ಸೋಮವಾರಪೇಟೆ ಮಾ.7 : ಸೋಮವಾರಪೇಟೆ ಪಟ್ಟಣದ ಕಕ್ಕೆಹೊಳೆ ಬಳಿಯಿರುವ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ 2023ನೇ ಸಾಲಿನ ಜಾತ್ರೋತ್ಸವವು ಮಾ.12 ರಿಂದ 14ರವರೆಗೆ ಮೂರು ದಿನಗಳ ಕಾಲ ಜರುಗಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 12 ರಂದು ಭಾನುವಾರದಂದು ಬೆಳಗ್ಗೆ 4.30ಕ್ಕೆ ಗಣಪತಿಹೋಮದೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. 5.30ಕ್ಕೆ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರು ವಿಶೇಷ ಆಶ್ಲೇಷ ಪೂಜೆ ನಡೆಸಿಕೊಡುತ್ತಾರೆ. ಸಂಜೆ 7 ಗಂಟೆಗೆ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಅನ್ನದಾನ ಮಂಟಪವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್ಕುಮಾರ್ ವಹಿಸಲಿದ್ದು, ಅತಿಥಿಗಳಾಗಿ ಚೌಡ್ಲು ಗ್ರಾಪಂ ಅಧ್ಯಕ್ಷ ಪಿ.ಎಂ.ಗಣಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಪಾಲ್ಗೊಳ್ಳಲಿದ್ದಾರೆ. ಮಾ. 13ರಂದು ಸೋಮವಾರೆ ಮಧ್ಯಾಹ್ನ 12.30ಕ್ಕೆ ಉತ್ಸವ ಆರಂಭವಾಗಲಿದೆ. ಸಂಜೆ 4.30ಕ್ಕೆ ಕೇರಳದ ಖ್ಯಾತ ಸಿಂಗಾರಿ ಮೇಳದೊಂದಿಗೆ ಕಲಶದ ಮೆರವಣಿಗೆ ಆರಂಭವಾಲಿದೆ. ಸಂಜೆ…
ಲೇಖಕ: admin
ಸೋಮವಾರಪೇಟೆ ಮಾ.7 : ಬೆಂಗಳೂರಿನ ನಾಗರಭಾವಿಯಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆದ ಬನವಾಸಿ ಕನ್ನಡಿಗ ಕನ್ನಡಮಯ ಟ್ರಸ್ಟಿನ ಆರನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಎಂ.ಎ.ರುಬಿನಾ ಅವರಿಗೆ ಬನವಾಸಿ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು ನೀಡಿ ಈಚೆಗೆ ಗೌರವಿಸಲಾಯಿತು. ಚಲನಚಿತ್ರ ನಿರ್ದೇಶಕ ಟಿ ಎಸ್ ನಾಗಾಭರಣ, ಎಸ್.ಮಹೇಂದರ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಅಧ್ಯಕ್ಷ ಶಿವಕುಮಾರ್ ನಾಗರನವಿಲೆ, ಕೊಡಗು ತಂಡದ ಅಧ್ಯಕ್ಷ ನೌಷಾದ್ ಜನ್ನತ್ ಮತ್ತು ಬನವಾಸಿ ಕನ್ನಡಿಗ ಟ್ರಸ್ಟ್ ನ ಕಿರಣ್ ಮತ್ತು ಕಿರಣ್ ಮಯಿ ಮತ್ತಿತರು ಗಣ್ಯರು ಇದ್ದರು.
ನಾಪೋಕ್ಲು ಮಾ.7 : ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯ ಎಂದು ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ದಿವಾಕರ್ ಕೆ. ಜೆ.ಹೇಳಿದರು.ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣೆ ಮತ್ತು ಪರೀಕ್ಷಾ ಸಿದ್ದತಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿಗಳಿಗೆ ಸುಮಾರು ಎರಡು ಗಂಟೆಗಳ ಕಾಲ ಉಪನ್ಯಾಸ ನೀಡುವುದರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಗಾರದಲ್ಲಿ ಕೆ. ಪಿ.ಎಸ್ ನಾಪೋಕ್ಲು, ಶ್ರೀ ರಾಮ ಟ್ರಸ್ಟ್ ನಾಪೋಕ್ಲು, ಸೆಕ್ರೆಡ್ ಹಾರ್ಟ್ಸ್ ನಾಪೋಕ್ಲು ಶಾಲೆಗಳ 148 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪ್ರಭಾರ ಉಪ ಪ್ರಾಂಶುಪಾಲ ಶಿವಣ್ಣ ಎಂ. ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ಯ ಅಧ್ಯಕ್ಷ ಧನಂಜಯ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಉಪಾಧ್ಯಕ್ಷ ಹಾರೀಸ್ ಕೆ.ಎ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾರ್ಯದರ್ಶಿ ಉಷಾರಾಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. (ವರದಿ :…
ಮಡಿಕೇರಿ ಮಾ.7 : ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ವತಿಯಿಂದ ಮಾ.10 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಜೆ ಮೋಹನ್ ಮೌರ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ ನಗರದ ನಗರದ ಎ.ವಿ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದ್ದು, ಪಕ್ಷದ ರಾಜ್ಯ ನಾಯಕರು, ಜಿಲ್ಲೆಯ ವಿವಿಧ ಘಟಕದ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಮತ್ತು ಬೂತ್ ಮಟ್ಟದ ನಾಯಕರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಮಡಿಕೇರಿ ಮಾ.7 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಕುಶಾಲನಗರ ತಾಲೂಕು ಮಹಿಳಾ ಅಧ್ಯಕ್ಷೆಯಾಗಿ ಪದ್ಮ ಮಾಧುಕುಮಾರ್ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದರು.
ಸುಂಟಿಕೊಪ್ಪ,ಮಾ.7: ಸುಂಟಿಕೊಪ್ಪ ಗ್ರಾ.ಪಂ ನೂತನ ಕಚೇರಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆಯು ಮಾ.10 ರಂದು ನೆರವೇರಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಂಚಾಯಿತಿ ಕಟ್ಟಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಕೊಡಗು ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಸೋಮವಾರಪೇಟೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಜಯಣ್ಣ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ವಿಶೇಷ ಆಹ್ವಾನಿತರಾದ ಜಿ.ಪಂ.ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಪಂ. ಮಾಜಿ ಸದಸ್ಯೆ ಓಡಿಯಪ್ಪನ ವಿವiಲಾವತಿ ಆಗಮಿಸಲಿರುವರು, ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ವಹಿಸಲಿರುವರು.
ಸುಂಟಿಕೊಪ್ಪ,ಮಾ.7: ಹರದೂರು ಗ್ರಾ.ಪಂ ವ್ಯಾಪ್ತಿಯ ಪನ್ಯದ ಉದ್ದಿಬಾಣೆ ಮಠದಲ್ಲಿ ಕೊರಗಜ್ಜ ಗುಡಿಯ ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿತು. ಕೊರಗಜ್ಜ ದೈವ ನರ್ತಕ ನಿಶಾಂತ್ ದೈವದ ಕಲ್ಲಿಗೆ ಕಾರಣಿಕ ಶಕ್ತಿಯನ್ನು ನೀಡುವ ಮೂಲಕ ಪ್ರತಿಷ್ಠಾಪನೆ ಮಾಡಿದರು. ಇದಕ್ಕೂಮೊದಲು ಗುಡಿಯ ಶುದ್ಧ ಪೂಜೆ ನಡೆಯಿತು. ನಂತರ ದೈವಕ್ಕೆ ನಂದಾದೀಪ, ಚಕ್ಕುಲಿ, ವಿಲ್ಯದೆಲೆ ಇರಿಸುವುದರ ಮೂಲಕ ಆರಾಧನೆಗೆ ಅವಕಾಶ ನೀಡಲಾಯಿತು. ಹರೀಶ್ ಪೂಜಾರಿ, ದೇವಪ್ಪ ಪೂಜಾರಿ, ಪ್ರಕಾಶ್ ಆಚಾರಿ, ಗುಡಿಯ ಪ್ರಮುಖರಾದ ಮೋಣಪ್ಪ ಪೂಜಾರಿ, ಜಿನ್ನಪ್ಪ ಪೂಜಾರಿ, ಮಣಿಮುಖೇಶ್, ಶಾಂತಪ್ಪ, ಪದ್ಮನಾಭ, ವೆಂಕಪ್ಪ, ದೇವಕ್ಕಿ, ಬೇಬಿ ಇತರರು ಇದ್ದರು.
ಮಡಿಕೇರಿ ಮಾ.7 : ಸಮಾಜವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಸಮುದಾಯ ಬಾಂಧವರ ಒಗ್ಗಟ್ಟು ಅತ್ಯಗತ್ಯವೆಂದು ಕುಶಾಲನಗರದ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ಅಧ್ಯಕ್ಷ ಆರ್.ಬಾಬು ಅಭಿಪ್ರಾಯಪಟ್ಟರು. ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ಆಶ್ರಯದಲ್ಲಿ ಆಯೋಜಿತ ಶ್ರೀ ಕೈವಾರ ತಾತಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸಮುದಾಯ ಭವನಕ್ಕೆ ನಿವೇಶನ ಒದಗಿಸಲು ಸರಕಾರ ಗಮನಹರಿಸುವಂತೆ ಮನವಿ ಮಾಡಿದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಮೈಸೂರಿನ ಉಪನ್ಯಾಸಕ ಡಾ.ಕೃಷ್ಣಪ್ಪ ಮಾತನಾಡಿ, ಜನಸಾಮಾನ್ಯರಿಗೆ ಅರಿವಾಗುವಂತಹ ಕೀರ್ತನೆಗಳನ್ನು ರಚಿಸಿದ ತ್ರಿಕಾಲ ಜ್ಞಾನಿ ಕೈವಾರ ತಾತಯ್ಯ ಮಹಾನ್ ದಾರ್ಶನಿಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾಗಿರುವ ಬಣಜಿಗ, ಬಲಿಜ ಸಮುದಾಯಕ್ಕೆ ಸರಕಾರ ಅಗತ್ಯ ಯೋಜನೆಗಳನ್ನು ರೂಪಿಸುವಂತಾಗಬೇಕಿದೆ. ಸರಕಾರದ ಗಮನ ಸೆಳೆಯಲು ಸಮುದಾಯ ಮತ್ತಷ್ಟು ಸಂಘಟಿತರಾಗುವ ಅವಶ್ಯಕತೆಯಿದೆ. ಪ್ರತಿಷ್ಠೆಯ ಕಾರಣದಿಂದ ಸಮುದಾಯದ ಹೋರಾಟಗಳು ಅವನತಿ ಕಾಣುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಸಂಘದ ನಿರ್ದೇಶಕ ಎನ್.ಸ್ವಾಮಿ ಮಾತನಾಡಿ, ಸಮುದಾಯ…
ಕುಶಾಲನಗರ ಮಾ.7 : ನಗರದ ರಾಜಸ್ಥಾನ ಸಮಾಜ ಮತ್ತು ಸಿರ್ವಿ ಸಮುದಾಯ ಬಾಂಧವರು ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಾರುಕಟ್ಟೆ ರಸ್ತೆ ಬಳಿಯಿರುವ ಸಮಾಜದ ಕಟ್ಟಡದಲ್ಲಿ ಹೋಳಿಪೂಜೆ, ವಿವಿಧ ಸಾಂಸ್ಕೃತಿಕ ಚಟುವಟಿಕ, ಸಹಭೋಜನ ನಡೆಯಿತು. ಮಹಿಳೆಯರು, ಮಕ್ಕಳು, ಪುರುಷರಾದಿಯಾಗಿ ಪರಸ್ಪರ ಬಣ್ಣ ಹಚ್ಚಿ ಶುಭಾಶಯ ಕೋರಿ ಸಂಭ್ರಮಿಸಿದರು.
ಮಡಿಕೇರಿ ಮಾ.7 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮಾರ್ಚ್, 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಳಾಂಗಣ ಕ್ರೀಡಾಂಗಣದ ಬ್ಯಾಡ್ಮಿಂಟನ್ ಕೋರ್ಟ್, ಟೇಬಲ್ಟೆನ್ನಿಸ್, ಜಿಮ್ ಹಾಗೂ ಈಜುಕೊಳದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರವೇಶ ನೀಡುವುದರ ಮೂಲಕ ಮಹಿಳಾ ದಿನಾಚರಣೆ ನಡೆಯಲಿದೆ. ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.






