ಭಾರತ ದೇಶದಲ್ಲಿ ಪ್ರತಿ ವರ್ಷ ಜನವರಿ 26 ಅನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ. 26 ಜನವರಿ 1950 ರಂದು ಭಾರತದ ಸಂವಿಧಾನ ಜಾರಿಗೆ ಬಂದಾಗಿನಿಂದ ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಾಮುಖ್ಯತೆಯನ್ನು ಗೌರವಿಸಲು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಭಾರತ ಸ್ವತಂತ್ರವಾದ ನಂತರ ಸಂವಿಧಾನ ಸಭೆಯನ್ನು ಘೋಷಿಸಲಾಯಿತು ಸಂವಿಧಾನ ಸಭೆಯ ಸದಸ್ಯರನ್ನು ಭಾರತದ ರಾಜ್ಯ ಅಸೆಂಬ್ಲಿಗಳ ಚುನಾಯಿತ ಸದಸ್ಯರು ಆಯ್ಕೆ ಮಾಡಿದರು. ಡಾ.ಭೀಮರಾವ್ ಅಂಬೇಡ್ಕರ್, ಜವಾಹರಲಾಲ್ ನೆಹರು, ಡಾ.ರಾಜೇಂದ್ರ ಪ್ರಸಾದ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್ ಮೊದಲಾದವರು ಈ ಸಭೆಯ ಪ್ರಮುಖ ಸದಸ್ಯರಾಗಿದ್ದರು. ಜನವರಿ 26 ರಂದು ದೇಶದಾದ್ಯಂತ ಸಂವಿಧಾನವು ಜಾರಿಗೆ ಬಂದಿತು. ಇದರ ಪ್ರಾಮುಖ್ಯತೆಯನ್ನು ಕಾಪಾಡಿಕೊಳ್ಳಲು, ಸಂವಿಧಾನದಲ್ಲಿ ಭಾರತದ ಗಣರಾಜ್ಯ ಸ್ವರೂಪವನ್ನು ಗುರುತಿಸಿದೆ. ಈ ದಿನವನ್ನು ಭಾರತ ಸರ್ಕಾರವು ದೇಶಾದ್ಯಂತ ರಜೆ ಎಂದು ಘೋಷಿಸಿದೆ. ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತದೆ. ಪ್ರತಿ ವರ್ಷ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ಮತ್ತು ಇಂಡಿಯಾ ಗೇಟ್ನಲ್ಲಿ ವಿಶೇಷ…
ಲೇಖಕ: admin
ಮಡಿಕೇರಿ ಜ.25 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಅಂತರಾಷ್ಟ್ರೀಯ ಗ್ರ್ಯಾಂಡ್ ಗ್ಲೋರಿ ಫಿಲ್ಮ್ ಪ್ರಶಸ್ತಿ ಲಭಿಸಿದೆ. ಮಣಿಪುರದಲ್ಲಿ ನಡೆದ ಐಜಿಜಿಎಫ್ಎ ಇಂಪಾಲಾ ಇಂಡಿಯಾ ಸಿನಿಮೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ಪ್ರಾಯೋಗಿಕ ಚಿತ್ರ ಹಾಗೂ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಚಿತ್ರದ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಸಿನಿಮೋತ್ಸವದಲ್ಲಿ 1145 ಚಿತ್ರಗಳು ಪ್ರದರ್ಶನ ಕಂಡಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ, ವಿಕೆ3 ಪಿಕ್ಚರ್ಸ್…
ವಿರಾಜಪೇಟೆ ಜ.25 : ವಿರಾಜಪೇಟೆ ತಾಲೂಕಿನ ಸುಮಾರು 62 ಪ್ರೌಢಶಾಲೆಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಇ.ಎಲ್.ಸಿ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮತದಾನದ ಪ್ರತಿಜ್ಞಾವಿಧಿಯನ್ನು ಶಾಲೆಯ ಆವರಣದಲ್ಲಿ ಮಾಡಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ, ಬಹುಮಾನವನ್ನು ವಿತರಿಸಲಾಯಿತು. ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಮತದಾನಕ್ಕೆ ಅರ್ಹರಿರುವ ಪ್ರತಿಯೊಬ್ಬರೂ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಬೀಳಗಿ ಅವರು ರಾಷ್ಟ್ರೀಯ ಮತದಾರರ ದಿನದ ಕುರಿತಾಗಿ ಮಾತನಾಡಿ 25ನೇ ಜನವರಿ ಭಾರತ ಚುನಾವಣಾ ಆಯೋಗದ ಸಂಸ್ಥಾಪನ ದಿನವನ್ನು 2011 ರಿಂದ ರಾಷ್ಟ್ರೀಯ ಮತದಾರರ ದಿನವನ್ನಾಗಿ ಕೂಡ ಆಚರಿಸಲಾಗುತ್ತಿದೆ ಭಾರತ ದೇಶವು ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಶಕ್ತಿಶಾಲಿ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾರರ ಹಾಗೂ ಪರಿಪೂರ್ಣ ಪಾಲ್ಗೊಳ್ಳುವಿಕೆಯು ಅತ್ಯಂತ ನಿರ್ಣಾಯಕ ಸಂಗತಿಯಾಗಿದೆ ಎಂದು ಮತದಾನದ ಬಗ್ಗೆ ಮಾತನಾಡಿದರು. ಪ್ರತಿಜ್ಞಾವಿಧಿಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ಇಸಿಓ, ಬಿಆರ್ಪಿ…
ಮಡಿಕೇರಿ ಜ.25 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.28 ರಂದು ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಂಭ್ರಮದ ಸಮ್ಮೇಳನಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಅಂಬೇಕಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ತುಂಬು ಸಹಕಾರದೊಂದಿಗೆ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ 8 ಉದಯ ವಿದ್ಯಾಸಂಸ್ಥೆಯಲ್ಲಿ ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತು ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ ಎಂದರು. ವಿವಿಧ ದ್ವಾರಗಳ ಉದ್ಘಾಟನೆ : ಬೆಳಿಗ್ಗೆ 8.30ಕ್ಕೆ ಏಕಕಾಲಕ್ಕೆ ಗಣ್ಯರ ನೆನಪಿನ ದ್ವಾರ ಉದ್ಘಾಟನೆಯಾಗಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ…
ಮಡಿಕೇರಿ ಜ.25 : ಸೋಮವಾರಪೇಟೆ ಲಯನ್ಸ್ ಸಂಸ್ಥೆ ವತಿಯಿಂದ ಸಂಸ್ಥೆಯ ಸದಸ್ಯರು ಹಾಗೂ ಕಾಜೂರು ಗ್ರಾಮದ ವಸಂತ ಮತ್ತು ಪುಷ್ಪ ದಂಪತಿಯ ಪುತ್ರಿ ಕೆ.ಯು.ರಂಜಿತ (22) ಅವರ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಸಿ.ಕೆ.ರೋಹಿತ್ ಹಾಗೂ ಪದಾಧಿಕಾರಿಗಳು ನಿವಾಸಕ್ಕೆ ತೆರಳಿ ಶಸ್ತ್ರ ಚಿಕಿತ್ಸೆಗೆ ಸಹಕಾರ ಆಗುವ ನಿಟ್ಟಿನಲ್ಲಿ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಕೆ.ಎನ್.ತೇಜಸ್ವಿ, ಸದಸ್ಯರುಗಳಾದ ಕೆ.ಎಂ.ಜಗದೀಶ್, ಎಸ್.ಎನ್.ಯೋಗೇಶ್, ಪದ್ಮಕರ್ ರಾಜ್ ಹಾಜರಿದ್ದರು.
ವಿರಾಜಪೇಟೆ ಜ.25 : ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ.ಲೋಕೇಶ್ ಗಿಡಕ್ಕೆ ನೀರು ಹಾಕುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮತದಾನವು ಪ್ರತಿಯೊಬ್ಬರ ಹಕ್ಕಾಗಿದ್ದು, ನಮ್ಮ ಹಕ್ಕನ್ನು ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಭವ್ಯ ರಾಷ್ಟ್ರದ ನಿರ್ಮಾಣಕ್ಕೆ ಮತದಾರರ ಪಾತ್ರ ಅತ್ಯಗತ್ಯವಾಗಿದೆ. ಸಮರ್ಥ ನಾಯಕನನ್ನು ಆಯ್ಕೆ ಮಾಡಲು ಮತದಾರನಿಂದ ಮಾತ್ರ ಸಾಧ್ಯ. ಆದುದರಿಂದ ಎಲ್ಲರೂ ಮತದಾನ ಮಾಡಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ತಹಶೀಲ್ದಾರರಾದ ಅರ್ಚನಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ದಿನಾಚರಣೆಯ ಮುಖ್ಯ ಉದ್ದೇಶವೇ ಮತದಾರರಲ್ಲಿ ಜಾಗೃತಿಯನ್ನು ಮೂಡಿಸುವುದೇ ಆಗಿದೆ ಎಂದರು. ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಣಿಯನ್ನು ಮಾಡಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಲಾವಿದರಾದ ಬಿ.ಆರ್.ಸತೀಶ್ ಹಾಗೂ ಸಾದಿಕ್ ಮತದಾನ ಜಾಗೃತಿಯ ಚಿತ್ರವನ್ನು ಬಿಡಿಸಿದರು. ಗಾಯಕರಾದ ಟಿ.ಡಿ.…
ವಿರಾಜಪೇಟೆ ಜ.25: ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರ್ಜಿ ಮತ್ತು ಬೇಟೋಳಿಯಲ್ಲಿ ನಡೆಯಿತು. ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನ ಆಹ್ವಾನಿಸಲಾಗಿದೆ. ವೀರಾಜಪೇಟೆ ತಾಲೂಕು ವ್ಯಾಪ್ತಿಯ ಅದರಲ್ಲಿಯೂ ವಿಶೇಷವಾಗಿ ಆರ್ಜಿ ಮತ್ತು ಬೇಟೋಳಿ ಗ್ರಾಮದ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ., ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಕಳುಹಿಸಬಹುದಾಗಿದೆ. ಲೇಖನಗಳು ಕೈಬರಹವಾದರೆ ಒಂದೇ ಮಗ್ಗುಲಲ್ಲಿ ಮೂರು ಪುಟ, ಡಿಟಿಪಿ ಆದರೆ ಎರಡು ಪುಟಗಳು, ಕವನಗಳು 20 ಸಾಲುಗಳನ್ನು ಮೀರಬಾರದು. ಲೇಖನಗಳನ್ನು ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಉಷಾ ಪ್ರೀತಮ್, ಮಗ್ಗುಲ ಗ್ರಾಮ, ಐಮಂಗಲ ಅಂಚೆ, ವೀರಾಜಪೇಟೆ ಈ ವಿಳಾಸಕ್ಕೆ ಕಳುಹಿಸಿ ಇಲ್ಲದೆ ಹೋದಲ್ಲಿ ಇಮೇಲ್ ಮುಖಾಂತರ ಕಳುಹಿಸುವುದಾದರೆ skandavp@gmail.com ಗೆ ಈ ಮೇಲ್ ಮೂಲಕ ಕಳುಹಿಸಿ, 9483855998, 9739819508 ಈ ಸಂಖ್ಯೆಗಳಿಗೆ ವ್ಯಾಟ್ಸಪ್ ಮಾಡಬಹುದಾಗಿದೆ. ಲೇಖನಗಳನ್ನು…
ಮಡಿಕೇರಿ ಜ.25 : ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಪೊನ್ನಂಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾ ಸಂಚಾಲಕ ರಜನಿಕಾಂತ್ ಹಾಗೂ ಹಿರಿಯ ಮುಖಂಡ ಹೆಚ್.ಎಸ್.ಕೃಷ್ಣಪ್ಪ ಪೊನ್ನಂಪೇಟೆಯ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಗುವುದು. ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ದಲಿತರ ಪರವಾಗಿ ನಿರಂತರ ಧರಣಿ ಸತ್ಯಾಗ್ರಹಳು ನಡೆಯುತ್ತಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲವೆಂದು ಆರೋಪಿಸಿರುವ ಅವರು, ಈ ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ಜ.25 : ಸಂತೆ ಮತ್ತು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಅಶುಚಿತ್ವದ ವಾತಾವರಣದಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ತಾಲ್ಲೂಕು ತಹಶೀಲ್ದಾರ್ ದಿಢೀರ್ ನಗರ ಸಂಚಾರ ಮಾಡಿ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿರಾಜಪೇಟೆ ಪಟ್ಟಣದಲ್ಲಿ ನಿಯಮ ಬಾಹಿರವಾಗಿ ಎಲ್ಲೆಂದರಲ್ಲಿ ತೆರೆದ ವಾತಾವರಣದಲ್ಲಿ ಆಹಾರ ಪದಾರ್ಥಗಳು ಮಾರಾಟವಾಗುತ್ತಿದೆ. ಅಸ್ಸಾಂ ನಿಂದ ಕಾರ್ಮಿಕರಾಗಿ ದುಡಿಯಲು ಬಂದವರಲ್ಲಿ ಕೆಲವರು ವ್ಯಾಪಾರಿಗಳಾಗಿ ಮಾರ್ಪಡುತ್ತಿದ್ದು, ಅಸ್ಸಾಮಿಗಳು ಇಷ್ಟ ಪಡುವ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ಈ ಆಹಾರ ಪದಾರ್ಥಗಳು ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎನ್ನುವ ದೂರುಗಳು ಕೇಳಿ ಬಂದಿತು. ಕೇರಳ ರಾಜ್ಯದ ಕೆಲವು ವ್ಯಾಪಾರಿಗಳು ಕೂಡ ಯಾವುದೇ ನಿಯಮಗಳನ್ನು ಅನುಸರಿಸದೆ ತೂಕ, ಗುಣಮಟ್ಟ, ದರ, ಪ್ಯಾಕಿಂಗ್ ದಿನಾಂಕ ಮತ್ತಿತರ ಮಾಹಿತಿಗಳಿಲ್ಲದ ಪ್ಯಾಕೇಟ್ ಗಳಲ್ಲಿ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆಕ್ಷೇಪವಿತ್ತು. ಇದರಿಂದ ಎಚ್ಚೆತ್ತುಕೊಂಡ ವಿರಾಜಪೇಟೆ ತಾಲೂಕು ತಹಶೀಲ್ದಾರ್…
ಮಡಿಕೇರಿ ಜ.25 : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಭವನ ಉದ್ಘಾಟನಾ ಕಾರ್ಯಕ್ರಮವು ಜ.26 ರಂದು ಮಧ್ಯಾಹ್ನ 12 ಗಂಟೆಗೆ ಗಾಂಧಿಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಶಾಸಕರಾದ ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೊಡಗು ಉಸ್ತುವಾರಿ ಸಚಿವರು ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ವಿ.ಅನ್ಬುಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್., ವಾರ್ತಾ ಮತ್ತು ಸಾರ್ವಜನಿಕ…






