ಮಡಿಕೇರಿ ಜು.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್ರಾಂ ಅವರ 40 ನೇ ಪುಣ್ಯಸ್ಮರಣಾ ಕಾರ್ಯಕ್ರಮ ನಡೆಯಿತು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ನಗರಸಭೆ ಸದಸ್ಯರಾದ ಸತೀಶ್, ಡಿಎಸ್ಎಸ್ ಜಿಲ್ಲಾ ಸಂಚಾಲಕರಾದ ದಿವಾಕರ, ದೀಪಕ್ ಪೊನ್ನಪ್ಪ, ಮೋಹನ್ ಮೌರ್ಯ, ಪ್ರೇಮ ಕೃಷ್ಣಪ್ಪ, ಜನಾರ್ಧನ, ಇತರರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ, ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ಜಾರಿಗೊಳಿಸಿದರು ಎಂದು ಹೇಳಿದರು. ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ…
ಲೇಖಕ: admin
ಮಡಿಕೇರಿ ಜು.6 NEWS DESK : ವಿರಾಜಪೇಟೆ ಹೋಬಳಿ ಬಾಳುಗೋಡು ಗ್ರಾಮದ ಪೆಟ್ರೋಲ್ ಬಂಕ್ ಬಳಿ ತಡೆಗೋಡೆ ಕುಸಿದಿದ್ದು, ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಜು.6 NEWS DESK : ಗಾಳಿ ಮಳೆಗೆ ಸೋಮವಾರಪೇಟೆ ವ್ಯಾಪ್ತಿಯ ಬೆಳಿಕಿಕೊಪ್ಪ ಚೌಡ್ಲು ಗ್ರಾಮ ಪಂಚಾಯಿತಿ ಲೀಲಾ ಎಂಬುವವರ ಮನೆಯ ಮುಂಭಾಗ ಸಂಪೂರ್ಣ ತಡೆಗೋಡೆ ಕುಸಿದಿದ್ದು, ನೋಡಲ್ ಅಧಿಕಾರಿ, ಕಂದಾಯ ಅಧಿಕಾರಿಗಳು, ಪಿಡಿಒ ಸ್ಥಳ ಪರಿಶೀಲನೆ ನಡೆಸಿದರು.
ಸೋಮವಾರಪೇಟೆ NEWS DESK ಜು.06:- ಮಲ್ಲಳ್ಳಿ ಜಲಪಾದಲ್ಲಿ ಪ್ರವಾಸಿಗರ ಹುಚ್ಚಾಟ,ಜಲ ದಿಗ್ಬಂಧನಕ್ಕೆ ಸಿಲುಕಿದ ಇಬ್ಬರು ಬದುಕಿದ್ದೆ ಹೆಚ್ಚು. ತಾಲೂಕಿನ ಪ್ರವಾಸಿ ತಾಣ ಮಲ್ಲಳ್ಳಿ ಸುತ್ತಮುತ್ತಲಲ್ಲಿ ಮಳೆ ಬಿರುಸುಗೊಳ್ಳುತಿರುವ ಹಿನ್ನಲೆಯಲ್ಲಿ ಜಲಪಾತದಲ್ಲಿ ನೀರು ಹೆಚ್ಚಾಗುತ್ತಿದೆ ಅಲ್ಲದೆ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಹೆಚ್ಚಿನ ನೀರು ಹೊರಬಿಡುವ ಅರಿವಿಲ್ಲದ ಇಬ್ಬರು ಯುವಕರು ಇಂದು ಮಧ್ಯಾಹ್ನ ಪೋಟೋ ತೆಗೆಯಲು ಜಲಪಾತದ ಮಧ್ಯದಲ್ಲಿರುವ ಬಂಡೆಯೇರಿ ಕುಳಿತಿದ್ದಾರೆ ಇದೇ ಸಂದರ್ಭ ನೀರಿನ ಹರಿವು ಹೆಚ್ಚಾಗಿ ಅಪಾಯಕ್ಕೆ ಸಿಲುಕಿದ್ದಾರೆ.ಇದನ್ನ ಗಮನಿಸಿದ ಇತರೆ ಪ್ರವಾಸಿಗರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಎರೆಡು ಜೀವಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿಕೇರಿ NEWS DESK ಜು.6 : ಅರೆಕಾಡುವಿನ ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ನ ವತಿಯಿಂದ ನಿರ್ಮಾಣಗೊಂಡಿರುವ ಬ್ಯಾಡ್ಮಿಂಟನ್ ಅಂಕಣವನ್ನು ಅಂತರಾಷ್ಟಿçÃಯ ಬಾಸ್ಕೆಟ್ ಬಾಲ್ ಕ್ರೀಡಾಪಟು ಹಾಗೂ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ನಿವೃತ್ತ ಪ್ರಾಂಶುಪಾಲರಾದ ಡಾ.ಪುಷ್ಪ ಕುಟ್ಟಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂದಿನ ಒತ್ತಡದ ಯುಗದಲ್ಲಿ ಪ್ರತಿಯೊಬ್ಬರಿಗೂ ವ್ಯಾಯಾಮದ ಅಗತ್ಯವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯದ ವೃದ್ಧಿಗೆ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದೆ. ನೂತನ ಬ್ಯಾಡ್ಮಿಂಟನ್ ಅಂಕಣವನ್ನು ಎಲ್ಲರೂ ಸದುಪಯೋಗ ಪಡಿಸಿಕೊಂಡು ಕ್ರೀಡೆಗೆ ಉತ್ತೇಜನ ನೀಡುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಇಂದು ನಾವು ಬಿಡುವಿಲ್ಲದ ಜೀವನಕ್ಕೆ ಒಗ್ಗಿ ಹೋಗಿದ್ದೇವೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೂಡ ಸಮಯವಿಲ್ಲದಾಗಿದೆ. ಪ್ರತಿಯೊಬ್ಬರ ಯಶಸ್ಸಿನ ಗುಟ್ಟು ಆರೋಗ್ಯದಲ್ಲೇ ಅಡಗಿರುವುದರಿಂದ ಆರೋಗ್ಯವಂತ ಜೀವನಕ್ಕೆ ಆದ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಾ ಸಾಂಸ್ಕೃತಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್…
ಮಡಿಕೇರಿ NEWS DESK ಜು.6 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ನಿವಾಸಿ ಹಾಗೂ ಶ್ರೀ ಕೋದಂಡ ರಾಮೋತ್ಸವ ಸಮತಿಯ ಪ್ರಮುಖ ಹೆಚ್.ಮಂಜುನಾಥ್ (47) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಮಂಜುನಾಥ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಜು.7 ರಂದು ನಡೆಯಲಿದೆ.
ಮಡಿಕೇರಿ NEWS DESK ಜು.6 : ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ಮತ್ತು ಕೊಡಗಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಬೃಹತ್ ವಾಹನ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಸಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಸಂಪÀÆರ್ಣವಾಗಿದೆ ವಿಫಲವಾಗಿದೆ. ಆದರೆ ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸರಕಾರದಿಂದ ಅಗತ್ಯ ನೆರವು ದೊರಕಿಲ್ಲವೆಂದು ಕಾಂಗ್ರೆಸ್ ಆರೋಪಿಸುತ್ತಿದೆ. ಇದು ಸತ್ಯಕ್ಕೆ ದೂರವಾದ ಮಾತು, ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವÀ ಭೂಪೇಂದ್ರ ಯಾದವ್ ಅವರು, ಕಾಡಾನೆ ಹಾವಳಿ ತಡೆಗೆ 350 ಕೋಟಿ ರೂ.ಗಳ 5 ವರ್ಷಗಳ ಅವಧಿಯ ಯೋಜನೆಯನ್ನು ಒದಗಿಸಲು ಮುಂದಾಗಿದ್ದಾರೆ ಎಂದರು. ರಾಜ್ಯ ಕಾಂಗ್ರೆಸ್ ಸರಕಾರ ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಇಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ, ಅರಣ್ಯ…
ಮಡಿಕೇರಿ NEWS DESK ಜು.6 : ಆರೋಗ್ಯ ಕ್ಷೇತ್ರದಲ್ಲಿ ದೇಶದ್ಯಾದಂತ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ.ಖಾದರ್ ರವರು ಇಂದು ಮಡಿಕೇರಿಯಲ್ಲಿ ಲೋಕಾರ್ಪಣೆ ಮಾಡಿದರು. ಉತ್ತಮ ಆರೋಗ್ಯ ಪಡೆಯುವುದು ಪ್ರತಿಯೊಬ್ಬ ಮನುಷ್ಯನ ಅಜನ್ಮ ಸಿದ್ದ ಹಕ್ಕಾಗಿದೆ. ವ್ಯಕ್ತಿ ಆರೋಗ್ಯ ವಂತನಾಗಿದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಎ.ಐ.ಕೆ.ಎಂ.ಸಿ.ಸಿ. ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಎಲ್ಲಾ ಸಂಘ ಸಂಸ್ಥೆಗಳು ಜನರ ಆರೋಗ್ಯದ ವಿಚಾರದಲ್ಲಿ ಕಾಳಜಿ ಮತ್ತು ಜಾಗೃತಿ ವಹಿಸಬೇಕು ಎಂದು ಸಚಿವ ಯು.ಟಿ.ಖಾದರ್ ಕರೆ ನೀಡಿದರು. ಸರ್ಕಾರ ಕೂಡ ಜನರ ಆರೋಗ್ಯ ಕ್ಕೆ ಸಂಭಂದಿಸಿದಂತೆ ಪ್ರತಿ ಜಿಲ್ಲೆಯಲ್ಲಿ ಆಸಕ್ತಿ ಇರುವ ಇರುವ ಸಂಘ ಸಂಸ್ಥೆಗಳನ್ನು ಗುರುತಿಸಿ ನೆರವು ನೀಡಲು ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ತಿಳಿಸಿದರು. ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಕೆ.ನೌಶಾದ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎ.ಐ.ಕೆ.ಎಂ.ಸಿ.ಸಿ ಸಂಸ್ಥೆ ದೇಶದಲ್ಲಿ ಒಟ್ಟು 117 ಸಂಸ್ಥೆಗಳನ್ನು…
ಕುಶಾಲನಗರ NEWS DESK ಜು.6 : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ ಸೋಮವಾರ ಆರಂಭಗೊಂಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ (ಇಂಟಿಗ್ರೇಟೆಡ್ ಕರಿಕುಲಂ )ಕುರಿತು ತರಬೇತಿ ಕಾರ್ಯಗಾರವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಿಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ( ರಿ )ಹಾಗೂ ಉಪನ್ಯಾಸಕರ ಸಂಘ ದ ಸಂಯುಕ್ತ ಆಶಯದಲ್ಲಿ ನಡೆಯಿತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎ. ಗಣಪತಿ, ಸರ್ಕಾರವು ಸರ್ಕಾರಿ ಪಿಯೂ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುವುದನ್ನು ಮನಗಂಡು ವಿಜ್ಞಾನ ಉಪನ್ಯಾಸಕರಿಗೆ ಇಂತಹ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಲು ತರಬೇತಿಯನ್ನು ಹಮ್ಮಿಕೊಂಡಿದೆ. ಈ ತರಬೇತಿಯಲ್ಲಿ ಸಂಪನ್ಮೂಲ ಉಪನ್ಯಾಸಕರು ಹೇಳಿಕೊಡುವ ವಿಚಾರಗಳನ್ನು…
ಬಾಳೆಲೆ NEWS DESK ಜು.6 : ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೂಡಿಗೆ ವತಿಯಿಂದ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ರೈತ ಹಾಗೂ ರೈತ ಮಹಿಳೆಯರಿಗೆ ಆರ್ಕಿಡ್ ಮತ್ತು ಅಣಬೆ ಬೆಳೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರು ಕಾರ್ಯಾಗಾರ ಉದ್ಘಾಟಿಸಿದರು. ಆರ್ಕಿಡ್ ಹೂವಿನ ಗಿಡಗಳ ಬಗ್ಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರೋಫೆಸರ್ ಡಾ. ಜಡೇಗೌಡ, ರವರು ಮಾಹಿತಿ ನೀಡುತ್ತಾ, ಕೊಡಗು ಆರ್ಕಿಡ್ ಹೂವಿನ ಬೆಳೆಗೆ ಸಮೃದ್ಧವಾದ ಪರಿಸರವನ್ನು ಹೊಂದಿದ್ದು 120ಕ್ಕೂ ಹೆಚ್ಚು ತಳಿಗಳು ಕೊಡಗಿನಲ್ಲಿದ್ದು ಬ್ರಹ್ಮಗಿರಿ ಮತ್ತು ಪುಚ್ಚಗಿರಿಧಾಮಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕೊಡಗಿನ ಮನೆಯಂಗಳದಲ್ಲಿ ಇದನ್ನು ಬೆಳೆಯುವುದರ ಮೂಲಕ ಮಾರಾಟ ಮಾಡಲು ಸಹ ಅವಕಾಶಗಳಿವೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಣಬೆ ಕೃಷಿ ತಜ್ಞರಾದ ಅಂಬಿಕರವರು ಅಣಬೆ ಕೃಷಿ ಮತ್ತು ಅದಕ್ಕಿರುವ ಮಾರುಕಟ್ಟೆ ಬಗ್ಗೆ ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ರೈತರಿಗೆ ಮನವರಿಕೆ ಮಾಡಿಕೊಟ್ಟರು. ಕೂಡಿಗೆ ಕೃಷಿ ತರಬೇತಿ ಕೇಂದ್ರದ, ಸಹಾಯಕ ನಿರ್ದೇಕರಾದ…






