ಮಡಿಕೇರಿ, NEWS DESK ಆ.29 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕ ವಿಧಾನಗಳ ಮೂಲಕ ಸುಸ್ಥಿರವಾಗಿ ನಿರ್ವಹಿಸಲು ಹೆಚ್ಚಿನ ಒತ್ತು ನೀಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ನಗರಸಭೆ ಸಭಾಂಗಣದಲ್ಲಿ ದಕ್ಷಿಣ ಕೊಡಗಿನ ‘ಕ್ಲೀನ್ ಕೂರ್ಗ್ ಇನೀಷಿಯೇಟಿವ್’ ಸಂಸ್ಥೆ ವತಿಯಿಂದ ಹಸಿ ಕಸ ನಿರ್ವಹಣೆ ಕುರಿತು ನೀಡಿದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಬಳಿಕ ನಗರಸಭಾ ಆಡಳಿತ ಮಂಡಳಿಯೊAದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಯಾವುದೇ ಕಾರಣಕ್ಕೂ ನಗರದ ಅಂಚಿನ ಸ್ಟೀವರ್ಟ್ ಹಿಲ್ನಲ್ಲಿ ಪ್ರಸ್ತುತ ನಡೆಯುತ್ತಿರುವ ಅಸಮರ್ಪಕ ತ್ಯಾಜ್ಯ ನಿರ್ವಹಣೆಯ ರೀತಿಯಲ್ಲಿ ಕಸ ವಿಲೇವಾರಿ ನಡೆಯಬಾರದು. ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ತ್ಯಾಜ್ಯ ನಿರ್ವಹಣೆಯನ್ನು ಕೋರಮಂಗಲದಲ್ಲಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಲಾಗುತ್ತಿದೆ. ನಗರಸಭಾ ಆಡಳಿತ ಮಂಡಳಿ ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿ, ಅಲ್ಲಿನ ಉತ್ತಮ ಅಂಶಗಳನ್ನು ಮಡಿಕೇರಿಯಲ್ಲೂ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಂತರ್ ಗೌಡ ಸಲಹೆ ನೀಡಿದರು. ದಕ್ಷಿಣ ಕೊಡಗಿನ ‘ಕ್ಲೀನ್…
ಲೇಖಕ: admin
ಮಡಿಕೇರಿ, NEWS DESK ಆ.29 : ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆಯು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್ಪಿ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತಿತರ ಸಂಬಂಧ ಕಳೆದ 8 ತಿಂಗಳಲ್ಲಿ 237 ಪ್ರಕರಣಗಳನ್ನು ದಾಖಲಿಸಲಾಗಿದ್ದು, 333 ಆರೋಪಿಗಳನ್ನು ಬಂಧಿಸಲಾಗಿದೆ. ಮಾದಕ ವ್ಯಸನಕ್ಕೆ ತುತ್ತಾಗದಂತೆ ಹಾಡಿ ಪ್ರದೇಶಗಳು ಸೇರಿದಂತೆ ಇತರೆ ಕಡೆಗಳಲ್ಲಿ ಜಾಗೃತಿ ಮೂಡಿಸಿ, ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಪೊಲೀಸ್ ಇಲಾಖೆಯಿಂದ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಪ್ರತೀ ತಿಂಗಳು ಪೊಲೀಸ್ ಠಾಣೆಗಳಲ್ಲಿ ಪ್ಲಾಂಟರ್ಸ್ ಮತ್ತು ಮಾಲೀಕರೊಂದಿಗೆ ಸಭೆ ನಡೆಸಲಾಗುತ್ತಿದ್ದು, ರಾಜ್ಯದ…
ಮಡಿಕೇರಿ, NEWS DESK ಆ 29: ಕೊಡಗು ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹೋದರ–ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಹಾಗೂ ಆಡಳಿತ ಮುಖ್ಯಸ್ಥ ರವಿ ಪಿ. ಉದ್ಘಾಟಿಸಿದರು. ರಕ್ಷಾ ಬಂಧನದ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ಸಹೋದರ–ಸಹೋದರಿಯರ ನಡುವಿನ ಬಾಂಧವ್ಯವನ್ನು ಬಿಂಬಿಸುವ ನಾಟಕವನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಕ್ಷಾ ಬಂಧನದ ಮಹತ್ವ, ಕುಟುಂಬ ಸಂಬಂಧಗಳ ಮೌಲ್ಯ ಮತ್ತು ಪರಸ್ಪರ ಪ್ರೀತಿ–ಗೌರವದ ಸಂದೇಶವನ್ನು ಸುಂದರವಾಗಿ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 8ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆರು ಗುಂಪುಗಳಾಗಿ ವಿಭಜಿಸಿಕೊಂಡು ಮಡಿಕೇರಿ ನಗರದ ಕೊಡಗು ವಿದ್ಯಾಲಯ ಆಪರ್ಚುನಿಟಿ ಶಾಲೆ ಮತ್ತು ಶಕ್ತಿ ವೃದ್ಧಾಶ್ರಮ, ಸಿ.ಎಂ.ಸಿ. ಹಾಗೂ ಜನತಾ ಬಜಾರ್, ಪೊಲೀಸ್ ಠಾಣೆ, ಹಾಪ್ಕಾಮ್ಸ್ ಮತ್ತು ಅಂಚೆ ಕಚೇರಿ,…
ಮಡಿಕೇರಿ, NEWS DESK ಆ.29: ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷ ಮಂದೀರ ತೇಜಸ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಇದೇ ಸಂದರ್ಭ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಪ್ರೋತ್ಸಾಹಿಸಲಾಯಿತು. ಹಾಕತ್ತೂರಿನ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಶೇ. 95.68 ಅಂಕ ಪಡೆದ ಬಿಳಿಗೇರಿ ಗ್ರಾಮದ ದೇವಜನ ಎಂ. ಬಾಲಕೃಷ್ಣ ಅವರ ಪುತ್ರ ಮನಿಶ್ ಡಿ.ಬಿ. ಅವರಿಗೆ ಪ್ರಥಮ ಹಾಗೂ ಹಾಕತ್ತೂರಿನ ಅಮ್ಮಾಟಂಡ ಎಂ. ಮಾದಪ್ಪ ಅವರ ಪುತ್ರಿ ಅಧಿತಿ ಎ.ಎಂ. (ಶೇ. 90.08) ಅವರಿಗೆ ದ್ವಿತೀಯ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಗ್ಗೋಡ್ಲು ಗ್ರಾಮದ ಹೊನ್ನುಕೋಟಿ ಎಸ್. ಸಂಗೀತ ಅವರ ಪುತ್ರ ಭವಿಷ್ ಪಿ.ಎ. (ಶೇ. 97.50 ಅಂಕ) ಅವರಿಗೆ ಪ್ರಥಮ ಹಾಗೂ ಕಗ್ಗೋಡ್ಲುವಿನ ಸತೀಶ್ ಸಿ.ಎಸ್. ಅವರ ಪುತ್ರ ಸಂದೀಪ್ ಶರ್ಮ ಸಿ.ಎಸ್. (ಶೇ. 97.17) ಅವರಿಗೆ ದ್ವಿತೀಯ ಬಹುಮಾನವನ್ನು ಪ್ರದಾನ ಮಾಡಲಾಯಿತು.…
ಮಡಿಕೇರಿ NEWS DESK ಆ.29 : ಅಮ್ಮತ್ತಿಯ ಸಂತ ಅಂತೋನಿಯವರ ದೇವಾಲಯದ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66 ಕೆವಿ ಸಾಮರ್ಥ್ಯದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಅಮ್ಮತ್ತಿ ದೇವಾಲಯದ ಹಾಗೂ ವಿರಾಜಪೇಟೆ ತಾಲ್ಲೂಕು ಘಟಕದ ಸದಸ್ಯರು ಇಂದು ಶಾಸಕರ ಗೃಹ ಕಚೇರಿಯಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನೂತನ ದೇವಾಲಯ ನಿರ್ಮಿಸಲು ಭಕ್ತಾದಿಗಳು ನಿರ್ಧರಿಸಿದ್ದು, ಪ್ರಸ್ತಾವಿತ 66 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ದೇವಾಲಯದ ಕಾಮಗಾರಿಗೆ ತೊಡಕು ಉಂಟಾಗಲಿದೆ. ಆದ್ದರಿಂದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಪ್ರಮುಖರು ಕೋರಿದರು. ಮನವಿಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿದ್ಯುತ್ ಇಲಾಖೆಯ ಎಇ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಮಗಾರಿಯ ಸ್ಥಳ ಬದಲಾವಣೆಗೆ ಸಂಬ0ಧಿಸಿದ0ತೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಭೇಟಿಯ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್, ವಿರಾಜಪೇಟೆ…
ಮಡಿಕೇರಿ NEWS DESK ಆ.29 : ಪರಿಷ್ಕರಣೆ ಮಾಡಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಜಿಲ್ಲಾ ಅಧ್ಯಕ್ಷ ದಿನೇಶ್ ಜಿ.ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೇಶ್ ಎಚ್.ಎಸ್. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್ಗಳು, ಡಾಟಾ ಎಂಟ್ರಿ ಆಪರೇಟರ್ಗಳು ಹಾಗೂ ಅತಿಥಿ ಶಿಕ್ಷಕರಾಗಿ…
ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಶಿಕಾರಿಪುರದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ವಾಹನಗಳಿಗೆ ಹಾನಿ ಮಾಡಲಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗೋರಕ್ಷಕರ ಮೇಲೆ ದಾಳಿ ನಡೆಸಿದ ಎಲ್ಲಾ ಆರೋಪಿಗಳನ್ನು ಹಾಗೂ ಘಟನೆಯ ಹಿಂದಿರುವ ಸಂಚುಕೋರರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020ರ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳು ಹಾಗೂ ಪರವಾನಗಿ ಇಲ್ಲದ ಮಾಂಸದ…
ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಾ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ವರಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಲಂಕಾರ ಸೇವೆಗಳನ್ನು ಕೈಗೊಳ್ಳಲಾಗಿತ್ತು. ಈ ಪುಣ್ಯಕರ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮದ ಭಾಗವಾಗಿ, ದೇವಸ್ಥಾನಕ್ಕೆ ಭೇಟಿ ನೀಡಿದ ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಬಳೆ ಮತ್ತು ರವಿಕೆ ವಸ್ತ್ರವನ್ನು ತಾಂಬೂಲದೊಂದಿಗೆ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು. ಈ ಧಾರ್ಮಿಕ ಸಮಾರಂಭದಲ್ಲಿ ವಿರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ನೂರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು ಪೊಲೀಸ್ ಉಪಾಧೀಕ್ಷಕರು ಹಾಗೂ ಮೂವರು ಪೊಲೀಸ್ ನಿರೀಕ್ಷಕರನ್ನು ಅಭಿನಂದಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಉತ್ತಮ ಕಾರ್ಯಕ್ಷಮತೆ, ಕರ್ತವ್ಯನಿಷ್ಠೆ ಹಾಗೂ ಜವಾಬ್ದಾರಿಯುತ ಸೇವೆಯನ್ನು ಪರಿಗಣಿಸಿ, ಆರು ಮಂದಿ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಇಂದು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಅಧಿಕಾರಿಗಳ ಉತ್ತಮ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ ಎಸ್ಪಿ ಬಿಂದುಮಣಿ, ಇದೇ ರೀತಿಯ ವೃತ್ತಿಪರತೆ ಮತ್ತು ಬದ್ಧತೆಯಿಂದ ಮುಂದೆಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರೋತ್ಸಾಹಿಸಿದರು. ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿರುವುದು ಇತರ ಪೊಲೀಸ್ ಸಿಬ್ಬಂದಿಗೂ ಮತ್ತಷ್ಟು ಉತ್ಸಾಹ ಹಾಗೂ ಪ್ರೇರಣೆ ನೀಡಲಿದೆ.
ಗೋಣಿಕೊಪ್ಪ, NEWS DESK ಆ.28: 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಒದಗಿಸಿರುವ ಒಂದು ಕೋಟಿ ರೂ. ಅನುದಾನದಲ್ಲಿ ದಶಮಂಟಪಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಭರವಸೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೀಡಿದ್ದಾರೆ. ದಶಮಂಟಪಗಳ ಸಮಿತಿ ಅಧ್ಯಕ್ಷ ಕಾಡ್ಯಮಾಡ ಚೇತನ್ ಹಾಗೂ ತಂಡವು ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಶಾಸಕರನ್ನು ಭೇಟಿ ಮಾಡಿ, ದಸರಾ ಆಚರಣೆಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕಾಡ್ಯಮಾಡ ಚೇತನ್ ಅವರು, ದಸರಾಕ್ಕೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಶಾಸಕರಿಗೆ ಸಲ್ಲಿಸಿದರು. ಪ್ರಮುಖವಾಗಿ ಪ್ರತಿ ಸಮಿತಿಗೆ ₹5 ಲಕ್ಷ ಅನುದಾನ ಒದಗಿಸಿಕೊಡಬೇಕೆಂದು ಮನವಿ ಮಾಡಲಾಯಿತು. ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ ಶಾಸಕರು, ಬೇಡಿಕೆಗೆ ಅನುಗುಣವಾಗಿ ಧನಸಹಾಯ ಒದಗಿಸುವ ಭರವಸೆ ನೀಡಿದರು. ಅರುವತೋಕ್ಲು ಕಾಡ್ಲಾಯಪ್ಪ ದಸರಾ ಸಮಿತಿ ಅಧ್ಯಕ್ಷ ಶಾಜಿ ಅಚ್ಚುತನ್ ಮಾತನಾಡಿ, ಕಳೆದ ಬಾರಿ ಬಂದ ₹75 ಲಕ್ಷ ಅನುದಾನದಲ್ಲಿ ಪ್ರತಿ ಸಮಿತಿಗೆ ₹2.30 ಲಕ್ಷ ನೀಡುವ ಭರವಸೆ ನೀಡಲಾಗಿತ್ತು. ಆದರೂ…






