ಮಡಿಕೇರಿ NEWS DESK ಆ.1 : ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ವಿವಿಧೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ, ಗಾಳಿ, ಮೈಕೊರೆಯುವ ಚಳಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾವೇರಿ ಕ್ಷೇತ್ರ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿ ಪ್ರವಾಹದ ನೀರು ರಸ್ತೆಗಳನ್ನು ಆವರಿಸಿದೆ. ಉದ್ಯಾನವನ, ಭಾಗಮಂಡಲ-ನಾಪೋಕ್ಲು ಹಳೇ ರಸ್ತೆಯ ಮೇಲೆ ನೀರು ಹರಿಯಲಾರಂಭಿಸಿದೆ. ಈ ಭಾಗದ ಜನರು ಸಂಚಾರಕ್ಕೆ ಮೇಲು ಸೇತುವೆಯನ್ನು ಅವಲಂಬಿಸಿದ್ದಾರೆ. ಮದೆ ಗ್ರಾಮದ ಕರ್ತೋಜೆ ಬಳಿ ಮಂಗಳೂರು – ಮಡಿಕೇರಿ ಮುಖ್ಯ ರಸ್ತೆಯ ಮೇಲೆ ಬಂಡೆ ಕಲ್ಲು ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಲ್ಲನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಕಾವೇರಿ ಕ್ಷೇತ್ರದಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 6 ಇಂಚಿಗೂ ಅಧಿಕ ಮಳೆ ದಾಖಲಾಗಿದೆ. ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ಗಾಳಿ…
ಲೇಖಕ: admin
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಆರಂಭವಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿಕರಲ್ಲಿ ಹಾಗೂ ಕಾವೇರಿ ಕಣಿವೆಯ ಎಲ್ಲಾ ನಾಗರಿಕರಲ್ಲಿ ಸಂತಸ ತಂದಿದೆ. ಈ ಬಾರಿ ಎಲ್ -ನಿನೋ ಪರಿಣಾಮದಿಂದ ವಾಡಿಕೆಗಿಂದ ಕಡಿಮೆ ಮಳೆ ಆಗಲಿದೆ ಎಂದು ಹೇಳಲಾಗಿತ್ತು. ಅದರಂತೆ ಜೂನ್ ಮತ್ತು ಜುಲೈ ಮೂರನೇ ವಾರದವರೆಗೂ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಸದ್ಯ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲರಲ್ಲಿ ಆಶಾಭಾವನೆ ಮೂಡಿಸಿದೆ. ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಭರ್ತಿಯಾಗಿ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕಳೆದ 2019 ರಿಂದ 2026 ರವರೆಗೆ ತಿಂಗಳವಾರು ಸರಾಸರಿ ವಾಡಿಕೆ ಮಳೆ ಪ್ರಮಾಣವನ್ನು ಗಮನಿಸಿದಾಗ ಈ ಬಾರಿ ಕಡಿಮೆ ಮಳೆಯಾಗಿರುವುದು ಕಂಡು ಬರುತ್ತದೆ. ಜನವರಿಯಿಂದ ಜುಲೈ ಅಂತ್ಯದವರೆಗೆ ತಿಂಗಳುವಾರು ವಾಡಿಕೆ ಮಳೆ ಪ್ರಮಾಣ ಗಮನಿಸಿದಾಗ ಜುಲೈ ತಿಂಗಳಲ್ಲಿ ವಾಡಿಕೆ ಮಳೆ 859 ಮಿ.ಮೀ.ಗಳಾಗಿದ್ದು, ಈ ಬಾರಿ…
ಮಡಿಕೇರಿ ಆ.1 NEWS DESK : ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯುವ ಪೀಳಿಗೆಯು ಜಾಗೃತರಾದರೆ ಮಾತ್ರ ಸಮಾಜದಿಂದ ಈ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಹೇಳಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ಎಫ್.ಎಂ.ಸಿ.ಕಾಲೇಜು ಸಭಾಂಗಣದಲ್ಲಿ ನಡೆದ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇವತ್ತಿನ ಯುವಪೀಳಿಗೆ ಡ್ರಗ್ಸ್, ಹೆರಾಯಿನ್, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಬಿಂದುಮಣಿ ಅವರು ಸಲಹೆ ಮಾಡಿದರು. ಯುವಜನರು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಯಾವುದೇ…
ಮಡಿಕೇರಿ NEWS DESK ಆ.1 : ನೇಪಾಳದ ಕಾಟ್ಮಂಡ್ ನಲ್ಲಿ ನಡೆದ 3ನೇ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ. ಕೌಶಿಕ್ ಕುಮಾರ್ ಯು.ಸಿ., ಮಹಮ್ಮದ್ ಯಾಸಿನ್, ಮಹಮ್ಮದ್ ಹಫೀಸ್ ಚಿನ್ನದ ಪದಕವನ್ನು, ಅಜಯ್ ಎನ್.ಎಸ್., ಮನ್ವಿತ್ ಮೋಹನ್ ಎಂ., ಶ್ರಿಯಾನ್ ಗೌಡ ಡಿ.ಹೆಚ್., ಮಿತೇಶ್ ಜೆ. ಹಾಗೂ ರಿತನ್ ಡಿ.ಎಸ್ ಬೆಳ್ಳಿ ಪದಕವನ್ನು ಹಾಗೂ ಸಾತ್ವಿಕ ಬಿ.ಎಸ್. ಕಂಚಿನ ಪದಕ ಗೆದ್ದುಕೊಂಡರು. ಭಾರತ ತಂಡದಲ್ಲಿ ಕರ್ನಾಟಕ ರಾಜ್ಯದ 21 ಕ್ರೀಡಾಪಟುಗಳು ಭಾಗವಹಿಸಿ, 10 ಚಿನ್ನದ ಪದಕ, 8 ಬೆಳ್ಳಿ ಪದಕ ಹಾಗೂ 3 ಕಂಚಿನ ಪದಕ ಪಡೆದುಕೊಂಡರು. ಕೊಡಗು ಜಿಲ್ಲೆಯ 9 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತುದಾರ ಎನ್.ಸಿ.ಸುದರ್ಶನ್ ಅವರು ತರಬೇತಿಯನ್ನು ನೀಡಿದರು.
ಮಡಿಕೇರಿ ಜು.31 NEWS DESK : 2026ನೇ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್, 3 ರಿಂದ 5 ರವರೆಗೆ ಮಡಿಕೇರಿಯ ಶ್ರೀನಿಕೇತನದಲ್ಲಿರುವ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರಿದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚಿಸುವಂತೆ ಸಹ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.31 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಜಿಲ್ಲೆಯಲ್ಲಿ ಆಗಸ್ಟ್, 02 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಲಿಖಿತ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)–2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ…
ಮಡಿಕೇರಿ ಜು.31 NEWS DESK : ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ–ಪೊನ್ನಪ್ಪಸಂತೆ ರಸ್ತೆಯ 6.25 ಕಿ.ಮೀ. ರಿಂದ 6.65 ರವರೆಗೆ ಸಿ.ಸಿ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5) ರಲ್ಲಿ ದತ್ತವಾದ ಅಧಿಕಾರದಂತೆ ಜುಲೈ, 29 ರಿಂದ ಆಗಸ್ಟ್, 28 ರವರೆಗೆ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ-ಪೊನ್ನಪ್ಪಸಂತೆ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಪೊನ್ನಂಪೇಟೆಯಿಂದ-ನಲ್ಲೂರಿಗೆ(ಪೊನ್ನಂಪೇಟೆ–ಬೆಕ್ಕೆಸೊಡ್ಲೂರು ಮಾರ್ಗ), ಪೊನ್ನಂಪೇಟೆಯಿಂದ-ಪೊನ್ನಪ್ಪಸಂತೆಗೆ(ಕೋಣನಕಟ್ಟೆ ಮಾಯಾಮುಡಿ ಬಾಳಾಜಿ–ಜೋಡುಬೆಟ್ಟಿ ಮಾರ್ಗ) ಈ ಮಾರ್ಗಗಳನ್ನು ಬಳಸುವುದು. ಈ ಬಗ್ಗೆ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 116 ಹಾಗೂ ಕರ್ನಾಟಕ ಮೋಟಾರು…
ಮಡಿಕೇರಿ ಜು.31 NEWS DESK : ಮಕ್ಕಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಪಾಠ ಪುಸ್ತಕಕ್ಕೆ ಒತ್ತುಕೊಡುವುದರ ಜೊತೆಯಲ್ಲಿ ಕಥೆ-ಸಾಹಿತ್ಯದ ವಿಚಾರವಾಗಿ ಒಲವು ತೋರುವುದರಿಂದ ಮುಂದಿನ ದಿನಗಳಲ್ಲಿ ಸಾಹಿತ್ಯಪರ ಚಿಂತನೆಗೆ ಅನುಕೂಲವಾಗುವುದು. ಇದರಿಂದ ತಮ್ಮ ವೃತ್ತಿ ಹಾಗೂ ಸೇವಾನುಭವದ ಮೇಲೆ ಬರೆಯುವ ಲೇಖನಗಳಿಗೆ ನಿಖರವಾದ ಮೌಲ್ಯವಿರುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಕೊಡವ ಸಾಹಿತ್ಯ ಅಕಾಡೆಮಿಯ 15 ನೆ ಕೊಡವ ಪುಸ್ತಕ ಪತ್ತಾಯವನ್ನು ಪೊನ್ನಂಪೇಟೆ ಎಂಜಿನಿಯರಿಂಗ್ ಕಾಲೇಜಿನ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸ್ಥಾಪಿಸಿ ಮಾತನಾಡಿದ ಅವರು, ಪ್ರತಿಯೊಂದು ಪ್ರದೇಶಕ್ಕೆ ಅದರದೇ ಆದ ಸಾಂಸ್ಕøತಿಕ ಹಿನ್ನಲೆ ಹಾಗೂ ಪ್ರಾದೇಶಿಕ ಭಿನ್ನತೆ ಇದೆ. ಬಹು ಸಂಸ್ಕøತಿಯ ನಮ್ಮ ಭಾರತ ದೇಶದಲ್ಲಿ ಹಲವು ಜಾತಿ-ಜನಾಂಗಗಳು, ಭಾಷೆ-ಸಂಸ್ಕøತಿ ಇದ್ದು ಶಾಂತಿ-ಸೌಹಾರ್ದತೆ, ಸಹೋದರತೆಯಿಂದ ಬಾಳಿ ಬದುಕುತ್ತಿರುವುದು ಈ ಮಣ್ಣಿನ ಸುಸಂಸ್ಕøತಿ ಆಗಿದೆ. ಮಕ್ಕಳು ಚಿಕ್ಕಂದಿನಿಂದಲೇ ಆಯಾಯ ಪ್ರದೇಶಗಳ ಸಾಂಸ್ಕøತಿಕ ಹಿನ್ನಲೆ, ಭಾಷೆಯ ವೈಶಿಷ್ಟ್ಯತೆಗಳನ್ನು ಅರಿತುಕೊಳ್ಳಬೇಕು. ಇದಕ್ಕೆ ಅನುಕೂಲವಾಗುವಂತೆ ಕೊಡವ…
ಮಡಿಕೇರಿ ಜು.31 NEWS DESK : ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಪೋಕ್ಸೋ ಕಾಯ್ದೆಯಡಿ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಮಕ್ಕಳ ವಿಶೇಷ ಪೋಲಿಸ್ ಘಟಕದ ಎಸ್.ಐ.ಸುಮತಿ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಪೊಲೀಸ್ ಇಲಾಖೆ, ಅಕ್ಕಪಡೆ ಸಹಯೋಗದಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಡೆದ ಮಾನವ ಕಳ್ಳ ಸಾಗಣಿಕೆ ತಡೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಹಲವಾರು ತಿಂಡಿ ತಿನಿಸುಗಳ ಆಮಿಷವನ್ನು ಒಡ್ಡಿ ಮಾನವ ಕಳ್ಳ ಸಾಗಾಣಿಕೆಯನ್ನು ನಡೆಸುತ್ತಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ 1098 ಗೆ ಅಥವಾ ಪೊಷಕರು ಮತ್ತು ಶಿಕ್ಷಕರಿಗೆ ಮಾಹಿತಿಯನ್ನು ತಿಳಿಸಬೇಕು ಎಂದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ…
ಮಡಿಕೇರಿ ಜು.31 NEWS DESK : ನಗರದ ಜಲಾಶಯ ಬಡಾವಣೆಯ ನಾಗರಿಕರ ಬಹುಕಾಲದ ಕೋರಿಕೆಯಾಗಿದ್ದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನಿರ್ಮಿಸಿದ ಕಾಮಗಾರಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಲೋಕಾರ್ಪಣೆ ಮಾಡಿದರು. ಗೌಳಿಬೀದಿ ನೂತನ ಕಾಂಕ್ರಿಟ್ ರಸ್ತೆ, ಭಗವತಿ ನಗರದ ಮೂಲಕ ಅಬ್ಬಿಫಾಲ್ಸ್ಗೆ ಹೋಗುವ ಕಾಂಕ್ರೀಟ್ ರಸ್ತೆ ಕಾಮಗಾರಿ ನಾಗರಿಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 3.5 ಕೋಟಿ ರೂಗಳನ್ನು ಮಡಿಕೇರಿ ನಗರದ ಬಡಾವಣೆಗಳ ಅಭಿವೃದ್ಧಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಒದಗಿಸಿ ಮಡಿಕೇರಿಯನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿಸಲು ಪ್ರಯತ್ನ ಪಡುವುದಾಗಿ ಈ ಸಂದರ್ಭದಲ್ಲಿ ಡಾ.ಮಂತರ್ ಗೌಡ ಭರವಸೆ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಮಾತನಾಡಿ 2018 ರ ಪ್ರಕೃತಿ ವಿಕೋಪ ಆದಲ್ಲಿಂದ ಜಲಾಶಯ ಬಡಾವಣೆಯ ನಿವಾಸಿಗಳು ಭೂ ಕುಸಿತದ ಆತಂಕದಿಂದಲೇ ಇದ್ದು ತಮ್ಮ ಬಡಾವಣೆ ರಕ್ಷಣೆಗೆ…






