ಮಡಿಕೇರಿ ಮಾ.6 : ಭ್ರಷ್ಟಾಚಾರ ಮುಕ್ತ ಕರ್ನಾಟಕ ಹೋರಾಟದ ಭಾಗವಾಗಿ ಮಾ.9 ರಂದು ಬೆಳಗ್ಗೆ 9 ಗಂಟೆಯಿoದ 11 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕೆಪಿಸಿಸಿ ಕರೆ ನೀಡಿದೆ. ಕೊಡಗಿನಲ್ಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಸ್ವಯಂ ಪ್ರೇರಿತ ಬಂದ್ ಮೂಲಕ ಬೆಂಬಲ ಸೂಚಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಬಂದ್ ಗೆ ಕರೆ ನೀಡಿದರು. ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದoತೆ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಮನವಿ ಮಾಡುತ್ತೇವೆ, ಯಾರ ಮೇಲೂ ಒತ್ತಡ ಹೇರುವುದಿಲ್ಲ. ಪ್ರತಿಭಟನೆ ಅಥವಾ ರಸ್ತೆ ತಡೆ ಮಾಡುವುದಿಲ್ಲ, ರಾಜ್ಯದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರದ ವಿರುದ್ಧ ಜನರು ಕೂಡ ಜಾಗೃತರಾಗಿದ್ದು, ಬಂದ್ ಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ::: ಗ್ರೇಟರ್ ರಾಜಾಸೀಟ್ನಲ್ಲಿ ದುರುಪಯೋಗ ::: ಸುಮಾರು…
ಲೇಖಕ: admin
ಸೋಮವಾರಪೇಟೆ ಮಾ.6 : ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವಕಾಶ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಸೋಮವಾರಪೇಟೆ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಸೋಮವಾರ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಮತ್ತು ಸಾಧನ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರೊಂದಿಗೆ ರೈತರಿಗೂ ಕೂಡ ಸಹಾಯ ಮಾಡಲು ಯೋಜನೆ ಮುಂದಾಗಿದ್ದು, ಇತ್ತೀಚೆಗೆ ಯಂತ್ರೋಪಕರಣಗಳನ್ನು ಬಾಡಿಗೆ ರೂಪದಲ್ಲಿ ನೀಡುತ್ತಿದೆ. ನಾನೂರು ಕುಟುಂಬಕ್ಕೂ ಹೆಚ್ಚು ಸದಸ್ಯರು ಹೆಚ್ಚು ಸಾಲವನ್ನು ಪಡೆದಿರುವುದು ಸರಿ. ಆದರೆ, ಸಾಲವನ್ನು ಸಕಾಲದಲ್ಲಿ ಹಿಂತಿರುಗಿಸಬೇಕೆಂದು ಮನವಿ ಮಾಡಿದರು. ಗುಂಪಿನ ಸದಸ್ಯರಿಗೆ ಏನಾದರೂ ತೊಂದರೆಯಾದಲ್ಲಿ, ತುರ್ತು ಚಿಕಿತ್ಸೆಗೆ ನೆರವಾಗಲು ಸರ್ಕಾರದ ಮೂಲಕ ಅಂಬುಲೆನ್ಸ್ ನೀಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪ್ರಾದೇಶಿಕ ನಿರ್ದೇಶಕರಾದ ವಸಂತ…
ಮಡಿಕೇರಿ ಮಾ.6 : ಗಾಳಿಬೀಡು ಯುವಕರ ಸಂಘದ ವತಿಯಿಂದ ಪ್ರೌಢ ಶಾಲೆಯ ಆಟದ ಮೈದಾನದಲ್ಲಿ ನಡೆದ ಗಾಳಿಬೀಡು ಚಾಂಪಿಯನ್ಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯಲ್ಲಿ ಹೆಬ್ಬೆಟ್ಟಗೇರಿಯ ಕೆ.ಪಿ.ರಾಕರ್ಸ್ ಚಾಂಪಿಯನ್ಪಟ್ಟ ಪಡೆಯಿತು. ಗಾಳಿಬೀಡಿನ ಕೆ.ಕೆ ಫ್ರೆಂಡ್ಸ್ ಕೆ.ಪಿ ರಾಕರ್ಸ್ ಎದುರು ಪರಾಭವಗೊಂಡು ರನ್ನರ್ಸ್ ಸ್ಥಾನ ಪಡೆದುಕೊಂಡರೆ, ಹೆಚ್.ಡಿ ಈಗಲ್ಸ್ ತಂಡ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವೈಯಕ್ತಿಕ ಬಹುಮಾನಗಳು : ಬೆಸ್ಟ್ ಬ್ಯಾಟ್ಸ್ ಮನ್ ರಂಜು ಕೊಂಬಾರನ, ಬೆಸ್ಟ್ ಬೌಲರ್ ಪಿ.ಸಿ.ರಮೇಶ್, ಮ್ಯಾನ್ ಆಫ್ ದಿ ಸೀರಿಸ್ : ರಂಜು ಕೊಂಬಾರನ, ಎನರ್ಜೆಟಿಕ್ ಪ್ಲೇಯರ್ ಧನಿಕ್, ಬೆಸ್ಟ್ ಪರ್ಫಾರ್ಮರ್ ಗಣೇಶ್ ಪೂಜಾರಿ ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡರು. ಆಕರ್ಷಕ ಬಹುಮಾನವಾಗಿ ಕಾಶಿ ಸಹೋದರರು ನೀಡಿದ ಸೈಕಲ್ ನೆರೆದವರು ಗಮನಸೆಳೆಯಿತು. ಸಮಾರೋಪ : ಗಾಳಿಬೀಡು ಚಾಂಪಿಯನ್ಸ್ ಕ್ರಿಕೆಟ್ ಲೀಗ್ ಫೈನಲ್ ಪಂದ್ಯಾವಳಿಗೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೋಳುಮುಡಿಯನ ಅನಂತ್ ಕುಮಾರ್ ಫೈನಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ…
ಸೋಮವಾರಪೇಟೆ ಮಾ.6 : ಒಕ್ಕಲಿಗರ ಯುವ ವೇದಿಕೆ ಸೋಮವಾರಪೇಟೆ, ಅಮೇಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಮತ್ತು ಕೊಡಗು ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಯ ಪ್ರತಿಷ್ಠಿತ ಒಕ್ಕಲಿಗರ ಕಪ್ನ್ನು ಹೈದರಾಬಾದ್ನ ಸೌತ್ಸೆಂಟ್ರಲ್ ರೈಲ್ವೆ ತಂಡ ಮುಡಿಗೇರಿಸಿಕೊಂಡಿತು. ಕರ್ನಾಟಕ ಇಲೆವೆನ್ ತಂಡ ರನ್ನರ್ ಆಫ್ ಆಯಿತು. ರಾತ್ರಿ ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ 44-30 ಅಂಕಗಳಲ್ಲಿ ಗೆಲುವು ಸಾಧಿಸಿದ ತಂಡ 2ಲಕ್ಷ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ಪಡೆಯಿತು. ಕರ್ನಾಟಕ ತಂಡ 1ಲಕ್ಷ ರೂ. ನಗದು ಹಾಗೂ ಟ್ರೋಫಿ ತನ್ನದಾಗಿಸಿಕೊಂಡಿತು. ಮೂರನೇ ಬಹುಮಾನವನ್ನು ಮುಂಬೈ ಯುವ ಪಲ್ಟನ್, ಚತುರ್ಥ ಬಹುಮಾನವನ್ನು ಹರ್ಯಾಣ ತಂಡ ಪಡೆಯಿತು. ಮೊದಲ ಕ್ವಾರ್ಟರ್ ಫೈನಲ್ನಲ್ಲಿ ಬಲಿಷ್ಠ ಬ್ಯಾಂಕ್ ಆಫ್ ಬರೋಡ ತಂಡವನ್ನು, ಮುಂಬೈನ ಯುವ ಪಲ್ಟನ್ ತಂಡ 36-32 ಅಂಕಗಳಿಂದ ಸೋಲಿಸಿ ಸೆಮಿಫೈನಲ್ಗೇರಿತು. ಸೌತ್ಸೆಂಟ್ರಲ್ ರೈಲ್ವೆ…
ಮಡಿಕೇರಿ ಮಾ.6 : ಕಾಡು ಹಣ್ಣುಗಳು ಅಳಿವಿನಂಚಿಗೆ ಬಂದಿರುವುದು ಬಹಳ ಆತಂಕಕಾರಿ ಬೆಳವಣಿಗೆ. ಕೊಡಗಿನಲ್ಲಿ ಮರೆಯಾಗುತ್ತಿರುವ ಅಪರೂಪದ ಕಾಡುಹಣ್ಣುಗಳನ್ನು ಬೆಳೆದು ಸಂರಕ್ಷಿಸಲು ಆಸಕ್ತಿ ವಹಿಸಬೇಕಾಗಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎನ್.ಎಂ. ರವಿ ಕಾಳಪ್ಪ ಮನವಿ ಮಾಡಿದರು. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆಲವು ವರ್ಷಗಳ ಹಿಂದೆ ಕೊಡಗಿನ ಕಾಡು ಮೇಡುಗಳ ಬಗ್ಗೆ ಜನರಿಗೆ ವಿಶೇಷ ಸೆಳೆತ, ಆಸಕ್ತಿ ಇತ್ತು. ಬೇಸಿಗೆಕಾಲ ಮಳೆಗಾಲ, ಚಳಿಗಾಲ ಹೀಗೆ ವಿವಿಧ ಸಮಯದಲ್ಲಿ ಕಾಡಿನತ್ತ ನಾವು ಹೆಜ್ಜೆ ಹಾಕುತ್ತಿದ್ದೆವು. ಕಾಡಿನ ಪರಿಸರ ಮನಸ್ಸನ್ನು ಉಲ್ಲಸಿತವಾಗಿಸುವ ಜತೆಗೆ ಅಲ್ಲಿ ಸಿಗುತ್ತಿದ್ದ ಬಗೆಬಗೆಯ, ರುಚಿ ರುಚಿಯಾದ ಹಣ್ಣುಗಳು ಕಾಡಿನತ್ತ ನಾವು ಹೆಚ್ಚಾಗಿ ಹೋಗುವುದಕ್ಕೆ ಮುಖ್ಯ ಕಾರಣವಾಗಿತ್ತು. ನಮ್ಮ ಆರೋಗ್ಯ ವೃದ್ಧಿಗೂ ಕಾಡುಹಣ್ಣುಗಳು ಬಹು ದೊಡ್ಡ ಕೊಡುಗೆ ನೀಡುತ್ತಿದ್ದವು. ಆದರೆ ಬದಲಾಗುತ್ತಿರುವ ದಿನಮಾನದಲ್ಲಿ ಕಾಡಿನೆಡೆಗೆ ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಜತೆಗೆ ಕಾಡು ಹಣ್ಣುಗಳ ಬಗೆಗಿದ್ದ ಆಸಕ್ತಿ ಇಂದಿನ ತಲೆಮಾರಿನಲ್ಲಿ ಕಾಣುತ್ತಿಲ್ಲ. ವಿಪರ್ಯಾಸ ಎಂದರೆ ಕೊಡಗಿನಲ್ಲಿ ಸಿಗುತ್ತಿದ್ದ ಅದೇಷ್ಟೋ ಬಗೆಯ…
ನಾಪೋಕ್ಲು ಮಾ.6 : ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಹಾಗೂ ಸಂಪಾಜೆ ಸ್ಥಳೀಯ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ರಕ್ತನಿಧಿ ಕೇಂದ್ರ, ರಾಷ್ಟ್ರೀಯ ಸ್ವಯಂಸೇವಾ ಯೋಜನೆ, ನಾಪೋಕ್ಲು ಕೆ.ಪಿ.ಎಸ್ ಪ್ರೌಢಶಾಲೆ, ಬೇತು ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ, ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದೊಂದಿಗೆ ನಡೆದ ಶಿಬಿರವನ್ನು ನಾಪೋಕ್ಲು ಕೆ.ಪಿ.ಎಲ್ ಪ್ರೌಢಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಎಂ.ಎಸ್.ಶಿವಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಮ್ಮ ದೇಶ , ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಅಪಘಾತಗಳಿಂದ ಹಾಗೂ ಇನ್ನಿತರ ತುರ್ತು ಆರೋಗ್ಯ ಸಮಸ್ಯೆಗಳಿಂದ ಜನರಿಗೆ ರಕ್ತಗಳು ಸಿಗದೇ ಪ್ರಾಣ ಕಳೆದುಕೊಳ್ಳುವ ಸನ್ನಿವೇಶಗಳನ್ನು ತಡೆಗಟ್ಟಲು ಇಂತಹ ಸಂಸ್ಥೆಗಳು ರಕ್ತವನ್ನು ಶೇಖರಿಸಿಕೊಂಡು ಹಲವಾರು ಜೀವಗಳನ್ನು ಉಳಿಸುವ ಪ್ರಯತ್ನ ಶ್ಲಾಘನೀಯ ಎಂದರು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ರಕ್ತವನ್ನು ದಾನಮಾಡಿ ಇಂತಹ ಸಂಸ್ಥೆಗಳೊಂದಿಗೆ ಕೈಜೋಡಿಸಬೇಕೆಂದು ಸಲಹೆ ನೀಡಿದರು. ರಕ್ತ ನಿಧಿ ಕೇಂದ್ರದ…
ಮಡಿಕೇರಿ ಮಾ.6 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಮಾ.7 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದೊರೆ ಅವರು ಕೋರಿದ್ದಾರೆ.
ಮಡಿಕೇರಿ ಮಾ.6 : ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಕ್ಯಾಬ್ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆಯನ್ನು ‘ಸೇವಾಸಿಂಧು’ ವೆಬ್ಪೋರ್ಟಲ್ ಮೂಲಕ 2022 ರ ನವೆಂಬರ್, 8 ರಂದು ಪ್ರಾರಂಭಿಸಲಾಗಿದೆ. ಈ ಪ್ರಯುಕ್ತ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು/ ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಮತ್ತು ಇತರೇ ಅಗತ್ಯ ದಾಖಲೆಗಳನ್ನು ನೀಡಿ, ಅರ್ಜಿ ಸಲ್ಲಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎನ್.ಮಧುರ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.6 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ 29 ರವರೆಗೆ ಜರುಗಲಿದ್ದು, ಪರೀಕ್ಷೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಕ್ರಮವಸಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಯಾವುದೇ ರೀತಿಯ ಅವ್ಯವಹಾರಗಳಿಗೆ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ‘ಎ’ ಮತ್ತು ‘ಬಿ’ ಗ್ರೂಪ್ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ದೂರದ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾದ ಸಮಯದಲ್ಲಿ ತಲುಪುವಂತಾಗಬೇಕು. ಹಾಗೆಯೇ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು ಮಾರ್ಗಾಧಿಕಾರಿಗಳ ವಾಹನಕ್ಕೆ…
ಮಡಿಕೇರಿ ಮಾ.6 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಡಿಕೇರಿ ಅಂಚೆ ಕಛೇರಿಯ ಸಹಕಾರದೊಂದಿಗೆ ಕಾವೇರಿ ಕ್ಷೇತ್ರದ ತೀರ್ಥ ಮತ್ತು ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಆನ್ ಲೈನ್ ಸೇವೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಇಂದು ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ತಲಕಾವೇರಿಯ 100 ಎಂಎಲ್ ತೀರ್ಥ, ತ್ರಿವೇಣಿ ಸಂಗಮ ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದ ಪಂಚಕಜ್ಜಾಯ, ಕುಂಕುಮ, ಗಂಧವನ್ನು ಒಳಗೊಂಡ ಪ್ರಸಾದದ ಡಬ್ಬಿಯನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಆಸಕ್ತಿ ಇರುವವರು www.indiapost.com ವೆಬ್ ಸೈಟ್ಗೆ ಲಾಗ್ ಇನ್ ಆಗಿ, 300 ರೂ. ಪಾವತಿಸಿ ಪವಿತ್ರ ಕಾವೇರಿ ಕ್ಷೇತ್ರದ ಪ್ರಸಾದಕ್ಕೆ ಬೇಡಿಕೆಯನ್ನು ಸಲ್ಲಿಸಬಹುದು, ಈ ಆನ್ ಲೈನ್ ಬೇಡಿಕೆಗೆ ಅನುಗುಣವಾಗಿ ಅಂಚೆ ಮೂಲಕ ಪ್ರಸಾದವನ್ನು ಸಂಬಂಧಿಸಿದವರಿಗೆ ತಲುಪಿಸಲಾಗುತ್ತದೆ. ::: ದೇಶವ್ಯಾಪಿ ಲಭ್ಯ ::: ಮಡಿಕೇರಿ ಅಂಚೆ ಕಚೇರಿಯ ಸೂಪರಿಂಟೆಂಡೆ0ಟ್ ರಮೇಶ್ ಬಾಬು, ವೆಬ್ ಸೈಟ್ ಮೂಲಕ ಬರುವ ಬೇಡಿಕೆಗೆ ಅನುಗುಣವಾಗಿ ಪ್ರಸಾದವನ್ನು…






