ಮೈಸೂರು, ಜ.2 NEWS DESK : ಮೈಸೂರಿನಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕೈಗೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸ್ಥಾಪಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್, ಬೀದಿಬದಿ ಮಾರಾಟಗಾರರಿಗೆ ಪೂರಕವಾಗಿ ಕೆಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ತೊಂದರೆ ಎದುರಾಗಬಾರದು. ಮೈಸೂರಿನಲ್ಲಿ ಬೀದಿ ಮಾರಾಟ ವಲಯಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ನಗರದಲ್ಲಿ ಸುರಕ್ಷತೆ, ಭದ್ರತೆ ಮತ್ತು ಸ್ವಚ್ಛತೆಯನ್ನು ಖಚಿತಪಡಿಸಬೇಕಾಗಿದೆ. ಎಲ್ಲಾ ಮಾರಾಟಗಾರರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕು. ವಲಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರಿಗಳಿಗೆ ತೊಂದರೆಯಾಗಬಾರದು ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಮಾರಾಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಯದುವೀರ್ ಹೇಳಿದರು. ಮೈಸೂರು ಸ್ವಚ್ಛ…
ಲೇಖಕ: admin
ಕುಶಾಲನಗರ ಜ.2 NEWS DESK : ಸಮಾಜಕ್ಕೆ ಬೇರೆ ಬೇರೆ ಸಂಘ ಸಂಸ್ಥೆಗಳ ಮೂಲಕ ನಿರಂತರ ಸೇವೆ ಸಲ್ಲಿಸಬೇಕೆನ್ನುವ ಅಭಿಲಾಷೆಯನ್ನು ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಮಾಜಿ ಅಧ್ಯಕ್ಷ ಎಸ್.ಕೆ.ಸತೀಶ್ ವ್ಯಕ್ತಪಡಿಸಿದರು. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸತೀಶ್ ಅವರ ನಿವಾಸದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕುಶಾಲನಗರ ಚೇಂಬರ್ ಈಗಿನ ಆಡಳಿತ ಮಂಡಳಿ ಕೆ.ಎಸ್.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಗೆ ನಾನು ಗೈರಾಗಿದ್ದರು ಮನೆಗೆ ಬಂದು ಈ ರೀತಿಯಲ್ಲಿ ಗೌರವಿಸುವ ಸಂಪ್ರದಾಯ ಖಂಡಿತ ಉತ್ತಮ ಬೆಳವಣಿಗೆ. ಸಂಸ್ಥೆಯಲ್ಲಿ ದುಡಿದ ಎಲ್ಲರನ್ನೂ ಗುರುತಿಸಿ ಈಗಿನ ಜನಸಮೂಹಕ್ಕೆ ಮತ್ತೊಮ್ಮೆ ನಮ್ಮಗಳ ಸೇವೆಯನ್ನು ನೆನಪಿಸಿದ್ದು ಶ್ಲಾಘನೀಯ. ಇನ್ನು ಹೆಚ್ಚಿನ ಉತ್ತಮ ಕಾರ್ಯಗಳನ್ನು ಹಮ್ಮಿಕೊಳ್ಳಲು ನಾವುಗಳು ಜೊತೆಯಲ್ಲಿ ಇರುತ್ತೇವೆ ಎಂದು ತಿಳಿಸಿದರು. ಕುಶಾಲನಗರ ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಹಿರಿಯರ ಮಾರ್ಗದರ್ಶನ ಸದಾ ಅವಶ್ಯ. ಅವರುಗಳ ಸಲಹೆ, ಸೂಚನೆ ಮೇರೆಗೆ…
ಮಡಿಕೇರಿ ಜ.2 NEWS DESK : ಮುಖ್ಯಮಂತ್ರಿ ಸಿದ್ದರಾಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯ ನೌಕರರ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಚಿವಾಲಯದ ನೌಕರರು ಈ ಸಂದರ್ಭದಲ್ಲಿ ಹಾಜರಿದ್ದರು.
ಮಡಿಕೇರಿ ಜ.2 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮಡಿಕೇರಿಯಲ್ಲಿ ಬಾಕಿ ಉಳಿದಿರುವ ಪ್ರಥಮ ವರ್ಷದ ಬಿ.ಎಸ್ಸಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ-11, ಬಿ.ಎಸ್ಸಿ ಮೆಡಿಕಲ್ ಇಮ್ಯಾಜಿಂಗ್ ಟೆಕ್ನಾಲಜಿ-20, ಬಿಎಸ್ಸಿ ಆಪ್ಟೋಮೆಟ್ರಿ-20, ಬಿಎಸ್ಸಿ ರೆಸ್ಪಿರೆಟರಿ ಕೇರ್ ಟೆಕ್ನಾಲಜಿ-19 ಸೀಟುಗಳನ್ನು ಹಾಗೂ ದ್ವಿತೀಯ ವರ್ಷದ ಬಿಎಸ್ಸಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ-15, ಬಿಎಸ್ಸಿ ಅನಸ್ತೇಸಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ-11, ಬಿಎಸ್ಸಿ ಮೆಡಿಕಲ್ ಇಮ್ಯಾಜಿಂಗ್ ಟೆಕ್ನಾಲಜಿ-19, ಬಿಎಸ್ಸಿ ರೆಸ್ಪಿರೆಟರಿ ಕೇರ್ ಟೆಕ್ನಾಲಜಿ-20, ಬಿಎಸ್ಸಿ ಆಪ್ಟೋಮೆಟ್ರಿ-18 ಸೀಟುಗಳಿಗೆ ನೇರ ಆಯ್ಕೆ (ವಾಕ್ ಇನ್ ಅಡ್ಮಿಷನ್) ಆಹ್ವಾನಿಸಲಾಗಿದೆ. ಮೆರಿಟ್ ಆಧಾರದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಕೆಇಎ ಹಾಗೂ ಆರ್ಜಿಯುಎಚ್ಎಸ್ ಮಾನದಂಡಗಳ ಪ್ರವೇಶಾತಿಯ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿಗೆ ಜನವರಿ, 08 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 4 ಗಂಟೆ ಒಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ…
ಮಡಿಕೇರಿ ಜ.2 NEWS DESK : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ,…
ದುಬೈ ಜ.2 NEWS DESK : ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ನಾಡ ಹಬ್ಬ ಅರಬ್ ನಾಡಿನಲ್ಲಿ ಎಂಬ ದ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದುಬೈ ದಸರಾ ಕ್ರೀಡೋತ್ಸವ “ಕರ್ನಾಟಕ ರಾಜ್ಯ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲಸಿರುವ ಅನಿವಾಸಿ ಕೊಡಗಿನ ಯುವಕರು ಜಯ ಸಾಧಿಸಿ ಏಳನೇ ವರ್ಷದ ಚಾಂಪಿಯನ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದುಬೈಯಲ್ಲಿರುವ ಎಥಿಸಲಾತ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಉಳ್ಳಾಲ ಗಯ್ಸ್ ತಂಡವನ್ನು ಪೆನಾಲ್ಟಿ ಶೂಟಿನಲ್ಲಿ ಕೂರ್ಗ್ ಯುನೈಟೆಡ್ ಎಫ್ಸಿ ದುಬೈ ತಂಡವು ಮಣಿಸಿತ್ತು. ಕೊಡಗಿನ ತಂಡದಲ್ಲಿ ನಾಯಕನಾಗಿ ರಫೀಕಲಿ ಕುಂಜಿಲ ಅವರು ಮುನ್ನೆಡೆಸಿದರೆ, ಆಟಗಾರರಾಗಿ ಅಸಿಫ್ ಕುಂಜಿಲ, ಅಫ್ರೀದ್ ಹೊಸಕೋಟೆ, ಜಾಫರ್ ಕಡಂಗ, ಆರಿಫ್ ಕುಂಜಿಲ, ಅಫ್ರಿದ್ ಸುಂಟಿಕೊಪ್ಪ, ತಬಶೀರ್ ಕುಂಜಿಲ, ರಾಝಿಕ್ ಸುಂಟಿಕೊಪ್ಪ, ಶುಹೈಬ್ ಕೊಟ್ಟಮುಡಿ ಸ್ಪರ್ಧಿಸಿದ್ದರು. ಶಂಸಿ ಚಾಮಿಯಾಲ ಅವರು ಗೋಲ್ ಕೀಪರ್ ಆಗಿ ಕಾರ್ಯನಿರ್ವಹಿಸಿ…
ಮಡಿಕೇರಿ ಜ.2 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ನಿ. ಬೆಂಗಳೂರು ಹಾಗೂ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯನ್ನು ಆಚರಿಸಲಾಯಿತು. ಕೊಡವ ಸಮಾಜ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷರು ಹಾಗೂ ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾರ್ಯಾಧ್ಯಕ್ಷರಾದ ಕೇಕಡ ಎ.ದೇವಯ್ಯ ಉದ್ಘಾಟಿಸಿ ಮಾತನಾಡಿ, ಸದಸ್ಯರು ಸಂಘದೊಂದಿಗೆ ನಿರಂತರ ವ್ಯವಹರಿಸಿ ಸಂಘದ ಏಳಿಗೆಗೆ ಸಹಕರಿಸುವಂತೆ ತಿಳಿಸಿದರು. ಸಂಘದ ಬೆಳವಣಿಗೆಗೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಸೇವೆ ಮುಖ್ಯ ಪಾತ್ರವಹಿಸಲಿದೆ ಎಂದರು. ಜಮ್ಮಾಜಾಗ ಸಮಸ್ಯೆ ಬಗ್ಗೆ ಕೊಡಗಿನ ಇಬ್ಬರು ಶಾಸಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಡುವಂಡ ಪಿ.ಮುತ್ತಪ್ಪ, 2005ರಲ್ಲಿ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ಸಹಕಾರಿಗಳಾದ ಎಂ.ಸಿ.ನಾಣಯ್ಯ ಅವರ ಸಲಹೆ ಮೇರೆಗೆ ಮಡಿಕೇರಿ ಕೊಡವ ಸಮಾಜದ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು. ಪ್ರಸ್ತುತ 1 ಕೋಟಿ 10 ಲಕ್ಷ ಪಾಲು…
ನಾಪೋಕ್ಲು ಜ.2 NEWS DESK : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ಗೆ ಕೊಡಗಿನ ವರ್ಷಿಣಿ ಆಯ್ಕೆಯಾಗಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆಯಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿರುವ ವರ್ಷಿಣಿ ಜ.26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಇವರು 5karnataka batalian NAVAL unit NCC senior wing kartavya path ಗೆ ಆಯ್ಕೆಯಾಗಿದ್ದಾರೆ. ವರ್ಷಿಣಿ ಕಾಂತೂರು ಮೂರ್ನಾಡು ಗ್ರಾಮ ಪಂಚಾತಿಯ ಕಿಗ್ಗಾಲು ಗ್ರಾಮದ ಬಿ.ಎಸ್.ಬಾಲು, ರೇಖಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.2 NEWS DESK : ಹಳೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಹೊಸ ವರ್ಷಾಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಬಾಲ ವಿಕಾಸ ಸಲಹಾ ಸಮಿತಿ ಅಧ್ಯಕ್ಷರಾದ ಸೋನಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಂಗನವಾಡಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಇದರಲ್ಲಿ ತರಕಾರಿಗಳ ಬಳಕೆ ಹಾಗೂ ಉಪಯೋಗಗಳ ಬಗ್ಗೆ ನೃತ್ಯ ರೂಪಕ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಕೊಳಕೇರಿ ಗ್ರಾಮದ ಕಾಫಿ ಬೆಳೆಗಾರ ಕುಂಡಿಯೊಳಂದ ಬಿಪಿನ್ ಮತ್ತು ತಾಲೂಕು ಸ್ತ್ರೀಶಕ್ತಿ ಗುಂಪಿನ ಕಾರ್ಯದರ್ಶಿ ಅನಿತಾ ಹಾಗೂ ಪ್ರಮುಖರು ಭಾಗವಹಿಸಿದ್ದರು. ಹಾಗೂ ಕೇಕ್ ಕತ್ತರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಭಾಗವತಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಈ ಸಂದರ್ಭ ಸ್ತ್ರೀ ಶಕ್ತಿ ಗುಂಪಿನ ಹಾಗೂ ಬಾಲ ವಿಕಾಸ ಸಮಿತಿ ಸದಸ್ಯರು ಪೆÇೀಷಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಸುಂಟಿಕೊಪ್ಪ ಜ.2 NEWS DESK : ಚದುರಂಗ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾಪಟುಗಳ ಮಾನಸಿಕತೆ, ಏಕಾಗ್ರತೆ ಹಾಗೂ ಚಿಂತನ ಶೀಲತೆ ಹೆಚ್ಚಾಗುತ್ತದೆ ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪದ ಕೂರ್ಗ್ ಚೆಸ್ ಕ್ಲಬ್ ವತಿಯಿಂದ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಚದುರಂಗ (ಚೆಸ್) ಪಂದ್ಯಾವಳಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು ಚದುರಂಗ ಕ್ರೀಡೆಗೆ ವಯೋಮನದ ಮಿತಿ ಇಲ್ಲ ಹಿರಿಯರು ಕಿರಿಯರು ಎನ್ನದೆ ಕ್ರೀಡೆಯಲ್ಲಿ ಭಾಗವಹಿಸಬಹುದಾಗಿದೆ. ಈ ಕ್ರೀಡೆಯಲ್ಲಿ ಮಾನವರ ಮಾಸಿಕತೆ ಮತ್ತು ಬುದ್ಧಿ ಮಟ್ಟವನ್ನು ಹೆಚ್ಚಿಸುತ್ತದೆ. ವೈಯಕ್ತಿಕ ಚಿಂತನ ಶೀಲತೆಯು ಹೆಚ್ಚಾಗುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡಗೊಳ್ಳಲು ಈ ಕ್ರೀಡೆಯು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. 7 ರಿಂದ 14 ವರ್ಷ ಪ್ರಾಯದ ಮಕ್ಕಳ ವಿಭಾಗದಲ್ಲಿ 42 ಮಂದಿ ಪಾಲ್ಗೊಂಡಿದ್ದು, ರೋಶನ್ ಆರ್ ನಾಯಕ್ ಪ್ರಥಮ ಬಹುಮಾನ ರೂ. 3000, ಭೂಷಣ್ ಎಂ.ಆರ್.ದ್ವಿತೀಯ ಬಹುಮಾನ ರೂ. 2000, ಮಿಲಿದ್ ನಾರಾಯಣ ತೃತೀಯ ಬಹುಮಾನ…






