ಉದಾರವಾಗಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು. ಮುಖ್ಯ ಶಿಕ್ಷಕಿ ಕೆ.ಎ.ದ್ವೀಪ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಎ.ಎ.ಮುತ್ತಪ್ಪ ಕಾರ್ಯಕ್ರಮ ನಿರೂಪಿಸಿದರು. ಚಂದನ್ ವಂದಿಸಿದರು.
ಮಡಿಕೇರಿ ಜ.28 : ಸೋಮವಾರಪೇಟೆ ಮಂಡಲ ಯುವ ಮೋರ್ಚಾ ವತಿಯಿಂದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಕುಶಾಲನಗರದ ಪಟ್ಟಣ ವ್ಯಾಪ್ತಿಯಲ್ಲಿ ಯುವ ಮತದಾರರ ಸಂಪರ್ಕ, ಸದಸ್ಯತ್ವ ನೋಂದಣಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ನೀಡಿ, ಸ್ಟಿಕ್ಕರ್ ಅಳವಡಿಸಲಾಯಿತು. ಈ ಸಂದರ್ಭ ಮಂಡಲ ಯುವ ಮೋರ್ಚ ಅಧ್ಯಕ್ಷ ಚಂದ್ರಶೇಖರ್ ಹೇರೂರು , ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ,ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹಾಗೂ ಜಿಲ್ಲಾ ಪ್ರಭಾರಿಗಳಾದ ಜೈ ಶಂಕರ್ ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ್ , ಮೋಹಿತ್ ತಿಮ್ಮಯ್ಯ , ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವನೀತ್ ಪೂನೇಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಯುವ ಮೋರ್ಚ ಮಂಡಲ ಕಾರ್ಯದರ್ಶಿ ಮಣಿಕಂಠ ಹಾರಂಗಿ ಇದ್ದರು.
ಸುಂಟಿಕೊಪ್ಪ,ಜ.28 : ಸಮಾಜದಲ್ಲಿ ಉತ್ತಮನಾಗಿರುವುದು, ಇತರರಿಗೆ ಉಪಕಾರಿಯಾಗಿ ಬದುಕುವುದು ಮುಖ್ಯ ಎಂದು ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ಕುಟ್ಟಪ್ಪ ಹೇಳಿದರು. ಸುಂಟಿಕೊಪ್ಪ ಟಿಸಿಎಲ್ ತೋಟದ ಸಾಮ್ರಾಟ್ ಯುವಕ ಸಂಘದ ವತಿಯಿಂದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಪುರುಷರ ಮುಕ್ತ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಎಷ್ಟೇ ಕೋಟಿ ಸಂಪಾದಿಸಿ ಕ್ರೂಢಿಕರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಆದರೆ ನೀವು ನಿಮ್ಮ ಸುತ್ತ ಮುತ್ತಲಿನ ಜನತೆಯಲ್ಲಿ ಉತ್ತಮ ಸ್ನೇಹ ಪ್ರೀತಿ, ವಿಶ್ವಾಸ, ಭಾಂದವ್ಯ ಹೊಂದಿದಲ್ಲಿ ಜೀವಿತ ಕಾಲಕ್ಕೆ ಅರ್ಥ ಬರಲು ಸಾಧ್ಯವೆಂದು ಹೇಳಿದರು. ಸಮಾರಂಭದಲ್ಲಿ ಸುಂಟಿಕೊಪ್ಪ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಗೌತಮ್ಮೈನಿ, ಗ್ರಾ.ಪಂ.ಸದಸ್ಯರಾದ ಆಲಿಕುಟ್ಟಿ, ಪಿ.ಎಫ್.ಸಬಾಸ್ಟೀನ್, ಪಿ.ಆರ್.ಸುನಿಲ್ಕುಮಾರ್ ಕ್ರೀಡೆ ಹಾಗೂ ದಿನದ ಮಹತ್ವದ ಕುರಿತು ಮಾತನಾಡಿದರು. ವಿವಿಧ ಭಾಗಗಳಿಂದ 12 ಕ್ಕೂ ಹೆಚ್ಚು ತಂಡಗಳು ಪಾಲ್ಗೊಂಡಿದ್ದವು, ಫೈನಲ್ ಪಂದ್ಯಾವಳಿಯು ಹೊಸತೋಟ ಹಾಗೂ ಅತಿಥೇಯ ಸಾಮ್ರಾಟ್ ತಂಡಗಳ ನಡುವೆ ನಡೆದ ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಅತಿಥೇಯ ಸಾಮ್ರಾಟ್ ತಂಡವು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ವಿವಿಧ ಕ್ಷೇತ್ರಗಳಲ್ಲಿ…
ಸೋಮವಾರಪೇಟೆ,ಜ.27: ಪಟ್ಟಣದ ಮಡಿಕೇರಿ ರಸ್ತೆಯ ನಿಶಾಂತ್ ಟವರ್ಸ್ ಸಂಕೀರ್ಣದಲ್ಲಿ ನೂತನವಾಗಿ ತೆರೆಯಲಾಗಿರುವ ಶ್ರೀವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಶಾಖೆಯನ್ನು ಕಾಂಗ್ರೆಸ್ ಮುಖಂಡ ಡಾ. ಮಂಥರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯ ಬಿ.ಆರ್. ಮಹೇಶ್, ಕಾಫಿ ಬೆಳೆಗಾರರಾದ ಸುವಿನ ಕೃಪಾಲ್, ಉದ್ಯಮಿ ಜಿ.ಎಸ್. ಮೋಹನ್, ಸೊಸೈಟಿ ನಿರ್ದೇಶಕ ನಿತ್ಯಾನಂದ ಮುಂಡೋಡಿ, ಚಂದ್ರ ಕೋಲ್ಚಾರ್, ಸೇರಿದಂತೆ ಇತರರು ಹಾಜರಿದ್ದರು.
ಸೋಮವಾರಪೇಟೆ,ಜ.28: ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ನ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಚಾಲಕ ಚೈತನ್ಯೋಭವ ಕಾರ್ಯಕ್ರಮ ನಡೆಯಿತು. ರಾಮನಗರದ ಗೆಜ್ಜೆಗಾರಗುತ್ತೆ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಪೀಠಾಧಿಪತಿ ಡಾ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಚಾಲಕರು ಪ್ರಯಾಣಿಕರ ಹಿತದೃಷ್ಟಿಯನ್ನು ಕಾಪಾಡುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ವಿ.ರವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು, ಪೊಲೀಸ್ ಸಿಬ್ಬಂದಿ ನವೀನ್, ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಆದಿಲ್ ಅವರುಗಳನ್ನು ಸನ್ಮಾನಿಸಲಾಯಿತು. ಪಟ್ಟಣದ ಪುರುಷೋತ್ತಮ್, ಜನಾರ್ದನ್, ಸುಭಾಷ್, ಅನಿಲ್, ಕವಿತ ಪೀಟರ್ ಸೇರಿದಂತೆ ಇತರರನ್ನು ಒಳಗೊಂಡ ವಿಶ್ವರೂಪಂ ಕಲಾವಿದರ ತಂಡದಿಂದ ಮೂಡಿಬಂದ ಸಂಗೀತ ರಸಸಂಜೆ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್, ಉದ್ಯಮಿ ಅವಿನಾಶ್ ಕೇಸರಿ, ಒಕ್ಕಲಿಗರ ಸಂಘದ…
ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ…
ಮಡಿಕೇರಿ ಜ.28 : ಇಂದಿರನಗರದ ಜ್ಯೋತಿ ಯುವಕ ಸಂಘದ ವತಿಯಿಂದ 74 ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂದಿರನಗರದ ನಿವಾಸಿ ಸರೋಜ ಧ್ವಜಾರೋಹಣ ನೇರವೆರಿಸಿ ಎಲ್ಲಾರಿಗೂ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಯುವಕ ಸಂಘದ ಅಧ್ಯಕ್ಷ ಎಸ್.ಎಸ್.ಜಯಕುಮಾರ್ ವಹಿಕೊಂಡಿದ್ದರು. ಸ್ವಾಗತವನ್ನು ಉಪಾಧ್ಯಕ್ಷ ಅನೀಸ್ ಮಾಡಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು. ನೇರದಿದ್ದವರಿಗೆ ಸಿಹಿ ಹಂಚಲಾಯಿತು.






