ಲೇಖಕ: admin

ನಾಪೋಕ್ಲು ಮಾ.4 : ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತಾಯ ಪದ್ಮನಾಭ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಿ, ಕೇರಳಕ್ಕೂ ಕೊಡಗಿಗೂ ಅವಿನಾಭಾವ ಸಂಬಂಧವಿದೆ. ನೆರೆಯ ಕೇರಳ ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಕೊಡಗಿನ ಕೆಲವೊಂದು ಭಾಗದಲ್ಲಿ ಆರಾಧಿಸಲ್ಪಡುವ ವಯ ನಾಟ್ ಕುಲವನ್ ದೈವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದರು. ವಿವಿಧೆಡೆ ಧಾರ್ಮಿಕ ಆಚಾರದಲ್ಲಿ ಭಿನ್ನತೆ ಇದೆ. ವೈವಿಧ್ಯತೆ ಎಂಬುದು ಪ್ರಕೃತಿ ನಿಯಮ. ಭಗವಂತನ ವಿರಾಟ್ ಸ್ವರೂಪವನ್ನು ಹುಡುಕಿಕೊಂಡು ಹೋಗಲು ಯಾರಿಂದಲೂ ಸಾಧ್ಯವಿಲ್ಲ. ಭರತ ಖಂಡದ 64 ಕ್ಷೇತ್ರಕಲೆಗಳು ಸಂಯೋಜನೆಗೊಂಡಾಗ ಮಾತ್ರ ಇಂತಹ ದೇವತಾ ಕಾರ್ಯಗಳು ಪರಿಪೂರ್ಣವಾಗಲು ಸಾಧ್ಯ ಎಂದರು. ಭಾರತೀಯ ಸಂಸ್ಕೃತಿಯಲ್ಲಿರುವ ಶಾಸ್ತ್ರಗಳನ್ನು ಆವಿಷ್ಕಾರ ಹಾಗೂ ಉಪಾಸನೆ ಮಾಡಿದಾಗ ಮಾತ್ರ ಭಾರತೀಯ ಸಂಸ್ಕೃತಿಯ ಅನಾವರಣವಾಗುತ್ತದೆ. ಇದರಿಂದಾಗಿ ದೈವಂ ಕಟ್ಟು ಮಹೋತ್ಸವಗಳು ಧಾರ್ಮಿಕತೆ ಮತ್ತು ಧರ್ಮವನ್ನು ಬೆಳಗಿಸುತ್ತವೆ…

Read More

ಮಡಿಕೇರಿ ಮಾ.4 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.7 ರಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ರಾಜ್ಯ ಮಟ್ಟದ ಹೋರಾಟ ನಡೆಯಲಿದ್ದು, ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರಕದಿದ್ದಲ್ಲಿ ಮತದಾನ ಬಹಿಷ್ಕರಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಸಂಚಾಲಕರು ಹಾಗೂ ಜಿಲ್ಲಾಧ್ಯಕ್ಷ ಎಂ.ಬಿ.ವಿಕ್ರಾಂತ್, ಸತತ ಏಳು ವರ್ಷಗಳಿಂದಲೂ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ಅನುಭವವನ್ನು ಹೊಂದಿರುವ ಶಿಕ್ಷಕರನ್ನು ಖಾಯಂ ಮಾಡುವಲ್ಲಿ ಸರ್ಕಾರ ಚಿಂತನೆ ನಡೆಸಿಲ್ಲ. ಡಿ.ಇಡಿ, ಬಿ.ಇಡಿ ತರಬೇತಿ ಪಡೆದು, ಶಾಲಾ ಶೈಕ್ಷಣಿಕ ಮತ್ತು ಆಡಳಿತ ವಿಚಾರ ಜ್ಞಾನ ಇದ್ದರೂ ಎಂಜಿನಿಯರ್ ಪದವೀಧರರಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರತಿ ವರ್ಷ ನೇಮಕಗೊಂಡು ಮಾರ್ಚ್ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಯಾಗುತ್ತಿರುವ ಅತಿಥಿ ಶಿಕ್ಷಕರು, ನಂತರದ ದಿನಗಳಲ್ಲಿ ಕೂಲಿ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಇಲಾಖೆಗಳ ಗುತ್ತಿಗೆ ನೌಕರರ ವೇತನಕ್ಕಿಂತ ಅತೀ…

Read More

ಮಡಿಕೇರಿ ಮಾ.4 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮಾ.16 ಮತ್ತು 17 ರಂದು ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಮಾ.16 ರಂದು ಸಂಜೆ 5 ಗಂಟೆಯಿಂದ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಾ.17 ರಂದು ಬೆಳಿಗ್ಗೆ 8 ಗಂಟೆಯಿಂದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.4 : ಮಡಿಕೇರಿಯ ಜ್ಯೋತಿನಗರದ ಶ್ರೀ ವನ ಚಾಮುಂಡಿ ದೇವಿ ಸಾನಿಧ್ಯದಲ್ಲಿ ಮಾ.7 ರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಂದು ಬೆಳಿಗ್ಗೆ 7.30 ರಿಂದ ಗಣಪತಿ ಹೋಮ, ಶ್ರೀ ದುರ್ಗಾಹೋಮ ಜರುಗಲಿದ್ದು, 11.30 ಗಂಟೆಗೆ ಪೂರ್ಣಾಹುತಿ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ನಂತರ ಅನ್ನಸಂತರ್ಪಣೆ ನೆರವೇರಲಿದೆ. ಮಾ.14 ರಂದು ದೇವಿಯ ವಾರ್ಷಿಕ ಪೂಜೆ ಜರುಗಲಿದ್ದು, 11.30ಕ್ಕೆ ಬಲಿ ಪೂಜೆ, 12 ಗಂಟೆಗೆ ದೇವರ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಕೋರಿದ್ದಾರೆ.

Read More

ಮಡಿಕೇರಿ ಮಾ.4 :ಭಾರತ ಸರ್ಕಾರದ ಎಂಎಂಎಸ್‍ಇ ಸಚಿವಾಲಯದ ಆದೇಶದನ್ವಯ, ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಂಎಸ್‍ಎಂಇ ಘಟಕಗಳು (ಉತ್ಪಾದನಾ /ಸೇವಾ ಚಟುವಟಿಕೆ) ಉದ್ಯಮ ರಿಜಿಸ್ಟ್ರೇಷನ್ ಸರ್ಟಿಫಿಕೇಟ್‍ನ್ನು ಪಡೆಯುವುದು ಕಡ್ಡಾಯವಾಗಿದೆ. ಈ ಪ್ರಮಾಣ ಪತ್ರವನ್ನು ಪಡೆದಲ್ಲಿ ಬ್ಯಾಂಕ್‍ನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹಾಗೂ ಸರ್ಕಾರದ ಇತರೆ ಸವಲತ್ತು ಪಡೆಯಬಹುದಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಂಎಸ್‍ಎಂಇ ಘಟಕಗಳು ಉದ್ಯಮ ರಿಜಿಸ್ಟ್ರೇಷನ್ ಸರ್ಟಿಫಿಕೇಟ್‍ನ್ನು ಕಡ್ಡಾಯವಾಗಿ ಪಡೆಯಲು ಕೋರಿದೆ. ಉದ್ಯಮ ರಿಜಿಸ್ಟ್ರೇಷನ್ ಸರ್ಟಿಫಿಕೇಟ್‍ನ್ನು ಆನ್‍ಲೈನ್ https://udyamregistration.gov.in ಮೂಲಕ ಉಚಿತವಾಗಿ ಪಡೆಯಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ನಾಪೋಕ್ಲು ಮಾ.4 :  ನಾಪೋಕ್ಲು ಪೊಲೀಸ್ ಠಾಣೆಗೆ ನೂತನ ಠಾಣಾಧಿಕಾರಿಯಾಗಿ ಮೈಸೂರು ಜಿಲ್ಲೆಯ ಇ. ಮಂಜುನಾಥ್ ಅವರನ್ನು ಸರ್ಕಾರ ನೇಮಕ ಮಾಡಿ ಅದೇಶಿಸಿದೆ. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಮಾ.4 :  ಸಮೀಪದ ಕಕ್ಕಬೆ ವ್ಯಾಪ್ತಿಯ ಇಗ್ಗುತ್ತಪ್ಪ(ಮಲ್ಮ) ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಾಪಕವಾಗಿ ಹಬ್ಬಿದೆ. ಶುಕ್ರವಾರ ಸಂಜೆ ಹೊತ್ತಿಗೆ ದೇವನೆಲೆ ಮಲ್ಮ ಬೆಟ್ಟಶ್ರೇಣಿಯಲ್ಲಿ ಕಾಡಿಚ್ಚು ವ್ಯಾಪಕವಾಗಿ ಉರಿಯುತ್ತಿದೆ. ಈಚೆಗೆ ತಡಿಯಂಡಮೋಳ್ ಬೆಟ್ಟದಲ್ಲೂ ಕಾಡಿಚ್ಚು ಕಾಣಿಸಿಕೊಂಡಿತ್ತು. ಕಡಿದಾದ ಪ್ರದೇಶವಾಗಿರುವುದರಿಂದ ಅಗ್ನಿಶಾಮಕ ದಳದಿಂದ ನಿಯಂತ್ರಿಸಲು ಅಸಾಧ್ಯವೆಂದು ಸಾರ್ವಜನಿಕರು ಆತಂಕ  ವ್ಯಕ್ತಪಡಿಸಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಶ್ರಮಿಸುತ್ತಿದೆ. ಇತ್ತೀಚಿಗೆ ನಾಪೋಕ್ಲು ಪ್ರಥಮ ದರ್ಜೆ ಕಾಲೇಜು ಆವರಣದಲ್ಲೂ ವ್ಯಾಪಕವಾಗಿ ಬೆಂಕಿ ಹೊತ್ತಿ ಉರಿದಿತ್ತು. ವರದಿ : ದುಗ್ಗಳ ಸದಾನಂದ

Read More

ಸುಂಟಿಕೊಪ್ಪ ಮಾ.4 : ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸರಸ್ವತಿ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ವಿತರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಸರಸ್ವತಿ ದೇವಿಗೆ ಪೂಜೆಯನ್ನು ಶ್ರೀ ಚಾಮುಂಡೇಶ್ವರಿ ದೇವಾಲಯದ ಆರ್ಚಕರಾದ ಮಂಜುನಾಥ ಉಡುಪ ನೇರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪಿ.ಎಸ್.ಜಾನ್ ಮಾತನಾಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶ್ರೇಯಸ್ಸಿಗಾಗಿ ವಿದ್ಯಾದೇವತೆ ಸರಸ್ವತಿ ಪೂಜಾ ಕಾರ್ಯವನ್ನು ಹಮ್ಮಿಕೊಂಡಿದೆ. ಕಾಲೇಜಿನ ಆವರಣದಲ್ಲಿ ಭಕ್ತಿಪೂರ್ವಕ ಸಾತ್ವಿಕ ವಾತಾವರಣವನ್ನು ಸೃಷ್ಠಿಮಾಡಿದೆ ಎಂದರು. ತಾಯಿ ಸರಸ್ವತಿಯು ವಿದ್ಯಾರ್ಥಿಗಳ ಮುಂದಿನ ವ್ಯಾಸಂಗ ಜೀವನಕ್ಕೆ ಆರ್ಶಿವಾದಿಸಲಿ ಎಂದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶನ ನೀಡಿದರು. ಆರ್ಶಿವಚನ ನೀಡಿದ ಶ್ರೀ ಚಾಮುಂಡೇಶ್ವರಿ ದೇವಾಲಯದ ಆರ್ಚಕರಾದ ಮಂಜುನಾಥ ಉಡುಪ ಅವರು ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಸಂತ ಅಂತೋಣಿ ದೇವಾಲಯದ ಉಪಯಾಜಕರಾದ ಚಾಲ್ರ್ಸ್ ಅವರು ಮಾತನಾಡಿ ಏಕಾಗ್ರತೆ ಸಮಚಿತ್ತದಿಂದ ಅಧ್ಯಯನ ಕಡೆ ತಮ್ಮನ್ನು ತೊಡಗಿಸಿಕೊಳ್ಳುವುದ್ದರಿಂದ ಉತ್ತಮ ಫಲಿತಾಂಶದ ಸಾಧನೆಯನ್ನು ಮಾಡಿದಾಗ ತಾವು…

Read More

ಮಡಿಕೇರಿ ಮಾ.3 : ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಈ ರೀತಿಯ ವ್ಯಕ್ತಿಗಳು ಕಂಡುಬoದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.

Read More

ಮಡಿಕೇರಿ ಮಾ.3 : ಕಾಂಗ್ರೆಸ್ ಪಕ್ಷ ‘ಗ್ಯಾರಂಟಿ ಕಾರ್ಡ್’ ಅಭಿಯಾನದ ಮೂಲಕ ಜನರನ್ನು ವಂಚಿಸುತ್ತಿದೆಯೆಂದು ಟೀಕಿಸಿದ ಶಾಸಕ ಕೆ.ಜಿ.ಬೋಪಯ್ಯ, ಯಾವುದೇ ಗ್ಯಾರಂಟಿ ಇಲ್ಲದ ಗ್ಯಾರಂಟಿ ಕಾರ್ಡ್ ಇದು ಎಂದು ಲೇವಡಿ ಮಾಡಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳುವ ಗ್ಯಾರಂಟಿ ಕಾರ್ಡ್ ಪಡೆಯುವ ನಾಗರಿಕರು ಅದನ್ನು ಪಡೆಯುವುದಾದರು ಎಲ್ಲಿಂದ ಎಂದು ಪ್ರಶ್ನಿಸಿದ ಅವರು, ಗ್ಯಾರಂಟಿ ಕಾರ್ಡ್ನ್ನು ಉಪ್ಪು ಹಾಕಿ ನೆಕ್ಕಬೇಕಷ್ಟೆ ಎಂದು ಕುಟುಕಿದರು. ನಿಮ್ಮ ಅಸ್ತಿತ್ವವೇ ಇಲ್ಲದೆ ಜನರಿಗೇನು ಗ್ಯಾರಂಟಿ ಕೊಡುತ್ತೀರ ಎಂದು ಕಾಂಗ್ರಸ್‌ನ್ನು ಪ್ರಶ್ನಿಸಿದ ಬೋಪಯ್ಯ, ಬಿಜೆಪಿ ಏನು ತನ್ನ ಪ್ರಣಾಳಿಕೆಯನ್ನು ಹೇಳುತ್ತದೋ ಅದನ್ನು ಕಾರ್ಯಗತಗೊಳಿಸಿ ತೋರಿಸುತ್ತದೆ ಎಂದರು.

Read More