ನಾಪೋಕ್ಲು ಜ.21 : ಕೊಡಗಿನ ಆದಿ ಗ್ರಂಥ ಪಟ್ಟೋಳೆ ಪಳಮೆಯನ್ನು ಆಧರಿಸಿದ ಪೌರಾಣಿಕ ಕೊಡವ ಚಲನಚಿತ್ರ ”ಕಲ್ಲಕೆರೆ ಮಾದೇವಿ” ಜ.23 ರಂದು ಕೋಕೇರಿಯ ಮಹಿಳಾ ಸಮಾಜದಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕರಾದ ಬಾಳೆಯಡ ಪ್ರತಿಷ್ ಪೂವಯ್ಯ ಹಾಗೂ ಆಚೆಯಡ ಗಗನ್ ಗಣಪತಿ ತಿಳಿಸಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಲ್ಲಕೆರೆ ಮಾದೇವಿ ಪೌರಾಣಿಕ ಕೊಡವ ಚಲನಚಿತ್ರ ಜ.23 ರಂದು ಬಿಡುಗಡೆ ಆಗಲಿದ್ದು, ಸಾರ್ವಜನಿಕರಿಗೆ ಮೂರು ಪ್ರದರ್ಶನಗಳಿವೆ. ಮಧ್ಯಾಹ್ನ 2 ಗಂಟೆಗೆ 4:30ಕ್ಕೆ ಹಾಗೂ 6.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. 600 ವರ್ಷದ ಹಳೆಯ ಕಥೆಯನ್ನು ಹೊಂದಿರುವ ಚಲನಚಿತ್ರವು ಜನರನ್ನು ಆಕರ್ಷಿಸಲಿದೆ ಎಂದರು. ಪಟ್ಟಡ ರೀನಾ ಪ್ರಕಾಶ್ ನಿರ್ಮಿಸಿರುವ ಈ ಚಲನಚಿತ್ರದಲ್ಲಿ ಆರ್. ಉಮೇಶ್ ಸಹ ನಿರ್ಮಾಪಕರಾಗಿದ್ದಾರೆ. ಮುಖ್ಯ ಪಾತ್ರಧಾರಿಗಳಾಗಿ ಕೋಪುಡ ದೇಚ್ನಾ ದೇಚಮ್ಮ, ಚೆರುವಾಳಂಡ ರಾಕೇಶ್, ಮುಂಡಚಾಡಿರಾ ರಿಮ್ಮಿ ಭರತ್, ಚೇನಂಡ ಗಿರೀಶ್, ಮಳ್ಳಮಡ ಶ್ಯಾಮಲ ಹಾಗೂ ವಿಶೇಷ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಅವರು…
ಲೇಖಕ: admin
ಸಿದ್ದಾಪುರ ಜ.21 : ಭಾರತ ಫುಟ್ಬಾಲ್ ತಂಡವು ಬಲಿಷ್ಠವಾಗಿದ್ದು, ಮುಂದಿನ ಅಥವಾ ಅದಾದನಂತರದಲ್ಲಿ ವಿಶ್ವಕಪ್ ಆಡಲಿದೆ ಎಂದು ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಹಾಗೂ ಹಾಲಿ ತಾಂತ್ರಿಕ ಸಮಿತಿ ಸದಸ್ಯ ಐ.ಎಂ ವಿಜಯನ್ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮ್ಮತ್ತಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ತಂಡ ಯುವ ಹಾಗೂ ಅನುಭವಿ ಆಟಗಾರರ ಮಿಶ್ರಿತ ತಂಡವಾಗಿದೆ. ಮುಂದಿನ ವಿಶ್ವಕಪ್ ಫುಟ್ಬಾಲ್ ಅರ್ಹತಾ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು ವಿಶ್ವಕಪ್ ಅರ್ಹತೆ ಪಡೆಯುವ ಅವಕಾಶ ಇದೆ ಎಂದರು. ಏಷ್ಯಾ ಈ ಹಿಂದೆ ಫುಟ್ಬಾಲ್ ನಲ್ಲಿ ಹಿಂದುಳಿದಿತ್ತು. ಪ್ರಸ್ತುತ ಏಷ್ಯಾದಿಂದ 8 ತಂಡಗಳು ವಿಶ್ವಕಪ್ ನಲ್ಲಿ ಭಾಗವಹಿಸಿದೆ. ದೊಡ್ಡ ದೊಡ್ಡ ರಾಷ್ಟ್ರಗಳನ್ನು ಮಣಿಸಿದೆ. ಹಾಗೇಯೆ ಭಾರತವೂ ಕೂಡ ಮುಂದೊಂದು ದಿನ ವಿಶ್ವಕಪ್ ಆಡಲಿದೆ ಎಂದರು. ಭಾರತದಲ್ಲಿ ಇಂಡಿಯನ್ ಸೂಪರ್ ಲೀಗ್ ಆರಂಭವಾದ ಬಳಿಕ ಭಾರತೀಯ ಫುಟ್ಬಾಲ್ ಗೆ ಪುನಶ್ಚೇತನ ದೊರಕಿದೆ. ಅಂತರರಾಷ್ಟ್ರೀಯ ಆಟಗಾರರು ಐ.ಎಸ್.ಎಲ್ ಆಡುತ್ತಿದ್ದಾರೆ.…
ಕುಶಾಲನಗರ ಜ.21 : ಪೊಲೀಸರ ಭಯದಿಂದ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಸುಂದರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ “ರಸ್ತೆ ಸುರಕ್ಷಾ ಸಪ್ತಾಹ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರಿಗಾಗಿ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಜೀವದ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಕೀಲ ಕೆ.ಬಿ.ಮೋಹನ್ ಕುಮಾರ್ ಮಾತನಾಡಿ, ವಾಹನ ಚಲಾವಣೆ ವೇಳೆ ಇರಬೇಕಾದ ದಾಖಲಾತಿಗಳ ಬಗ್ಗೆ ಹಾಗೂ ಮೋಟಾರು ವಾಹನ ಕಾಯ್ದೆಯ ಬಗ್ಗೆ ವಿವರಣೆ ನೀಡಿದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೆಚ್.ಟಿ.ಗೀತಾ ಮಾತನಾಡಿ, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸುವ…
ಮಡಿಕೇರಿ ಜ.21 : ರೊಬೆಸ್ಟಾ ಎಡ್ವೆಂಚರಸ್ ಆಂಡ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಫೆ.5 ರಂದು ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ರಾಷ್ಟ್ರಮಟ್ಟದ 4X4 ಆಫ್ ರೋಡ್ ರ್ಯಾಲಿ ನಡೆಯಲಿದೆ ಎಂದು ಆಯೋಜಕರಾದ ಉದ್ದಪ್ಪಂಡ ತಿಮ್ಮಣ್ಣ ತಿಳಿಸಿದ್ದಾರೆ. ಕ್ಯಾಂಪ್ ಎಟ್ ಬೆಟ್ಟತ್ತೂರಿನಲ್ಲಿ (ಜಿಪಿಎಸ್ ಲೊಕೇಶನ್ : ತ್ರಿ ಹಿಲ್ಸ್ ರೆಸಾರ್ಟ್ ) ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರ್ಯಾಲಿ ನಡೆಯಲಿದ್ದು, ಹೊರ ರಾಜ್ಯಗಳ ಪ್ರತಿಭಾವಂತ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ಸ್ಟಾಕ್ ಪೆಟ್ರೋಲ್, ಸ್ಟಾಕ್ ಡೀಸಲ್ ಮತ್ತು ಪ್ರೂವ್ ಮೊಡಿಫೈಡ್ ವಿಭಾಗಗಳಿದೆ. ರೊಬೆಸ್ಟಾ 4X4 ಆಫ್ ರೋಡ್ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವವರು 2023 ಜ.30 ರೊಳಗಾಗಿ www.robusta.co.in/events ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9901312776, 9448448399 ಸಂಪರ್ಕಿಸುವಂತೆ ಉದ್ದಪ್ಪಂಡ ತಿಮ್ಮಣ್ಣ ಕೋರಿದ್ದಾರೆ.
ಸೋಮವಾರಪೇಟೆ ಜ.21 : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಪಾವಿತ್ರತೆ ಕಾಪಾಡಲು ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಆಗ್ರಹಿಸಿದರು. ಸೋಮವಾರಪೇಟೆ ತಹಶೀಲ್ದಾರ್ ನರಗುಂದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿ ಸದಸ್ಯರು, ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸಿ, ತ್ಯಾಜ್ಯದ ರಾಶಿ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುವುದರಿಂದ ಧ್ವಜಕ್ಕೆ ಅಪಮಾನವಾಗುತ್ತಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಸಿ ಮಾರಾಟ ಮಾಡುವುದು ಮತ್ತು ಬಳಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಮಿತಿಯ ಸದಸ್ಯರಾದ ಕೆ.ಎನ್. ತೇಜಸ್ವಿ, ರಾಜೇಶ್, ಶಂಕರ್, ಬಿ.ಎಂ. ಪ್ರದೀಪ್, ತಾಕೇರಿ ವೆಂಕಟೇಶ್, ಜಯಪ್ರಕಾಶ್ ಹಾಜರಿದ್ದರು.
ಸೋಮವಾರಪೇಟೆ ಜ.21 : ಗೌಡಳ್ಳಿಯಲ್ಲಿ ಫೆ.11 ರಂದು ನಡೆಯುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಚೇರಿಯನ್ನು ಗೌಡಳ್ಳಿಯ ಶ್ರೀ ನವದುರ್ಗಪರಮೇಶ್ವರಿ ದೇವಾಲಯದ ಆವರಣದಲ್ಲಿ ತೆರೆಯಲಾಯಿತು. ಕ.ಸಾ.ಪ.ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಗೌಡಳ್ಳಿ ಗ್ರಾ.ಪಂ ಅಧ್ಯಕ್ಷ ಜಿ.ಜಿ.ಮಲ್ಲಿಕಾ, ಸಮ್ಮೇಳನದ ಹಣಕಾಸು ಸಮಿತಿ ಅಧ್ಯಕ್ಷ ಪಿ.ಕೆ.ರವಿ, ಕ.ಸಾ.ಪ ಕಾರ್ಯದರ್ಶಿ ಎ.ಪಿ.ವೀರರಾಜ್, ಪ್ರಮುಖರಾದ ಬಿ.ಬಿನಾಗರಾಜ್, ವೀರಭದ್ರಪ್ಪ, ಎಚ್.ಆರ್.ಮುತ್ತಣ್ಣ, ನವೀನ್ ಅಜ್ಜಳ್ಳಿ, ಸವಿನಾ ಮತ್ತಿತರರು ಇದ್ದರು.
ಸೋಮವಾರಪೇಟೆ ಜ.21 : ಸೋಮವಾರಪೇಟೆ ಪುಷ್ಪಗಿರಿ ಜೂನಿಯರ್ ಜೇಸಿ ವಿಭಾಗದಿಂದ ನೇರುಗಳಲೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಜೂನಿಯರ್ ಜೇಸಿ ಅಧ್ಯಕ್ಷೆ ರಿಶಾ ಮಾತನಾಡಿ, ಜೇಸಿ ಜೂನಿಯರ್ ವಿಭಾಗದಿಂದ ಈ ವರ್ಷ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಗುರಿ ಇದೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಮಂಜುಳ ಅವರು ಮಕ್ಕಳ, ಕಿವಿ, ಮೂಗು, ಗಂಟಲಿನ ಆರೋಗ್ಯ ತಪಾಸಣೆ ಮಾಡಿದರು. ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ.ರುಬಿನಾ, ಜೇಸಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ, ಎಸ್ಡಿಎಂಸಿ ಅಧ್ಯಕ್ಷೆ ಪದ್ಮಾವತಿ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಇದ್ದರು.
ಸೋಮವಾರಪೇಟೆ ಜ.21 : ನೇರುಗಳಲೆ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸಿ.ಕೃಷ್ಣೇಗೌಡ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ, ಎಸ್ಡಿಎಮ್ಸಿ, ಶಿಕ್ಷಕರು ಮತ್ತು ವಿದ್ಯಾರ್ಥಿವೃಂದದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ನೇರುಗಳಲೆ ಗ್ರಾ.ಪಂ ಅಧ್ಯಕ್ಷೆ ಪುಷ್ಪ ಎಸ್ಡಿಎಮ್ಸಿ ಅಧ್ಯಕ್ಷೆ ಪದ್ಮಾವತಿ, ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ, ಗ್ರಾಪಂ ಮಾಜಿ ಅಧ್ಯಕ್ಷ ಲೋಕಾನಂದ ಮತ್ತಿತರರು ಇದ್ದರು.
ಸೋಮವಾರಪೇಟೆ,ಜ.20 : ಭಾರತೀಯ ಜನತಾ ಪಾರ್ಟಿಯ 6 ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಹಾಗೂ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸದ್ಯದಲ್ಲಿಯೇ ರಾಜ್ಯ ವಿಧಾನ ಸಭಾ ಚುನಾವಣೆ ಎದುರಾಗಲಿದ್ದು, ಯಾರೇ ಅಭ್ಯರ್ಥಿಯಾದರೂ ಬಿಜೆಪಿಯ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಆಗಬೇಕು. ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದರು. ಜಿ.ಪಂ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವು ಬಲಿಷ್ಠವಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನೇಕ ಜನಪರ ಕಾರ್ಯಕ್ರಮಗಳು ಜನರ ಮನ ಗೆದ್ದಿವೆ. ಬಿಜೆಪಿಯು ಬೂತ್ ಮಟ್ಟದಲ್ಲಿ ಬಲಿಷ್ಠವಾಗಿದೆ ಎಂದರು. ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪಕ್ಷದ ಮುಖಂಡರಾದ…
ಮಡಿಕೇರಿ ಜ.20 : ಕೊಡಗಿನ ಎರಡು ಪುಣ್ಯ ಕ್ಷೇತ್ರಗಳಾದ ತಲಕಾವೇರಿ ಹಾಗೂ ಎಮ್ಮೆಮಾಡುಗೆ ಸಂಪರ್ಕ ಕಲ್ಪಿಸುವ ಮೂರ್ನಾಡು- ನಾಪೋಕ್ಲು ರಸ್ತೆಯನ್ನು ಸಂಪೂರ್ಣ ಡಾಂಬರೀಕರಣಗೊಳಿಸದಿದ್ದಲ್ಲಿ ಯುವ ಜಾತ್ಯತೀತ ಜನತಾದಳದ ವತಿಯಿಂದ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಯುವ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಾಶಿರ್ ಎಚ್ಚರಿಕೆ ನೀಡಿದ್ದಾರೆ. ಕಳೆದ 11 ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟಿದ್ದ ರಸ್ತೆಯ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಡಿ.22 ರಂದು ರಸ್ತೆ ತಡೆ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭ ಸ್ಥಳಕ್ಕೆ ಆಗಮಿಸಿದ ಅಭಿಯಂತರರು 15 ದಿನಗಳಲ್ಲಿ ರಸ್ತೆ ದುರಸ್ತಿಪಡಿಸುವ ಭರವಸೆ ನೀಡಿದ್ದರು. ಇದೀಗ ರಸ್ತೆ ದುರಸ್ತಿ ಕಾರ್ಯ ಕಾಟಾಚಾರಕ್ಕಷ್ಟೇ ನಡೆಯುತ್ತಿದ್ದು, ಸಂಪೂರ್ಣ ರಸ್ತೆಯನ್ನು ಡಾಂಬರೀಕರಣಗೊಳಿಸದೆ ನಿರ್ಲಕ್ಷಿಸಲಾಗಿದೆ. ಕೆಲವು ಗುಂಡಿಗಳನ್ನಷ್ಟೇ ಮುಚ್ಚುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಈ ರಸ್ತೆಯ ದುರಸ್ತಿಗಾಗಿ ಟೆಂಡರ್ ಪ್ರಕ್ರಿಯೆ ನಡೆದು ವಿರಾಜಪೇಟೆಯ ಗುತ್ತಿಗೆದಾರರೊಬ್ಬರು ಗುತ್ತಿಗೆ ಪಡೆದಿದ್ದರು. ಆದರೆ…






