ಮಡಿಕೇರಿ ಫೆ.17 NEWS DESK : ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಪ್ರಕೃತಿದತ್ತ ಸೌಂದರ್ಯದೊಂದಿಗೆ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಸಾಕಾನೆ ಶಿಬಿರವನ್ನು ಕಂಡು ಜನ ಬೆರಗಾಗುತ್ತಾರೆ. ಕಾವೇರಿ ನೀರಿಗೆ ಮನಸೋಲುತ್ತಾರೆ. ರ್ಯಾಫ್ಟಿಂಗ್ನೊಂದಿಗೆ ಜಲಕ್ರೀಡೆಯ ಅನುಭವವು ಹಿತ ನೀಡುತ್ತದೆ. ಆದರೆ, ನದಿ ದಾಟಿ, ಸಾಕಾನೆ ಶಿಬಿರ ಕಳೆದ ನಂತರದ ಅಲ್ಲಿಯೇ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಬುಡಕಟ್ಟು ಜನರ ದಯನೀಯ ಸ್ಥಿತಿ ಯಾರಿಗೂ ಬೇಡವಾಗಿದೆ. ಸರಕಾರ, ಅಧಿಕಾರಿಗಳು ಹಾಗೂ ಆಡಳಿತದ ದಿವ್ಯನಿರ್ಲಕ್ಷ್ಯಕ್ಕೆ ಒಳಗಾಗಿರುವ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್ಕ್ಲಬ್ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ದುಬಾರೆ ಹಾಡಿಯಲ್ಲಿ ಪತ್ರಕರ್ತರ ನಡೆ ಹಾಡಿ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಗನವಾಡಿಯಿದ್ದರು ಶಿಕ್ಷಕರಿಲ್ಲ, ದಾರಿಯಿದ್ದರೂ ಗುಣಮಟ್ಟದ ರಸ್ತೆಯಿಲ್ಲ, ಜಾಗವಿದ್ದರೂ ವಾಸಿಸಲು ಯೋಗ್ಯವಿಲ್ಲದ ಮನೆ ಇಲ್ಲದ ಜನರ ಗೋಳನ್ನು ಪತ್ರಕರ್ತರು ತಿಳಿದುಕೊಂಡರು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿ ಹೊನ್ನೇಗೌಡ,…
ಲೇಖಕ: admin
ಕುಶಾಲನಗರ ಫೆ.17 NEWS DESK : ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ/ತೃತೀಯ/ ಪಂಚಮ ಸೆಮಿಸ್ಟರ್ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ರಾಜ್ಯ ಶಿಕ್ಷಣ ನೀತಿ -2024/ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ನಡೆದ ಪ್ರಥಮ/ ತೃತೀಯ/ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಅತೀ ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು…
ಮಡಿಕೇರಿ NEWS DESK ಫೆ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ದಿವ್ಯಾ ದಂಪತಿಯ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಮಿತಿ ನಗರದ ವಿಕಾಸ್ ಜನ ಸೇವಾ ಟ್ರಸ್ಟ್ ನ ಆಶ್ರಮದಲ್ಲಿ ಹಂಚಿಕೊಂಡಿತು. ಆಶ್ರಮದಲ್ಲಿ ನೆಲೆಸಿರುವ ಹಿರಿಯರಿಂದ ಕೇಕ್ ಕತ್ತರಿಸಿ ಸಿಹಿಹಂಚಿ ಸಂಭ್ರಮಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕಲ್ಪಿಸಿದರು. ಆಶ್ರಮವಾಸಿಗಳು ಶಾಸಕ ಡಾ.ಮಂತರ್ ಗೌಡ ಅವರ ಕುಟುಂಬದ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಶುಭ ಹಾರೈಸಿದರು. ನಗರ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಶಿಕಲಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯಚಂದ್ರಿಕ, ಪ್ರೇಮ, ಮುಮ್ತಾಜ್ ಬೇಗಂ, ಪವಿತ್ರ ನಗರಸಭೆಯ ನಾಮನಿರ್ದೇಶಿತ ಸದಸ್ಯೆ ಜುಲೇಕಾಬಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಚಂದ್ರಶೇಖರ್ ಆರ್.ಪಿ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ಎನ್ಎಸ್ಯು ಮುಖಂಡ ಅರ್ಜುನ್, ಪ್ರಮುಖರಾದ ಕೋಚನ ಚೇತನ್, ವಿಕಾಸ್ ಜನ ಸೇವಾ…
ಮಡಿಕೇರಿ NEWS DESK ಫೆ.17 : ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿ ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುವ ಸರಕಾರದ ಕ್ರಮ ಅಸಂವಿಧಾನಿಕವಾಗಿದ್ದು, ಇದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಎಸ್ಡಿಟಿಯು ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ತಿಳಿಸಿದ್ದಾರೆ. ಭಾರತದಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಹಲವು ಕೇಂದ್ರ ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿದ್ದವು. ಅವುಗಳನ್ನು ಕೇಂದ್ರ ಸರಕಾರ ನಾಲ್ಕು ಕಾಯ್ದೆಗಳಾಗಿ ಮಾರ್ಪಡುಗೊಳಿಸಿದೆ. ಈ ಕಾನೂನುಗಳಿಂದ ಕಾರ್ಮಿಕರ ಹಕ್ಕುಗಳು ಕಡಿತಗೊಳ್ಳುವ ಸಾಧ್ಯತೆಗಳಿದೆ, ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ. ಅನುಷ್ಠಾನದಲ್ಲಿಯೂ ಅಸ್ಪಷ್ಟತೆ ಕಂಡು ಬರುತ್ತಿದೆ. ಆದ್ದರಿಂದ ಈ ಹೊಸ ಕಾನೂನನ್ನು ರದ್ದುಗೊಳಿಸಿ ಹಿಂದಿನ ಕಾನೂನುಗಳನ್ನೇ ಸಮರ್ಪಕವಾಗಿ ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಪದವೀಧರರು ಉತ್ತಮ ಶಿಕ್ಷಣ ಪಡೆದಿದ್ದರೂ, ತಮ್ಮ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚು…
ಮಡಿಕೇರಿ ಫೆ.17 : ರಾಜ್ಯದ ಕಾಂಗ್ರೆಸ್ ನೇತೃತ್ವದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೊಡಗಿನಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರ ಹಾಗೂ ಶಾಸಕರು ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಹಗರಣಗಳಲ್ಲಿ ಮುಳುಗಿರುವ ಸರಕಾರದ ಬಣ್ಣವನ್ನು ಇತ್ತೀಚೆಗೆ ಗುತ್ತಿಗೆದಾರರ ಸಂಘ ಬಯಲು ಮಾಡಿದ್ದು, ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿರುವ ಕುರಿತು ಆರೋಪ ಮಾಡಿದೆ. ಪೂರ್ಣಗೊಂಡ ಕಾಮಗಾರಿಗಳ ಹಣವನ್ನು ಗುತ್ತಿಗೆದಾರರಿಗೆ ನೀಡಲಾಗದೆ ಪರದಾಡುತ್ತಿರುವ ಸರಕಾರ ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಪ್ರಚಾರ ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ಜನ ಬದಲಾವಣೆ ಬಯಸಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿದ್ದಾರೆ. ಆದರೆ ಜನರ ನಿರೀಕ್ಷೆ ಹುಸಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ…
ಮಡಿಕೇರಿ NEWS DESK ಫೆ.17 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಕೆ.ಎಸ್.ಆರ್.ಟಿ.ಸಿ.ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್, ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಫೆ.19 ರಂದು ಹಮ್ಮಿಕೊಂಡಿರುವ ‘ಸಾರಿಗೆ ನೌಕರರ ಬೆಂಗಳೂರು ಚಲೋ’ ಹೋರಾಟಕ್ಕೆ ಯುನೈಟೆಡ್ ಪ್ಲಾಂಟೇಷನ್ ವಕರ್ಸ್ ಯೂನಿಯನ್ (ಎಐಟಿಯುಸಿ) ಕೊಡಗು ಜಿಲ್ಲಾ ಘಟಕ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ‘ಬೆಂಗಳೂರು ಚಲೋ’ ಹೋರಾಟದಲ್ಲಿ ಕೊಡಗು ಜಿಲ್ಲೆಯ ಸಾರಿಗೆ ನೌಕರರು ಕೂಡ ಪಾಲ್ಗೊಳ್ಳುತ್ತಿದ್ದು, ನೌಕರರ ಬೇಡಿಕೆಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಜಂಟಿ ಕ್ರಿಯಾ ಸಮಿತಿ ವತಿಯಿಂದ ಜ.29ರಂದು ‘ಬೆಂಗಳೂರು ಚಲೋ’ ಹೋರಾಟಕ್ಕೆ ಕರೆ ನೀಡಲಾಗಿತ್ತು. ಆದರೆ ಹಿರಿಯ ಕಾರ್ಮಿಕ ಮುಖಂಡ ಹೆಚ್.ವಿ.ಅನಂತ ಸುಬ್ಬರಾವ್ ರವರ ಹಠಾತ್ ನಿಧನದಿಂದಾಗಿ ಹೋರಾಟವನ್ನು ಮುಂದೂಡಲಾಗಿತ್ತು. ಸರಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಇಲ್ಲಿಯವರೆಗೆ ಸೂಕ್ತ ರೀತಿಯಲ್ಲಿ…
ಮಡಿಕೇರಿ, NEWS DESK ಫೆ.17:-ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಶಿಕ್ಷಕರಾದ ಜಿ.ನಂದಿನಿ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಇತ್ತೀಚೆಗೆ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಮತ್ತಿತರ ಅನೇಕ ಉಪನಾಮಗಳಿಂದ ಕರೆಯಲಾಗುತ್ತದೆ ಎಂದು ಅವರು ವಿವರಿಸಿದರು. ಲಂಬಾಣಿ, ಬಂಜಾರ ಸಮಾಜ ಬಗ್ಗೆ ಮಹಾಭಾರತದಲ್ಲಿಯೇ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ ಎಂದು ತಿಳಿಸಿದರು. ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ತಾವು ಓದಬೇಕು, ಇತರರನ್ನು ಓದಿಸಬೇಕು ಎಂಬ ಆಶಯ…
ಕುಶಾಲನಗರ, NEWS DESK ಫೆ 17: ಮುಳ್ಳುಸೋಗೆ ಗ್ರಾಮದ ಶ್ರೀಮತ್ ಕನ್ನಂಬಾಡಿ ಅಮ್ಮನವರ ನೂತನ ದೇವಾಲಯ ಹಾಗೂ ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಫೆಬ್ರವರಿ 18, 19, 20 ರಂದು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀಮತ್ ಕನ್ನಂಬಾಡಿ ಅಮ್ಮನವರ ಮತ್ತು ಮಾರಮ್ಮ ದೇವಸ್ಥಾನ ಸೇವಾ ಸಮಿತಿ ಉಪಾಧ್ಯಕ್ಷ ಎಂ.ಆರ್.ನಂಜುಂಡ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುನರ್ ಪ್ರತಿಷ್ಠಾನ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಹೋಮ, ಹವನ ನಡೆಯಲಿದೆ. 18 ರಂದು ಮುಖ್ಯದ್ವಾರ ಪೂಜೆ, 19 ರಂದು ದಾನಿಗಳಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ, 19 ರಂದು ಕಾವೇರಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ಕಳಶ ಮೆರವಣಿಗೆ, ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನಡೆಯಲಿದೆ. ಪೂಜೋತ್ಸವದಲ್ಲಿ ಆದಿಚುಂಚನಗಿರಿ ಮಠದ ಹಾಸನ-ಕೊಡಗು ಶಾಖೆಯ ಶ್ರೀ ಶಂಭುನಾಥ ಸ್ವಾಮೀಜಿ, ವಿರಾಜಪೇಟೆಯ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪರೀಕ್ಷಾ ದಿನಾಂಕ, ಸಮಯ ಮತ್ತು ವಿದ್ಯಾರ್ಥಿಗಳ ನೋಂದಣಿ ವಿವರಗಳನ್ನು ಹಂಚಿಕೊಂಡಿದ್ದಾರೆ. ಪರೀಕ್ಷಾ ದಿನಾಂಕ ಮತ್ತು ಸಮಯ ದ್ವಿತೀಯ ಪಿಯುಸಿ ಪರೀಕ್ಷೆ: ಫೆಬ್ರವರಿ 28 ರಿಂದ ಮಾರ್ಚ್ 17, 2026 ರವರೆಗೆ ನಡೆಯಲಿದೆ. (ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆ) ಎಸ್ಎಸ್ಎಲ್ಸಿ ಪರೀಕ್ಷೆ: ಮಾರ್ಚ್ 18 ರಿಂದ ಏಪ್ರಿಲ್ 2, 2026 ರವರೆಗೆ ನಡೆಯಲಿದೆ. (ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:15 ಗಂಟೆ) ದ್ವಿತೀಯ ಪಿಯುಸಿ ಪರೀಕ್ಷೆ-1 ರ ವಿವರವಾದ ವೇಳಾಪಟ್ಟಿ ದಿನಾಂಕ ವಿಷಯಗಳು ಫೆಬ್ರವರಿ 28 ಕನ್ನಡ, ಅರೇಬಿಕ್ ಮಾರ್ಚ್ 2 ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3 ಇಂಗ್ಲಿಷ್ ಮಾರ್ಚ್ 4 ತಮಿಳು, ತೆಲುಗು, ಮಲಯಾಳಂ,…
ಮುಂಬಯಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ನಡೆದು ಹತ್ತು ತಿಂಗಳುಗಳು ಉರುಳಿವೆ. ಆದರೆ, ಈ ದುರಂತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಮೂಲದ ಸಂತೋಷ್ ಜಗದಾಳೆ ಅವರ ಕುಟುಂಬಕ್ಕೆ ಸರ್ಕಾರ ನೀಡಿದ್ದ ಭರವಸೆಗಳು ಕೇವಲ ಕಾಗದದ ಮೇಲೆಯೇ ಉಳಿದಿವೆ. ಉನ್ನತ ಶಿಕ್ಷಣ ಪಡೆದಿದ್ದರೂ ಸಂತೋಷ್ ಅವರ ಪುತ್ರಿ ಅಸಾವರಿ ಇಂದಿಗೂ ಉದ್ಯೋಗಕ್ಕಾಗಿ ಸರ್ಕಾರದ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಘಟನೆಯ ಹಿನ್ನೆಲೆ: ಪಹಲ್ಗಾಮ್ ದಾಳಿಯಲ್ಲಿ ಸಂತೋಷ್ ಜಗದಾಳೆ ಸೇರಿದಂತೆ ಮಹಾರಾಷ್ಟ್ರದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಅಂದು ಮೃತರ ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು ಕುಟುಂಬಕ್ಕೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಮತ್ತು ಶೌರ್ಯ ಪ್ರಶಸ್ತಿ ನೀಡುವುದಾಗಿ ಭರವಸೆ ನೀಡಿದ್ದರು. ಕಡತ ವಿಲೇವಾರಿಯಲ್ಲಿ ವಿಳಂಬ: ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಬಿಎ ಪದವೀಧರೆಯಾಗಿರುವ ಅಸಾವರಿ ಈ ಹಿಂದೆ ಖಾಸಗಿ ಸಂಸ್ಥೆಯೊಂದರಲ್ಲಿ ಎಚ್.ಆರ್ ಹೆಡ್ ಆಗಿ ಕೆಲಸ…






