ಲೇಖಕ: admin

ಮಡಿಕೇರಿ ಮಾ.3 :  ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಕಾವೇರಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ  ಪ್ರೊ. ಇಟ್ಟಿರ ಕೆ.ಬಿದ್ದಪ್ಪ  ಮಾತನಾಡಿ,  ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈ ಗೂಡಿಕೊಳ್ಳಬೇಕು. ಜೀವನದಲ್ಲಿ ಎದುರಾಗುವ ಯಾವುದೇ ಸಮಸ್ಯೆಗೆ ಅಂಜದೆ ಆತ್ಮವಿಶ್ವಾಸದಿಂದ ಮುನ್ನಡೆಯ ಬೇಕೆಂದರು. ಕಾರ್ಯಕ್ರಮದಲ್ಲಿ  ಕಾಲೇಜಿನ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿಧ್ಯಾರ್ಥಿಗಳಿಗೆ  ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ  ಎನ್.ಎಂ.ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಉಪನ್ಯ‍ಾಸಕ  ಎ.ಎಮ್.ಡಯಾನಾ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಪ್ರಾರಂಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ದೀಪು ಹಾಗು ತಂಡದಿಂದ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾರ್ಥಿಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ. ದಮಯಂತಿ ಸ್ವಾಗತಿಸಿ, ಉಪನ್ಯಾಸಕಿ ಕೆ.ಪಿ.ಗಾಯತ್ರಿ ವಂದಿಸಿದರು.  ವಿದ್ಯಾರ್ಥಿಗಳಾದ ಹಸೀನಾ ಮತ್ತು ಕಾವೇರಮ್ಮ ಕಾರ್ಯಕ್ರವನ್ನು ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ವಿಧ್ಯಾರ್ಥಿಗಳು ಭಾಗವಹಿಸಿದರು.

Read More

ಸುಂಟಿಕೊಪ್ಪ ಮಾ.3 : ಹರದೂರು ಗ್ರಾಮದ ಉದ್ದಿಬಾಣೆ ಮಠದಲ್ಲಿ ಮಾ.4 ಮತ್ತು 5 ರಂದು ಧರ್ಮ ದೈವಗಳ ನೇಮೋತ್ಸವವು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಗಣಹೋಮ, 10 ಗಂಟೆಗೆ ಸತ್ಯ ನಾರಾಯಣ ಪೂಜೆ, ರಾತ್ರಿ 8 ಗಂಟೆಗೆ ಭಂಡಾರ ತೆಗೆಯುವುದು,10 ಗಂಟೆಗೆ ಕಲ್ಲುರ್ಟಿ ದೈವದ ನೇಮ ಮತ್ತು ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಮಾ.5 ದಂದು ಬೆಳಿಗ್ಗೆ 4 ಗಂಟೆಗೆ ಪಂಜುರ್ಲಿ ದೈವದ ನೇಮ, ಬೆಳಿಗ್ಗೆ 6 ಗಂಟೆಗೆ ಗುಳಿಗ ದೈವದ ಕೋಲ, 9ಕ್ಕೆ ಕೊರಗಜ್ಜ ದೈವದ ನೇಮೋತ್ಸವ ಮತ್ತು ಕೊರಗಜ್ಜ ದೈವಸ್ಥಾನ ಪ್ರತಿಷ್ಠಾಪನೆ ನೆರವೇರಲಿದೆ ಎಂದು ಮುಖ್ಯಸ್ಥರಾದ ಮೋಣಪ್ಪ ಪೂಜಾರಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಮಾ.3 : ಜಿ.ಎಂ.ಪಿ. ಶಾಲೆಯ ಚೆನ್ನಬಸಪ್ಪ ಸಭಾಂಗಣದಲ್ಲಿ ಕಳೆದ ಒಂದು ವಾರದಿಂದ ಆರ್ಟ್ ಆಫ್ ಲಿವಿಂಗ್ ವತಿಯಿಂದ ನಡೆದ ಬಾಲಚೇತನ ಶಿಬಿರ ಮುಕ್ತಾಯವಾಯಿತು. ಶಿಬಿರದಲ್ಲಿ ಸುಮಾರು 250 ಮಕ್ಕಳು ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಅವರು ಮಕ್ಕಳಿಗೆ, ಯೋಗ, ಪ್ರಾಣಯಾಮ, ಧ್ಯಾನ ಅಭ್ಯಾಸ ಮಾಡಿಸಿ ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ರಮೇಶ್, ಸಂಸ್ಥೆಯ ಸ್ವಯಂ ಸೇವಕರಾದ ದಿವ್ಯಮೋಹನ್, ಪ್ರಮೀಳಾ, ಅನಿತಾ ಆನಂದ್ ಇದ್ದರು.

Read More

ಸೋಮವಾರಪೇಟೆ ಮಾ.3 : ಕಾಜೂರು ಹಿರಿಯ ಪ್ರಾಥಮಿಕ ಶಾಲೆಗೆ, ಐಗೂರು ಗ್ರಾಮದ ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ನಂದಿನಿ ವಿಶ್ವನಾಥ ರಾಜೇ ಅರಸ್ ಡಿಜಿಟಲ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ರಾಜೇ ಅರಸ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ಹಾಗು ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಸರಳಕುಮಾರಿ ಇದ್ದರು.

Read More

ಮಡಿಕೇರಿ  ಮಾ.2 : ತೋಟದ ಮಾಲೀಕರುಗಳ ಸಭೆ ನಡೆಸಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಪರಿಚಿತ ಕಾರ್ಮಿಕರ ಬಗ್ಗೆ ಎಚ್ಚರ ವಹಿಸುವಂತೆ ಸಲಹೆ ನೀಡಿದರು.

Read More

ಮಡಿಕೇರಿ ಮಾ.2 : ಕೊಡಗು ಹೋಂಸ್ಟೇ ಮಾಲೀಕರುಗಳ ಸಭೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಂಶಯಾಸ್ಪದ ವಸ್ತು ಮತ್ತು ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ಮತ್ತು ಹಲವು ಸಲಹೆಗಳನ್ನು ನೀಡಿದರು.

Read More

ಮಡಿಕೇರಿ ಮಾ.2 : ನಗರದ ಗಾಂಧಿ ಮಂಟಪ ವ್ಯಾಪ್ತಿಯಲ್ಲಿ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ. ಕಳೆದ ಹಲವು ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಖಜಾನೆ ವಿಭಾಗದಲ್ಲಿಡಲಾಗಿರುವ ಗಾಂಧೀಜಿ ಚಿತಾಭಸ್ಮವನ್ನು ಶಾಶ್ವತವಾದ ಸ್ಮಾರಕದಲ್ಲಿಡಲು ಯೋಜನೆ ರೂಪಿಸಲಾಗಿದೆ. ರೂ.50 ಲಕ್ಷವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಮೂಲಕ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ. ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರು ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

Read More

ಮಡಿಕೇರಿ ಮಾ.2 : ಆಸ್ತಿ ವಿಚಾರದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ. ಹರಿಹರ ಗ್ರಾಮದ ನಿವಾಸಿ ಎಂ.ಸಂತು ಸುಬ್ಬಯ್ಯ(40) ಚೂರಿಯಿಂದ ಇರಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಕೊಲೆ ಮಾಡಿರುವ ಆರೋಪದಡಿ ಓರ್ವನನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಸಂತು ಸುಬ್ಬಯ್ಯ ಹಾಗೂ ಕೊಲೆ ಆರೋಪಿ ಸೋದರ ಸಂಬಂಧಿಗಳಾಗಿದ್ದು, ಬುಧವಾರ ರಾತ್ರಿ ಮದ್ಯದ ಅಮಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಕ್ತದ ಮಡುವಿನಲ್ಲಿದ್ದ ಸಂತು ಸುಬ್ಬಯ್ಯ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಣಸೂರು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಸಂತು ಸುಬ್ಬಯ್ಯ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಮಾ.2 : ಮೇಘಾಲಯ ಮತ್ತು ತ್ರಿಪುರ ರಾಜ್ಯದಲ್ಲಿ ಬಿಜೆಪಿ ಹಣ ಹಾಗೂ ತೋಳ್ಬಲದಿಂದ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ, ತೋಳ್ಬಲದಿಂದ ಬಲದಿಂದ ಬಿಜೆಪಿ ಆ ರಾಜ್ಯಗಳಲ್ಲಿ ಗೆಲವು ಸಾಧಿಸಿದೆ. ಆದರೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಇದು ಕಾಂಗ್ರೆಸ್ ಪಾಲಿಗೆ ಆಶಾದಾಯಕವಾಗಿದೆ. ಕರ್ನಾಟಕದಲ್ಲಿ ಸ್ಪಷ್ಟವಾಗಿ ಕಾಂಗ್ರೆಸ್ ಪರ ಅಲೆಯಿದ್ದು, ದೇಶದಲ್ಲಿ ಮೋದಿ ಆಡಳಿತ ಅಂತ್ಯಕ್ಕೆ ಈ ರಾಜ್ಯವೇ ನಾಂದಿ ಹಾಡಲಿದೆ ಎಂದು ಭವಿಷ್ಯ ನುಡಿದರು. ಇನ್ನು 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ ಪರ ಮತದಾರರ ಒಲವು ವ್ಯಕ್ತವಾಗಿದ್ದು, ಬಿಜೆಪಿಯ ಲಂಚಾವತಾರದಿAದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅನೇಕ ಸೌಲಭ್ಯಗಳನ್ನು ರೂಪಿಸಿದೆ ಎಂದರು. ಕೊಡಗಿನ ಕಾಫಿ ಬೆಳೆಗಾರರ ಸಮಸ್ಯೆ ಮತ್ತು ವನ್ಯಜೀವಿ…

Read More

ಸೋಮವಾರಪೇಟೆ ಮಾ.2 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ನಡೆದ ಅನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪಿ.ಬಿ.ಸಂಜನ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ ಕೆ.ಸೌಜನ್ಯ ದ್ವಿತೀಯ ಮತ್ತು ಸ್ನೇಹಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

Read More