ಲೇಖಕ: admin

ಮಡಿಕೇರಿ ಜ.2 : ಜಿಲ್ಲಾ ದಿವ್ಯಾಂಗರ ಒಕ್ಕೂಟ ಹಾಗೂ ಮಡಿಕೇರಿ ನಗರಸಭೆ ಸಂಯುಕ್ತಾಶ್ರಯದಲ್ಲಿ ಜ.4 ರಂದು ದಿವ್ಯಾಂಗರ ದಿನಾಚರಣೆ ಹಾಗೂ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಕೇತ್ ಪೂವಯ್ಯ, ನಾಪಂಡ ಮುತ್ತಪ್ಪ, ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷೆ ಎನ್.ಕೆ.ಈಶ್ವರಿ ಪಾಲ್ಗೊಳ್ಳಲಿದ್ದಾರೆ.  

Read More

ವಿರಾಜಪೇಟೆ ಜ.2 : ಮಲೆತಿರಿಕೆ ಬೆಟ್ಟದ ಶ್ರೀ ಅಯ್ಯಪ್ಪ ಸ್ಪಾಮಿ ದೇವಾಲಯದ ವಾರ್ಷಿಕ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಅಯ್ಯಪ್ಪ ಸ್ಪಾಮಿ ಚಲನವಲನಉಳ್ಳ ಸ್ತದ್ಧಚಿತ್ರ, ಅಯ್ಯಪ್ಪ ಸ್ಪಾಮಿ ಮಾಲಾಧರಿಗಳ ಭಜನೆ, ದೀಪಾರತಿಯ ಶೋಭಯಾತ್ರೆಯೊಂದಿಗೆ ವಾರ್ಷೀಕ ಉತ್ಸವ ತೆರೆಕಂಡಿತು. ಮುಂಜಾನೆಯಿಂದಲೇ ಶ್ರೀ ಅಯ್ಯಪ್ಪ ಸ್ವಾಮಿಗೆ ಗಣಪತಿ ಹೊಮ, ಲಕ್ಷ್ಮೀ ಪೂಜೆ ಸರಸ್ಪತಿ ಪೂಜೆ, ತುಲಭಾರ ಸೇವೆ ಲಕ್ಷಾರ್ಚನೆ ಹಾಗೂ ಮಾಹಾಪೂಜೆ ಜರುಗಿತು. ನಂತರ ಗರುಡ ಪಕ್ಷಿಯ ಆಗಮಾನಗೊಂಡು ಗರುಡಕಂಭಕ್ಕೆ ಮೂರು ಸುತ್ತಿನ ಪ್ರದಕ್ಷಿಣೆಯೊಂದಿಗೆ ಹಿಂದಿರುಗಿತು. ಮಾಹಾಪೂಜೆ ಬಳಿಕ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಬೆಟ್ಟದ ತಪ್ಪಲಿನಿಂದ ಶ್ರೀ ಅಯ್ಯಪ್ಪ ಸ್ಪಾಮಿಯ ಶೋಭಯಾತ್ರೆ ಆರಂಭಗೊಂಡಿತು. ಮೆರವಣಿಗೆಯು ತೆಲುಗರ ಬೀದಿ, ದೊಡ್ಡಟ್ಟಿ ಚೌಕಿ, ಎಫ್.ಎಂ.ಸಿ ರಸ್ತೆ, ಮಲಬಾರ್ ರಸ್ತೆಯ ಶ್ರೀ ಚೈತನ್ಯ ಮಠಪುರ, ಮುತ್ತಪ್ಪ ದೇವಾಲಯದಲ್ಲಿ ಕೊನೆಗೊಂಡಿತು. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಶೋಭಯಾತ್ರೆಯಲ್ಲಿ ಹೆಣ್ಣು ಮಕ್ಕಳ ದೀಪಾರತಿ ಸೇವೆ, ಶ್ರೀ ಅಯ್ಯಪ್ಪ…

Read More

ಮಡಿಕೇರಿ ಜ.2 :  ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಅನನ್ಯ ಸೇವೆಗಾಗಿ ಮೈಸೂರು ಹಾಗೂ ಹಾಸನ ಬ್ಯುರೊ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ “ಕಾವೇರಿ ಕರ್ನಾಟಕ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾವೇರಿ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಅಕಾಡೆಮಿ ಈ ಪ್ರಶಸ್ತಿ ಕೊಡಮಾಡುತ್ತಿದೆ. ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಗಲೇ ಮೈಸೂರಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ವಿದ್ಯಾನಿಧಿ ಪ್ರಶಸ್ತಿ, ಪತ್ರಿಕೋದ್ಯಮದಲ್ಲಿ ರಾಜ್ಯಮಟ್ಟದ 10 ಪ್ರಶಸ್ತಿ, ಯುಜಿಸಿಯಿಂದ ಚಿನ್ನದ ಪದಕ ಪಡೆದಿದ್ದಾರೆ. ಇಲ್ಲಿಯವರೆಗೆ 31 ಕೃತಿಗಳನ್ನು ಬರೆದಿದ್ದಾರೆ.  

Read More

ಮಡಿಕೇರಿ ಜ.2 :  ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ  ಮುಂದಿನ 3 ವರ್ಷ ಅವಧಿಗೆ ಅಧ್ಯಕ್ಷರಾಗಿ ಹೆಚ್.ಪಿ.ರವೀಶ್ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವೀಣಾ, ಖಜಾಂಚಿಯಾಗಿ ರಾಜಶೇಖರ ಆಯ್ಕೆಯಾಗಿದ್ದಾರೆ. ರಾಜ್ಯ ಪರಿಷತ್ ಸ್ಥಾನಕ್ಕೆ ಉಳಿದ 6  ಪದಾಧಿಕಾರಿಗಳು ಆಯ್ಕೆಯಾಗಿದ್ದು, ಕಕ್ಕಬ್ಬೆ ಗ್ರಾ.ಪಂ ಪಿಡಿಒ ಅಶೋಕ್ ಕುಮಾರ್ ಬಿ.ವೈ, ಉಪಾಧ್ಯಕ್ಷ ರಾಗಿ ವಾಲ್ನೂರು ತ್ಯಾಗತ್ತೂರು ಪಿಡಿಒ ಲೋಕೇಶ್, ಸಂಘಟನಾ ಕಾರ್ಯದರ್ಶಿಯಾಗಿ ಪೊನ್ನಂಪೇಟೆ ಪಿಡಿಒ ಪುಟ್ಟರಾಜು,  ಲಿಖಿತಾ, ಕ್ರೀಡಾ ಕಾರ್ಯದರ್ಶಿಯಾಗಿ ಮದೆನಾಡು ಪಿಡಿಒ ನಂಜುಂಡಸ್ವಾಮಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಾಳಿಬೀಡು ಪಿಡಿಒ ಶಶಿಕಿರಣ್  ಅವಿರೋಧ ಆಯ್ಕೆಯಾಗಿದ್ದಾರೆ. ಮಡಿಕೇರಿ ತಾ.ಪಂ  ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಮೋಹನ್ ಕುಮಾರ್,ಚುನಾವಣಾ ಸಿಬ್ಬಂದಿಗಳಾದ ಹುಸೇನ್ ಮುಲ್ಲಾ, ದೀಪ್ತಿ  ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆ ಪ್ರಕ್ರಿಯೆ ನಡೆಸಿದರು.  ನೊಂದಣಿಯಾದ 78 ಮತದಾರರಲ್ಲಿ 75 ಮತದಾರರು ತಮ್ಮ ಹಕ್ಕು ಚಲಾಯಿಸಿದರು.  ಮತದಾರರಿಗೆ ಇಲಾಖೆ  ಆಯುಕ್ತರು ಓಓಡಿ ಸೌಲಭ್ಯ ಕಲ್ಪಿಸಿದ್ದ ರು.  ಕಾನೂನು ಸಲಹೆಗಾರ ಹಾಗೂ ಗೌರವಾಧ್ಯಕ್ಷ ಹುದ್ದೆಗೆ ಜಿಲ್ಲಾ ಸಮಿತಿ…

Read More

ಮಡಿಕೇರಿ ಜ.2 :  ಗೋಣಿಕೊಪ್ಪಲು ಬೈಪಾಸ್ ಕಾಂಕ್ರೀಟ್ ರಸ್ತೆ ಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಗೋಣಿಕೊಪ್ಪಲು ಗ್ರಾ.ಪಂ.ಬೈಪಾಸ್ ರಸ್ತೆ ರೂ.55 ಲಕ್ಷ, ಗೋಣಿಕೊಪ್ಪಲು ಜ್ಯೂಸ್ ಫ್ಯಾಕ್ಟರಿ ರಸ್ತೆ ಅಭಿವೃದ್ಧಿ ರೂ.8 ಲಕ್ಷ, ಗೋಣಿಕೊಪ್ಪಲು ಸಂತ ಥೋಮಸ್ ಶಾಲಾ ಭಾಗದ ರಸ್ತೆ ಅಭಿವ್ಯಕ್ತಿ ರೂ.6.25 ಲಕ್ಷ, ಗೋಣಿಕೊಪ್ಪಲು ಅಂಚೆ ಕಚೇರಿ ರಸ್ತೆ ಅಭಿವೃದ್ಧಿ ರೂ.4.75 ಲಕ್ಷ, ಗೋಣಿಕೊಪ್ಪಲು ಮಾರ್ಕೆಟ್ ಹಿಂಭಾಗ ರಸ್ತೆ ಅಭಿವೃದ್ಧಿ ರೂ.5 ಲಕ್ಷ,,  ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಮುಂಭಾಗ ರಸ್ತೆ ಅಭಿವೃದ್ಧಿ ರೂ.4.00 ಲಕ್ಷ,, ಸರ್ಕಾರಿ ಆಸ್ಪತ್ರೆ ಹಿಂಭಾಗ ರಸ್ತೆ ಅಭಿವೃದ್ಧಿ ರೂ.3.75 ಲಕ್ಷ, ಆಟೋ ಮಾಲೀಕರ, ಚಾಲಕರ ಸಂಘದ ಕಟ್ಟಡ ಮೇಲ್ಛಾವಣಿ ನಿರ್ಮಾಣ ರೂ.3 ಲಕ್ಷ, ಒಂದನೇ ವಿಭಾಗ ರಸ್ತೆ ಅಭಿವೃದ್ದಿ ರೂ.1.50 ಲಕ್ಷ  ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.  

Read More

ಗೋಣಿಕೊಪ್ಪಲು, ಜ.2 : ಕಾನೂರು ಸಮೀಪದ ಬೊಮ್ಮಾಡು ಸರ್ಕಾರಿ ಆಶ್ರಮ ಶಾಲೆಯಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹೊಸ ವರ್ಷವನ್ನು ವಿಶೇಷವಾಗಿ ಆಚರಿಸಿದರು. ಎನ್ ಎಸ್ ಎಸ್ ಅಧಿಕಾರಿಗಳಾದ ಎಂ.ಎನ್.ವನಿತ್ ಕುಮಾರ್ ಮತ್ತು ಎನ್.ಪಿ.ರೀತಾ ಅವರ ನೇತೃತ್ವದಲ್ಲಿ ಬೊಮ್ಮಾಡು ಆಶ್ರಮ ಶಾಲೆಗೆ ತೆರಳಿದ ಸ್ವಯಂ ಸೇವಕರು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.  ನಂತರ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ನೃತ್ಯ ಹಾಗೂ ಹಾಡಿನ ಮೂಲಕ ರಂಜಿಸಿದರು. ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜು ಉಪನ್ಯಾಸಕ ಎ.ಎ.ಪೊನ್ನಪ್ಪ, ರಂಜಿತ್, ಆಶ್ರಮ ಶಾಲೆ ಸಿಬ್ಬಂದಿಗಳು, ಎನ್ ಎಸ್ ಎಸ್ ನಾಯಕ ದರ್ಶನ್, ಕಲನ್ ಕಾರ್ಯಪ್ಪ, ರೋಷನ್, ಮಿಥುನ್ ಹಾಗೂ ಸ್ವಯಂ ಸೇವಕರು ಇದ್ದರು.  

Read More

ಬೆಂಗಳೂರು ಜ.2 :  ಹಂಪಿ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಡಾ. ತಂಬಂಡ ವಿಜಯ್ ಪೂಣಚ್ಚ ಬರೆದಿರುವ ಮೂರು ಇತಿಹಾಸ ಪುಸ್ತಕಗಳನ್ನ ಆದಿ ಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿಗಳು ಬಿಡುಗಡೆ ಮಾಡಿದರು. ಬೆಂಗಳೂರಿನ ಅರಮನೆ ರಸ್ತೆಯಯಲ್ಲಿರುವ ಕೊಂಡಜ್ಜಿ ಬಸಪ್ಪ ಸದಾನಂದ ಗೌಡ ಸಭಾಂಗಣದಲ್ಲಿ ಪುಸ್ತಕಗಳನ್ನ ಬಿಡುಗಡೆಗೊಳಿಸಲಾಯಿಯಿತು. ಮಾಜಿ ಕೇಂದ್ರ ಸಚಿವ ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ, ಚಾಣಕ್ಯ ವಿವಿ ಸಂಶೋಧಕ ಪ್ರೊ. ಮತ್ತಿಘಟ್ಟ ಎಸ್. ಚೈತ್ರ, ಹಂಪಿ ಕನ್ನಡ ವಿವಿ ಕುಲಪತಿ ಸ.ಚಿ. ರಮೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಡಾ.ತಂಬಂಡ ವಿಜಯ್ ಪೂಣಚ್ಚ ಅವರ ರಾಜೇಂದ್ರ ನಾಮೆ ಮರು ಓದು, ಅಮರ ಸುಳ್ಯ ಸಂಗ್ರಾಮ 1837 ಮತ್ತು ಕಾಡು ಮಕ್ಕಳ ಕೂಗು ಪುಸ್ತಕಗಳನ್ನು ಗಣ್ಯರ ಅನಾವರಣಗೊಳಿಸಿದರು. ಸಮಾರಂಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಬಹಳಷ್ಟು ಸಂದರ್ಭಗಳಲ್ಲಿ ಇತಿಹಾಸವನ್ನು ರಾಜಕೀಯ ಕರಪತ್ರಗಳಂತೆ ರಚಿಸಲಾಗಿದ್ದು, ಇತಿಹಾಸ ದರ್ಶನ ಮತ್ತು ಮರು ದರ್ಶನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟುರು. ಇದೇ ಸಂದರ್ಭ ಮಾತನಾಡಿದ ಸದಾನಂದ…

Read More

ನಾಪೋಕ್ಲು ಜ.2 : ಬಲ್ಲಮಾವಟಿ ಗ್ರಾ.ಪಂ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟ ಹಾಗೂ ಅಂತರ ಗ್ರಾಮ ಹಾಕಿ ಪಂದ್ಯಾವಳಿಯಲ್ಲಿ ನೆಲಜಿ ಫಾರ್ಮರ್ಸ್ ಕ್ಲಬ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿಯ ಅಪೋಲೋ ತಂಡದ ವಿರುದ್ಧ ಆಟವಾಡಿದ ನೆಲಜಿ ಫಾರ್ಮರ್ಸ್ ಕ್ಲಬ್ ತಂಡವು 2-1 ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಹಾಕಿ ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ಟ್ರೋಫಿ ಹಾಗೂ ಮುಕ್ಕಾಟಿರ ವಿಠಲ ಕರಂಬಯ್ಯ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ಅಪೊಲೋ ಬಲ್ಲಮಾವಟಿ ತಂಡಕ್ಕೆ ಎಸ್ ಎಲ್ ಎನ್ ಸಂಸ್ಥೆಯ ಸಂತೋಷ್ ಬಾಬು ಹಾಗೂ ಸಂದೀಪ್ ಬಾಬು ನೀಡಿದ ಟ್ರೋಫಿ ಹಾಗೂ ದೊಡ್ಡ ಪುಲಿಕೋಟುವಿನ ಪೆಬ್ಬೆಟ್ಟಿರ ಯತೀಶ್ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ವಿವಿಧ ಗ್ರಾಮಗಳ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಹಗ್ಗ ಜಗ್ಗಾಟದ…

Read More

ಮಡಿಕೇರಿ ಜ.1 : ಕರ್ನಾಟಕ ಶಿಲ್ಪಕಲೆಯ ತವರೂರು ಆಗಿದ್ದು, ನಾಡಿನ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಹಕಾರದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ನಡೆದ ‘ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಇತಿಹಾಸ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಸಾಕ್ಷಿ ಎಂದು ನುಡಿದರು. ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಶಿಲ್ಪಕಲಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿಗೆ ನೀಡಿರುವ ಅಮರಶಿಲ್ಪದ ಕೊಡುಗೆಯನ್ನು ಉಳಿಸಿಕೊಂಡು ಹೋಗುವಂತಾಗಬೇಕು ಎಂದು ಡಾ.ನಂಜುAಡೇಗೌಡ ಅವರು ಕರೆ ನೀಡಿದರು. ಜಿಲ್ಲಾ…

Read More

ಮಡಿಕೇರಿ ಜ.1 : ತ್ಯಾಗತ್ತೂರು ಗ್ರಾಮದ ಕೃಷ್ಣಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಭತ್ತದ ಗದ್ದೆಗಳಿಗೆ ನುಗ್ಗಿರುವ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ಫಸಲನ್ನು ತಿಂದು ತೇಗಿದೆ. ಗದ್ದೆಗಳು ಮಾತ್ರವಲ್ಲದೆ ತೋಟಗಳಿಗೂ ನುಗ್ಗುತ್ತಿರುವ ಕಾಡಾನೆಗಳು ಕಾಫಿ ಹಣ್ಣನ್ನು ತಿಂದು ನಷ್ಟಪಡಿಸಿವೆ. ಕಳೆದ ಅನೇಕ ದಿನಗಳಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಸ್ಪಂದನೆ ದೊರೆಯುತ್ತಿಲ್ಲವೆಂದು ಭತ್ತದ ಫಸಲು ಕಳೆದುಕೊಂಡ ಕೃಷಿಕ ಎ.ವಿ.ಬಸಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಗದ್ದೆಯನ್ನು ಸಂಪೂರ್ಣವಾಗಿ ಕಾಡಾನೆಗಳು ನಾಶ ಮಾಡಿವೆ, ಅಕಾಲಿಕ ಮಳೆಯ ನಡುವೆ ಸಾಲ ಮಾಡಿ ಭತ್ತವನ್ನು ಬೆಳೆಸಲಾಯಿತು. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ, ಸರ್ಕಾರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಕಾಡಾನೆ ದಾಳಿಯಿಂದ ಅಪಾರ ನಷ್ಟ ಅನುಭವಿಸಿರುವ ಸ್ಥಳೀಯ ಕೃಷಿಕರಾದ ನಂದೀಶ್ ಹಾಗೂ ಪ್ರದೀಪ್ ಅವರು ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ತಕ್ಷಣ ಮುಂದಾಗಬೇಕೆAದು ಒತ್ತಾಯಿಸಿದ್ದಾರೆ.…

Read More