ಮಡಿಕೇರಿ ಜ.1 : ಚಿನ್ನ, ಬೆಳ್ಳಿ ವರ್ತಕರು ಹಾಗೂ ಕೆಲಸಗಾರರ ಸಂಘದ ಮಹಾಸಭೆ ಜ.3 ರಂದು ಸಂಘದ ಅಧ್ಯಕ್ಷ ಪ್ರಶಾಂತ್ ವರ್ಣೇಕರ್ ಅವರ ಅಧ್ಯಕ್ಷತೆಯಲ್ಲಿ ನಗರದ ಶೇಖರ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಮಹಾಸಭೆಯ ಕಾರಣದಿಂದ ಅಂದು ಮಧ್ಯಾಹ್ನ 3 ಗಂಟೆಯ ನಂತರ ಯಾವುದೇ ಚಿನ್ನಾಭರಣ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕೆಂದು ಸಂಘದ ಪ್ರಕಟಣೆ ಮನವಿ ಮಾಡಿದೆ.
ಲೇಖಕ: admin
ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…






