ಲೇಖಕ: admin

ಮಡಿಕೇರಿ ಮಾ.2 : ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನೂತನ ತಾಲ್ಲೂಕು ಕೇಂದ್ರ ಕುಶಾಲನಗರದಲ್ಲಿ ಮಾ.4 ರಂದು 12.50 ಕೋಟಿ ರೂ. ವೆಚ್ಚದ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 11.30 ಗಂಟೆಗೆ ಕುಶಾಲನಗರದ ಪ್ರವಾಸಿ ಮಂದಿರದ ಬಳಿಯ 1.27 ಏಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ನ್ಯಾಯಾಲಯ ಕಟ್ಟಡ ಸಂಕೀರ್ಣಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ.ವರಾಳೆÉ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಡಗಿನ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕಮಲ್, ಸಿ.ಎಂ. ಪೂಣಚ್ಚ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿಗಳಾದ ಕೆ.ಎಸ್. ಭರತ್ ಕುಮಾರ್,…

Read More

ಮಡಿಕೇರಿ ಮಾ.2 :  ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ಸರ್ವೆ ನಂ.471/1 ರಲ್ಲಿ 0.12 ಎಕರೆ ಮತ್ತು ಸರ್ವೆ ನಂ.471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೆಯಿಂದ ಗುರುತಿಸಿದ ನಕಾಶೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ರೂ.50 ಲಕ್ಷ ವನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ರೂ.50 ಲಕ್ಷ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಮಡಿಕೇರಿ ಮಾ.2 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಕರ್ನಾಟಕ ರಾಜ್ಯ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆ ಮಾಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಬಿ.ಎ ಜೀವಿಜಯ, ಎ.ಎಸ್ ಪೆÇನ್ನಣ್ಣ, ಡಾ.ಮಂಥರ್ ಗೌಡ, ಹರಪಳ್ಳಿ ರವೀಂದ್ರ , ಹೆಚ್.ಎಸ್ ಚಂದ್ರಮೌಳಿ, ವೀಣಾ ಅಚ್ಚಯ್ಯ, ಕೆ.ಪಿ ಚಂದ್ರಕಲಾ, ಟಿ.ಪಿ ರಮೇಶ್ ಮತ್ತಿತರ ಪ್ರಮುಖರು ಹಾಜರಿದ್ದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ…

Read More

ಮಡಿಕೇರಿ ಮಾ.2 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಕುಶಾಲನಗರದಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಸಧ್ಯದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಎನ್.ಎಂ.ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಹಾರಂಗಿ ಜಲಾಶಯದ ಬಳಿ ಮತ್ತು ಮಡಿಕೇರಿಯ ಅರಣ್ಯ ಭವನದ ಬಳಿ ಉದ್ಯಾನ ನಿರ್ಮಾಣವಾಗಲಿದೆ ಎಂದರು. ಕೊಡಗಿನಲ್ಲಿರುವ ಅಪರೂಪದ ಔಷಧೀಯ ಸಸ್ಯಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಔಷಧೀಯ ಗುಣವುಳ್ಳ ಸಸ್ಯಗಳನ್ನು ತಂದು ನೆಡಲಾಗುವುದು. ಅಲ್ಲದೆ ಅವುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಂಡಳಿಯಿಂದ ಆಗಲಿದೆ. ಉದ್ದೇಶಿತ ಯೋಜನೆಗೆ ಸಧ್ಯದಲ್ಲಿಯೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪ್ರವಾಸಿತಾಣಗಳನ್ನು ವೀಕ್ಷಿಸುವುದರೊಂದಿಗೆ ಔಷಧೀಯ ಸಸ್ಯಗಳ ಉದ್ಯಾನಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸಿ ಅಲ್ಲಿನ ಜೀವ ವೈವಿಧ್ಯದ ಸ್ಥಿತಿಗತಿಗಳ ಬಗ್ಗೆ ಅವಲೋಕನ ಮಾಡಿದ್ದೇನೆ. ಕೊಡಗು ಜಿಲ್ಲೆಯ ಪರಿಸರದಲ್ಲಿ ಹಲವು ಔಷಧೀಯ ಸಸ್ಯಗಳು…

Read More

ನಾಪೋಕ್ಲು ಮಾ.1 : ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವೈನಾಟ್ ಕುಲವನ್ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು  ಮಾ.3 ರಿಂದ ಮಾ.5ರ ವರೆಗೆ ಜರುಗಲಿದೆ. ಸುಮಾರು 300 ವರ್ಷಗಳ ನಂತರ 50ಲಕ್ಷ ರೂ.ವೆಚ್ಚದಲ್ಲಿ ಅದ್ಧೂರಿ ಮಹೋತ್ಸವ ಜರುಗಲಿದ್ದು, ಈ ದೈವತಾ ಕಾರ್ಯದಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವಿಧ ಸಮಿತಿಗಳ ಆಶಯವಾಗಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀಶಾಸ್ತಾವು ದೇವಸ್ಥಾನದಿಂದ ಮಾ.3ರಂದು ಬೆಳಿಗ್ಗೆ 7.30ಕ್ಕೆ ಹಸಿರು ವಾಣಿ ಮೆರವಣಿಗೆ ಹೊರಡಲಿದೆ. ಬಳಿಕ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಲಿದೆ. 11 ಗಂಟೆಯಿಂದ ಧಾರ್ಮಿಕ ಸಭೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ ದೈವಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೈವಗಳ ಕೂಡುವಿಕೆ, ಶ್ರೀಪೊಟ್ಟನ್ ದೈವ ಕಾರ್ಯಕ್ರಮ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಕೊರತಿಯಮ್ಮ ದೈವ, 8.30 ರಿಂದ ಚಾಮುಂಡಿ ದೈವ, 9.30 ರಿಂದ ಶ್ರೀ ವಿಷ್ಣುಮೂರ್ತಿ ದೈವ, 12ರಿಂದ ಶ್ರೀ ಗುಳಿಗ ದೈವದ ಕೋಲ, ಮಧ್ಯಾಹ್ನ 3…

Read More

ನಾಪೋಕ್ಲು ಮಾ.2 : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬುವವರು ಮೃತ ದುರ್ದೈವಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಇವರನ್ನು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದರು. (ವರದಿ : ದುಗ್ಗಳ ಸದಾನಂದ)

Read More

ಮಡಿಕೇರಿ ಮಾ.2 :  ಕ್ಷುಲ್ಲಕ ಕಾರಣಕ್ಕೆ  ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ  ಪೊನ್ನಂಪೇಟೆ  ತಾಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ. ಸಂತು ಸುಬ್ಬಯ್ಯ (39) ಸಾವಿಗೀಡಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಪ್ಪ ಹಾಗೂ ಸಂಪತ್  ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,  ಸ್ಥಳಕ್ಕೆ ಶ್ರೀಮಂಗಲ ಪೋಲಿಸರು ಭೇಟಿ ನೀಡಿ  ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮಾ.2  : ಸ್ವಾಥ೯ ಮೀರಿದ ಸೇವಾ ಗುಣಗಳಿಗೆ ರೋಟರಿ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಹೀಗಾಗಿಯೇ ವಿಶ್ವವ್ಯಾಪಿ 12 ಲಕ್ಷ ಸದಸ್ಯರು ರೋಟರಿ ಸಂಸ್ಥೆಯಲ್ಲಿನ ವಿವಿಧ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯವಾಗಿ ನಿರತರಾಗಿದ್ದಾರೆ ಎಂದು ರೋಟರಿ ಜಿಲ್ಲೆ 3181 ರ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಹೇಳಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ರೋಟರಿ ಸಂಸ್ಥೆಯ 118 ನೇ ವಾಷಿ೯ಕೋತ್ಸವ ಸಂದಭ೯ ಮಾತನಾಡಿದ ಅನಿಲ್, 1905 ರ ಫೆಬ್ರವರಿ 23 ರಂದು ಚಿಕಾಗೋದ ಪುಟ್ಟ ಕೋಣೆಯಲ್ಲಿ ಪೌಲ್ ಹಾರಿಸ್ ಮತ್ತು ವಿವಿಧ ವೖತ್ತಿಯಲ್ಲಿನ ಅವರ 4 ಸ್ನೇಹಿತರಿಂದ ಪ್ರಾರಂಭಗೊಂಡ ರೋಟರಿ ಸಂಸ್ಥೆಯು ಇದೀಗ ಜಗತ್ತಿನ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆಯಾಗಿ ಬೆಳೆದಿದೆ. ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮುಂತಾದ ಕಾಯ೯ಯೋಜನೆಗಳಲ್ಲಿ ರೋಟರಿ ಕೆಲಸ ಗಮನಾಹ೯ವಾದದ್ದು ಎಂದರು. 225 ದೇಶಗಳ 36 ಸಾವಿರ ರೋಟರಿ ಸಂಸ್ಥೆಗಳಲ್ಲಿ ಪ್ರತೀ ವಾರವೂ ಒಂದಲ್ಲ ಒಂದು ಸಾಮಾಜಿಕ ಸೇವಾ ಕಾಯ೯ಯೋಜನೆ…

Read More

ನಾಪೋಕ್ಲು ಮಾ.2 : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬುವವರು ಮೃತ ದುರ್ದೈವಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಇವರನ್ನು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದರು. (ವರದಿ : ದುಗ್ಗಳ ಸದಾನಂದ)

Read More

ಮಡಿಕೇರಿ ಮಾ.2 :  ಕೃಷಿ ಇಲಾಖೆ ವತಿಯಿಂದ ಸರಕಾರದ ಸಹಾಯಧನದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ 14 ರೈತ ಫಲಾನುಭವಿಗಳಿಗೆ ಪವರ್ ಟಿಲ್ಲರ್ ಮಂಜೂರು ಮಾಡಲಾಗಿದ್ದು,  ವಿರಾಜಪೇಟೆ ತಾಲ್ಲೂಕು ಕೃಷಿ ಇಲಾಖೆ ಆವರಣದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಸಾಂಕೇತಿಕವಾಗಿ 4 ರೈತ ಫಲಾನುಭವಿಗಳಿಗೆ ಪವರ್ ಟಿಲ್ಲರ್ ನ್ನು  ವಿತರಿಸಲಾಯಿತು.

Read More