ಸೋಮವಾರಪೇಟೆ ಜ.24 : ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಎಸ್. ಮಹೇಶ್ ಅವರು ಅವರೋಧವಾಗಿ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಪ್ರಾಂಶುಪಾಲರಾದ ಹೆಚ್.ಎನ್.ರಾಜು ಅವರನ್ನು ನೇಮಕ ಮಾಡಲಾಯಿತು. ಸದಸ್ಯರುಗಳಾಗಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಎಂ.ಪಿ.ಗೋಪಾಲ್ ತಾಕೇರಿ, ಜೆ.ಸಿ.ಶೇಖರ್ ಸೋಮವಾರಪೇಟೆ, ತಂಗಮ್ಮ ಹಾನಗಲ್, ಧರ್ಮಪ್ಪ ಹರಗ, ಮನುಕುಮಾರ್ ಚೌಡ್ಲು, ಭಾನುಪ್ರಕಾಶ್, ಯಡೂರು ಪ್ರಸನ್ನ ನಾಯರ್ ಸೋಮವಾರಪೇಟೆ, ಜೀವನ್ ನೇಗಳ್ಳಿ ಸೋಮವಾರಪೇಟೆ, ಶರತ್ ಸೋಮವಾರಪೇಟೆ, ಲಕ್ಷ್ಮಿ ಗ್ರಾ.ಪಂ ಅಧ್ಯಕ್ಷರು, ಪ್ರವೀಣ್ ಸದಸ್ಯರು, ಪ್ರಶಾಂತ್, ದಿವ್ಯಮೋಹನ್, ಪಿ.ಡಿ.ಪ್ರಕಾಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಯ್ಕೆಯಾದರು. ಕಾಲೇಜಿನ ಸರ್ವತೋಮುಖ ಅಬಿವೃದ್ಧಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಹೊಸದಾಗಿ ಬಿ.ಸಿ.ಎ., ಹೋಟೆಲ್ ಮ್ಯಾನೇಜ್ಮೆಂಟ್ ಹಾಗೂ ಟೂರಿಸಂ ವಿಷಯಗಳಿಗೆ ಸಂಬಂಧಿಸಿದಂತೆ ಹೊಸ ಕೋರ್ಸ್ ಗಳನ್ನು ಮುಂದಿನ ಶೈಕ್ಷಣಿಕ…
ಲೇಖಕ: admin
ಸೋಮವಾರಪೇಟೆ ಜ.24 : ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಾಂಗ್ರೆಸ್ನಲ್ಲಿ ಕಮಲ ಕಾಂಗ್ರೆಸಿಗರದ್ದೇ ಕಾರುಬಾರು, ಮುಸ್ಲಿಂ ಸಮುದಾಯ ಕಾಂಗ್ರೆಸ್ಗೆ ಮತ ನೀಡಿದರೆ ಕೋಮುವಾದಿ ಬಿಜೆಪಿಗೆ ಮತ ನೀಡಿದಂತೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಹೇಳಿದರು. ಜೆಡಿಎಸ್ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಕೋಮುವಾದಿಗಳು ಬುರ್ಕಾ ಧರಿಸಿದ ಮುಸ್ಲಿಂ ಹೆಣ್ಣುಮಕ್ಕಳನ್ನು ಅಟ್ಟಿಸಿಕೊಂಡು ಹೋದ ಸಂದರ್ಭದಲ್ಲೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಬಾಯಿಗೆ ಬೀಗ ಹಾಕಿಕೊಂಡಿದ್ದರು. ಯಾರು ಮಾತನಾಡದಂತೆ, ಹೇಳಿಕೆ ಕೊಡದಂತೆ ಕಟ್ಟಾಪ್ಪಣೆ ಕೊಟ್ಟಿದರು. ಆದರೆ ಎಚ್.ಡಿ.ಕುಮಾರಸ್ವಾಮಿ, ಮುಸ್ಲಿಂ ಮಹಿಳೆಯರ ಪರವಾಗಿ ಹೇಳಿಕೆ ನೀಡಿ ಅವರಿಗೆ ಮಾನಸಿಕ ಧೈರ್ಯ ತುಂಬಿದರು ಎಂದರು. ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಅಧಿಕಾರಕ್ಕೆ ಬಂದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ರೈತರು ಮತ್ತು ಸ್ತ್ರೀಶಕ್ತಿ ಸಂಘಗಳ ಸದಸ್ಯರ ಸಂಪೂರ್ಣ ಸಾಲವನ್ನು ಮನ್ನಾ ಮಾಡಲು ಎಚ್.ಡಿ.ಕುಮಾರಸ್ವಾಮಿಯವರು ಮಾತುಕೊಟ್ಟಿದ್ದಾರೆ.…
ಮಡಿಕೇರಿ ಜ.24 : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎ.ಎ.ಅಯ್ಯಣ್ಣ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ನಡೆದ ಸಂಘದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಕೆ.ಬಿ.ವಿಜಯಕುಮಾರ್ ಹಾಗೂ ಪಿ.ಕೆ.ನಾಗೇಶ್, ಕಾರ್ಯಾಧ್ಯಕ್ಷರಾಗಿ ಬಿ.ಎಂ.ರಾಜಶೇಖರ್, ಖಜಾಂಚಿಯಾಗಿ ಕೆ.ಎಂ.ರವೀಂದ್ರನ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಡಿ.ಪಿ.ದಯಾನಂದ ಅಧಿಕಾರ ವಹಿಸಿಕೊಂಡರು. ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ಅಧ್ಯಕ್ಷ ಎ.ಎ.ಅಯ್ಯಣ್ಣ, ವಿಶ್ವವ್ಯಾಪಿ ಹೆಸರುವಾಸಿಯಾಗಿರುವ ಸಂಘದ ಮಡಿಕೇರಿ ಘಟಕದ ಅಭ್ಯುದಯಕ್ಕಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ತಮಗೆ ಅಧ್ಯಕ್ಷ ಸ್ಥಾನ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. 2018 ರ ಅತಿವೃಷ್ಟಿಯಿಂದ ಇಲ್ಲಿಯವರೆಗೆ ಚಾರಣ ನಡೆಸಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ನರಿಮಲೆ ಮತ್ತು ಪಕ್ಷಿ ಪಾತಾಳಕ್ಕೆ ಚಾರಣ ಆಯೋಜಿಸಲು ಸಭೆ ನಿರ್ಧರಿಸಿತು. ಸಹಕಾರ್ಯದರ್ಶಿ ಎಂ.ಕೆ.ಮನೋಹರ್ ವಂದಿಸಿದರು. ಕಾರ್ಯಕಾರಿ ಸಮಿತಿಯ 9 ಸದಸ್ಯರು ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.
ಮಡಿಕೇರಿ ಜ.24 : ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಸಾರುವ ರೋಟರಿ ಜಿಲ್ಲೆ 3181 ನ ಮಹತ್ವದ ಬೈಕ್ ಜಾಥಾ, ರೈಡ್ ಫಾರ್ ರೋಟರಿಗೆ ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಸಂಭ್ರಮದ ಸ್ವಾಗತ ಕೋರಲಾಯಿತು. ಏಳನೇ ಆವೖತ್ತಿಯ ರೈಡ್ ಫಾರ್ ರೋಟರಿಯಲ್ಲಿ ಈ ವಷ೯ 16 ದೇಶಗಳ 41 ಬೈಕ್ ಸವಾರರು ಪಾಲ್ಗೊಂಡಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಾಜಿ ಗವನ೯ರ್ ಡಾ.ರವಿ ಅಪ್ಪಾಜಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ರತನ್ ತಮ್ಮಯ್ಯ, ರೋಟರಿ ಅಧ್ಯಕ್ಷ ಕಾಂಡಂಡ ಕಾಯ೯ಪ್ಪ, ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅಂತರರಾಷ್ಟ್ರೀಯ ಸೇನಾ ಸಮಿತಿ ಅಧ್ಯಕ್ಷ ದೇವಣೀರ ಕಿರಣ್, ಗೀತಾ ಗಿರೀಶ್, ಶರತ್, ಅಮರ್, ಇನ್ನರ್ ವೀಲ್ ಸಂಸ್ಥೆಯ ಮುಂದಿನ ವಷ೯ದ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ಸೇರಿದಂತೆ ರೋಟರಿ ಪ್ರಮುಖರು ರೈಡ್ ಫಾರ್ ರೋಟರಿ ತಂಡವನ್ನು ಸ್ವಾಗತಿಸಿದರು. ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ…
ನಾಪೋಕ್ಲು ಜ.24 : ನಾಪೋಕ್ಲುವಿನ ಪ್ರತಿಷ್ಠಿತ ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಆಯೋಜಿಸಲಾದ 6ನೇ ವರ್ಷದ ನಾಪೋಕ್ಲು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ ರೈಸರ್ಸ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಚೆರಿಯಪರಂಬು ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣರದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ಮನ್ಸೂರ್ ನಾಯಕತ್ವದ ರಫಾ ಕ್ರಿಕೇಟರ್ಸ್ ತಂಡವನ್ನು ಮಣಿಸಿ, ನೌಮಾನ್ ನಾಯಕತ್ವದ ಎಲ್ ರೈಸರ್ಸ್ ತಂಡ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು .ರಫಾ ಕ್ರಿಕೇಟರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಸುಮಾರು 6 ತಂಡಗಳು ಪಾಲ್ಗೊಂಡಿದ್ದವು. ಪಂದ್ಯಾವಳಿಯಲ್ಲಿ ಉತ್ತಮ ಬ್ಯಾಟ್ಸ್ ಮೆನ್ ಪ್ರಶಸ್ತಿಯನ್ನು ರಫಾ ಕ್ರಿಕೇಟರ್ಸ್ ತಂಡದ ಖಾದರ್ ಪಡೆದುಕೊಂಡರು. ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಎಲ್ ರೈಸರ್ಸ್ ತಂಡದ ನಾಸಿಫ್ ಪಡೆದುಕೊಂಡರೆ, ಉತ್ತಮ ಬೌಲರ್ ಪ್ರಶಸ್ತಿಯನ್ನು ಎಲ್ ರೈಸರ್ಸ್ ತಂಡದ ನೌಮಾನ್ ಪಡೆದರು.ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಎಲ್ ರೈಸರ್ಸ್ ತಂಡದ ಮನ್ಸೂರ್ ಭಾಜನರಾದರು. ಪಂದ್ಯಾವಳಿಯ ತೀರ್ಪುಗಾರರಾಗಿ ನೌಶಾದ್ ಹಾಗೂ ಸಿದ್ದೀಕ್ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭ…
ಮಡಿಕೇರಿ ಜ.24 : ದಕ್ಷಿಣ ಕೊಡಗಿನಲ್ಲಿ ಹುಲಿ ಉಪಟಳ ಮತ್ತೆ ಮಿತಿ ಮೀರಿದೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಜಾನುವಾರುಗಳನ್ನು ಹುಲಿ ಕೊಂದು ಹಾಕಿದೆ. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಇಂದು ಹುಲಿ ದಾಳಿ ಮಾಡಿದ್ದು, ಪಿ.ಲವ ಎಂಬುವವರಿಗೆ ಸೇರಿದ ಹಸುವನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಿರಂತರ ದಾಳಿ ಮಾಡುತ್ತಿರುವ ಹುಲಿ ಜಾಡನ್ನು ಪತ್ತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇತ್ತೀಚೆಗಷ್ಟೇ ಬಿಟ್ಟಂಗಾಲ ಸಮೀಪ 2 ನೇ ರುದ್ರಗುಪ್ಪೆ ಗ್ರಾಮದಲ್ಲಿ ಎ.ಧನು ಎಂಬುವವರಿಗೆ ಸೇರಿದ ಮೂರು ಕರುಗಳನ್ನು ಹುಲಿ ಕೊಂದು ಹಾಕಿತ್ತು.
ಮಡಿಕೇರಿ ಜ.24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷರಾಗಿ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅಪ್ಪಯ್ಯ ಆಯ್ಕೆಯಾಗಿದ್ದಾರೆ. ಪಕ್ಷದ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಅವರು ಮುಂದುವರಿಯಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂಚಿತ್ ಸಹಾನಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಭಾಸ್ಕರ್ ರಾವ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಮಾಧ್ಯಮ ಸಂವಹನ ಉಸ್ತುವಾರಿಯನ್ನಾಗಿ ಬ್ರಿಜೇಶ್ ಕಾಳಪ್ಪ ಅವರು ಆಯ್ಕೆ ಮಾಡಲಾಗಿದೆ.
ಮಡಿಕೇರಿ ಜ.24 : ರಾಜಕೀಯ ಪಕ್ಷಗಳಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ನ್ಯಾಯ ದೊರೆಯದೆ ಇರುವುದರಿಂದ ತಾವು ಈ ಬಾರಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದಾಗಿ ಕಕ್ಕಬ್ಬೆ ಗ್ರಾ.ಪಂ ಮಾಜಿ ಸದಸ್ಯ ಹಾಗೂ ಅಲ್ಪಸಂಖ್ಯಾತರ ಹಿರಿಯ ಮುಖಂಡ ಎಂ.ಎ.ನಾಸಿರ್ ಮಕ್ಕಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂದಿನ ಸಾಮಾಜಿಕ ಪರಿಸ್ಥಿತಿ ಹದಗೆಡಲು ರಾಜಕೀಯ ಪಕ್ಷಗಳ ಕೊಡುಗೆ ಬಹಳಷ್ಟಿದೆ. ಇಂದು ಯಾವುದೇ ರಾಜಕೀಯ ಪಕ್ಷಗಳು ಅದರ ತತ್ವ ಸಿದ್ಧಾಂತಗಳಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಮತ ಬ್ಯಾಂಕ್ ಸೃಷ್ಟಿಯಷ್ಟೇ ಅವುಗಳ ಮೂಲ ಉದ್ದೇಶವಾಗಿರುವುದರಿಂದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ. ಈ ಕಾರಣದಿಂದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಗುರಿಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ನನ್ನ ಸ್ಪರ್ಧೆ ಖಚಿತವಾಗಿದ್ದು, ಕ್ಷೇತ್ರದಾದ್ಯಂತ ಜನರ ಒತ್ತಡ ಮತ್ತು ಬೆಂಬಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜನರೇ ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಅಗತ್ಯ ಸಿದ್ಧತೆಗಳನ್ನು…
ಮಡಿಕೇರಿ ಜ.24 : ಕರ್ನಾಟಕ ಟೆಕ್ವಾಂಡೋ ಸಂಸ್ಥೆಯ ವತಿಯಿಂದ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಪುರುಷ, ಮಹಿಳಾ ವಿಭಾಗದಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೋ ತರಬೇತಿ ಕೇಂದ್ರದ ನಾಲ್ವರು ಕ್ರೀಡಾಪಟುಗಳು ಕಂಚಿನ ಪದಕ ಗೆದ್ದಿದ್ದಾರೆ. ಸಬ್ ಜೂನಿಯರ್ 12 ವರ್ಷದೊಳಗಿನ ವಿಭಾಗದಲ್ಲಿ ಬಿ.ಎಲ್.ಭಾವನಾ ರೈ (ಐಶ್ವರ್ಯ ರೈ), ಬಾರನ ಬಿಂಬಿತ್ ಗೌಡ, ಲೋಹಿತ್ ಆರ್. ಹಾಗೂ ಕೋಚನ ಲಾಸ್ಯ ಚೇತನ್ ಕಂಚಿನ ಪದಕ ಗೆದ್ದುಕೊಂಡರು. ಇವರುಗಳು ಕೂರ್ಗ್ ಟೆಕ್ವಾಂಡೋ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳ ಸುಮಾರು 1300 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
ಮಡಿಕೇರಿ ಜ.23 : ಬದಲಾದ ಕಾಲಮಾನಕ್ಕೆ ಅನುಗುಣವಾಗಿ ಪತ್ರಕರ್ತರೂ ತಾಂತ್ರಿಕವಾಗಿ ‘ಅಪ್ಡೇಟ್’ ಆಗುವ ಅಗತ್ಯವಿದೆ ಎಂದು ಕೊಡಗು ಪ್ರೆಸ್ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು. ಕೊಡಗು ಪ್ರೆಸ್ಕ್ಲಬ್ ಬೆಳ್ಳಿಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕೊಡಗು ಪ್ರೆಸ್ಕ್ಲಬ್ ಪ್ರೀಮಿಯರ್ ಲೀಗ್– 3 ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಮೊದಲೆಲ್ಲಾ ಪತ್ರಕರ್ತರು ಡೈರಿ, ಪೆನ್ ಹಿಡಿದುಕೊಂಡು ಹೋಗುತ್ತಿದ್ದರು. ಆದರೆ ಈಗ ಮೊಬೈಲ್ ಒಂದುಇದ್ದರೆ ಸಾಕು, ಎಲ್ಲಾ ಕೆಲಸವನ್ನೂ ಸುಲಭವಾಗಿ ಮಾಡಬಹುದಾಗಿದೆ ಎಂದರು. ಪತ್ರಕರ್ತರ ಒತ್ತಡದ ಬದುಕಿನಲ್ಲಿ ಉಲ್ಲಾಸ ತುಂಬಲು ಕ್ರೀಡಾ ಚಟುವಟಿಕೆಗಳು ಹೆಚ್ಚು ಅನುಕೂಲವಾಗಿದೆ. ಕ್ರಿಕೆಟ್ ಬಾಂಧವ್ಯ ಬೆಸೆಯುತ್ತದೆ ಎಂದು ಹೇಳಿದರು. ಕೊಡಗು ಪ್ರೆಸ್ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿದೆ. ಇದೇ ರೀತಿಯಲ್ಲಿ ಬೆಳ್ಳಿಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಸಾಂಸ್ಕೃತಿ ಸೇರಿದಂತೆ ಎಲ್ಲಾ ಬಗೆಯ ಕಾರ್ಯಕ್ರಮಗಳಲ್ಲೂ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾರೈ ಮಾತನಾಡಿ, ಜಿಲ್ಲೆಯಾದ್ಯಂತ ಕರ್ತವ್ಯ ನಿರ್ವಹಿಸುವ ವೃತ್ತಿ ಬಾಂಧವರನ್ನು…






