ಕುಶಾಲನಗರ ಜ.22 : ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭಾನುವಾರ ಬಿಡುಗಡೆಗೊಳಿಸಿದರು. ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜ.22 : ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿಯ ಶಂಸುಲ್ ಉಲಮ ಕಾಲೇಜು ವಿದ್ಯಾರ್ಥಿಗಳು ನಿರುಪಯುಕ್ತ ವಸ್ತುಗಳಿಂದ ಹಲವು ಕಲಾಕೃತಿಗಳನ್ನು ರಚಿಸುವ ಮೂಲಕ ಗಮನ ಸೆಳೆದಿದ್ದಾರೆ. ಶಂಸುಲ್ ಉಲಾಮ ಅಕಾಡಮಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಮಾದರಿ ವಸ್ತು ಪ್ರದರ್ಶನದಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ರಚಿಸಿದ ಆರೋಗ್ಯ, ಶಿಕ್ಷಣ, ಕೈಗಾರಿಕೆ, ಕೃಷಿ ಮಾಹಿತಿ ತಂತ್ರಜ್ಞಾನ, ಉಪಗ್ರಹ ಕುರಿತ ನಿರಪಯುಕ್ತ ವಸ್ತುಗಳ ಮರುಬಳಕೆ ಪ್ರಯೋಗ ಯಶಸ್ವಿಯಾಯಿತು. ಆಯುರ್ವೇದ, ಗಿಡಮೂಲಿಕೆಗಳು, ಮಾನವ ನಿರ್ಮಿತ ಉಪಕರಣಗಳು, ಸೌರವ್ಯೂಹ, ಮಳೆ ನೀರು ಕೊಯ್ಲು, ಜಲವಿದ್ಯುತ್, ರಾಕೆಟ್, ಕೃಷಿ, ಜೀರ್ಣಾಂಗ ವ್ಯವಸ್ಥೆ, ಉಸಿರಾಟದ ವ್ಯವಸ್ಥೆ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದಲ್ಲದೆ ಕಲಾ ಸ್ಮಾರಕಗಳಾದ ಕುತುಬ್ ಮಿನಾರ್, ಸಂಸತ್ತು, ವಿಧಾನ ಸೌಧ, ತಾಜ್ ಮಹಲ್, ಕೆಂಪು ಕೋಟೆ, ವಾಣಿಜ್ಯ ವ್ಯವಹಾರಗಳಾದ ವ್ಯಾಪಾರ ಪ್ರಕ್ರಿಯೆ, ಒಂದು ರಾಷ್ಟ್ರ ಒಂದು ತೆರಿಗೆ, ಕೂರ್ಗ್ ಇನ್ಫೋಟೆಕ್ಟ್ ಎಂಬ ಹೆಸರಿನ ಮುಂದಿನ ವ್ಯವಹಾರ ಯೋಜನೆಯನ್ನು ಅನುಷ್ಠಾನಗೊಳಿಸುವುದು, ಆರ್ಥಿಕತೆಯ ವಲಯ, ವ್ಯಾಪಾರ ಅಧ್ಯಯನಗಳು, ಜಿಎಸ್ಟಿ…
ಕುಶಾಲನಗರ ಜ.22 : ಸಮೀಪದ ಹೆಬ್ಬಾಲೆ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾಗಿದ್ದ ದಿವಂಗತ.ಇ.ಕೆ.ಸುಬ್ರಾಯ ಅವರಿಗೆ ಭಾನುವಾರ ಇಲ್ಲಿನ ವಾಸವಿ ಮಹಲ್ ಸಭಾಂಗಣದಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಸುಬ್ರಾಯ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿದ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಚ್.ಎಲ್.ವೆಂಕಟೇಶ್ ಮಾತನಾಡಿ, ಹೆಬ್ಬಾಲೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಅಪಾರ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದ ಇ.ಕೆ.ಸುಬ್ರಾಯ ಅವರು ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಅರ್ಪಣಾ ಮನೋಭಾವದಿಂದ ಮಾದರಿ ಮುಖ್ಯೋಪಾಧ್ಯಾಯರಾಗಿದ್ದರು ಎಂದು ಬಣ್ಣಿಸಿದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಚ್.ವಿ.ಶಿವಪ್ಪ ಮಾತನಾಡಿ, ಜಿಲ್ಲೆಯ ಗಡಿ ಗ್ರಾಮಗಳ ಅಸಂಖ್ಯಾತ ವಿದ್ಯಾರ್ಥಿಗಳ ಆಶಾಕಿರಣರಾಗಿದ್ದು, ವಿದ್ಯಾರ್ಥಿಗಳಲ್ಲಿ ಬದುಕಿನ ಶಿಕ್ಷಣ, ಶಿಸ್ತು ಬದ್ದ ಜೀವನ ಕಲಿಸಿದ್ದಾರೆ ಎಂದರು. ಸಾಹಿತಿ ಭಾರದ್ಚಜ್ ಕೆ.ಆನಂದ ತೀರ್ಥ ಮಾತನಾಡಿ,ಹೆಬ್ಬಾಲೆ ಪ್ರೌಢಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಶಾಲೆಯ ಕೀರ್ತಿ ಇ.ಕೆ.ಸುಬ್ರಾಯ ಅವರಿಗೆ ಸಲ್ಲುತ್ತದೆ ಎಂದರು. ಈ ಸಂದರ್ಭ ಪ್ರೊ.ಎಚ್.ಡಿ.ಲಿಂಗರಾಜು,ನಿವೃತ್ತ ಕೇಂದ್ರೀಯ ತೆರಿಗೆ…
ಸುಂಟಿಕೊಪ್ಪ, ಜ.22 : ಸುಂಟಿಕೊಪ್ಪ ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಲಾಯಿತು. ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಾರಿ ಬಿ.ಬಿ.ಭಾರತೀಶ್, ವಿಧಾನಸಭಾ ಕ್ಷೇತ್ರದ ಪ್ರಬಾರಿಗಳಾದ ವಿಕ್ರಂ, ಯುವ ಮೋರ್ಚಾ ಸಂಚಾಲಕ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಸೋಮವಾರಪೇಟೆ ಜ.22 : ಹಸಿದ ಹೊಟ್ಟೆಗೆ ಅನ್ನ ನೀಡುವುದೇ ಮಾನವ ಧರ್ಮ. ಹಸಿವಿನಿಂದ ಯಾರು ಸಾಯಬಾರದು ಎಂದು ಜೀವನ ಪರ್ಯಂತ ತ್ಯಾಗಮಯ ಬದುಕು ಸವೆಸಿದ ಮಹಾನ್ ಚೇತನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಬಸವಾಪಟ್ಟಣ ತೋಟಂದಾರ್ಯ ಸಂಸ್ಥಾನದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು. ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ಆನೆಕೆರೆ ಸಮೀಪವಿರುವ ಡಾ. ಶ್ರೀ ಶಿವಕುಮಾರ್ ಸ್ವಾಮೀಜಿ ಬಸ್ ನಿಲ್ದಾಣದ ಆವರಣದಲ್ಲಿ ಲಿಂಗೈಕ್ಯ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ-ದಾಸೋಹ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣ ನವರ ‘ಕಾಯಕವೇ ಕೈಲಾಸ’ ನಿತ್ಯದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು 1930ರಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೇ ಒಂದು ಧರ್ಮಕ್ಕೆ ಸ್ಥಿಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದರು. ಮಠದಲ್ಲಿ 10ಸಾವಿರ ವಿದ್ಯಾರ್ಥಿಗಳಿಗೆ ವಿದ್ಯೆಕಲಿಯುತ್ತಿದ್ದು, ಅದರಲ್ಲಿ 3800 ವಿದಾರ್ಥಿ ಲಿಂಗಾಯುತ ಸಮುದಾಯಕ್ಕೆ ಸೇರಿದ್ದರೆ,…
ಸೋಮವಾರಪೇಟೆ ಜ.22 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸೋಮವಾರಪೇಟೆ ಕಸಬಾ ಹೋಬಳಿಯ ಮಸಗೋಡು ಗ್ರಾಮದ ಸಿದ್ಧೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ತಹಸೀಲ್ದಾರ್ ಎಸ್.ಎನ್. ನರಗುಂದ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮಹಾತ್ವಾಕಾಂಕ್ಷೆಯ ಈ ಯೋಜನೆಯಿಂದ ಗ್ರಾಮೀಣ ಜನರು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದರೆ, ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾ ಗಾಂಧಿ ವೃದ್ಧಾಪ್ಯವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಅಂತ್ಯಸAಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಪರಿಹರಿಸಿಕೊಳ್ಳಲು ಸಾಧ್ಯ ಎಂದರು ನೇರುಗಳಲೆ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಮಾತನಾಡಿ, ತಣ್ಣೀರುಹಳ್ಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗ್ರಾಮದ 88 ಏಕರೆ ಪೈಸಾರಿ ಜಾಗದ, 10 ಏಕರೆ ಸ್ಥಳದಲ್ಲಿ 200 ಕುಟುಂಬಗಳು ವಾಸಿಸುತ್ತಿದ್ದಾರೆ. ಆದರೆ, ಸ್ಥಳಕ್ಕೆ ಯಾವುದೇ…
ಸೋಮವಾರಪೇಟೆ ಜ.22 : ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಕ್ರೀಡಾಕೂಟ ಸಹಕಾರಿಯಾಗಲಿವೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅಭಿಪ್ರಾಯಪಟ್ಟಿದ್ದಾರೆ. ಇಂದಿರಾಗಾಂಧಿ ಅಭಿಮಾನಿಗಳ ಸಂಘ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪ್ರಾರಂಭಗೊAಡ 36ನೇ ವರ್ಷದ ರಾಜ್ಯ ಮಟ್ಟದ ಬೆಳ್ಳಿಬಟ್ಟಲಿನ ಕಬಡ್ಡಿ ಹಾಗು ಅಂತರ್ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಎಲೆ ಮರೆಯ ಕಾಯಿಯಂತಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದುದು ನಮ್ಮ ಕರ್ತವ್ಯವಾಗಬೇಕೆಂದರು. ಕ್ರೀಡಾ ಜಿಲ್ಲೆಯಾದ ಕೊಡಗಿಮಲ್ಲಿ ಸಾಕಷ್ಟು ಸಂಖ್ಯೆಯ ಕ್ರೀಡಾಪಟುಗಳಿದ್ದು ಜಿಲ್ಲೆಯಲ್ಲಿ ಇದೀಗ ನಿರಂತರ ಕ್ರೀಡಾಚಟುವಟಿಕೆಗಳು ನಡೆಯಿತ್ತಿರುವುದ ಶ್ಲಾಘನೀಯ ಎಂದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಕಾಟ್ನಮನೆ ಗಿರೀಶ್ ಮಾತನಾಡಿ, ಧೀಮಂತ ಪ್ರಧಾನಿಯಾಗಿದ್ದ ದಿವಂಗತ ಇಂದಿರಾಗಾಂಧಿಯವರ ಹೆಸರಿನಲ್ಲಿ ಇಂದಿಗೂ ಕ್ರೀಡಾಕೂಟ ನಡಿಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ. ಅದರಲ್ಲೂ ಕೂಲಿ ಕಾರ್ಮಿಕರೇ…
ಸುಂಟಿಕೊಪ್ಪ ಜ.22 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾಕೂರು ಶಿರಂಗಾಲ ಕಾನ್ಬೈಲ್ ಶ್ರೀ ರಾಮಂದಿರ ದೇವಸ್ಥಾನ ಅಭಿವೃದ್ಧಿಗೆ ಅನುದಾನದ ಡಿ.ಡಿ ವಿತರಿಸಲಾಯಿತು. ಶನಿವಾರಸಂತೆಯಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಧನಾ ಸಮಾವೇಶ ಸಮಾರಂಭದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ.ಶ್ರೀ. ಸದಾಶಿವ ಸ್ವಾಮಿಜಿ, ಮಡಿಕೇರಿ ಕ್ಷೇತ್ರ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಓ ಎಸ್.ಎಸ್. ಅನಿಲ್ಕುಮಾರ್, ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತು ತಾಲ್ಲೂಕು ಯೋಜನಾಧಿಕಾರಿ ರೋಹಿತ್ ಅವರುಗಳು ಕಾನ್ಬೈಲ್ ಶ್ರೀ ರಾಮಂದಿರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಧರ್ಮಸ್ಥಳ ಕ್ಷೇತ್ರದ ವತಿಯಿಂದ ನೀಡಲಾದ ರೂ. 1 ಲಕ್ಷ ಡಿ.ಡಿಯನ್ನು ದೇವಸ್ಥಾನ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು.
ಮಡಿಕೇರಿ ಜ.21 : ಗಡಿ ಜಿಲ್ಲೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ವೈಭವದ ಸಾಂಸ್ಕೃತಿಕ ಮೆರವಣಿಗೆ, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯುವ ಮೂಲಕ ಗಮನ ಸೆಳೆೆಯಿತು. ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಪಂಚಾಯ್ತಿಯ ಪುಟ್ಟ ಗ್ರಾಮ ಆರ್ಜಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಒಳಗೊಂಡಂತೆ ಶನಿವಾರ ಬೆಳಗ್ಗೆ ನಡೆದ ಭವ್ಯ ಸಾಂಸ್ಕೃತಿಕ ಮೆರವಣಿಗೆ, ಕನ್ನಡ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸಿತಾದರೆ, ಗ್ರಾಮದುದ್ದಕ್ಕೂ ಕನ್ನಡ ಧ್ವಜ ರಾರಾಜಿಸುವ ಮೂಲಕ ಕನ್ನಡದ ಅಂತಃಸತ್ವ, ಅದರೆಡೆಗಿನ ಅಭಿಮಾನಕ್ಕೆ ಸಾಕ್ಷಿಯಾಯಿತು. ಬೇಟೋಳಿ ಪಂಚಾಯ್ತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಸಮ್ಮೇಳನದ ಸಭಾಂಗಣದ ವರೆಗೆ ನಡೆದ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು, ಸಮ್ಮೇಳನಾಧ್ಯಕ್ಷ ಡಾ.ಎಸ್.ವಿ. ನರಸಿಂಹನ್, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ ಅವರನ್ನು ಒಳಗೊಂಡ ಅಲಂಕೃತ ವಾಹನ ಮೆರವಣಿಗೆಯ ಕೇಂದ್ರಬಿಓದುವಾಗಿದ್ದುದು ವಿಶೇಷ. ಸಮ್ಮೇಳನಾಧ್ಯಕ್ಷರು ಮತ್ತು ಕಲಾತಂಡಗಳ ಮೆರವಣಿಗೆÉಗೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಉಪೇಂದ್ರ ಅವರು…
ವಿರಾಜಪೇಟೆ ಜ.21 : ವಿರಾಜಪೇಟೆ ನಗರದ ಮೀನುಪೇಟೆ ಮಲಬಾರ್ ರಸ್ತೆಯ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಾಲಯದ 7ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳ ರಾಜ್ಯದ ಕಾಳೆ ಘಾಟ್ ನ ಶ್ರೀ ನಾರಾಯಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಗಣಪತಿ ಹೋಮ, ದೀಪಾರಾಧನೆ, ಮುತ್ತಪ್ಪನ್ ವೆಳ್ಳಾಟಂ ನಡೆಯಿತು. ಮಹಾಪೂಜೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.






