ಲೇಖಕ: admin

ಮಡಿಕೇರಿ ಜ.5 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಜ.6 ರಂದು ಕುಶಾಲನಗರದಲ್ಲಿ ಹೃದ್ರೋಗ ತಪಾಸಣಾ ಶಿಬಿರ ನಡೆಯಲಿದೆ. ನಾರಾಯಣ ಸೂಪರ್‍ಸ್ಪೆಷಾಲಿಟಿ ಒಪಿಡಿ ಸೆಂಟರ್‍ನಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ರವಿಶಂಕರ್ ಎದೆನೋವು, ಎದೆಯ ಬಿಗಿತ, ಎದೆಯ ಒತ್ತಡ ಮತ್ತು ಎದೆಯ ಅಸ್ವಸ್ಥತೆ, ಉಸಿರಾಟದ ತೊಂದರೆ, ವೇಗವಾದ ಹೃದಯ ಬಡಿತಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 9513408004, 8904258788, 08276273221 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.5 : ರೋಟರಿ ಮಡಿಕೇರಿ ವುಡ್ಸ್ ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ಆರಂಭಿಕ ವರ್ಷವೇ ಸಾಧನೆಯ ಹೆಗ್ಗುರುತುಗಳನ್ನು ಸೃಷ್ಟಿಸಿದೆ ಎಂದು ರೋಟರಿ ವುಡ್ಸ್‍ನ 3181 ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಮೂರನೇ ರೋಟರಿ ಸಂಸ್ಥೆಯಾಗಿ 2022ರ ಮೇ 15 ರಂದು ಉದಯಿಸಿದ ರೋಟರಿ ಮಡಿಕೇರಿ ವುಡ್ಸ್ 35 ಸದಸ್ಯರ ತಂಡಗಳನ್ನೊಳಗೊಂಡು ಸಾಕಷ್ಟು ಜನೋಪಯೋಗಿ ಕಾರ್ಯ ಯೋಜನೆಗಳ ಮೂಲಕ ಜನಸ್ನೇಹಿಯಾಗಿದೆ. ಮುಂದಿನ ವರ್ಷಗಳಲ್ಲಿಯೂ ಮತ್ತಷ್ಟು ಸಾಮಾಜಿಕ ಕಳಕಳಿಯ ಯೋಜನೆಗಳಲ್ಲಿ ಸಕ್ರಿಯವಾಗಲಿದೆ ಎಂದರು. ರೋಟರಿ ವುಡ್ಸ್ ಸಂಸ್ಥೆ ಶುದ್ಧ ಕುಡಿಯುವ ನೀರು, ಜನರಿಗೆ ಸೂರು, ಶಿಕ್ಷಣ, ಪರಿಸರದ ಬಗ್ಗೆ ವಿಶೇಷ ಕಾಳಜಿ ವಹಿಸಿದೆ. ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜೆನಿಫರ್ ಜಾನ್ ಅವರ ಆಶಯದಂತೆ ಶಿಕ್ಷಣ ಮತ್ತು ಪರಿಸರಕ್ಕೆ ಪೂರಕವಾದ ವನಸಿರಿ, ವಿದ್ಯಾಸಿರಿ, ಆರೋಗ್ಯ ಸಿರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ಲಬ್ ಸರ್ವಿಸ್, ಜನರನ್ನು ಬಲಪಡಿಸುವ ನಿಟ್ಟಿನಲ್ಲಿ ಕಮ್ಯೂನಿಟಿ ಸರ್ವಿಸ್, ಯುವಕರನ್ನು ಬಲಪಡಿಸುವ…

Read More

ಮಡಿಕೇರಿ ಜ.5 : ಜಿ.ಪಂ ಕ್ಷೇತ್ರಗಳನ್ನು ಪುನರ್ ವಿಂಗಡಿಸುವ ಮೂಲಕ ಕೊಡಗು ಜಿಲ್ಲೆಗೆ ಅನ್ಯಾಯ ಮಾಡಲಾಗಿದೆ. 29 ಕ್ಷೇತ್ರಗಳನ್ನು 25 ಕ್ಷೇತ್ರಗಳಿಗೆ ಸೀಮಿತಗೊಳಿಸಿರುವುದರಿಂದ ಅನುದಾನದ ಕೊರತೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಈಗ ಇರುವ 29 ಕ್ಷೇತ್ರಗಳನ್ನು ಉಳಿಸಬೇಕು ಅಥವಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಕ್ಷೇತ್ರಗಳ ಪುನರ್ ವಿಂಗಡಣೆ ವಿರುದ್ಧ ಜ.16 ರಂದು ಜಿಲ್ಲಾ ಕಾಂಗ್ರೆಸ್ ಆಕ್ಷೇಪಣೆ ಸಲ್ಲಿಸಲಿದೆ ಎಂದು ತಿಳಿಸಿದ ಅವರು, ಈ ವಿಚಾರದಲ್ಲಿ ಜಿಲ್ಲೆಯ ಶಾಸಕರುಗಳು ಹಾಗೂ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ತಿಳಿಸಿದರು. ಜಿ.ಪಂ ಕ್ಷೇತ್ರಗಳನ್ನು 25 ಕ್ಕೆ ಇಳಿಕೆ ಮಾಡಿರುವುದು ಮತ್ತು ಗಡಿ ಗುರುತು ವಿಚಿತ್ರ ರೀತಿಯಲ್ಲಿದೆ. 60- 70 ಕಿ.ಮೀ ಕ್ರಮಿಸಬೇಕಾದ ಬಿರುನಾಣಿ- ಬಿಟ್ಟಂಗಾಲಕ್ಕೆ ಸಂಪರ್ಕವೇ ಇಲ್ಲದಿದ್ದರೂ ಜಿ.ಪಂ ಕ್ಷೇತ್ರವನ್ನು ಸೃಷ್ಟಿಸಲಾಗಿದೆ. ಈ ರೀತಿಯ ಅರ್ಥಹೀನ ಕ್ರಮಗಳಿಂದ ಮುಂದೆ ಬರುವ ಜಿ.ಪಂ ಸದಸ್ಯರ ಕಾರ್ಯನಿರ್ವಹಣೆಗೂ ಕಷ್ಟವಾಗಲಿದೆ. ಕ್ಷೇತ್ರ ಕಡಿಮೆಯಾದಂತೆ…

Read More

ಕುಶಾಲನಗರ, ಜ.5 : ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸತತ ಪ್ರಯತ್ನದಿಂದ ಗೆಲುವು ಸಾಧ್ಯ ಎಂದು ನಿವೃತ್ತ ಕ್ರೀಡಾ ತರಬೇತುದಾರರಾದ ಅಂತೋಣಿ ಡಿಸೋಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಮತ್ತು ಎಂಜಿಎಂ ಪದವಿ ಕಾಲೇಜು ಆಶ್ರಯದಲ್ಲಿ ನಡೆದ ಕ್ರೀಡಾ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರಾಥಮಿಕ ಶಿಕ್ಷಣದ ಅವಧಿಯಿಂದಲೇ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಉದ್ಯೋಗಕ್ಕೆ ಕೂಡ ಅವಕಾಶ ಇದೆ ಎಂದ ಅವರು, ಕ್ರೀಡಾ ಪ್ರಾಧಿಕಾರದ ಮೂಲಕ ದೊರೆಯುವ ಸೌಲಭ್ಯದ ಬಗ್ಗೆ ಮಾಹಿತಿ ಒದಗಿಸಿದರು. ಕ್ರೀಡೆಯಿಂದ ರಾಷ್ಟ್ರದ ಕೀರ್ತಿಯನ್ನು ಉತ್ತುಂಗಕ್ಕೆ ತರಬಹುದು. ವಾರ್ಷಿಕ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಅವರು ಮಾತನಾಡಿ, ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡುವಂತಾಗಬೇಕು ಎಂದರು. 3 ದಿನಗಳ ಕಾಲ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕ್ರೀಡಾಕೂಟ ಹಿನ್ನೆಲೆಯಲ್ಲಿ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ…

Read More

ಮಡಿಕೇರಿ ಜ.5 : ರಾಜಸ್ಥಾನದ ಮೌಂಟ್ ಅಬುವಿನಲ್ಲಿರುವ ಬ್ರಹ್ಮಕುಮಾರಿಸ್ ಪ್ರಧಾನ ಕಾರ್ಯಾಲಯಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆದ್ಯಾತ್ಮದ ವಿಶೇಷ ದ್ಯಾನದಲ್ಲಿ ತಮ್ಮ ಬದುಕಿನ ಸುಂದರ ಕ್ಷಣವನ್ನು ಸ್ಮøತಿ ಮಾಡಿಕೊಂಡರು. ನಂತರ ಜ್ಯೋತಿ ಬೆಳೆಗಿಸಿ ವಿಶ್ವಕ್ಕೆ ಆದ್ಯಾತ್ಮದ ಕೊಡುಗೆಯನ್ನು ನೀಡಿರುವ ಬ್ರಹ್ಮಕುಮಾರಿಸ್ ನ ಸೇವೆ ಮಹತ್ತರ. ವಿಶ್ವದಾದ್ಯಂತ ಹರಡಿರುವ ಈ ಶಾಖೆಯನ್ನು ಮಹಿಳೆಯರೇ ನಡೆಸುತ್ತಿರುವುದು ಶ್ಲಾಘನೀಯ. ವಿಶ್ವದ ಅತೀ ದೊಡ್ಡ ಸಂಸ್ಥೆಯಾಗಿ ಎಲ್ಲರಲ್ಲೂ ಸಕರಾತ್ಮಕವನ್ನು ತುಂಬುತ್ತಿದೆ ಎಂದು ಮನವರಿಕೆ ಮಾಡಿದರು. ಈ ಸಂದರ್ಭ ರಾಜಸ್ಥಾನದ ಸಚಿವರು, ಬ್ರಹ್ಮಕುಮಾರಿ ಮುಖ್ಯ ಸಹೋದರ, ಸಹೋದರಿಯರು ಪಾಲ್ಗೊಂಡು ಈಶ್ವರಿಯ ಸನ್ಮಾನ ನೀಡಿ ಗೌರವಿಸಿದರು. ಮುಂಜಾನೆ ದ್ಯಾನದ ಕೊಠಡಿಯಲ್ಲಿ ದ್ಯಾನ ಮಾಡಿ ಎಲ್ಲರೊಂದಿಗೆ ಬೆರೆತು ಬೆಳಗಿನ ಆದ್ಯಾತ್ಮದ ತರಗತಿಯಲ್ಲಿ ಭಾಗವಹಿಸಿ, ಗಿಡನೆಟ್ಟು ಎಲ್ಲರಿಗೂ ಶುಭಕೋರಿದರು.

Read More

ಮಡಿಕೇರಿ ಜ.5 :  ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು( ಕಸಾಪ ) ವತಿಯಿಂದ ಫೆ.3 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಕುಶಾಲನಗರ  ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯಲಿರುವ ಕವಿಗೋಷ್ಠಿಗೆ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕವಿಗಳಿಂದ ಮಾತ್ರ ಕವನಗಳನ್ನು ಆಹ್ವಾನಿಸಲಾಗಿದೆ. ಕವಿಗೋಷ್ಢಿಯಲ್ಲಿ ಯುವ ಉದಯೋನ್ಮುಖ ಹಾಗೂ ಹೊಸ ಪ್ರತಿಭೆ ಮತ್ತು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕವಿಗೋಷ್ಠಿಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಸ್ವ ರಚಿತ ಕವಿತೆಗಳು 15 ರಿಂದ 20 ಸಾಲುಗಳ ಮಿತಿಯಲ್ಲಿದ್ದು, ಕವನ ವಾಚನಕ್ಕೆ ಮೂರು ನಿಮಿಷಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನದ ಮೂಲ ಪ್ರತಿಯನ್ನು ಜನವರಿ 12 ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ‌ ಕಳಿಸಬೇಕು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಳಾಸ : ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಚಂದ್ರಶ್ರೀ ಕಾಂಪ್ಲೆಕ್ಸ್ , ಸೋಮೇಶ್ವರ ದೇವಸ್ಥಾನದ…

Read More

ನಾಪೋಕ್ಲು ಜ.5 : ಕಡಿಯತ್ತನಾಡು ಕೊಣಂಜಗೇರಿ ಗ್ರಾಮದ ಶ್ರೀ ಭದ್ರಕಾಳಿ, ಶ್ರೀ ಚಾಮುಂಡೇಶ್ವರಿ ಹಾಗೂ ಉಪದೇವತೆಗಳ ಪುನರ್ ಪ್ರತಿಷ್ಠಾಪನೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಒಂದು ವಾರಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ದೇವಾಲಯದಲ್ಲಿ ನಡೆಯಿತು. ಶ್ರೀ ಭದ್ರಕಾಳಿ ಚಾಮುಂಡೇಶ್ವರಿ ಹಾಗೂ ಉಪದೇವತೆಗಳ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಕೋತ್ಸವ ತಂತ್ರಿಗಳಾದ ವಿರಾಜಪೇಟೆಯ ಎ.ಜಿ.ಪಂಡರೀಶ (ಹರೀಶ್) ಅರಳಿತ್ತಾಯ ತಂತ್ರಿಗಳ ನೇತೃತ್ವದಲ್ಲಿ ಮುಖ್ಯ ಅರ್ಚಕ ಶ್ರೀನಿವಾಸ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಧ್ವಜಾರೋಹಣ, ವಾಸ್ತು ಹೋಮ, ರಕ್ಷೋಘ್ನ ಹೋಮ, ವಾಸ್ತು ಬಲಿ, ಗಣ ಹೋಮ, ಬಿಂಬಶುದ್ಧಿ, ಕಲಶ ಮೃತ್ಯುಂಜಯ ಹೋಮ, ಅಧಿವಾಸ ಹೋಮಗಳು, ನಾಗ ಪ್ರತಿಷ್ಠೆ, ಆಶ್ಲೇಷ ಹೋಮ, ಆಶ್ಲೇಷ ಬಲಿ, ಚಂಡಿಕಾ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಗಣಪತಿ ಹೋಮ, ಚಾಮುಂಡಿ ಪ್ರತಿಷ್ಠಾ ಹೋಮ, ಚಾಮುಂಡಿ ಬಿಂಬ ಪ್ರತಿಷ್ಠೆ, ಕಲಶ ಮಂಡಲ ರಚನೆ, ಕಲಶ ಪ್ರತಿಷ್ಠೆ ಹಾಗೂ ಶಿಖರ ಪೂಜೆ,…

Read More

ವಿರಾಜಪೇಟೆ ಜ.5 : ಆಂಧ್ರದಿಂದ  ಕೇರಳದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರ ಟಿ.ಟಿ.ವಾಹನ ನಿಯಂತ್ರಣ ಕಳೆದುಕೊಂಡು  ಮರಕ್ಕೆ ಡಿಕ್ಕಿ ಸಂಭವಿಸಿದ  ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ  ಮಾಕುಟ್ಟದಲ್ಲಿ ನಡೆದಿದೆ. ವಿರಾಜಪೇಟೆ ರಾಜ್ಯ ಗಡಿಭಾಗವಾದ ಮಾಕುಟ್ಟ ಅರಣ್ಯ ಪ್ರದೇಶದ  ತಿರುವಿನಲ್ಲಿ  ಟಿ.ಟಿ.ವಾಹನ ನಿಯಂತ್ರಣ ಕಳೆದುಕೊಂಡು 20 ಅಡಿ ಪ್ರಪಾತಕ್ಕೆ ಸಾಗಿ ಬೃಹತ್ ಮರಕ್ಕೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿ 13 ಅಯ್ಯಪ್ಪ ಭಕ್ತರು ಇದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇರಿಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ  : ಕಿಶೋರ್ ಕುಮಾರ್ ಶೆಟ್ಟಿ   

Read More

ಮಡಿಕೇರಿ ಜ.6 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜನವರಿ, 06 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.4  : ಪ್ರಸಕ್ತ(2022-23) ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಜನವರಿ, 01 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2022 ರ ಜನವರಿ, 01 ರಿಂದ ಡಿಸೆಂಬರ್, 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು 2023 ರ ಜನವರಿ, 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮಡಿಕೇರಿ, ಕೊಡಗು ಜಿಲ್ಲೆ…

Read More