ಸುಂಟಿಕೊಪ್ಪ,ಜ.28 : ಸಮಾಜದಲ್ಲಿ ಉತ್ತಮನಾಗಿರುವುದು, ಇತರರಿಗೆ ಉಪಕಾರಿಯಾಗಿ ಬದುಕುವುದು ಮುಖ್ಯ ಎಂದು ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ಕುಟ್ಟಪ್ಪ ಹೇಳಿದರು. ಸುಂಟಿಕೊಪ್ಪ ಟಿಸಿಎಲ್ ತೋಟದ ಸಾಮ್ರಾಟ್ ಯುವಕ ಸಂಘದ ವತಿಯಿಂದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಪುರುಷರ ಮುಕ್ತ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಎಷ್ಟೇ ಕೋಟಿ ಸಂಪಾದಿಸಿ ಕ್ರೂಢಿಕರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಆದರೆ ನೀವು ನಿಮ್ಮ ಸುತ್ತ ಮುತ್ತಲಿನ ಜನತೆಯಲ್ಲಿ ಉತ್ತಮ ಸ್ನೇಹ ಪ್ರೀತಿ, ವಿಶ್ವಾಸ, ಭಾಂದವ್ಯ ಹೊಂದಿದಲ್ಲಿ ಜೀವಿತ ಕಾಲಕ್ಕೆ ಅರ್ಥ ಬರಲು ಸಾಧ್ಯವೆಂದು ಹೇಳಿದರು. ಸಮಾರಂಭದಲ್ಲಿ ಸುಂಟಿಕೊಪ್ಪ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಗೌತಮ್ಮೈನಿ, ಗ್ರಾ.ಪಂ.ಸದಸ್ಯರಾದ ಆಲಿಕುಟ್ಟಿ, ಪಿ.ಎಫ್.ಸಬಾಸ್ಟೀನ್, ಪಿ.ಆರ್.ಸುನಿಲ್ಕುಮಾರ್ ಕ್ರೀಡೆ ಹಾಗೂ ದಿನದ ಮಹತ್ವದ ಕುರಿತು ಮಾತನಾಡಿದರು. ವಿವಿಧ ಭಾಗಗಳಿಂದ 12 ಕ್ಕೂ ಹೆಚ್ಚು ತಂಡಗಳು ಪಾಲ್ಗೊಂಡಿದ್ದವು, ಫೈನಲ್ ಪಂದ್ಯಾವಳಿಯು ಹೊಸತೋಟ ಹಾಗೂ ಅತಿಥೇಯ ಸಾಮ್ರಾಟ್ ತಂಡಗಳ ನಡುವೆ ನಡೆದ ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಅತಿಥೇಯ ಸಾಮ್ರಾಟ್ ತಂಡವು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ವಿವಿಧ ಕ್ಷೇತ್ರಗಳಲ್ಲಿ…
ಲೇಖಕ: admin
ಸೋಮವಾರಪೇಟೆ,ಜ.27: ಪಟ್ಟಣದ ಮಡಿಕೇರಿ ರಸ್ತೆಯ ನಿಶಾಂತ್ ಟವರ್ಸ್ ಸಂಕೀರ್ಣದಲ್ಲಿ ನೂತನವಾಗಿ ತೆರೆಯಲಾಗಿರುವ ಶ್ರೀವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಶಾಖೆಯನ್ನು ಕಾಂಗ್ರೆಸ್ ಮುಖಂಡ ಡಾ. ಮಂಥರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯ ಬಿ.ಆರ್. ಮಹೇಶ್, ಕಾಫಿ ಬೆಳೆಗಾರರಾದ ಸುವಿನ ಕೃಪಾಲ್, ಉದ್ಯಮಿ ಜಿ.ಎಸ್. ಮೋಹನ್, ಸೊಸೈಟಿ ನಿರ್ದೇಶಕ ನಿತ್ಯಾನಂದ ಮುಂಡೋಡಿ, ಚಂದ್ರ ಕೋಲ್ಚಾರ್, ಸೇರಿದಂತೆ ಇತರರು ಹಾಜರಿದ್ದರು.
ಸೋಮವಾರಪೇಟೆ,ಜ.28: ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ನ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಚಾಲಕ ಚೈತನ್ಯೋಭವ ಕಾರ್ಯಕ್ರಮ ನಡೆಯಿತು. ರಾಮನಗರದ ಗೆಜ್ಜೆಗಾರಗುತ್ತೆ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಪೀಠಾಧಿಪತಿ ಡಾ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಚಾಲಕರು ಪ್ರಯಾಣಿಕರ ಹಿತದೃಷ್ಟಿಯನ್ನು ಕಾಪಾಡುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ವಿ.ರವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು, ಪೊಲೀಸ್ ಸಿಬ್ಬಂದಿ ನವೀನ್, ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಆದಿಲ್ ಅವರುಗಳನ್ನು ಸನ್ಮಾನಿಸಲಾಯಿತು. ಪಟ್ಟಣದ ಪುರುಷೋತ್ತಮ್, ಜನಾರ್ದನ್, ಸುಭಾಷ್, ಅನಿಲ್, ಕವಿತ ಪೀಟರ್ ಸೇರಿದಂತೆ ಇತರರನ್ನು ಒಳಗೊಂಡ ವಿಶ್ವರೂಪಂ ಕಲಾವಿದರ ತಂಡದಿಂದ ಮೂಡಿಬಂದ ಸಂಗೀತ ರಸಸಂಜೆ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್, ಉದ್ಯಮಿ ಅವಿನಾಶ್ ಕೇಸರಿ, ಒಕ್ಕಲಿಗರ ಸಂಘದ…
ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ…
ಮಡಿಕೇರಿ ಜ.28 : ಇಂದಿರನಗರದ ಜ್ಯೋತಿ ಯುವಕ ಸಂಘದ ವತಿಯಿಂದ 74 ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂದಿರನಗರದ ನಿವಾಸಿ ಸರೋಜ ಧ್ವಜಾರೋಹಣ ನೇರವೆರಿಸಿ ಎಲ್ಲಾರಿಗೂ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಯುವಕ ಸಂಘದ ಅಧ್ಯಕ್ಷ ಎಸ್.ಎಸ್.ಜಯಕುಮಾರ್ ವಹಿಕೊಂಡಿದ್ದರು. ಸ್ವಾಗತವನ್ನು ಉಪಾಧ್ಯಕ್ಷ ಅನೀಸ್ ಮಾಡಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು. ನೇರದಿದ್ದವರಿಗೆ ಸಿಹಿ ಹಂಚಲಾಯಿತು.
ಮಡಿಕೇರಿ ಜ.28 : ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಹಾಗೂ ಸ್ಕೂಲ್ ಆಶ್ರಯದಲ್ಲಿ 14ನೇ ವರ್ಷದ ಕೊಂಡಂಗೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಫೆ.23 ರಿಂದ 26 ವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಳೆದ 13 ವರ್ಷಗಳಿಂದ ಕೊಂಡಂಗೇರಿ ಗ್ರಾಮಸ್ಥರನ್ನು ಒಂದುಗೂಡಿಸುವ ಸಲುವಾಗಿ ಕೊಂಡಂಗೇರಿಯಲ್ಲಿ ಗ್ರಾಮಸ್ಥರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡುತ್ತಾ ಬಂದಿದ್ದೇವೆ. 14ನೇ ಬಾರಿಯ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ಯುವ ಸಾಧಕರಿಗೆ ಸನ್ಮಾನ, ಡ್ರಗ್ಸ್ ಮುಕ್ತ ಕೊಡಗು ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ. ಕೊಡಗು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಕೊಂಡಂಗೇರಿ ಪ್ರೀಮಿಯರ್ ಲೀಗ್ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ ಎಂದು ಆಯೋಜಕರಾದ ಆಶಿಫ್ (ಆಪು )ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8431365528 ಹಾಗೂ 9482945952 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.
ಮಡಿಕೇರಿ ಜ.27 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆ.3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ. ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫಲಪುಷ್ಪ ಪ್ರದರ್ಶನದಲ್ಲಿ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆ ಕಲಾಕೃತಿ ಒಳಗೊಂಡ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿರುತ್ತದೆ ಎಂದರು. ಫಲಪುಷ್ಪ ಪ್ರದರ್ಶನದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯಾಲೇಟ್ ಯುನಿಟ್, ವಿವಿ ಪ್ಯಾಟ್, ಕಂಟ್ರೋಲ್ ಯೂನಿಟ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದರು. ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಭಿಸಲು ಕಾಫಿ ಕಪ್ ಮತ್ತು ಸಾಸರ್ ಮಾದರಿಯನ್ನು ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಮಕ್ಕಳಿಗೆ ಮನರಂಜನೆ ನೀಡುವಂತಹ ಪೋಟೋ ಪ್ರೇಮ್ ಸೆಲ್ಪಿ ಜೋನ್ ಮಾದರಿಯನ್ನು ಹೂವಿನಲ್ಲಿ ನಿರ್ಮಾಣ…
ಮಡಿಕೇರಿ ಜ.27 : ಮಡಿಕೇರಿ ನಗರದ ಕಾವೇರಿ ಕಲಾಕ್ಷೇತ್ರದ ಕಟ್ಟಡವನ್ನು ತೆರೆವುಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು 10 ಕೋಟಿ ರೂ. ವೆಚ್ಚದಲ್ಲಿ ಒಂದು ಸಾವಿರ ಜನರು ಕುಳಿತುಕೊಳ್ಳುವ ಸುಸಜ್ಜಿತ ನೂತನ ಕಾವೇರಿ ಕಲಾಕ್ಷೇತ್ರ ನಿರ್ಮಾಣಗೊಳ್ಳಲಿದೆ. ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆಗಮಿಸುವ ಸಂದರ್ಭ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು. ಮಡಿಕೇರಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ 20 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭ ತಿಳಿಸಿದರು. ಸರ್ಕಾರದಿಂದ ಸ್ತ್ರೀಶಕ್ತಿ ಸಂಘಗಳಿಗೆ ವಾರ್ಡ್ ಒಂದಕ್ಕೆ 5 ಲಕ್ಷ ರೂ. ಸಹಾಯಧನ ಕಲ್ಪಿಸಲಾಗುತ್ತದೆ. ಹಾಗೆಯೇ ಯುವಕ ಸಂಘಗಳಿಗೂ 5 ಲಕ್ಷ ರೂ. ಸಹಾಯಧನ, ಹಾಗೆಯೇ ಕೇಂದ್ರ ಸರ್ಕಾರದಿಂದಲೂ ಹಲವು ಯೋಜನೆಗಳು ಲಭ್ಯವಿದ್ದು, ಇವುಗಳನ್ನು ಬಳಸಿಕೊಳ್ಳಬೇಕು ಎಂದರು.
ಮಡಿಕೇರಿ ಜ.27 : ಬೈತೂರು ಉತ್ಸವದ ಹಿನ್ನೆಲೆಯಲ್ಲಿ ವಿರಾಜಪೇಟೆಯಿಂದ ಬೈತೂರಪ್ಪ ದೇವಸ್ಥಾನಕ್ಕೆ ನಾಲ್ವರು ಯುವ ಭಕ್ತರು ಪಾದಯಾತ್ರೆ ಮಾಡಿದರು. ಚೆಟ್ಟೋಳಿರ ಶರತ್ ಸೋಮಣ್ಣ, ಮುರುವಂಡ ಸವನ್ ಸೋಮಣ್ಣ, ಕಾಳಮಂಡ ರಾಬಿನ್ ಹಾಗೂ ಮಾಚಂಗಡ ಸಚಿನ್ ವಿರಾಜಪೇಟೆಯಿಂದ, ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ, ಬಲ್ಲಿತೋಡ್, ಹುಲಿಕಲ್ ಮೂಲಕ ಪಾದಯಾತ್ರೆ ಮಾಡಿ ಸಾಯಂಕಾಲ 4 ಗಂಟೆ ಸುಮಾರಿಗೆ 40 ಕಿ.ಮೀ ಕ್ರಮಿಸಿದರು. ದೇವಸ್ಥಾನ ತಲುಪಿದ ನಂತರ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು.
ಮಡಿಕೇರಿ ಜ.27 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದ ಮೂಲಕ ಪರೀಕ್ಷೆಗೆ ಮಾಡಬಹುದಾದ ಉತ್ತಮ ತಯಾರಿ ಹಾಗೂ ವಿದ್ಯಾರ್ಥಿಗಳ ಮನಸ್ಸಿನಿಂದ ಪರೀಕ್ಷೆಗಳ ಭಯವನ್ನು ಹೋಗಲಾಡಿಸುವ ತಂತ್ರಗಳನ್ನು ಹಂಚಿಕೊಂಡು ಉಪಯುಕ್ತ ಮಾಹಿತಿ ನೀಡಿದರು. ಸಂಸ್ಥೆಯಲ್ಲಿ ನಿರ್ದೇಶಕರು ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ, ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಕಿಸಾನ್ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ ರವಿಕಿರಣ, ನಸಿರ್ಂಗ್ ಪ್ರಾಂಶುಪಾಲರಾದ ಮಂಜುಳ, ಬೋದಕ ಸಿಬ್ಬಂದಿ ಸೇರಿದಂತೆ ವೈದ್ಯಕೀಯ, ನಸಿರ್ಂಗ್ ವಿದ್ಯಾರ್ಥಿಗಳು ಹಾಜರಿದ್ದರು.






