ಮಡಿಕೇರಿ ಜ.1 : ತ್ಯಾಗತ್ತೂರು ಗ್ರಾಮದ ಕೃಷ್ಣಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಭತ್ತದ ಗದ್ದೆಗಳಿಗೆ ನುಗ್ಗಿರುವ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ಫಸಲನ್ನು ತಿಂದು ತೇಗಿದೆ. ಗದ್ದೆಗಳು ಮಾತ್ರವಲ್ಲದೆ ತೋಟಗಳಿಗೂ ನುಗ್ಗುತ್ತಿರುವ ಕಾಡಾನೆಗಳು ಕಾಫಿ ಹಣ್ಣನ್ನು ತಿಂದು ನಷ್ಟಪಡಿಸಿವೆ. ಕಳೆದ ಅನೇಕ ದಿನಗಳಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಸ್ಪಂದನೆ ದೊರೆಯುತ್ತಿಲ್ಲವೆಂದು ಭತ್ತದ ಫಸಲು ಕಳೆದುಕೊಂಡ ಕೃಷಿಕ ಎ.ವಿ.ಬಸಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಗದ್ದೆಯನ್ನು ಸಂಪೂರ್ಣವಾಗಿ ಕಾಡಾನೆಗಳು ನಾಶ ಮಾಡಿವೆ, ಅಕಾಲಿಕ ಮಳೆಯ ನಡುವೆ ಸಾಲ ಮಾಡಿ ಭತ್ತವನ್ನು ಬೆಳೆಸಲಾಯಿತು. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ, ಸರ್ಕಾರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಕಾಡಾನೆ ದಾಳಿಯಿಂದ ಅಪಾರ ನಷ್ಟ ಅನುಭವಿಸಿರುವ ಸ್ಥಳೀಯ ಕೃಷಿಕರಾದ ನಂದೀಶ್ ಹಾಗೂ ಪ್ರದೀಪ್ ಅವರು ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ತಕ್ಷಣ ಮುಂದಾಗಬೇಕೆAದು ಒತ್ತಾಯಿಸಿದ್ದಾರೆ.…
ಲೇಖಕ: admin
ಮಡಿಕೇರಿ ಜ.1 : ರಾಷ್ಟ್ರಮಟ್ಟದ ಅಥ್ಲೆಟಿಕ್ಸ್’ಗೆ ಆಯ್ಕೆಯಾಗಿರುವ ಸ್ನೇಹಾಳಿಗೆ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯಿಂದ 10 ಸಾವಿರ ರೂ. ಆರ್ಥಿಕ ನೆರವು ನೀಡಲಾಯಿತು. ಜ.8 ರಂದು ಅಸ್ಸಾಂನ ಕಾಮರೂಪ್’ನಲ್ಲಿ ನಡೆಯಲಿರುವ 57ನೇ ನ್ಯಾಷನಲ್ ಕ್ರಾಸ್ ಕಂಟ್ರಿ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್’ಗೆ ಆಯ್ಕೆಯಾಗಿರುವ ಸ್ನೇಹಾಳಿಗೆ ನೆರವು ಕೋರಿ ಸ್ನೇಹಾಳ ಪೋಷಕರು ಜೆಸಿಐ ಅಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದರು. ಜೆಸಿಐ ಸದಸ್ಯರಿಂದ ಸಂಗ್ರಹವಾದ ನಗದನ್ನು ಸೋಮವಾರಪೇಟೆಯ ಪತ್ರಿಕಾ ಭವನದಲ್ಲಿ ಅಧ್ಯಕ್ಷೆ ರುಬೀನಾ ಎಂ.ಎ ಹಸ್ತಾಂತರಿಸಿದರು. ನಂತರ ಸ್ನೇಹಾಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಿಕಟ ಪೂರ್ವ ಅಧ್ಯಕ್ಷೆ ಮಾಯಾಗಿರೀಶ್, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಲೇಡಿ ಜೇಸಿ ಚೇರ್ ಪರ್ಸನ್ ಪವಿತ್ರ ಲಕ್ಷ್ಮಿ ಕುಮಾರ್, ಜೆಸಿ ಚೇರ್ ಪರ್ಸನ್ ರಿಶಾ ಎಸ್ ಎ, ಪ್ರಕಾಶ್ ಕೆ ಎ, ಪುರುಷೋತ್ತಮ್, ನಾಗರಾಜು, ಪೃಥ್ವಿ ಗೌಡ, ಗಿರೀಶ್, ಮನೋಹರ್, ಸುದೀಪ್, ಕೃಷ್ಣ ಮೂರ್ತಿ, ರಾಜೇಶ್, ಕಸ್ತೂರಿ, ಜ್ಯೋತಿ, ಸ್ನೇಹ ಪೋಷಕರು ಮಹೇಶ್ ಮಂಜುಳಾ ಮತ್ತು ಜೆಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜ.1 : ಚಿನ್ನ, ಬೆಳ್ಳಿ ವರ್ತಕರು ಹಾಗೂ ಕೆಲಸಗಾರರ ಸಂಘದ ಮಹಾಸಭೆ ಜ.3 ರಂದು ಸಂಘದ ಅಧ್ಯಕ್ಷ ಪ್ರಶಾಂತ್ ವರ್ಣೇಕರ್ ಅವರ ಅಧ್ಯಕ್ಷತೆಯಲ್ಲಿ ನಗರದ ಶೇಖರ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಮಹಾಸಭೆಯ ಕಾರಣದಿಂದ ಅಂದು ಮಧ್ಯಾಹ್ನ 3 ಗಂಟೆಯ ನಂತರ ಯಾವುದೇ ಚಿನ್ನಾಭರಣ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕೆಂದು ಸಂಘದ ಪ್ರಕಟಣೆ ಮನವಿ ಮಾಡಿದೆ.
ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…






