ಸೋಮವಾರಪೇಟೆ ಮೇ 30 NEWS DESK : ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ದೊರೆಯುವ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಡಾ.ಲೋಕೇಶ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲೂಕು ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಆರೋಗ್ಯ ತಪಾಸಣೆಯನ್ನು ನಿರ್ಲಕ್ಷಿಸದೆ ನಿಯಮಿತವಾಗಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಸೇರಿದಂತೆ ಆರೋಗ್ಯ ವಿಜ್ಞಾನ ಕೋರ್ಸ್ಗಳು ಲಭ್ಯವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ…
ಲೇಖಕ: admin
ಮಡಿಕೇರಿ ಮೇ 30 NEWS DESK : ತಮಿಳುನಾಡು ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಟಿವಿಕೆ ಪಕ್ಷದ ವಿಜಯ್ ನೇತೃತ್ವದ ಹೊಸ ಸರಕಾರ ರಚನೆಯಾದ ಹಿನ್ನೆಲೆಯಲ್ಲಿ ಅಲ್ಲಿನ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರುಗಳು ಕೊಡಗು ಪ್ರವಾಸ ಹಮ್ಮಿಕೊಂಡಿದ್ದರು. ಮೇ 28ರಂದು ತಮಿಳುನಾಡಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದ ಮಾಜಿ ಸಿ.ಎಂ. ಸ್ಟಾಲಿನ್ ಮತ್ತವರ ಪುತ್ರ ಉದಯ್ ನಿಧಿ ಸ್ಟಾಲಿನ್ ಅವರು ಮಡಿಕೇರಿ ಹೊರ ವಲಯದ ಲೀಲಾ ಪ್ಯಾಲೇಸ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದರು. ಮೇ 30ರಂದು ರೆಸಾರ್ಟ್ ವಾಸ್ತವ್ಯ ಪೂರ್ಣಗೊಳಿಸಿ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಮಡಿಕೇರಿ ಮೇ 30 NEWS DESK : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕೊಡಗು ಜಿಲ್ಲಾ ಸಮಿತಿ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ ನಡೆಸಿತು. ಸಿಐಟಿಯು ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್ 2025ರಲ್ಲಿ ಕನಿಷ್ಠ ವೇತನದ…
ಮಡಿಕೇರಿ ಮೇ 30 NEWS DESK : ಚೆಟ್ಟಳ್ಳಿ ಸಮೀಪದ ಚೇರಳ ಶ್ರೀಮಂಗಲ ಗ್ರಾಮದಲ್ಲಿ ವಿಜಯಲಕ್ಷಿ (86) ಎಂಬ ವೃದ್ಧೆಯ ಮೃತದೇಹ ಕಿರಿದಾದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಾಹಿತಿ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರ ತನಿಖೆಯಿಂದ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಾದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ NEWS DESK ಮೇ 30 : ರಾಜ್ಯದ ನೂತನ ಮಂತ್ರಿಮoಡಲದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತ್ಯಾತೀತ ಹಾಗೂ ಪಕ್ಷಾತೀತ ನಾಯಕರಾಗಿರುವ ಎ.ಎಸ್.ಪೊನ್ನಣ್ಣ ಅವರು ಕೇವಲ ಕೊಡಗು ಮಾತ್ರವಲ್ಲ ಇಡೀ ಕರ್ನಾಟಕದ ಆಸ್ತಿಯಾಗಿದ್ದು, ಇವರಿಗೆ ಸಚಿವ ಸ್ಥಾನ ನೀಡುವುದರಿಂದ ರಾಜ್ಯದ ಭವಿಷ್ಯ ಉತ್ತಮವಾಗಲಿದೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ಶಾಸಕರಾಗಿ ಯಾವುದೇ ಬೇಧಭಾವವಿಲ್ಲದೆ ಸರ್ವರೂ ಸಮಾನರು ಎಂಬ ಭಾವನೆಯಲ್ಲಿ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹಾಗೂ ಜನಹಿತಕ್ಕಾಗಿ ಶ್ರಮಿಸಿದ್ದಾರೆ. ಕಳೆದ 10 ವರ್ಷಗಳಿಂದ ಸರಕಾರದೊಂದಿಗೆ ಒಡನಾಟ ಹೊಂದಿರುವ ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರನ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮಂತ್ರಿಮAಡಲದ ಪ್ರತಿಯೊಬ್ಬರೊಂದಿಗೆ ಆತ್ಮೀಯರಾಗಿರುವ ಅವರು ತಮ್ಮ ದಕ್ಷ ಕಾರ್ಯವೈಖರಿಯಿಂದಲೇ ಹೈಕಮಾಂಡ್ ನ ಮೆಚ್ಚುಗೆ ಪಡೆದಿದ್ದಾರೆ. ಇವರಿಂದ ಕೊಡಗಿನಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಎಂ.ಸಿ.ನಾಣಯ್ಯ, ಎಂ.ಎo.ನಾಣಯ್ಯ…
ಮಡಿಕೇರಿ NEWS DESK ಮೇ 30 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಮಂತ್ರಿಮoಡಲದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ನಗರದ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಪೂಜೆಯ ನೇತೃತ್ವ ವಹಿಸಿ ಮಾತನಾಡಿದ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಅವರು ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ. ನಾಡಿನ ಒಳಿತಿಗಾಗಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ, ಕೆಪಿಸಿಸಿ ಸದಸ್ಯ ಹೆಚ್.ಎಂ.ನoದಕುಮಾರ್, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಶಶಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಚಾರ ಸಮಿತಿ ಉಪಾಧ್ಯಕ್ಷ ದೇರಾಜೆ ಕಿರಣ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಹರಿಪ್ರಸಾದ್ ಕೋಚನ, ಮನು…
ಮಡಿಕೇರಿ NEWS DESK ಮೇ 30 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮೂರ್ನಾಡು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸಿ.ಸುಬ್ಬಯ್ಯ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಿದರೆ ಅತ್ಯಂತ ಸೂಕ್ಷ್ಮ ಜನಾಂಗದ ಕೊಡವರಿಗೆ ಹೆಮ್ಮೆ ಎನಿಸಲಿದೆ, ಅಲ್ಲದೆ ಕೊಡವರು ಹಾಗೂ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕೀಯವಾಗಿ ಕೊಡಗು ಜಿಲ್ಲೆ ರಾಜ್ಯದ ಗಮನ ಸೆಳೆದಿದ್ದರೂ ಕಳೆದ ಅನೇಕ ವರ್ಷಗಳಿಂದ ಕೊಡವರಿಗೆ ಯಾವುದೇ ಸರಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಪ್ರಸ್ತುತ ನೂತನ ಮಂತ್ರಿ ಮಂಡಲದ ಸಂದರ್ಭವಾದರೂ ಕೊಡವ ಜನಾಂಗದ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿರುವ ಪೊನ್ನಣ್ಣ ಅವರು ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ, ಜನಾಂಗದ…
ಬೆಂಗಳೂರು, ಮೇ 29 NEWS DESK : ಬಾಳೆ ಹಣ್ಣು ದೇಶದ ಅತ್ಯಂತ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಇದರ ಉತ್ಪಾದಕತೆಯನ್ನು ಹೆಚ್ಚಿಸಲು ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (Tissue Culture) ಬಾಳೆ ಸಸಿಗಳನ್ನು ಬಳಸುವಂತೆ ತೋಟಗಾರಿಕೆ ಇಲಾಖೆ ರೈತರಲ್ಲಿ ವಿನಂತಿಸಿದೆ. ಭಾರತದಲ್ಲಿ ವಾರ್ಷಿಕವಾಗಿ 9.00 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 383.00 ಲಕ್ಷ ಮೆಟ್ರಿಕ್ ಟನ್ ಬಾಳೆ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್ಗೆ 42.00 ಮೆಟ್ರಿಕ್ ಟನ್ ಉತ್ಪಾದಕತೆ ಇದೆ. ಆದರೆ, ಕರ್ನಾಟಕದಲ್ಲಿ 46.00 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೇವಲ 12.00 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್ಗೆ ಉತ್ಪಾದಕತೆ ಕೇವಲ 26.00 ಮೆಟ್ರಿಕ್ ಟನ್ಗಳಷ್ಟಿದೆ. ಇದು ರಾಷ್ಟ್ರೀಯ ಸರಾಸರಿಗಿಂತ ಗಣನೀಯವಾಗಿ ಕಡಿಮೆಯಾಗಿದೆ. ರೈತರಲ್ಲಿ ಸಮರ್ಪಕ ಮಾಹಿತಿಯ ಕೊರತೆಯಿಂದಾಗಿ ಇಂದಿಗೂ ಹಳೆಯ ಹಾಗೂ ಸಾಂಪ್ರದಾಯಿಕ ಬಾಳೆ ಕಂದುಗಳನ್ನು ನಾಟಿ ಮಾಡುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ರಾಜ್ಯದಲ್ಲಿ ಬಾಳೆ ಇಳುವರಿಯನ್ನು ಹೆಚ್ಚಿಸಲು ತೋಟಗಾರಿಕೆ ಇಲಾಖೆಯು…
ಮಡಿಕೇರಿ ಮೇ 29 NEWS DESK : ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ನಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಮೇ, 30 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅವರೆದಾಳು, ಬ್ಯಾಡಗೊಟ್ಟ, ದೊಡ್ಡಕುಂದ, ಚಿಕ್ಕಕುಂದ, ನೀರುಗುಂದ, ಬೆಸೂರು, ದೊಡ್ಡಭಂಡಾರ, ಕಟ್ಟೆಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಮೇ 29 NEWS DESK : ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಜೂ.2 ರಂದು ಬೆಳಗ್ಗೆ 09.30 ಗಂಟೆಗೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆ ವಿಭಾಗದ ಜಿಮ್ನಾಸ್ಟಿಕ್ ಹಾಲ್ನಲ್ಲಿ ಏರ್ಪಡಿಸಲಾಗಿದೆ. (ಈ ಸ್ಫರ್ದೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಪ್ರಬಂಧ ಬರೆಯುವ ಹಾಳೆಯನ್ನು ಮಾತ್ರ ನೀಡಲಾಗುವುದು). ಚಿತ್ರಕಲೆ ಹಾಗೂ ಪ್ರಬಂಧ ಬರೆಯಲು ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಸ್ಪರ್ದೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಈ ವರ್ಷದ ಘೋಷಣ ವಾಕ್ಯವು “ಪ್ರಕೃತಿಯಿಂದ ಸ್ಪೂರ್ತಿ. ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” “Inspired by Nature. For Climate. For Our Future”…






