ಮಡಿಕೇರಿ ಮಾ.2 : ((ಬರಹ : ಬೊಳ್ಳಜಿರ ಬಿ.ಅಯ್ಯಪ್ಪ)) ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ತರಬೇತಿ ಆಯುಕ್ತರಾದ ಹೆಚ್.ಮೈಥಿಲಿ ರಾವ್ ಅವರು ನಿಸ್ವಾರ್ಥ ಸೇವೆಯ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹಲವು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. 1973 ಜೂನ್ 12 ರಂದು ಜನಿಸಿದ ಹೆಚ್.ಮೈಥಿಲಿ ರಾವ್ ಅವರು ಹರೀಶ್ ರಾವ್.ಎಸ್ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರಿಯರಿದ್ದಾರೆ. ಒಬ್ಬರು ಕ್ಯಾಪ್ಟನ್ ಶರಣ್ಯ ರಾವ್ ಹೆಚ್. ಭಾರತೀಯ ಸೇನೆಯಲ್ಲಿದ್ದು, ಮತೋರ್ವರು ಹೆಚ್.ಪಲ್ಲವಿ ರಾವ್ ದುಬೈನ ಜಿ.ಆರ್.ಇ ತಾಜ್ಪಾಮ್ ಜುಮೇರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹೇಶ್ ಚಂದ್ರ ಕೊಡ್ಕಣಿ ಹಾಗೂ ಮಮತಾ ಎಂ.ಕೊಡ್ಕಣಿ ಅವರ ಪುತ್ರಿ ಹೆಚ್.ಮೈಥಿಲಿ ರಾವ್ ದಾಂಡೇಲಿಯ ಸೇಂಟ್ ಮೈಕಲ್ ಸ್ಕೂಲ್ ನಲ್ಲಿ 1 ಮತ್ತು 2ನೇ ತರಗತಿ, 3ನೇ ತರಗತಿಯಿಂದ 10ನೇ ತರಗತಿಯವರೆಗೆ ದಾಮೋದರ್ ವಿದ್ಯಾಲಯ ಮಾರ್ಗೋವಾ ಗೋವಾದಲ್ಲಿ ಶಿಕ್ಷಣ ಪಡೆದರು. 1991ರಲ್ಲಿ ದಾಂಡೇಲಿ ಬಂಗೂರ್…
ಲೇಖಕ: admin
ಸೋಮವಾರಪೇಟೆ ಮಾ.1 : ಒಕ್ಕಲಿಗರ ಯುವವೇದಿಕೆ ಸೋಮವಾರಪೇಟೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅವರುಗಳ ಸಂಯುಕ್ತ ಆಶ್ರಯದಲ್ಲಿ 4ನೇ ವರ್ಷದ ‘ಒಕ್ಕಲಿಗರ ಕಪ್’ ಅಂತರ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿ ಮಾ.4 ಮತ್ತು 5ರಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್ ಹೇಳಿದರು. ಪಂದ್ಯಾಟದಲ್ಲಿ ರಾಷ್ಟçಮಟ್ಟದ ಪ್ರತಿಷ್ಠಿತ ತಂಡಗಳಾದ ಮಹರಾಷ್ಟ, ರ್ಯಾಣ, ಯುವ ಪಲ್ಟಾನ್ ಪುಣೆ, ಸೌತ್ಸೆಂಟ್ರಲ್ ರೈಲ್ವೆ ಹೈದರಾಬಾದ್, ತಮಿಳುನಾಡು, ಜೆ.ಕೆ.ಅಕಾಡೆಮಿ ಕೇರಳ, ಏರ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಪೊಲೀಸ್, ಕಸ್ಟಮ್ಸ್ ಮತ್ತು ಜಿಎಸ್ಟಿ ತಂಡ, ಕರ್ನಾಟಕ ತಂಡ, ಚೈನ್ಸ್ ಪ್ರತಿಷ್ಠಿತ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು ಕಬಡ್ಡಿ ಪ್ರೇಮಿಗಳಿಗೆ ರಸದೌತಣ ನೀಡಲಿವೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಪ್ರೊ ಕಬಡ್ಡಿಯಲ್ಲಿ ಖ್ಯಾತಿ ಗಳಿಸಿರುವ ಆಟಗಾರರಾದ ಸಿದ್ದಾರ್ಥ್ ದೇಸಾಯಿ, ಅಜಯ್ ಠಾಕೂರ್, ಸುಕೇಶ್ಹೆಗಡೆ, ಪ್ರಶಾಂತ್ ರೈ, ಆಕಾಶ್ಶಿಂದೆ, ಪ್ರಪಂಚನ್, ಅಸ್ಲಾಂ…
ಸೋಮವಾರಪೇಟೆ ಮಾ.1 : 7ನೇ ವೇತನ ಆಯೋಗ ವರದಿ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಸೋಮವಾರಪೇಟೆ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಆಡಳಿತ ಸೌಧ ಕಚೇರಿಗೆ ಬೀಗ ಹಾಕಲಾಗಿತ್ತು. ತಹಸೀಲ್ದಾರ್ ಹೊರತುಪಡಿಸಿ, ನೌಕಕರರು ಇಲ್ಲದೆ ಬಿಕೋ ಎನ್ನುತ್ತಿತ್ತು. ಇತರ ಕಚೇರಿಗಳಲ್ಲೂ ಕೆಲಸಗಳು ನಡೆಯಲಿಲ್ಲ.
ಮಡಿಕೇರಿ ಮಾ.1 : ಹುಲಿಯೊಂದು ಕಾಫಿ ತೋಟದಲ್ಲಿ ಕಾಡುಕೋಣವನ್ನು ಬೇಟೆಯಾಡಿರುವ ಘಟನೆ ಪಾಲಿಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಮಿಕರು ಕೆಲಸಕ್ಕೆಂದು ತೋಟಕ್ಕೆ ಆಗಮಿಸಿದ ಸಂದರ್ಭ ಕಾಡುಕೋಣ ಮೃತಪಟ್ಟಿರುವುದು ಕಂಡು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹುಲಿದಾಳಿಯ ಕುರಿತು ಸಂಶಯ ವ್ಯಕ್ತಪಡಿಸಿದರು. ಮಂಗಳವಾರ ತಡರಾತ್ರಿ ಕಾಡುಕೋಣದ ಮೇಲೆ ಹುಲಿದಾಳಿ ಮಾಡಿರಬಹುದೆಂದು ಅಂದಾಜಿಸಲಾಗಿದೆ. ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಹುಲಿ ಸಂಚರಿಸುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.1 : ಮಾಕುಟ್ಟ ಬ್ರಹ್ಮಗಿರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿ ಗಾಯಗೊಂಡು ಗೀಳಿಡುತ್ತಿದ್ದ ಕಾಡಾನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿದೆ. ಚೇತರಿಸಿಕೊಂಡಿರುವ ಕಾಡಾನೆ ಇದೀಗ ಮತ್ತೆ ಕಾಡು ಸೇರಿಕೊಂಡಿದೆ. ಒAಟಿ ಸಲಗ ಗೀಳಿಡುತ್ತಿದ್ದ ಪ್ರದೇಶಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳ ತಂಡ ಡಿಎಫ್ಒ ಎ.ಟಿ.ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದರು. ವನ್ಯಜೀವಿ ವೈದ್ಯರಾದ ಡಾ.ಚಿಟ್ಟಿಯಪ್ಪ, ಡಾ.ಪ್ರಶಾಂತ್, ಶಾರ್ಪ್ ಶೂಟರ್ ರಂಜನ್ ಹಾಗೂ ಮಾಕುಟ್ಟ ವಲಯದ ಅರಣ್ಯ ಸಿಬ್ಬಂದಿಗಳು ಮತ್ತಿಗೋಡಿನಿಂದ ಸಾಕಾನೆಗಳ ನೆರವು ಪಡೆದು ಗಾಯಾಳು ಸಲಗಕ್ಕೆ ಸೂಕ್ತ ಚಿಕಿತ್ಸೆ ನೀಡಿದರು. ಚಿಕಿತ್ಸೆಯ ನಂತರ ಚೇತರಿಸಿಕೊಂಡ ಕಾಡಾನೆ ಕಾಡಿಗೆ ಮರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಮಾ.1 : ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡವರ ತಾಳ್ಮೆ ಪರೀಕ್ಷೆ ಮಾಡುತ್ತಿದೆ ಎಂದು ಜಾತ್ಯತೀತ ಜನತಾದಳದ ಪರಿಶಿಷ್ಟ ಘಟಕದ ಕಾರ್ಯದರ್ಶಿ ಹೆಚ್.ಎನ್.ಯೋಗೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲದ ಬೆಲೆ ರೂ.50 ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಗೆ ಏಕಾಏಕಿ ರೂ.350 ಹೆಚ್ಚಳ ಮಾಡಿರುವುದು ಖಂಡನೀಯವೆoದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆoದು ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿoದ ಬೆಲೆ ಏರಿಕೆಯಾಗುತ್ತಲೇ ಇದೆ. ಬಡವರ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಲೇ ಇದೆ. ಬಡವರು ಹಾಗೂ ಕೂಲಿ ಕಾರ್ಮಿಕರು ಅಡುಗೆ ಅನಿಲದ ಸಿಲಿಂಡರ್ ಖರೀದಿಸಲಾಗದೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ದುಬಾರಿ ತೆರಿಗೆ, ಇತರ ವಸ್ತುಗಳು ಮತ್ತು ಶುಲ್ಕಗಳ ಏರಿಕೆಯಿಂದ ಮೊದಲೇ ನಷ್ಟ ಅನುಭವಿಸುತ್ತಿರುವ ಹೊಟೇಲ್ ಮಾಲೀಕರುಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ದುಬಾರಿ ದರದಿಂದ ಬೇಸತ್ತಿದ್ದಾರೆ.…
ಮಡಿಕೇರಿ ಮಾ.1 : ಸೋಮವಾರಪೇಟೆ ತಾಲೂಕಿನ ವಾಲ್ನೂರು ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಸಿದ್ದೇಶ್ವರ ಸ್ವಾಮಿ ಹಾಗೂ ಶ್ರೀ ರಾಮ ದೇವರ ವಾರ್ಷಿಕ ಉತ್ಸವವು ಮಾ.5 ರಿಂದ 7ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.5 ರಂದು ರಾತ್ರಿ 8 ಗಂಟೆಗೆ ಕದಳಿ ಕಟ್ಟುವುದು, ಮಾ.6 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮಾದೇಶ್ವರ ಸ್ವಾಮಿ ಪರ್ವ, ಮಧ್ಯಾಹ್ನ 3 ಗಂಟೆಗೆ ತೆಂಗಿನ ಕಾಯಿಗೆ ಗುಂಡು ಹಾರಿಸುವುದು, ಸಂಜೆ 5 ಗಂಟೆಗೆ ಮಹಾಪೂಜೆ, ಮಂಗಳಾರತಿ ಜರುಗಲಿದ್ದು, ಸಂಜೆ 6 ಗಂಟೆಗೆ ಮೆರೆಯುವ ಬಸವಣ್ಣನಿಗೆ ಪೂಜೆ ನೆರವೇರಲಿದೆ. ಮಾ.7 ರಂದು ಮಧ್ಯಾಹ್ನ 12 ಗಂಟೆಗೆ ಸಾಮೂಜಿಕ ಭೋಜನ ಪ್ರಸಾದ ವಿತರಣೆ, ಸಂಜೆ 4.30ಕ್ಕೆ ಹೊಂಡ ಹಾಯುವುದು, ಸಂಜೆ 5 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವಂತೆ ದೇವಾಲಯದ ತಕ್ಕರು ಹಾಗೂ ಆಡಳಿತ ಮಂಡಳಿ…
ಮಡಿಕೇರಿ ಮಾ.1 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತನ್ನ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನಲ್ಲಿ ನಡೆಸುತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸುವ ಸಾಹಿತಿ ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾದ ಜಿಲ್ಲೆಯ ಹಿರಿಯ ಸಾಹಿತಿ ಮೈಸೂರಿನ ಯುವರಾಜ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ.ಎಂ.ಪಿ.ರೇಖಾ ನಡೆಸಿ ಕೊಡಲಿದ್ದಾರೆ. ಮಾ.4 ರಂದು ಬೆಳಿಗ್ಗೆ 8 ಗಂಟೆಗೆ ಕನ್ನಡ ಧ್ವಜವನ್ನು ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ರಾಷ್ಟ್ರಧ್ವಜವನ್ನು ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಮನ್ನಕ್ಕಮನೆ ಸೌಮ್ಯ ಬಾಲು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಾಡಿಗೆ ಸೇವೆ ಸಲ್ಲಿಸಿ ಕಣ್ಮರೆಯಾದ ಹಿರಿಯ 10 ಸಾಧಕರನ್ನು ಗುರುತಿಸಿ ಅವರ ನೆನಪಿನ ಧ್ವನಿಗಳನ್ನು ನಿರ್ಮಿಸಲಾಗಿದ್ದು,…
ಮಡಿಕೇರಿ ಮಾ.1 : ರಾಜ್ಯ ಸರ್ಕಾರದ ಕಾರ್ಖಾನೆ ಕಾಯ್ದೆಯ ತಿದ್ದುಪಡಿ ವಿಧೇಯಕವು ಕಾರ್ಮಿಕ ಸಮುದಾಯಕ್ಕೆ ಮಾರಕವಾಗಿದೆ ಎಂದು ಆರೋಪಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಸಂಘಟನೆ ಆದೇಶದ ಪ್ರತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿತು. ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕಾರ್ಮಿಕರನ್ನು ಶೋಷಣೆಗೆ ಒಳಪಡಿಸುವ ಮೂಲಕ ರಾಜ್ಯ ಮತ್ತು ಕೇಂದ್ರ್ರ ಸರ್ಕಾರಗಳು ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿವೆ. ಇದರ ಭಾಗವಾಗಿ ಕಾರ್ಖಾನೆ ಕಾಯ್ದೆ 1948 ಕ್ಕೆ ತಿದ್ದುಪಡಿ ತರುವ ಮೂಲಕ ಅದನ್ನು ಜಾರಿಗೂ ತಂದಿದೆಯೆಂದು ಆರೋಪಿಸಿದರು. ತಿದ್ದುಪಡಿ ವಿಧೇಯಕದ ಮೂಲಕ ದುಡಿಯುವ ಅವಧಿಯನ್ನು 8ಗಂಟೆಗೆ ಬದಲಾಗಿ ಹೆಚ್ಚುವರಿ ಮೂರು ಗಂಟೆ ಸೇರಿಸಿ 11 ಗಂಟೆಗೆ ಹೆಚ್ಚಿಸಲಾಗಿದೆ. ಇದರಿಂದ ಕಾರ್ಮಿಕ ಹೆಚ್ಚಿನ ಅವಧಿ ದುಡಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆಯೆಂದು ಆತಂಕ ವ್ಯಕ್ತಪಡಿಸಿದರು. ತಿದ್ದುಪಡಿ ವಿಧೇಯಕದ ಮೂಲಕ ಮಹಿಳಾ ಕಾರ್ಮಿಕರನ್ನು…
ಮಡಿಕೇರಿ ಮಾ.1 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮೀಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು, ಕಾರ್ಯಕರ್ತರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆಸಲು ಸಾಧ್ಯವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯ ಎಂದು ಕೃತಜ್ಞತೆ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂಕಷ್ಟದಲ್ಲಿ ಜನತೆಯ ಹಿತದೃಷ್ಟಿಯಿಂದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ ಸುಮಾರು 5 ಲಕ್ಷ ಜನರಿಗೆ 11 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 47 ಸಾವಿರ…






