ಮಡಿಕೇರಿ ಜ.23 : ಕೊಡಗು ಪ್ರೆಸ್ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-3ರಚಾಂಪಿಯನ್ ಆಗಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಹೊರಹೊಮ್ಮಿದೆ. ಅಂತಿಮ ಕ್ಷಣದಲ್ಲಿ ಎಡವಿದ ಇಂಚರ ಕೊಡಗು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಂದ ಬೆಳಕಿನ ಕಾರಣದಿಂದ 2 ಓವರ್ಗೆ ನಡೆದ ಫೈನಲ್ ಪಂದ್ಯದಲ್ಲಿಟಾಸ್ಗೆದ್ದ ಇoಚರ ಕೊಡಗು ತoಡ ಬ್ಯಾಟಿಂಗ್ ಆಯ್ದುಕೊಂಡಿತು.ಆದರೆ, ಬ್ಯಾಟಿಂಗ್ನಲ್ಲಿ ಆಟಗಾರರು ಎಡವಿದ್ದರಿoದ 2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 7 ರನ್ ಗಳಿಸಲಷ್ಟೇ ಶಕ್ತರಾದರು.ಗೆಲ್ಲಲು 8 ರನ್ಗಳ ಗುರಿ ಪಡೆದ ಮೀಡಿಯಾ ಸೂಪರ್ ಕಿಂಗ್ಸ್ ಮೊದಲ ಓವರ್ನಲ್ಲಿ ಇನ್ನು ಒಂದು ಎಸೆತ ಬಾಕಿ ಇರುವಾಗಲೇ ವಿಕೆಟ್ ಕಳೆದುಕೊಳ್ಳದೆ 11 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಪರ ಮಂಜು 3 ಎಸೆತಗಳಲ್ಲಿ 9 ರನ್ ಗಳಿಸಿದರಲ್ಲದೆ 1 ವಿಕೆಟ್ ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ…
ಲೇಖಕ: admin
ವಿರಾಜಪೇಟೆ ಜ.23 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು. ಬಿಳುಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಐನಂಡ ಪ್ರತಾಪ್ ಪ್ಯಾರಾಚೂಟ್ ಮಾದರಿಯನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಷಯ ಪರಿವೀಕ್ಷಕರಾಗಿ ಆಗಮಿಸಿದ ಕೆ.ಆರ್.ಬಿಂದು ಪ್ರಾಸ್ತಾವಿಕವಾಗಿ ಮಾತನಾಡಿ ಕೋವಿಡ್ 19ರ ನಂತರ ಕೊರತೆಯಾದ ಕಲಿಕೆಯನ್ನು ಪೂರೈಸಲು ಚೇತೆರಿಕೆ ಬೋಧನೆಗೆ ಅವಕಾಶ ನೀಡಲಾಗಿತ್ತು. ಕಲಿಕಾ ಹಬ್ಬದ ಮೂಲಕ ಈ ಹಬ್ಬವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ. ಬಿಳುಗುಂದ ಶಾಲೆಯಲ್ಲಿ ಸುಂದರವಾಗಿ ಕಲಿಕಾ ಹಬ್ಬವನ್ನು ಆಯೋಜಸಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದರು. ಕಾರ್ಯಕ್ರಮದ ಮೊದಲಿಗೆ ಬಿಳುಗುಂದ ಗ್ರಾಮ ಪಂಚಾಯತಿ ಕಚೇರಿಯಿಂದ ಶಾಲೆಯವರೆಗೆ ಶಾಲಾಮಕ್ಕಳ ಮೆರವಣಿಗೆಯನ್ನು ನಡೆಸಲಾಯಿತು. ತದನಂತರ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಕಬ್ಬಿಣದ ಕಮಾನನ್ನು ದಾನಿಗಳಾದ ಅಹಮ್ಮದ್ ನಲ್ವತ್ತೊಕ್ಲು ಇವರು ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಈ ವರ್ಷದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಬಿಳುಗುಂದ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಸಾವಿತ್ರಿ ಹಾಗೂ ಈ ವರ್ಷದ ಉದ್ದ ಜಿಗಿತದಲ್ಲಿ…
ಕುಶಾಲನಗರ ಜ.23 : ಕುಶಾಲನಗರ ಬಿಜೆಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಕುಶಾಲನಗರದಲ್ಲಿ ‘ಬೂತ್ ವಿಜಯ್ ಸಂಕಲ್ಪ’ ಕಾರ್ಯಕ್ರಮ ನಡೆಸಲಾಯಿತು. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕೇoದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಪುರಸಭೆಯು ಹಮ್ಮಿಕೊಂಡಿರುವ ಜನಪರ ಯೋಜನೆಗಳ ಕರ ಪತ್ರಗಳನ್ನು ಸ್ಥಳೀಯ ಆಟೋಚಾಲಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ವರ್ತಕರಿಗೆ, ಸಾರ್ವಜನಿಕರಿಗೆ ನೀಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಉಮಾಶಂಕರ್, ಸಹ ಪ್ರಮುಖ್ಶಿವಾಜಿ, ಪುರಸಭೆಯ ಅಧ್ಯಕ್ಷರಾದ ಜಯವರ್ದನ್, ಪ್ರಬಾರಿಗಳಾದ ವೇದಾವತಿ, ಪುರಸಭೆಯ ಸದಸ್ಯರಾದ ಅಮೃತ್ರಾಜ್, ಡಿ.ಕೆ.ತಿಮ್ಮಪ್ಪ, ಕೆ.ಜಿ.ಮನು, ಪುಂಡರಿಕಾಕ್ಷ, ಕುಡ ಅಧ್ಯಕ್ಷರಾದ ಚರಣ್, ವರದ, ಬಾಲಕೃಷ್ಣ, ರಜಿನಿಕಾಂತ, ಸೋಮಣ್ಣ, ಸುಮನ್, ಚಂದ್ರಶೇಖರ್ ಇದ್ದರು.
ನಾಪೋಕ್ಲು ಜ.23 : ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಬಾಲಕಿಯೊಬ್ಬಳು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಕಕ್ಕಬ್ಬೆ ಸಮೀಪದ ಕುಂಜಿಲ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ತಾಜುದ್ದೀನ್ ಎಂಬುವವರ ಪುತ್ರಿ ತಸ್ಲೀಮ (13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ತಂದೆ, ತಾಯಿ ತೋಟದ ಕೆಲಸಕ್ಕೆ ತನ್ನನ್ನು ಕರೆದುಕೊಂಡು ಹೋಗಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ತಸ್ಲೀಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ : ಝಕರಿಯ ನಾಪೋಕ್ಲು)
ಮಡಿಕೇರಿ ಜ.23 : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮ ದಿನಾಚರಣೆ ಅಂಗವಾಗಿ ಜನವರಿ 23 “ಪರಾಕ್ರಮ್ ದಿವಸ್” ದಂದು ನೇತಾಜಿ ಅವರ ಸವಿನೆನಪಿಗಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ಬಳಿ “ನೇತಾಜಿ ಜಂಕ್ಷನ್” ಎಂದು ನಾಮಕರಣ ಮಾಡಿ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ನಗರಸಭಾ ಸದಸ್ಯರಾದ ಕೆ.ಎಸ್. ರಮೇಶ್ ರವರು, ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ರವರು ಸ್ವಾಮಿ ವಿವೇಕಾನಂದರ ವಿಚಾರ ಧಾರೆಗಳಿಂದ ಪ್ರಭಾವಿತರಾಗಿ ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಸುಭಾಷ್ ಚಂದ್ರ ಬೋಸ್ ಎಂಬ ಹೆಸರನ್ನು ನಾವು ಕೇಳಿದಾಗಲೆಲ್ಲಾ, ನಮ್ಮ ಮನಸ್ಸಿನಲ್ಲಿ ಬರುವ ಮೊದಲ ವಿಷಯವೆಂದರೆ ಅವರ ಜನಪ್ರಿಯ ಮಾತು “ತುಮ್ ಮುಜೆ ಖೂನ್ ದೋ ಮೈನ್ ತುಮ್ಹೆ ಆಜಾದಿ ದುಂಗಾ” (ನೀವು ನನಗೆ ರಕ್ತಕೊಡಿ, ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತೇನೆ). ನೇತಾಜಿ ಎಂದೇ ಖ್ಯಾತರಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ಮಹಾನ್ ಉಗ್ರ, ಸ್ವಾತಂತ್ರ್ಯ ಹೋರಾಟಗಾರ ಮತ್ತು…
ಮಡಿಕೇರಿ ಜ.23 : ಉಪ ಲೋಕಾಯುಕ್ತ ಕಾರ್ಯ ವ್ಯಾಪ್ತಿಗೆ ಒಳಪಡುವ ಹಲವು ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸೋಮವಾರ ವಿಚಾರಣೆ ನಡೆಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ಫಣೀಂದ್ರ ಅವರು 40 ದೂರುಗಳಲ್ಲಿ 22 ದೂರುಗಳು ಉಪ ಲೋಕಾಯುಕ್ತ ವ್ಯಾಪ್ತಿಗೆ ಸಂಬAಧಿಸಿದ್ದು, ಈ ದೂರುಗಳನ್ನು ವಿಚಾರಣೆ ಮಾಡಲಾಗುವುದು ಎಂದರು. ಉಪ ಲೋಕಾಯುಕ್ತ ವ್ಯಾಪ್ತಿಗೆ ಸಲ್ಲಿಕೆಯಾಗಿರುವ ದೂರುಗಳ ಸಂಬAಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಲೋಕಾಯುಕ್ತದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಭೂಮಿಗೆ ಸಂಬಂಧಿಸಿದಂತೆ, ಸೌಲಭ್ಯಗಳನ್ನು ಕಲ್ಪಿಸದೆ ಬಡಾವಣೆಗಳ ನಿರ್ಮಾಣ, ಕೆರೆಗಳು ಮತ್ತು ದೇವರ ಕಾಡುಗಳ ಸಂರಕ್ಷಣೆ, ಭೂ ಒತ್ತುವರಿ ತೆರವುಗೊಳಿಸುವುದು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹರಿಸುವುದು ಮತ್ತಿತರ ಹಲವು ದೂರುಗಳಿಗೆ ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ವರದಿ ನೀಡುವಂತೆ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಆರಂಭದಲ್ಲಿ…
ಮಡಿಕೇರಿ ಜ.23 : ವಿದ್ಯಾರ್ಥಿಗಳ ಸೃಜನಶೀಲ ಅಭಿವ್ಯಕ್ತಿಯನ್ನು ಉತ್ತೇಜಿಸಲು, ಶಿಕ್ಷಣ ಸಚಿವಾಲಯವು ದೇಶಾದ್ಯಂತ ಶಾಲೆಗಳಲ್ಲಿ ವಿವಿಧ ಚಟುವಟಿಕೆ ಆಯೋಜಿಸಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರುಣ್ ಸಿಂಗ್ ಅವರು ಮಾಹಿತಿ ನೀಡಿದರು. ಜನವರಿ 27 ರಂದು ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಅಂಗವಾಗಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯ ಬಗ್ಗೆ ಅವರು ಮಾಹಿತಿ ನೀಡಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲಾಗುತ್ತಿದೆ. ಇದು ಮಹಾನ್ ನಾಯಕನ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಲು ಮತ್ತು ಅವರಲ್ಲಿ ದೇಶಭಕ್ತಿಯ ಮನೋಭಾವವನ್ನು ತುಂಬಲು ಏಕಕಾಲದಲ್ಲಿ ವಿದ್ಯಾರ್ಥಿಗಳ ನಡುವಿನ ಪರೀಕ್ಷಾ ಒತ್ತಡವನ್ನು ನಿಭಾಯಿಸುವ ವಿಶಿಷ್ಟ ಉಪಕ್ರಮದಲ್ಲಿ ದೇಶಾದ್ಯಂತ 500 ವಿವಿಧ ಕೇಂದ್ರೀಯ ವಿದ್ಯಾಲಯಗಳಲ್ಲಿ ರಾಷ್ಟ್ರವ್ಯಾಪಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ವಿವಿಧ ಸಿಬಿಎಸ್ಇ ಶಾಲೆಗಳ ವಿದ್ಯಾರ್ಥಿಗಳು, ರಾಜ್ಯ ಮಂಡಳಿ, ನವೋದಯ ವಿದ್ಯಾಲಯ…
ಮಡಿಕೇರಿ ಜ.23 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯ ರೋಗ ಲಕ್ಷಣ ಶಾಸ್ತ್ರ ವಿಭಾಗದ ವತಿಯಿಂದ ಗರ್ಭಚೀಲ ಮತ್ತು ಗರ್ಭಕೋಶದ ಕ್ಯಾನ್ಸರ್ ಕುರಿತು ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಸಂಸ್ಥೆಯ ಆವರಣದಲ್ಲಿ ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲೆಯ ಹೆಸರಾಂತ ರೋಗ ಲಕ್ಷಣ ಶಾಸ್ತ್ರ ಮುಖ್ಯಸ್ಥರುಗಳಾದ ಡಾ.ಅನುರಾಧ ಸಿ.ಕೆ ರಾವ್, ಡಾ ಅನಿತಾ ಪಿ ಜವಲಗಿ, ಡಾ.ಗೀತಾ ದೊಪ್ಪ, ಡಾ ಶೀಲಾದೇವಿ ಡಾ ಸುಚಿತ್ರಾ ಎಸ್, ಸಂಸ್ಥೆಯ ವಿಭಾಗದ ಮುಖ್ಯಸ್ಥರುಗಳಾದ ಡಾ.ರಾಮಚಂದ್ರ ಕಾಮತ್ ಮತ್ತು ಡಾ.ಪದ್ಮಜ ಕುಲಕರ್ಣಿ ಅವರುಗಳು ಪ್ಯಾಪ್ ಸ್ಮೈರ್, ಕ್ಯಾನ್ಸರ್, ಪತ್ತೆ ಹಚ್ಚುವ ಬಗ್ಗೆ ತಡೆಗಟ್ಟುವ ಬಗ್ಗೆ ಹಾಗೂ ಇತ್ತೀಚಿನ ಅತ್ಯಾಧುನಿಕ ಚಿಕಿತ್ಸಾ ಕ್ರಮಗಳ ಬಗ್ಗೆ ವಿಮರ್ಶೆ ಹಾಗೂ ಅಧ್ಯಯನಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕಾರ್ಯಕ್ರಮವು ಆನ್ಲೈನ್ ಮತ್ತು ಆಫ್ಲೈನ್ ಮುಖಾಂತರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವೆಡೆಗಳಿಂದ 200 ಕ್ಕೂ ಹೆಚ್ಚು ವೈದ್ಯರುಗಳು ನೋಂದಣಿ ಮಾಡಿದ್ದರು.…
ಮಡಿಕೇರಿ ಜ.23 : ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ. ಕುಟ್ಟದಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ಬಸ್ ನಾಲ್ಕೇರಿ-ಕುಟ್ಟ ಮುಖ್ಯ ರಸ್ತೆಯಲ್ಲಿ ಜಿಂಕೆಗೆ ಡಿಕ್ಕಿಯಾಗಿದೆ. ಕುಟ್ಟ ಸರ್ಕಾರಿ ಶಾಲೆ ಬಳಿ ಈ ಘಟನೆ ನಡೆದಿದ್ದು, ಕುಟ್ಟ ವಿಭಾಗದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜ.23 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ರೈತ ಸಮುದಾಯ ಭವನದಲ್ಲಿ ಫೆ.3 ರಂದು ಆಯೋಜಿಸಿರುವ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರತಿಯೊಬ್ಬರ ಮನೆ ಮನೆಗಳ ಹಬ್ಬದ ಮಾದರಿಯಲ್ಲಿ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು. ಕುಶಾಲನಗರದ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಛೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹೊಸ ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಶಿಸ್ತುಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ಸಂಬAಧ ಈಗಾಗಲೇ ರಚಿಸಿರುವ ಉಪ ಸಮಿತಿಗಳ ಪದಾಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ತಾಲ್ಲೂಕಿನಾದ್ಯಂತ ಇರುವ ಸಾಹಿತ್ಯಾಸಕ್ತರು, ಸಂಘ ಸಂಸ್ಥೆಗಳ ಪ್ರಮುಖರು ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಶಾಸಕ ರಂಜನ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ…






