ಲೇಖಕ: admin

ಮಡಿಕೇರಿ ಜ.26 :   ಬದ್ರಿಯಾ ಸುನ್ನಿ ಮುಸ್ಲಿಂ ಜಮಾಅತ್, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್, ಬದ್ರಿಯಾ ಮದರಸ ಸಂಯುಕ್ತ ಆಶ್ರಯದಲ್ಲಿ 74ನೇ ಗಣರಾಜ್ಯೋತ್ಸವವನ್ನು ಕಡಂಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬದ್ರಿಯಾ ಜಮಾಅತ್ ಆಡಳಿತ ಮಂಡಳಿಯ ಸದಸ್ಯ ಸಲಾಂ ಹಾಗೂ ಬದ್ರಿಯಾ ಮದರಸ ಮುಖ್ಯೋಪಾಧ್ಯಾಯರಾದ ಹ್ಯಾರಿಸ್ ಬಯಾನಿ ಧ್ವಜಾರೋಹಣ ನೇರವೇರಿಸಿದರು. ಈ ಸಂದರ್ಭ ಹಂಝ ಎಡಪಾಲ ದಿನದ ಮಹತ್ವದ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಸಿ.ಎ.ಅಶ್ರಫ್,  ಕೋಶಾಧಿಕಾರಿ ರಜಾಕ್, ಶಂಸುದ್ದಿನ್, ಎಂ.ಎಂ.ನಿಝರ್,  ಮದರಸ ಶಿಕ್ಷಕರಾದ ರಝಕ್ ಮುಸ್ಲಿಯಾರ್ ಹಾಗೂ ಇಸ್ಮಾಯಿಲ್ ಮುಸ್ಲಿಯಾರ್, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಸ್  ಸದಸ್ಯರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.26 :  ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಮುಖ್ಯಸ್ಥರಾದ ಆರ್.ಶ್ರೀನಿವಾಸನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಾಷ್ಟ್ರಕ್ಕಾಗಿ ತ್ಯಾಗ, ಬಲಿದಾನಗೈದ ನಾಯಕರನ್ನು ಸ್ಮರಿಸುವುದರೊಂದಿಗೆ ಅವರ ಆದರ್ಶ ಗುಣಗಳನ್ನು ಅನುಸರಿಸುವುದೇ ನಾವು ದೇಶಕ್ಕೆ ಸಲ್ಲಿಸುವ ನಿಜವಾದ ಗೌರವ ಎಂದರು. ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ, ಗ್ರಂಥಪಾಲಕ ಪಂಕಜ್ ಕುಡ್ತರ್ಕರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಜ.26 : ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಪಿಡಿಒ ಅನಿಲ್ ಕುಮಾರ್ ಮೇಲಿನ ಹಲ್ಲೆಯನ್ನು ಖಾಸಗಿ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ಖಂಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಘಟಕದ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಮೇಲಿನಿಂದ ಮೇಲೆ ನಡೆಯುತ್ತಿದ್ದು, ಸರ್ಕಾರಿ ನೌಕರರು ನಿರ್ಭಯವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ನೌಕರ ವರ್ಗವನ್ನು ಸಂಘಟಿಸಿ ಹೋರಾಟಕ್ಕಿಳಿಯುವ ಸಾಮರ್ಥ್ಯವನ್ನು ನೌಕರರ ಸಂಘಟನೆಗಳು ಹೊಂದಿವೆಯೆಂದು ಎಚ್ಚರಿಕೆ ನೀಡಿದರು. ಸರ್ಕಾರದ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ  ನೌಕರರ ಜೀವ ಭದ್ರತೆಗೆ ಹೆಚ್ಚಿನ ಒತ್ತನ್ನು ನೀಡಿ ನೌಕರರ ಮನೋಸ್ಥರ್ಯ ಹೆಚ್ಚಿಸಲು ಜಿಲ್ಲಾಡಳಿತ ಕ್ರಮ  ಕೈಗೊಳ್ಳಬೇಕು ಮತ್ತು ಈ ಘಟನೆಯಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

Read More

ಮಡಿಕೇರಿ ಜ.26 :   ವಿಂಗ್ಸ್ ಆಫ್ ಫ್ಯಾಶನ್ ನೃತ್ಯ ಸಂಸ್ಥೆ ವತಿಯಿಂದ ಮಕ್ಕಳಿಗಾಗಿ ಫೆ.4 ರಂದು  “ಟ್ಯಾಲೆಂಟ್ ಆಫ್ ಕೂರ್ಗ್” ಸ್ಪರ್ಧೆ ನಡೆಯಲಿದೆ. ನಗರದ ಬಾಲ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಫ್ಯಾಷನ್ ಷೋ, ಫ್ಯಾನ್ಸಿ ಡ್ರೆಸ್ ಮತ್ತು ಜಾನಪದ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ  9632976833 ಸಂಪರ್ಕಿಸುವಂತೆ ಎಂದು ನೃತ್ಯ ಸಂಸ್ಥೆಯ ಸ್ಥಾಪಕರು, ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ತಿಳಿಸಿದ್ದಾರೆ.

Read More

ನಾಪೋಕ್ಲು ಜ.26 : ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ಸರಕಾರಿ ಶಾಲಾ ಮಕ್ಕಳ ಕಲಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕ್ಲಸ್ಟರ್ ನಲ್ಲಿ ಮಕ್ಕಳಿಗೋಸ್ಕರ ಕಲಿಕಾ ಹಬ್ಬವನ್ನು ಆಚರಿಸಲಾಗುತ್ತಿದ್ದು, ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ಕಲಿಕಾ ಹಬ್ಬವನ್ನು ಎಮ್ಮೆಮಾಡಿನಲ್ಲಿ ಆಚರಿಸಲಾಯಿತು. ಎಮ್ಮೆಮಾಡುವಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆವರಣದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದಲ್ಲಿ ಮಕ್ಕಳು ಆಟ-ಪಾಠಗಳೊಂದಿಗೆ ಸಂಭ್ರಮಿಸಿದರು. ಎಮ್ಮೆಮಾಡು ಮುಖ್ಯರಸ್ತೆಯಲ್ಲಿ ಅತಿಥಿಗಳು, ಶಿಕ್ಷಕರು, ಕ್ಲಸ್ಟರ್ ನ ಶಾಲೆಯಿಂದ ಬಂದ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷ ಆಯಿಸ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮಡಿಕೇರಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಆಧಿಕಾರಿ ಬಡ್ಡಿರ ನಳಿನಿ ಪೂವಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಜ್ಞಾನ ಅಭಿವೃದ್ಧಿಸಿಕೊಳ್ಳಲು ಕಲಿಕಾ ಹಬ್ಬ ಉತ್ತಮ ಅವಕಾಶವಾಗಿದೆ ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಪ್ರಾಥಮಿಕ ಮುಖ್ಯ ಶಿಕ್ಷಕ ಲೋಕೇಶ್…

Read More

ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದರು.

Read More

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.   ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್‌ ಧನಕರ್‌ ಸಾಥ್‌ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ವಾಯುಪಡೆ​​​​​​​​​​​ ತಂಡದಿಂದ ಆಕಾಶ್ ಮಿಸೈಲ್, ಏರ್​​​​ ಡಿಫೆನ್ಸ್​​​​​​​​​​​​​​​ ತಂಡ, ಬ್ರಿಡ್ಜ್​​ ಎಂಜಿನಿಯರಿಂಗ್​​​​​​ ತಂಡ, ​​​​ಬ್ರಹ್ಮೋಸ್​-861 ಮಿಸೈಲ್​​​​ ತಂಡ, ಕೆ9 ವಜ್ರಾ ಟ್ಯಾಂಕ್ ಗ್ರೂಪ್​​ ತಂಡ, ಕ್ವಿಕ್​​ ರೆಸ್ಪಾನ್ಸ್​ ಲಡಾಖ್​ ಸ್ಕೌಟ್​​​ ತಂಡ, ಬಿಎಂಪಿ ಸಾರಥ್​ ಇನ್​ಫೆಂಟ್ರಿ ತಂಡ, ನಾಗಾ ಮಿಸೈಲ್ ಸಿಸ್ಟಂ ತಂಡದಿಂದ ಪರೇಡ್ ನಡೆಯಿತು.

Read More

ಕುಶಾಲನಗರ ಜ.26 :  ಕುಶಾಲನಗರದ ದಾರುಲ್ ಉಲೂಂ‌ ಅರೆಬಿಕ್ ಮದ್ರಸದಲ್ಲಿ 74ನೇ  ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ  ಆಚರಿಸಲಾಯಿತು. ದಾರುಲ್ ಉಲೂಂ ಅರೆಬಿಕ್ ಮದ್ರಸ, ಹಿಲಾಲ್ ಮಸೀದಿ ಹಾಗೂ ಸಮಸ್ತ ಕೇಂದ್ರೀಯ ಸುನ್ನಿ ಬಾಲ್ ವೇದಿ ಇವುಗಳ ಸಂಯುಕ್ತಾಶ್ರಯದಲ್ಲಿ  ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ “ಬಾಲ ಇಂಡಿಯಾ” ಕಾರ್ಯಕ್ರಮವನ್ನು ಹಿಲಾಲ್‌ ಮಸೀದಿಯ ಧರ್ಮಗುರು  ಸೂಫಿ ದಾರಿಮಿರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ಸಂವಿಧಾನ ಅರಿಯುವುದರ ಜೊತೆಗೆ ಸಂವಿಧಾನ ರಚನಾಕಾರರನ್ನು ಸ್ಮರಿಸುವ ಕೆಲಸ ನಮ್ಮಿಂದಾಗಬೇಕು ಎಂದರು. ದಾರುಲ್ ಉಲೂಂ ಹಾಗೂ ಫಾಳಿಲಾ ಶರೀಅತ್ ಕಾಲೇಜಿನ ಪ್ರಾಂಶುಪಾಲ  ತಮ್ಲೀಕ್ ದಾರಿಮಿ ಮಾತನಾಡಿ, ದೇಶದ ಸಂವಿಧಾನದ ಬಗ್ಗೆ, ಶ್ರಮಿಸಿದ ನೇತಾರರು ಹಾಗೂ ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು. ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ದೇಶದ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಸಂವಿಧಾನವಾಗಿದ್ದು, ಇದರ ಆಶಯ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಲಾಲ್ ಮಸೀದಿ‌ ಅಧ್ಯಕ್ಷ  ಎಂ.ಎಂ.ಹುಸೇನ್  ಧ್ವಜಾರೋಹಣ  ನೆರವೇರಿಸಿದರು. ಹಿಲಾಲ್…

Read More

ಮಡಿಕೇರಿ ಜ.26 :  ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿಶ್ವಮಾನವ ಉದ್ಯಾನವನದಲ್ಲಿ ವೇದಿಕೆಯ ಅಧ್ಯಕ್ಷ  ರವಿ ಗೌಡ ಪುತ್ತಳಿಕೆಗೆ ಮಾಲಾರ್ಪಣೆ ಮಾಡಿದರು.  ವಿರಾಜಪೇಟೆ ಅಧ್ಯಕ್ಷ  ವಸಂತ್  ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷ  ನಾಗೇಶ್,  ಉಪ ಕಾರ್ಯದರ್ಶಿ  ಅಕ್ಷಿತ್, ಮಡಿಕೇರಿ ನಗರ ಅಧ್ಯಕ್ಷ  ಭರತ್ , ಮಹಿಳಾ ಘಟಕದ ಕಾರ್ಯದರ್ಶಿ  ಪೂರ್ಣಿಮಾ, ನಿರ್ದೇಶಕರಾದ ಲಿಲ್ಲಿಗೌಡ ಸದಸ್ಯರುಗಳಾದ ಆಕಾಶ್, ಕುಮಾರ್, ಪುನೀತ್, ಸತೀಶ್ ಪೈ, ಉದಯ್ ಕುಮಾರ್ ಹಾಗೂ ಸಮಾಜ ಸೇವಕರಾದ ಜಾನ್ಸನ್ ಪ್ರವೀಣ್ ಹಾಗೂ ಇನ್ನು ಹಲವು ಸದಸ್ಯರು ಪಾಲ್ಗೊಂಡಿದ್ದರು. ವೇದಿಕೆಯ ತಾಲೂಕು ಕಾರ್ಯದರ್ಶಿ ಸತೀಶ್ ಸ್ವಾಗತಿಸಿ,  ಜಿಲ್ಲಾ ಕಾರ್ಯದರ್ಶಿ  ಮೀನಾಜ್ ಪ್ರವೀಣ್  ನೆರೆದಿದ್ದವರನ್ನು ವಂದಿಸಿದರು.

Read More

ಸೋಮವಾರಪೇಟೆ ಜ.26 : ಶನಿವಾರಸಂತೆ ಸಮೀಪದ ಚಂಗಡಹಳ್ಳಿ ಮಠದ ಜೀರ್ಣೋದ್ಧಾರಕ್ಕಾಗಿ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಮಿತಿಯ ಸಂಚಾಲಕ ಎಂ.ಎಂ.ಹಾಲಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರಾಗಿ ಎಚ್.ಬಿ.ರೇಣುಕಾ, ಆಡಳಿತ ಮಂಡಳಿ ಸದಸ್ಯರಾಗಿ ರುದ್ರೇಶ್, ಪ್ರಸಾದ್, ತೀರ್ಥಾಂಬಿಕೆ, ರಾಜಶೇಖರ್ ಸೇರಿದಂತೆ 17 ಮಂದಿ ಸಮಿತಿಯಲ್ಲಿದ್ದಾರೆ ಎಂದು ಹೇಳಿದರು. ಮಠದ ಅಭಿವೃದ್ಧಿಯನ್ನು ಕಡೆಗಣಿಸಿದ ಬಗ್ಗೆ ಸ್ಥಳೀಯ ಭಕ್ತರು, ಚಿತ್ರದುರ್ಗಾ ಮುರುಘಾಮಠದ ಆಡಳಿತಾಧಿಕಾರಿ ವಸ್ತ್ರದ್ ಅವರಿಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಮೂವರು ವೀಕ್ಷಕರನ್ನು ನೇಮಕ ಮಾಡಿದ್ದರು. ವೀಕ್ಷಕರಾದ ಚಂದ್ರಶೇಖರ್, ಮಲ್ಲಿಕಾರ್ಜುನ, ಅಂಜನಪ್ಪ ಅವರುಗಳು ಮಠಕ್ಕೆ ಆಗಮಿಸಿ, ಭಕ್ತರ ಅಭಿಪ್ರಾಯಗಳನ್ನು ಕಲೆ ಹಾಕಿದರು. ನಂತರ ಮಾ.31ರ ಒಳಗೆ ಮಠಕ್ಕೆ ಸ್ವಾಮೀಜಿಯೊಬ್ಬರನ್ನು ನೇಮಿಸುವ ಭರವಸೆ ನೀಡಿದ್ದಾರೆ. ಹಾಗೂ ಮಠದ ವ್ಯವಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕಿನ ಬಾಚಳ್ಳಿ, ಮಾದಾಪುರ, ಪಿರಿಯಾಪಟ್ಟಣದಲ್ಲಿ ಮಠಗಳಿದ್ದು, ಅಲ್ಲಿನ ಸಮಸ್ಯೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಯಲಿದೆ ಎಂದು ಹಿತರಕ್ಷಣ ಸಮಿತಿಯ ಕಾನೂನು…

Read More