ಲೇಖಕ: admin

ಮಡಿಕೇರಿ ಜ.20 : ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು 2017 ರಲ್ಲಿ ರೂಪಿಸಿದ “ಹೊಸ ಮರು ವ್ಯಾಖ್ಯಾನಿಸಿದ ಮಾನದಂಡ” ದಡಿಯಲ್ಲಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕುರಿತು ಕೇಂದ್ರ ಬುಡಕಟ್ಟು ಮಂತ್ರಾಲಯ, ರಾಷ್ಟ್ರೀಯ ಬುಡಕಟ್ಟು ಆಯೋಗ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಪ್ರಧಾನ ಕಾರ್ಯದರ್ಶಿ, ಬುಡಕಟ್ಟು ಕಲ್ಯಾಣ ಮಂತ್ರಾಲಯದ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಬುಡಕಟ್ಟು ಶಂಶೋಧನ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಕೊಡಗಿನ ಮೂಲ ಬುಡಕಟ್ಟು ಜನಾಂಗವಾಗಿರುವ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದು ತ್ವರಿತವಾಗಿ ಆಗದಿದ್ದರೆ ಕೊಡವ ಬುಡಕಟ್ಟು ಜನಾಂಗದ ಭವಿಷ್ಯವು ಕತ್ತಲೆಯಲ್ಲಿ ಮುಳುಗುತ್ತದೆ. ಕೊಡವರ ಜಾನಪದ ಗುರುತು ಮತ್ತು ಭೌಗೋಳಿಕ-ರಾಜಕೀಯ ಅಸ್ತಿತ್ವಕ್ಕೆ ಹಾನಿಯಾಗಲಿದೆ. ಭಾರತ ದೇಶವು ಬಹು ಜನಾಂಗೀಯ ಹೂದೋಟದಂತ್ತಿದ್ದು, ಇತರ ಜನಾಂಗೀಯ ಗುಂಪುಗಳಿಗೆ ನೀಡಲಾಗುವ ಅದೇ…

Read More

ಮಡಿಕೇರಿ ಜ.20 : ಬೆಟ್ಟದಪುರದಿಂದ ಮಡಿಕೇರಿಗೆ ಕಾರೊಂದರಲ್ಲಿ ಸಾಗಾಟವಾಗುತ್ತಿದ್ದ 80 ಕೆಜಿ ಗೋಮಾಂಸವನ್ನು ಸುಂಟಿಕೊಪ್ಪ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಗೋಮಾಂಸ ಸಾಗಾಟವಾಗುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಕಾರು ಚಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಅಕ್ರಮ ಗೋಮಾಂಸ ಮಾರಾಟವಾಗುತ್ತಿರುವ ಬಗ್ಗೆ ಹಿಂದೂ ಪರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.

Read More

ಮಡಿಕೇರಿ ಜ.19 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು ಇವರ ವತಿಯಿಂದ 2023 ರ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳು ಬಿ.ಎ., ಬಿ.ಕಾಂ, ಬಿ.ಲಿಬ್.ಐಎಸ್‍ಸಿ, ಬಿ.ಬಿ.ಎ(ಮಾರ್ಕೆಟಿಂಗ್ ಮ್ಯಾನೇಜ್‍ಮೆಂಟ್), ಬಿ.ಎಸ್‍ಸಿ(ಸಂಯೋಜನೆಗಳು), ಸ್ನಾತಕೋತ್ತರ(ಪಿಜಿ) ಶಿಕ್ಷಣ ಕಾರ್ಯಕ್ರಮಗಳು ಎಂ.ಎ., ಎಂಬಿಎ, ಎಂಕಾಂ, ಎಂ.ಲಿಬ್, ಐಎಸ್‍ಸಿ, ಎಂಎಸ್‍ಸಿ, ಪ್ರವೇಶಾತಿ ಹಾಗೂ ಇನ್ನಿತರ ಮಾಹಿತಿಗೆ ಅರ್ಜಿದಾರರು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ನ್ನು ವೀಕ್ಷಿಸುವುದು. ಹೆಚ್ಚಿನ ಮಾಹಿತಿಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ದೂ. 08272-201147 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.20 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಮಡಿಕೇರಿ ಉಪ ವಿಭಾಗದ ಹಾಕತ್ತೂರು ಹಿರಿಯ ಪ್ರಾಥಮಿಕ ಶಾಲೆ, ಗೋಣಿಕೊಪ್ಪಲು ಉಪ ವಿಭಾಗದ ದೇವರಪುರ ಗ್ರಂಥಾಲಯ ಗ್ರಾ.ಪಂ.ಸಭಾಂಗಣದಲ್ಲಿ, ವಿರಾಜಪೇಟೆ ಉಪ ವಿಭಾಗದ ತೋರ ಕೆದಮುಳ್ಳೂರು ಗ್ರಾಮದ ಕೆದಮುಳ್ಳೂರು ತೋಮರ ಸಮುದಾಯ ಭವನ, ಕುಶಾಲನಗರ ಉಪ ವಿಭಾಗದ ವಾಲ್ನೂರು ತ್ಯಾಗತ್ತೂರು ಸೊಸೈಟಿ ಸಮುದಾಯ ಭವನ ಹಾಗೂ ಸೋಮವಾರಪೇಟೆ ಉಪ ವಿಭಾಗದ ಕಣಗಾಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ, 21 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ. ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.

Read More

ವಿರಾಜಪೇಟೆ ಜ.20 :  ವಿರಾಜಪೇಟೆಯ ಅರಸು ನಗರದ ನಿವಾಸಿ ಸಾವಿತ್ರಿ ರಾಮಕುಟ್ಟಿ ನಾಯರ್[63] ನಿಧನ ರಾಗಿದ್ದಾರೆ. ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ. ನಗರದ ಮೀನುಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನಡೆಯಿತು.

Read More

ವಿರಾಜಪೇಟೆ:ಜ.20 :  ಕಂಡಂಗಾಲ ಗ್ರಾಮದ ನಿವಾಸಿ ವಿರಾಜಪೇಟೆಯ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಹಾಲಿ ಕಾರ್ಯದರ್ಶಿಯಾಗಿದ್ದ ಮೂಕಚಂಡ ಅರುಣ್ ಅಪ್ಪಣ್ಣ ಅವರ ನಿಧನಕ್ಕೆ ವಿರಾಜಪೇಟೆ ಕರ್ನಾಟಕ ಸಂಘದ ಸಭಾಂಗಣದಲ್ಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೊಪಯ್ಯ ಮಾತನಾಡಿ ಅಪ್ಪಣ್ಣ ಅವರು ಅನೇಕ ವರ್ಷಗಳಿಂದಲೂ ಕರ್ನಾಟಕ ಸಂಘದಲ್ಲಿ ಕನ್ನಡ ಭಾಷೆ ನಾಡು ನುಡಿಯನ್ನು ಉಳಿಸಿ ಬೆಳೆಸುವಂತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರ ನೀಡಿದಂತ ಉತ್ತಮ ವ್ಯಕ್ತಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು. ಸಂತಾಪ ಸಭೆಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ಕೋಶಾದಿಕಾರಿ ಸೇರಿದಂತೆ ಆಡಳಿತ ಮಂಡಳಿಯ ಎಲ್ಲಾ ನಿರ್ಧೇಶಕರುಗಳು ಉಪಸ್ಥಿತರಿದ್ದರು.

Read More

ಕುಶಾಲನಗರ ಜ.20 : ಕುಶಾಲನಗರ ಶ್ರೀ ಚೌಡೇಶ್ವರಿ ದೇವಾಲಯದ 35ನೇ ವಾರ್ಷಿಕೋತ್ಸವ ಮತ್ತು ದೇವಿಯ ಪ್ರತಿಮೆ ಅನಾವರಣ ಕಾರ್ಯಕ್ರಮ ಜ.25 ರಿಂದ 3 ದಿನಗಳ ಕಾಲ ನಡೆಯಲಿದೆ ಎಂದು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕುಶಾಲನಗರ ರಥಬೀದಿಯಲ್ಲಿರುವ ದೇವಾಲಯದ ಮೇಲಂತಸ್ತಿನ ಗೋಪುರ ಉದ್ಘಾಟನೆ ಜ.26 ರಂದು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದರು. ಅಂದು ಸಂಜೆ ವಿದ್ಯುತ್ ದೀಪಾಲಂಕಾರದೊಂದಿಗೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ದೇವಾಂಗ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ.ರಾಜೇಶ್, 3 ದಿನಗಳ ಕಾಲ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮದೊಂದಿಗೆ ದಿನಾಂಕ 26 ರಂದು ಸಭಾ ಕಾರ್ಯಕ್ರಮ ನಡೆಯಲಿದೆ. ದೇವಾಂಗ ಪೀಠಾಧಿಪತಿಗಳಾದ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನೆರವೇರಿಸಲಿದ್ದು,…

Read More

ಮಡಿಕೇರಿ ಜ.19 : ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ. ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಅಬ್ಬೀಗೇರಿ ಗ್ರಾಮದ ಬಸವರಾಜು (36) ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಹನುಮಂತ (38) ಬಂಧಿತ ಆರೋಪಿಗಳು. ಇವರ ಬಳಿಯಿಂದ ಹಾವು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಮಡಿಕೇರಿ ಜ.19 : ಕಾಪು ಬಳಿಯ ಕೊರಗಜ್ಜ ಕ್ಷೇತ್ರಕ್ಕೆ ಚಿತ್ರನಟಿ, ಕೊಡಗಿನ ಪ್ರೇಮ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೂ ಭೇಟಿ ನೀಡಿದ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು.

Read More

ಸೋಮವಾರಪೇಟೆ ಜ.19 : ಸೋಮವಾರಪೇಟೆಯ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.21ರಂದು ದಾಸೋಹ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎಸ್.ಮಹೇಶ್ ತಿಳಿಸಿದ್ದಾರೆ. ನಡೆದಾಡುವ ದೇವರು,ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ 21ರಂದು ದಾಸೋಹ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು ಆ ಹಿನ್ನಲೆಯಲ್ಲಿ ಅಂದು ಶನಿವಾರ ಪಟ್ಟಣದ ಆನೆಕೆರೆ ಸಮೀಪ ಶಿವಕುಮಾರ ಸ್ವಾಮೀಜಿ ವೃತ್ತದ ನಾಮಫಲಕವನ್ನು ಶಾಸಕ ಎಂ. ಪಿ.ಅಪ್ಪಚ್ಚು ರಂಜನ್ ಅನಾವರಣಗೊಳಿಸಲಿದ್ದಾರೆ. ನಂತರ ಶಿವಕುಮಾರ ಸ್ವಾಮೀಜಿ ಬಸ್ಸು ನಿಲ್ದಾಣದ ಆವರಣದಲ್ಲಿ ದಾಸೋಹ ದಿನ ದಾರ್ಮಿಕ ಸಮಾರಂಭ ನಡೆಯಲಿದ್ದು ಕಿರಿಕೊಡ್ಲಿ ಮಠದ ಶ್ರಿ.ಸದಾಶಿವ ಸ್ವಾಮೀಜಿ,ತಪೋಕ್ಷೇತ್ರ  ಮನೆಹಳ್ಳಿ ಮಠದ ಶ್ರಿ.ಮಹಾಂತ ಶಿವಲಿಂಗ ಸ್ವಾಮೀಜಿ,ಮುದ್ದಿನ ಕಟ್ಟೆ ಮಠದ ಶ್ರಿ.ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ,ಸೇರಿದಂತೆ ವಿವಿಧ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ಭಾಗವ ಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Read More