ಮಡಿಕೇರಿ NEWS DESK ಜ.2 : ಮೈಸೂರು ಕಾಫಿ ಸಂಸ್ಕರಣ ಸಂಘದ ನಿಯೋಗ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘಕ್ಕೆ 3 ಎಕರೆ 34 ಗುಂಟೆ ಜಮೀನು ಹಾಗೂ ರೂ.3 ಕೋಟಿ ಅನುದಾನ ನೀಡಬೇಕೆಂದು ಪ್ರಮುಖರು ಕೋರಿಕೊಂಡರು. ಸಂಘದ ಉಪಾಧ್ಯಕ್ಷ ಪ್ರಭು ಕುಮಾರ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜ.2 NEWS DESK : ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ/ ವರದಿ ಒದಗಿಸಬೇಕಿದೆ. ಆದ್ದರಿಂದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ, ಜ.5 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಕೊಡವ ಸಮಾಜದಲ್ಲಿ ಪೂರ್ವಭಾವಿ ಮಹತ್ವದ ಸಭೆಯು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಸಭೆಗೆ ಕೊಡವ ಭಾಷಿಕ ವಿವಿಧ ಸಮಾಜದ ಪ್ರಮುಖರು, ಕೊಡವ ಭಾಷಾಭಿಮಾನಿಗಳು, ವಿವಿಧ ಕೊಡವ ಸಮಾಜಗಳ ಅಧ್ಯಕ್ಷರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ಭಾಷಾ ತಜ್ಞರು, ಸಾಹಿತಿಗಳು, ಬರಹಗಾರರು,…
ಮಡಿಕೇರಿ ಜ.2 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025ನೇ ಸಾಲಿನ ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರ ವಿವರ ಇಂತಿದೆ. ಅರೆಭಾಷೆ ಕಥಾ ಸ್ಪರ್ಧೆಯಲ್ಲಿ ಬೈತಡ್ಕ ಜಾನಕಿ ಬೆಳ್ಯಪ್ಪ ಅವರ ‘ಜೀವನ ಬೆಳ್ಕ್ ಕಂಡತ್’ ಪ್ರಥಮ ಬಹುಮಾನ, ಕಾಳೇರಮ್ಮನ ಅಶೋಕ್ ಅವರ ‘ಕುಂಙಣ್ಣನು ಸೋಂಪಣ್ಣನು ಹೂಡಿಕೆ ಎತ್ತ್ಗಳ ತಂದ ಕಥೆ’ ದ್ವಿತೀಯ ಬಹುಮಾನ ಹಾಗೂ ಓಂ ಶ್ರೀ ದಯಾನಂದ ಅವರ ‘ನೆಲ್ಲಿಗುಡ್ಡೆ ಇದ್ ನನ್ನ ಜಾಗೆ’ ತೃತೀಯ ಬಹುಮಾನ ಮತ್ತು ಎಡಿಕೇರಿ ವಿಶ್ವನಾಥ ಅವರ ‘ಮಂಜಿ ಮುಸುಕಿದ ದಾರಿನ ನೆನ್ಪುಗ’ ತೃತೀಯ ಬಹುಮಾನ ಪಡೆದುಕೊಂಡಿರುತ್ತಾರೆ. ಅರೆಭಾಷೆ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಸಂಗೀತ ರವಿರಾಜ್ ರವರ ‘ಭಾಸಣ ಪುರಾಣ’ ಪ್ರಥಮ ಬಹುಮಾನ, ಲೋಹಿತಾಶ್ವ ಕ್ಯೊಂಗಾಜೆ ಅವರ ‘ಜಾಣಿಗಳ ಜಾಲ್’ ದ್ವಿತೀಯ ಬಹುಮಾನ, ಕುಂಭಗೌಡನ ರಂಜಿತ್ ಅವರ ‘ಮಿಂಚು’ ತೃತೀಯ ಬಹುಮಾನ ಹಾಗೂ ಕುಕ್ಕನೂರು ರೇಷ್ಮ ಮನೋಜ್ ಅವರ ‘ಕಾಲಕ್ಕೆ…
ಮಡಿಕೇರಿ ಜ.2 NEWS DESK : 33/11 ಕೆ.ವಿ. ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಪಾರಾಣೆ ಫೀಡರ್ಗಳಲ್ಲಿ ಜನವರಿ, 03 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಮಾರ್ಗದ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಕರಡ, ಚೇಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜ.2 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜ.3 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಕುಶಾಲನಗರ ಜ.2 NEWS DESK : ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗದಂತೆ ಸಂಘ ಸಂಸ್ಥೆಗಳ ಮೂಲಕ ಅರಿವು, ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಕರೆ ನೀಡಿದರು. ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿಯಿಂದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ವಾಸವಿ ಸಪ್ತಾಹದ ಮೊದಲ ಕಾರ್ಯಕ್ರಮ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣ ಹಿನ್ನೆಲೆಯಲ್ಲಿ ನಡೆದ ವಾಕಥಾನ್, ಸೈಕ್ಲಾಥಾನ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಪೋಷಕರು ತಮ್ಮ ಮಕ್ಕಳ ಬಗ್ಗೆ ಸದಾ ನಿಗಾವಹಿಸಬೇಕಿದೆ. ಮಾದಕ ವ್ಯಸನಕ್ಕೆ ತುತ್ತಾಗಿ ಜೀವನ ಹಾಳುಮಾಡಿಕೊಳ್ಳಬಾರದು. ಮಾದಕ ವಸ್ತುಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಹೆಚ್ಚಿನ ಜವಬ್ದಾರಿ ತೋರಬೇಕಿದೆ ಎಂದು ಕರೆ ನೀಡಿದರು. ಕುಶಾಲನಗರ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕುಶಾಲನಗರದ ಅಭಿವೃದ್ಧಿಯಲ್ಲಿ…
ಮಡಿಕೇರಿ ಜ.2 NEWS DESK : ಮಹಾರಾಷ್ಟ್ರದಲ್ಲಿ ನಡೆದ ಆರನೇ ವರ್ಷದ ರಾಷ್ಟ್ರೀಯ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ಮೂರನೇ ಸ್ಥಾನ ಪಡೆದುಕೊಂಡಿದೆ. ವಿವಿಧ ರಾಜ್ಯಗಳ ನಡುವೆ ನಡೆದ ಪೈಪೋಟಿಯಲ್ಲಿ ಕರ್ನಾಟಕ ತಂಡಕ್ಕೆ 17 ಚಿನ್ನ, 7 ಬೆಳ್ಳಿ ಹಾಗೂ 12 ಕಂಚಿನ ಪದಕ ದೊರೆತ್ತಿದೆ. ಕರ್ನಾಟಕ ರಾಜ್ಯ ಮಿಕ್ಸ್ ಬಾಕ್ಸಿಂಗ್ ಸಂಸ್ಥೆಯ ಅಧ್ಯಕ್ಷ ಚಂದ್ರು ಡಿ., ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಆರ್.ಹರೀಶ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕೊಡಗಿನ ವಿದ್ಯಾರ್ಥಿಗಳು ಕೂಡ ಪದಕಗಳನ್ನು ಗೆದ್ದಿದ್ದಾರೆ.
ಮಡಿಕೇರಿ ಜ.2 NEWS DESK : ಮಾದಾಪುರದ ಗೌಸಿಯ ಸ್ವಲಾತ್ ಸಮಿತಿ ವತಿಯಿಂದ ಜ.7 ಮತ್ತು 8 ರಂದು ಧಾರ್ಮಿಕ ಪ್ರಭಾಷಣ ಮತ್ತು ಬಡ ಹೆಣ್ಣು ಮಗಳ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಂ.ಉಮ್ಮರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಾಪುರದ ಪಂಚಾಯಿತಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಿಕೊಂಡಿರುವುದಾಗಿ ತಿಳಿಸಿದರು. ಜ.7 ರಂದು ಸಮೀರ್ ದಾರಿಮಿ ಕೊಲ್ಲಂ ಅವರಿಂದ ಧಾರ್ಮಿಕ ಪ್ರಭಾಷಣ ನಡೆಯಲಿದ್ದು, ಡಿ.8 ರಂದು ಪ್ರವಾದಿಯವರ ಕುಡಿ ಬಾಯಾರ್ ತಂಗಳ್ ನೇತೃತ್ವದಲ್ಲಿ ಬಡ ಹೆಣ್ಣು ಮಗಳ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಅಲ್ಪಸಂಖ್ಯಾ ಅಧ್ಯಕ್ಷ ಹನೀಫ್ ಚೋಕಂಡಳ್ಳಿ, ಮೊಹಿಯ್ಯಿದ್ದೀನ್ ಜುಮಾಮಸೀದಿ ಅಧ್ಯಕ್ಷ ಎ.ಪಿ.ಅಕ್ಬರ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಕೊಟ್ಟಮುಡಿ, ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಉತ್ತಪ್ಪ, ಜಿ.ಪಂ ಮಾಜಿ…
ಮಡಿಕೇರಿ ಜ.2 NEWS DESK : ವಿಟಮಿನ್ ಬಿ12 (ಕೋಬಾಲಾಮಿನ್) ನಮ್ಮ ದೇಹಕ್ಕೆ ಅತ್ಯಲ್ಪ ಪ್ರಮಾಣದಲ್ಲಿ ಅಂದರೆ ದಿನಕ್ಕೆ 2.4 -2.8 ಮೈಕ್ರೋಗ್ರಾಂ ಬೇಕಾಗಿದ್ದರೂ, ಇದರ ಪಾತ್ರ ಬಹಳ ದೊಡ್ಡದು. ಇದೊಂದು ವಿಶಿಷ್ಟವಾದ ವಿಟಮಿನ್ ಆಗಿದ್ದು, ನಮ್ಮ ದೇಹವು ಇದನ್ನು ಹೆಚ್ಚಿನ ಪ್ರಮಾಣದಲ್ಲಿ, ವಿಶೇಷವಾಗಿ ಯಕೃತ್ತಿನಲ್ಲಿ ( ಲಿವರ್ ) ಸಂಗ್ರಹಿಸಿಟ್ಟುಕೊಳ್ಳುತ್ತದೆ. ಹಾಗಾಗಿ, ಇದರ ಕೊರತೆಯು ತಕ್ಷಣವೇ ಕಾಣಿಸದೆ, ನೀವು ಸೇವಿಸುವುದನ್ನು ನಿಲ್ಲಿಸಿದರೂ ಅನೇಕ ವರ್ಷಗಳ ನಂತರ ಕಾಣಿಸಿ ಕೊಳ್ಳಬಹುದು. ಅಲ್ಲದೆ, ಇದು ಸಸ್ಯ ಮೂಲದ ಆಹಾರಗಳಲ್ಲಿ ಸಿಗದಿರುವ ಏಕೈಕ ವಿಟಮಿನ್ . ಇದರ ಕೊರತೆಯು ನರಮಂಡಲಕ್ಕೆ ಶಾಶ್ವತ ಹಾನಿ ಉಂಟುಮಾಡಬಹುದಾದ ಕೆಲವು ಅಪರೂಪದ ಪೌಷ್ಟಿಕಾಂಶ ಸಮಸ್ಯೆಗಳಲ್ಲಿ ಒಂದಾಗಿದೆ. :: ವಿಟಮಿನ್ ಬಿ12 ಕಾರ್ಯ :: ಬಿ12 ನಮ್ಮ ದೇಹದಲ್ಲಿ ಪರ್ಯಾಯವಿಲ್ಲದ, ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕೆಂಪು ರಕ್ತ ಕಣಗಳ ರಚನೆ :: ಇದು ರಕ್ತಹೀನತೆ ಯನ್ನು ತಡೆಯುತ್ತದೆ. ಡಿಎನ್ಎ ಸಂಶ್ಲೇಷಣೆ : : ಪ್ರತಿಯೊಂದು ಜೀವಕೋಶದ ವಿಭಜನೆಗೂ ಇದು ಅಗತ್ಯ.…
ಮಡಿಕೇರಿ ಜ.2 NEWS DESK : ಕೆ ಎಸ್ ಸಿ ಎ ವತಿಯಿಂದ ಮಂಗಳೂರು ವಿಭಾಗದ U -14 ವಲಯ ಮಟ್ಟದ ಕ್ರಿಕೆಟ್ ತಂಡಕ್ಕೆ ನಗರದ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಕೆ.ಎಂ.ಆದಿತ್ಯ ಆಯ್ಕೆಯಾಗಿದ್ದಾರೆ. ಕೆ ಎಸ್ ಸಿ ಎ ಲೀಗ್ ಪಂದ್ಯಗಳಲ್ಲಿ ಉತ್ತಮ ಆಟ ಪ್ರದರ್ಶಿಸಿ ಅರ್ಧ ಶತಕ ಬಾರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆ ಎಸ್ ಸಿ ಎ ಅಂತರ್ ಜಿಲ್ಲಾ ಪಂದ್ಯಗಳಲ್ಲಿಯೂ ಆದಿತ್ಯ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಅವರನ್ನು ಮಂಗಳೂರು ವಲಯ ಪ್ರತಿನಿಧಿಯಾಗಿ ಆಯ್ಕೆ ಮಾಡಲಾಗಿದೆ. 2026 ರ ಜ.3 ರಿಂದ 15 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕೆ ಎಸ್ ಸಿ ಎ U-14 ಅಂತರ್ ವಲಯ(ರಾಜ್ಯಮಟ್ಟದ) ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ವಲಯ ತಂಡವನ್ನು ಪ್ರತಿನಿಧಿಸಲಿರುವ ಆದಿತ್ಯ ಗಾಳಿಬೀಡು ನಿವಾಸಿ, ಪ್ರಸ್ತುತ ಮಡಿಕೇರಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶಿರಸ್ತೇದಾರ್ ಆಗಿರುವ ಕರಕರನ ಮಧುಕರ ಮತ್ತು ಸಬಿತ ದಂಪತಿ ಪುತ್ರ.






