ನಾಪೋಕ್ಲು ಮಾ.1 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು, ಸ್ಥಳೀಯ ಸಂಸ್ಥೆ ಸಂಪಾಜೆ ಸಂಯುಕ್ತಾಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಕ್ತನಿಧಿ ಕೇಂದ್ರ ಮಡಿಕೇರಿ, ರಾಷ್ಟ್ರೀಯ ಸ್ವಯಂಸೇವಾ ಯೋಜನೆ, ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು, ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಬೇತು, ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದೊಂದಿಗೆ ಮಾ.6ರಂದು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ ಮದ್ಯಾಹ್ನ 1ಗಂಟೆಯವರೆಗೆ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಮೊ.8197729150,9900474485 ಸಂಖ್ಯೆಗೆ ಕರೆಮಾಡಿ ಅಥವಾ ವಾಡ್ಸಪ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು. ವರದಿ :ಝಕರಿಯ ನಾಪೋಕ್ಲು
ಲೇಖಕ: admin
ಮಡಿಕೇರಿ ಮಾ.1 :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ, ವೆಚ್ಚದ ಮೊತ್ತವನ್ನು ಪರಿಷ್ಕರಿಸಿ 2019 ರ ಮಾರ್ಚ್, 25 ರ ಆದೇಶದಲ್ಲಿ ಪರಿಸ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಡಿಕೇರಿ ಫೆ.28 : ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಚಿನ್ನವನ್ನು ಕರಗಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ರಾಜಕುಮಾರ(29), ಪ್ರವೀಣ್ ಕುಮಾರ(32) ಹಾಗೂ ಲಲನ್ ಕುಮಾರ್(26) ಬಂಧಿತ ಆರೋಪಿಗಳು. 15 ಗ್ರಾಂ ಚಿನ್ನ ಮತ್ತು ಪಾಲಿಶ್ ಮಾಡಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಮನೆ ಮನೆಗಳಿಗೆ ತೆರಳಿ ಆ್ಯಸಿಡ್ ಹಾಗೂ ಪಾಲಿಶ್ ಸಾಮಾಗ್ರಿಗಳ್ನು ಬಳಸಿ ಸ್ವಲ್ಪ ಮಟ್ಟಿನ ಚಿನ್ನವನ್ನು ಕರಗಿಸಿ ಮೋಸ ಮಾಡುತ್ತಿರುವ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಡಿ.ಎಸ್.ಪುನೀತ್, ದಿನೇಶ್ ಕುಮಾರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡು ಒಂದು ತಂಡ ರಚಿಸಲಾಗಿತ್ತು. ಫೆ.25ರಂದು ಕುಶಾಲನಗರದ ಹೆಬ್ಬಾಲೆ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ 3 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ…
ಮಡಿಕೇರಿ ಫೆ.28 : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಮಾ.2 ರಂದು ಅಪರಾಹ್ನ 1.30 ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಪ್ರಮುಖರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಡಿಸಿಸಿ ಮುಂಚೂಣಿ ಘಟಕದ ಪ್ರಮುಖರು, ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಪಕ್ಷದ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅವರು ರಣ್ದೀಪ್ ಸಿಂಗ್ ಸುರ್ಜೇವಾಲ ಭೇಟಿ ಕುರಿತು ಮಾಹಿತಿ ನೀಡಿದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ,…
ಮಡಿಕೇರಿ ಫೆ.28 : ದಕ್ಷಿಣ ಕೊಡಗಿನ ಎರಡು ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. ನಿಟ್ಟೂರು ಗ್ರಾ.ಪಂ ನಲ್ಲಿ ಅಪ್ಪಣ್ಣ ಹಾಗೂ ಗೋಣಿಕೊಪ್ಪಲು ಗ್ರಾ.ಪಂ ನಲ್ಲಿ ಸಫೂರಬಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಿ ಗೆಲುವು ದಾಖಲಿಸಿದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ ಹಿನ್ನೆಲೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪಲಿನಲ್ಲಿ ವಿಜಯೋತ್ಸವ ಆಚರಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಹಾಗೂ ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ ನೇತೃತ್ವದಲ್ಲಿ ವಿಜಯೋತ್ಸವ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಮಡಿಕೇರಿ ಫೆ.28 : ಕುಲಶಾಸ್ತ್ರ ಅಧ್ಯಯನದ ಹೆಸರಿನಲ್ಲಿ ನೈಜ ಕೊಡವರನ್ನು ವಂಚಿಸಿ ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಗಂಭೀರ ಆರೋಪ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ನಡೆ ಸಂವಿಧಾನಿಕ ನೈತಿಕತೆಯ ಉಲ್ಲಂಘನೆಯಾಗಿದೆ. ಹುಲಿಯ ಅಧ್ಯಯನ ಹುಲಿಯ ಹೆಸರಿನಲ್ಲೇ ನಡೆಯಲಿ, ಹುಲಿ ಚಿತ್ರ ತೋರಿಸಿ ಕಾಡುಬೆಕ್ಕು ಅಧ್ಯಯನವನ್ನು ಮಾಡಬೇಡಿ. ಮುಖ್ಯಮಂತ್ರಿಗಳು ಕೊಡವ ವಿರೋಧಿ ಎಂಬ ಕಳಂಕ ಹೊತ್ತುಕೊಳ್ಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೊಡವರ ಕುಲ ಶಾಸ್ತ್ರ” ಅಧ್ಯಯನಕ್ಕೆ ಸಂಬoಧಿಸಿದ ಕಡತ (ಸಂಖ್ಯೆ SWD74 SAD 2022 ರ ಕಡತ) ಕಳೆದ ಆಗಸ್ಟ್ ತಿಂಗಳಿನಿoದ ಮುಖ್ಯಮಂತ್ರಿಗಳ ಬಳಿಯೇ ಉಳಿದಿದೆ. ನೈಜ ಕೊಡವರ ಅಧ್ಯಯನಕ್ಕೆ ತಕ್ಷಣ ಚಾಲನೆ ನೀಡುವ ಮೂಲಕ ಈ ಕಡತಕ್ಕೆ ಜೀವ ತುಂಬಬೇಕು ಎಂದು ಒತ್ತಾಯಿಸಿದ್ದಾರೆ. ಭಾಷಿಕರ ಪ್ರತ್ಯೇಕ ವ್ಯಕ್ತಿತ್ವದ ಹೆಸರಿನಲ್ಲಿ ಕುಲಶಾಸ್ತ್ರದ ಅಧ್ಯಯನ ನಡೆಸಲಿ, ಆದರೆ ಅವರ ಅಸಲಿಯತ್ತನ್ನು ಮರೆಮಾಚಿ (ಕ್ಯಾಮೋಫ್ಲೋಜ್) ಕೊಡವ ಮುಖವಾಡ ತೊಡಿಸುವ ಮೂಲಕ…
ಕೂಡುಮಂಗಳೂರು, ಫೆ.28 : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಶಾಲೆಯ ವಿಜ್ಞಾನ ಸಂಘ, ಇಕೋ ಕ್ಲಬ್, ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ ಪ್ರದರ್ಶಿಸಿ ವೈಜ್ಞಾನಿಕ ಕಾರಣಗಳನ್ನು ನೀಡುವ ಮೂಲಕ ಗಮನ ಸೆಳೆದರು. ವಿದ್ಯಾರ್ಥಿಗಳು ಸ್ವತಃ ಪ್ರದರ್ಶಿಸಿದ ವಿಜ್ಞಾನ ಪ್ರಯೋಗಕ್ಕೆ ಚಾಲನೆ ನೀಡುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ,ವಿದ್ಯಾರ್ಥಿಗಳು ದೇಶದ ವಿಜ್ಞಾನಿಗಳ ಸಂಶೋಧನೆ ಮತ್ತು ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುವ ಮೂಲಕ ಮೂಲ ವಿಜ್ಞಾನ ಕಲಿಕೆಯೊಂದಿಗೆ ತಮ್ಮನ್ನು ಹೊಸ ಹೊಸ ಅನ್ವೇಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.…
ಮಡಿಕೇರಿ ಫೆ.28 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು ಮತ್ತು ಎಫ್2 ಬಾಳೆಲೆ ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮಾರ್ಚ್, 01 ರಿಂದ 04 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಕಿರುಗೂರು, ನಲ್ಲೂರು, ಸುಳುಗೋಡು, ಬಾಳೆಲೆ, ನಿಟ್ಟೂರು, ಮತ್ತೂರು, ಬೆಸಗೂರು, ರಾಜಪುರ, ಪೊನ್ನಪ್ಪಸಂತೆ, ಕಾರ್ಮಾಡು, ದೇವನೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಮಡಿಕೇರಿ ಫೆ.28 : ಕವಿ ಸರ್ವಜ್ಞ ಅವರು ತ್ರಿಪದಿಗಳ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸರ್ವಜ್ಞರು ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಿದರೆ ಆಡುವನು, ವಾಚಿಸಿದರೆ ವಾಚಿಸುವನು ಹೀಗೆ ವಿಶಿಷ್ಟ ಸಾಹಿತ್ಯ ಪರಂಪರೆಯನ್ನು ಹುಟ್ಟು ಹಾಕಿದ್ದ ಸರ್ವಜ್ಞರ ತ್ರಿಪದಿ ಸಾಹಿತ್ಯ ಸಾರ್ವಕಾಲಿಕವಾಗಿದೆ ಎಂದು ಡಾ.ನಂಜುಂಡೇಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಹಿತಿ ಡಾ.ಜೆ.ಸೋಮಣ್ಣ ಅವರು ಮಾತನಾಡಿ ಸರ್ವಜ್ಞರು ತನಗಾಗಿ ಬದುಕದೆ ಸಮಾಜಕ್ಕಾಗಿ ಬದುಕಿದರು. ನಾಡಿನುದ್ದಗಲಕ್ಕೂ ಸಂಚರಿಸಿದ ಸರ್ವಜ್ಞರು ಶಾಲೆ ಕಾಲೇಜುಗಳಲ್ಲಿ ಕಲಿಯುವ ವಿಷಯಕ್ಕೆ ಹೆಚ್ಚಿನ ಜ್ಞಾನವನ್ನು ಸಮಾಜದಿಂದ ಕಲಿತರು. ಹೀಗಾಗಿ ಇವರಿಗೆ ಸರ್ವಜ್ಞ ಎಂದು ಹೆಸರು ಬರಲು ಸಾಧ್ಯವಾಯಿತು ಎಂದರು. ಸರ್ವಜ್ಞರ ಮೊದಲಿನ ಹೆಸರು ಪುಷ್ಪದತ್ತ…
ಮಡಿಕೇರಿ ಫೆ.28 : ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ 20 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 45 ಒಟ್ಟು 65 ಮತಗಟ್ಟೆಗಳಲ್ಲಿ ಶೇ.65 ಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಹಿನ್ನೆಲೆ ಈ 65 ಮತಗಟ್ಟೆಗಳಲ್ಲಿ ಮತದಾನ ಕಡಿಮೆಯಾಗಲು ಕಾರಣವೇನು ಮತ್ತು ಮತದಾನ ಹೆಚ್ಚಳಕ್ಕೆ ಯಾವ ರೀತಿಯ ಕ್ರಮವಹಿಸಬಹುದು ಎಂಬ ಬಗ್ಗೆ ಮಾರ್ಚ್, 4 ರೊಳಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಡಿಕೇರಿ ನಗರಸಭೆ, ವಿರಾಜಪೇಟೆ ಪಟ್ಟಣ ಪಂಚಾಯಿತಿ, ಕುಶಾಲನಗರ ಹಾಗೂ ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದೆ. ಆದ್ದರಿಂದ ಕಡಿಮೆ ಮತದಾನವಾಗಲು ಕಾರಣ ಮತ್ತು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಲು ಯಾವ ರೀತಿ ಕ್ರಮವಹಿಸಬಹುದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ…






