ಮಡಿಕೇರಿ ಜ.23 : ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಗೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ದಂಬೆಕೋಡಿ ಮಾಚಯ್ಯ, ದಂಬೆಕೋಡಿ ಮಿಥುನ್, ಬೈಲೆರ ಸಾಬು ಬಾಲಕೃಷ್ಣ, ಬಿ.ಎನ್.ಸಂತೋಷ್ ಕುಮಾರ್, ಪರ್ಲಕೋಟಿ ರಾಘವಯ್ಯ, ಪರ್ಲಕೋಟಿ ಬೆಲ್ಲು ಬಾಲಕಷ್ಣ, ಪರ್ಲಕೋಟಿ ಪ್ರೀತಂ ಕುಮಾರ್ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಧ್ವಜ ಹಿಡಿದರು. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ಗ್ರಾಮಾಂತರ ತಾಲ್ಲೂಕು ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ಪ್ರಮುಖರಾದ ಡೀನ್ ಬೋಪಣ್ಣ, ಕುಮುದಾ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜ.23 : ಇಂಡಿಯನ್ ರಿಪೋರ್ಟರ್ಸ್ ಅಂಡ್ ಮೀಡಿಯಾ ಪರ್ಸನ್ಸ್ ಯೂನಿಯನ್ ಹೆಸರಿನ ಪತ್ರಕರ್ತರ ಸಂಘಟನೆ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿ ಜ.29ರಂದು ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಗೋವಾ ರಾಜ್ಯಗಳ ಪತ್ರಕರ್ತ ಸಂಘಟನೆಯ ಜವಾಬ್ದಾರಿಯನ್ನು ಕೇರಳ ಪತ್ರಕರ್ತರ ಒಕ್ಕೂಟವು ರಾಜ್ಯದ ಟಿ.ಎಲ್.ಶ್ರೀನಿವಾಸ್ ಅವರಿಗೆ ವಹಿಸಿದೆ. ಜ.29 ರಂದು ಕರ್ನಾಟಕ ರಾಜ್ಯ ಪತ್ರಕರ್ತರ ಯೂನಿಯನ್ನ ಅಧ್ಯಕ್ಷರಾಗಿ ಇವರು ಮೈಸೂರು ಜಲದರ್ಶಿನಿಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗೋಣಿಕೊಪ್ಪಲಿನಲ್ಲಿ ಮಾತನಾಡಿದ ಶ್ರೀನಿವಾಸ್, ಮ್ಯೆಸೂರಿನಲ್ಲಿ ಮೊದಲ ಸಭೆ ನಡೆಯಲಿದ್ದು, 30 ಜಿಲ್ಲೆಗಳ ಪ್ರವಾಸದ ನಂತರ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವದು ಎಂದರು. ನೂತನ ಒಕ್ಕೂಟವು ಮೈಸೂರು ಹಾಗೂ ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಲಿದ್ದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಂತೆ ರಾಜ್ಯದಲ್ಲಿಯೂ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟಲಾಗುವುದು. ದಕ್ಷಿಣ ಭಾರತ ಸಂಘಟನೆಯ ನಂತರ ಕರ್ನಾಟಕ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು. ಯಾವದೇ ಪತ್ರಕರ್ತ…
ಮಡಿಕೇರಿ ಜ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಗುರುತಿಸಿಕೊಳ್ಳುತ್ತಿರುವ ಜಾತ್ಯತೀತ ಜನತಾದಳದ ಮುಖಂಡ ನಾಪಂಡ ಮುತ್ತಪ್ಪ ಅವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಜೆಡಿಎಸ್ ವರಿಷ್ಠರ ಆದೇಶವಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವುದು ಮತ್ತು ಪಂಚರತ್ನ ಎಂಬ ವಾಹನದಲ್ಲೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವುದು ಸರಿಯಲ್ಲ. ರಾಜ್ಯ ವರಿಷ್ಠರ ಆದೇಶದಂತೆ ನಡೆದುಕೊಳ್ಳದೆ ಸ್ವಯಂ ಪ್ರೇರಿತವಾಗಿ ಪಕ್ಷದೊಳಗೆ ಬಿಕ್ಕಟ್ಟನ್ನು ಹಾಗೂ ಬಿನ್ನಾಭಿಪ್ರಾಯಗಳನ್ನು ತರುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಪಕ್ಷದ ತಾಲ್ಲೂಕು ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಜಿಲ್ಲಾಧ್ಯಕ್ಷರನ್ನು ಹೊರಗಿಟ್ಟು ಯಾವುದೇ ಜಿಲ್ಲಾ ನಾಯಕರನ್ನು ಕೇಳದೆ, ಪಕ್ಷ ಸಂಘಟನೆಗೆ ಚ್ಯುತಿ ತರುವಂತಹ ಕೆಲಸವನ್ನು ಮಾಡುತ್ತಿರುವಿರಿ. ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಲವು ಆಕಾಂಕ್ಷಿಗಳು ಇದ್ದು ಎಲ್ಲರನ್ನು ಒಗ್ಗೂಡಿಸಿ ಯಾವುದೇ ಭಿನ್ನಾಭಿಪ್ರಾಯಗಳು ಮೂಡದಂತೆ ಕಾರ್ಯಪ್ರವೃತ್ತರಾಗಬೇಕು. ಆದರೆ ತಾವು ಇದನ್ನೆಲ್ಲ ನಿರ್ಲಕ್ಷಿಸಿ ಕೆಲವರನ್ನಷ್ಟೇ ಬಳಸಿಕೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಮಾಡುತ್ತಿರುವುದರಿಂದ…
ಕುಶಾಲನಗರ ಜ.23 : ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಮಟ್ಟದ ಕ್ರೀಡಾಕೂಟ ಫೆ.25 ರಂದು ಕುಶಾಲನಗರದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಘಟಕದ ಹೆಚ್.ವಿಶಿವಪ್ಪ ತಿಳಿಸಿದ್ದಾರೆ. ಅವರು, ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಮಾಜ ಭಾಂಧವರ ಮಕ್ಕಳು ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 2021-22 ನೇ ಸಾಲಿನಲ್ಲಿ ಶೇ.80 ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು, ಈ ಬಗ್ಗೆ ದಾಖಲೆಗಳೊಂದಿಗೆ ಅರ್ಜಿಗಳನ್ನು ಮಹಾ ಸಭಾ ಪ್ರಮುಖರಿಗೆ ಸಲ್ಲಿಸುವಂತೆ ಕೋರಿದರು. ಅರ್ಜಿಜೊತೆ ವಿದ್ಯಾರ್ಥಿಗಳ 2 ಭಾವಚಿತ್ರಗಳು, ಅಂಕಪಟ್ಟಿ ಮತ್ತು ಆಧಾರ್ ಪ್ರತಿಗಳನ್ನು ಫೆಬ್ರವರಿ 10ರ ಒಳಗೆ ಈ ಕೆಳಕಂಡ ಮೊ.ಸಂಖ್ಯೆಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು. ಶಾಂಭಶಿವಮೂರ್ತಿ – 9448336781, ಜಿ.ಎಂಕಾoತರಾಜು- 7483411601, ಸುರೇಶ್ ವಿರಾಜಪೇಟೆ- 9448108091, ಆದರ್ಶ್ ಸೋಮವಾರಪೇಟೆ- 6362059198.ಸಂಪರ್ಕಿಸುವoತೆಕೋರಿದ್ದಾರೆ.ಮಹಾಸಭಾದ ವೇದಿಕೆ ಕಾರ್ಯಕ್ರಮ ಮಾರ್ಚ್ 11 ರಂದುಏರ್ಪಡಿಸಲಾಗಿದೆ ಎoದು ಮಾಹಿತಿ ಒದಗಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ…
ಮಡಿಕೇರಿ ಜ.22 : ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ಮೂಲಕ ವ್ಯವಸ್ಥೆಯೊಳಗಿನ ತಪ್ಪನ್ನು ತಿದ್ದುವ ಕೆಲಸ ಮಾಡಬೇಕು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕೆಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ಕೊಡಗು ಪ್ರೆಸ್ಕ್ಲಬ್ ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್ ಕ್ಲಬ್ ಪ್ರೀಮಿಯರ್ ಲೀಗ್ – 3 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ತಪ್ಪು ದಾರಿ ತುಳಿದರೆ ಎಚ್ಚರಿಸುವ ಕೆಲಸ ಪತ್ರಿಕಾರಂಗ ಮಾಡುತ್ತಿದೆ. ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡಾಕೂಟಗಳು ದೈಹಿಕ ಹಾಗೂ ಮಾನಸಿಕ ಉಲ್ಲಾಸ ನೀಡುತ್ತದೆ. ಪತ್ರಕರ್ತರ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಪತ್ರಿಕಾರಂಗ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವ್ಯವಸ್ಥೆಯ ಲೋಪದೋಷ, ಅನ್ಯಾಯ, ಅನಾಚಾರ ಬಯಲಿಗೆಳೆಯುವ ವ್ಯವಸ್ಥೆ ಪತ್ರಿಕಾರಂಗದಲ್ಲಿದೆ. ಸಮಾಜದ ನೈಜಸ್ಥಿತಿ ತಿಳಿಸುತ್ತಾ ಒಳಿತು, ಕೆಡುಕುಗಳಿಗೆ ಸಾಕ್ಷಿಯಾಗುವ ಪತ್ರಕರ್ತರನ್ನು ಸೈನಿಕರಿಗೆ ಹೋಲಿಸಬಹುದು ಎಂದು…
ಮಡಿಕೇರಿ ಜ.22 : ಎರಡು ಗೋವುಗಳನ್ನು ಹತ್ಯೆ ಮಾಡಿ ಕಳೇಬರವನ್ನು ಕಾಫಿ ತೋಟದಲ್ಲಿ ಹೂತಿಟ್ಟಿದ್ದ ಆರೋಪದಡಿ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗರಗಂದೂರು ಸಮೀಪದ ಹಾರಂಗಿ ಹಿನ್ನೀರು ಬಳಿಯ ಲತೀಫ್ ಎಂಬುವವರ ಕಾಫಿ ತೋಟದಲ್ಲಿ ಎರಡು ದಿನಗಳ ಹಿಂದೆ ಗೋವುಗಳನ್ನು ಹತ್ಯೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣಾ ವೇದಿಕೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಬಂದ ಪೊಲೀಸರು ಮಣ್ಣಿನಡಿ ಇದ್ದ ಗೋವಿನ ಕಳೇಬರದ ತ್ಯಾಜ್ಯಗಳನ್ನು ಹೊರ ತೆಗೆದರು. ಸ್ಥಳ ಮಹಜರು ನಡೆಸಿದ ನಂತರ ಪ್ರಕರಣ ದಾಖಲಿಸಿಕೊಂಡರು. ಸುಂಟಿಕೊಪ್ಪ ಪೋಲೀಸ್ ಠಾಣಾ ಅಪರಾಧ ವಿಭಾಗದ ಠಾಣಾಧಿಕಾರಿ ಸ್ವಾಮಿ, ಸಿಬ್ಬಂದಿಗಳಾದ ಸತೀಶ್, ಜಗದೀಶ್, ಶ್ರೀಕಾಂತ್, ಬಿರದಾರ ಹಾಗೂ ಜೈಶಂಕರ್ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಜಮಾಯಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಗೋವುಗಳ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಪೊಲೀಸರು ಗೋಹತ್ಯೆಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು…
ಮಡಿಕೇರಿ ಜ.22 : ಗೋಣಿಕೊಪ್ಪಲು- ಕೈಕೇರಿ ಮುಖ್ಯ ರಸ್ತೆಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.
ವಿರಾಜಪೇಟೆ ಜ.22 : ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಲಾಗಿದ್ದ ಕವಿಗೋಷ್ಠಿಯಲ್ಲಿ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿ ಕವಿವರ್ಯರು ಸ್ವರಚಿತ ಕಾವ್ಯಗಳನ್ನು ವಾಚಿಸಿ ಸಾಹಿತ್ಯಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಹೆಚ್ಚು ವಿದ್ಯಾರ್ಥಿಗಳೇ ಭಾಗವಹಿಸಿದ್ದು ವಿಶೇಷವಾಗಿತ್ತು. 3ನೇ ತರಗತಿಯ ಕು.ಸಾನ್ವಿ ಯೋಗೇಶ್ವರಿ ತನ್ನ ಹಾವ ಭಾವದೊಂದಿಗೆ ಚಿಟ್ಟೆ ಎಂಬ ಕವಿತೆಯನ್ನು ವಾಚಿಸಿ ಜನಮನ ಗೆದ್ದಳು. ಇನ್ನುಳಿದಂತೆ ವಿದ್ಯಾರ್ಥಿಗಳು, ಗೆಳತಿ, ಅಮ್ಮ ಹೀಗೆ ಹೆಣ್ಣಿನ ಬಗ್ಗೆ ಕವಿತೆ ವಾಚಿಸಿದರು. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರದ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಅವರು ಮಾತನಾಡಿ ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು, ಕಲ್ಪನೆಗಳನ್ನು ಪದಪುಂಜಗಳ ಅರ್ಥಗರ್ಭಿತ ಜೋಡಣೆಯ ಮೂಲಕ ಲಿಖಿತ ಸ್ವರೂಪ ಕೊಟ್ಟು ಚೆಂದಗಾಣಿಸುವ ಅದ್ಭುತ ಶಕ್ತಿ ಕವಿಯದ್ದು. ಒಂದು ವಿಷಯವನ್ನು ನಾವು ಊಹಿಸಲೂ ಸಾಧ್ಯವಿರದ ವಿಭಿನ್ನ ಶೈಲಿಯಲ್ಲಿ ಪ್ರಸ್ತುತ ಪಡಿಸುವ ಸಾಮಥ್ರ÷್ಯ ಕವಿಗಿದೆ. ಯಾವುದೇ…
ವಿರಾಜಪೇಟೆ ಜ.22 : ವಿರಾಜಪೇಟೆಯ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ನುಡಿ ಜಾತ್ರೆಗೆ ಸಂಭ್ರಮದ ತೆರೆ ಬಿದ್ದಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಆರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಕೊಡವ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು, ಗಡಿನಾಡಲ್ಲಿ ಕನ್ನಡ ಭವನಗಳನ್ನು ತೆರೆಯುವಂತಾಗಬೇಕು, ಕನ್ನಡಪರ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಬೇಕು, ಕನ್ನಡ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು, ಕೊಡಗಿನ ಕೃಷಿ ಚಟುವಟಿಕೆಗೆ ಉತ್ತೇಜನವನ್ನು ನೀಡಬೇಕು, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಲಾಯಿತು. ಕಸಾಪ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಶಬರೀಶ್ ಶೆಟ್ಟಿ ನಿರ್ಣಯ ಮಂಡನೆ ಮಾಡಿದರು. ಬಹಿರಂಗ ಅಧಿವೇಷನದ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕಸಾಪ ಕೊಡಗು ಜಿಲ್ಲೆ ಗೌರವ ಕಾರ್ಯದರ್ಶಿ ಮುನೀರ್ ಅಹಮದ್ ಸಮಾರೋಪ ಭಾಷಣ ಮಾಡಿ ಕನ್ನಡ ಬರಿ ಕರ್ನಾಟಕದಲ್ಲಿ ಅಲ್ಲ ಅದು ಅಸೀಮ, ಕೊಡಗು ಎಂದಾಕ್ಷಣ…
ವಿರಾಜಪೇಟೆ ಜ.22 : ಕನ್ನಡ ಭಾಷೆಯ ರಕ್ಷಣೆ ಇಲ್ಲಿ ಸೇರಿರುವ ಪ್ರತಿಯೊಬ್ಬ ಕನ್ನಡಾಭಿಮಾನಿಗಳ ಮೇಲೆ ಹೊಣೆಗಾರಿಕೆಯಾಗಿ ನಿಂತಿದೆ, ಅದು ನಮ್ಮ ಕರ್ತವ್ಯವೂ ಆಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅಭಿಪ್ರಾಯ ಪಟ್ಟರು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿ÷ಸಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಎ.ಎಸ್ ಪೊನ್ನಣ್ಣ ಭಾಷೆಯ ಅಳಿವಿಗೆ ಕಾರಣಗಳು ಹಲವಾರು, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಭಾಷೆಯ ಉಳಿವಿಗಾಗಿ ಸಾಹಿತ್ಯದ ಬೆಳವಣಿಗೆಗೆ ತನ್ನಿಂದ ಎಲ್ಲ ಸಹಕಾರ ನೀಡಲು ಬದ್ದ ಎಂದು ಹೇಳಿದರು. ಸಾಹಿತ್ಯ ಕ್ಷೇತ್ರದಲ್ಲಿ ಪುಷ್ಪಲತಾ ಶಿವಪ್ಪ, ಶಿಕ್ಷಣ ಕ್ಷೇತ್ರದಲ್ಲಿ ಪೆರಿಗ್ರೀನ್ ಮಚ್ಚಾಡೋ, ಸೈನಿಕರ ಕ್ಷೇತ್ರದಲ್ಲಿ ಭವಾನಿ ಶಂಕರ್, ವಿಶಿಷ್ಟ ಸೇವಾ ಪದಕ ಬ್ರಿಗೇಡಿಯರ್ ಪಿ.ಟಿ ಮೊಣ್ಣಪ್ಪ,…






