ಮಡಿಕೇರಿ ಜ.19 : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಶಾಖಾ ಕಚೇರಿಯನ್ನು ಕೊಡಗು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಪಂಚಾಯತ್ ಭವನದಲ್ಲಿರುವ ನೂತನ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಡಿಒಗಳ ಅಭ್ಯುದಯ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸಂಘವು ಕಾರ್ಯ ನಿರ್ವಹಿಸುವಂತಾಗಲಿ ಎಂದರು. ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ರವೀಶ್ ಅವರು ಮಾತನಾಡಿ, ಪಿಡಿಒಗಳ ಹಿತ ರಕ್ಷಣೆ ಸಂಘದ ಮುಖ್ಯ ಧ್ಯೇಯವಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಯಶಸ್ವಿಗಾಗಿ ಅನುಷ್ಟಾನಿಸುವಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘದಿAದ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯತ್ನ ನೂತನ ಮನರೇಗಾ ಶಾಖೆಯನ್ನು ಜಿ.ಪಂ.ಸಿ ಇಒ ಮತ್ತು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಅವರು ಉದ್ಘಾಟಿಸಿದರು. ಯೋಜನಾ ನಿರ್ದೇಶಕರಾದ ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜ್ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ…
ಲೇಖಕ: admin
ಮಡಿಕೇರಿ ಜ.19 : ಮಹಾಯೋಗಿ ವೇಮನ ಅವರು ಕವಿ ಹಾಗೂ ಸಾಹಿತಿಯಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಾಗಲು ಶ್ರಮಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಭಾರತೀಯ ವಿದ್ಯಾಭವನದಲ್ಲಿ ಗುರುವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಯೋಗಿ ಸಿದ್ದರಾಮೇಶ್ವರರು 12 ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದರೂ ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ ಅವರು ಮಾತನಾಡಿ ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು. ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ,…
ಮಡಿಕೇರಿ ಜ.19 : ವಿಕೆ3 ಪಿಕ್ಚರ್ಸ್ ಬ್ಯಾನರ್ ನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಿಸಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಅಸ್ಸಾಂನ ವಿಂಗ್ಸ್ ಇಂಟರ್ ನ್ಯಾಷನಲ್ ಕ್ರಿಟಿಕ್ಸ್ ಫಿಲಂ ಫೆಸ್ಟಿವಲ್ (WICFF-2022 )ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ (ಬೆಸ್ಟ್ ಫೀಚರ್ ಫಿಲಂ), ಉತ್ತಮ ಚಿತ್ರ ವಿಮರ್ಶಕರ ಪ್ರಶಸ್ತಿ (ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್), ಉತ್ತಮ ಸಂಭಾಷಣೆ ಪ್ರಶಸ್ತಿ (ಬೆಸ್ಟ್ ಡೈಲಾಗ್ ರೈಟರ್ ಅವಾರ್ಡ್)ಗಳಿಸಿದೆ. ದೆಹಲಿಯ 7ನೇ ವಾಲೆಟ್ ಅಂತರರಾಷ್ಟ್ರೀಯ ಚಿತ್ರೋತ್ಸವ( WIFF -2022 )ದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ (ಬೆಸ್ಟ್ ಡೈರೆಕ್ಟರ್ ಅವಾರ್ಡ್) ಅತ್ಯುತ್ತಮ ಚಿತ್ರ ಪ್ರಶಸ್ತಿ (ಬೆಸ್ಟ್ ಫೀಚರ್ ಫಿಲಂ ಅವಾರ್ಡ್)ಯನ್ನು ಕೂಡ ತನ್ನದಾಗಿಸಿಕೊಂಡಿದೆ. “ನಾಡ ಪೆದ ಆಶಾ” ಗೆ ಪ್ರಶಸ್ತಿಗಳು ದೊರೆಯುತ್ತಿರುವ ಬಗ್ಗೆ ಚಿತ್ರದ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಹರ್ಷ ವ್ಯಕ್ತಪಡಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿ ಗಳಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಇದೊಂದು ಮಹಿಳಾ…
ಮಡಿಕೇರಿ ಜ.19 : ತಲಕಾವೇರಿ ದೇವಾಲಯದ ಮೂಲ ಅರ್ಚಕ ಗೋಪಾಲಕೃಷ್ಣ ಆಚಾರ್ಯ(82) ವಿಧಿವಶವಾಗಿದ್ದಾರೆ. ಗೋಪಾಲಕೃಷ್ಣ ಆಚಾರ್ಯ ಅವರು 1995 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಡೆಪ್ಯುಟಿ ತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಇವರು ವಂಶ ಪಾರಂಪರ್ಯವಾಗಿ ತಲಕಾವೇರಿ ದೇವಾಲಯದಲ್ಲಿ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿ, ಕೊಡುಗೈದಾನಿಯಾಗಿದ್ದರು. ಮೃತರು ಪತ್ನಿ ಪದ್ಮಾವತಿ, ಪುತ್ರ ಪುತ್ತೂರು ಶಾಖೆಯ ಟಾಟಾ ಅರವಿಂದ ಮೋಟರ್ಸ್ ಕಂಪೆನಿಯ ಸರ್ವಿಸ್ ಮೆನೇಜರ್ ಕೃಷ್ಣ ಪ್ರಸಾದ್ ಆಚಾರ್ಯ, ವಿಟ್ಲ ಗ್ರಾಮೀಣ ಬ್ಯಾಂಕ್ ಪುತ್ತೂರು ಶಾಖೆಯ ವ್ಯವಸ್ಥಾಪಾಕಿ ಸವಿತಾ ನಾಗರಾಜ್, ಸಹಿತ ನಾಲ್ವರು ಪುತ್ರಿಯನ್ನು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ಸಂತಾಪ ಸೂಚಿಸಿದರು.
ಯಾದಗಿರಿ ಜ.19 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದರು. ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್-ಚೆನ್ನೈಎಕ್ಸ್ಪ್ರೆಸ್ -ವೇ,ಪ್ಯಾಕೇಜ್ -3 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯಪಾಲ ಡಾ. ತಾವರಚಂದ್ ಗೆಹ್ಲೋಟ್ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ , ಕೇಂದ್ರದ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖುಬಾ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ನರಸಿಂಹ ಗೌಡ, ರಾಯಚೂರು ಸಂಸದ ಅಮರೇಶಗೌಡ ನಾಯಕ ಮುಂತಾದವರು ಇದ್ದರು.
ಮಡಿಕೇರಿ ಜ.19 : ಮೇಯಲು ಬಿಟ್ಟಿದ್ದ ಹಸುವೊಂದು ಹುಲಿದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುದಿಯತಂಡ ಮೊಣ್ಣಯ್ಯ ಅವರಿಗೆ ಸೇರಿದ ಸಿಂಧಿ ತಳಿಯ ಹಸುವನ್ನು ಎಂದಿನಂತೆ ಗದ್ದೆಯಲ್ಲಿ ಮೇಯಲು ಬಿಟ್ಟಿದ್ದರು. ಆದರೆ, ಹಸು ಸಂಜೆಯಾದರು ಕೊಟ್ಟಿಗೆಗೆ ಹಿಂದಿರುಗಿರಲಿಲ್ಲ. ಮರುದಿನ ಹಸುವಿಗಾಗಿ ಹುಡುಕಾಟ ನಡೆಸಿದಾಗ, ಹಸುವನ್ನು ಕಟ್ಟಿದ ಜಾಗದಿಂದ ಸುಮಾರು 300 ಮೀಟರ್ ದೂರದಲ್ಲಿ ಹಸುವಿನ ಕಳೆಬರ ಪತ್ತೆಯಾಗಿದೆ. ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಡಿಕೇರಿ ಜ.19 : ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಕೊಡಗಿನಲ್ಲಿ ಸಪ್ತಪದಿ ತುಳಿದಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದ ಶುಭ್ರ ಅಯ್ಯಪ್ಪ ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ.
ಮಡಿಕೇರಿ ಜ.19 : ಕಡಂಗ ಕೊಕ್ಕಂಡಬಾಣೆ ದರ್ಗಾದಲ್ಲಿ ವಾರ್ಷಿಕವಾಗಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಜ.20 ರಂದು ನಡೆಯಲಿದೆ. ಅಂದು ಮಧ್ಯಾಹ್ನ ಜುಮ ನಮಾಜ್ ಬಳಿಕ ಸಲಿಮ್ ಫೈಜಿ ಉಸ್ತದರ ಮತ್ತು ಆಡಳಿತ ಮಂಡಳಿಯ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದ್ದು, ರಾತ್ರಿ 8 ಗಂಟೆಗೆ ಸೈಯದ್ ಸಫ್ವಾನ್ ಪ್ರಾರ್ಥನೆಯ ಮುಖಾಂತರ 4 ದಿನಗಳ ಮತ ಪ್ರವಚನ ಕಾರ್ಯ ಕ್ಕೆ ಉರೂಸ್ಗೆ ಚಾಲನೆ ದೊರೆಯಲಿದೆ. ಐದು ದಿನಗಳಲ್ಲಿ ನಡೆಯುವ ಉರುಸ್ ಕಾರ್ಯಕ್ರಮದಲ್ಲಿ ಸೋಮವಾರ ಮತ್ತು ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಸಾರ್ವಜನಿಕವಾಗಿ ಅನ್ನದಾನ ನಡೆಯಲಿದೆ. ವರದಿ : ನೌಫಲ್ ಕಡಂಗ
ಮಡಿಕೇರಿ ಜ.19 : ತನ್ನ ಕಿರಿಯ ವಯಸ್ಸಿನಲ್ಲಿ ಸಾಧನೆಯ ಹಾದಿ ಹಿಡಿದಿರುವ ಪುಟಾಣಿ ದೀಕ್ಷಾ ಹಲವಾರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ. ಈಕೆ ಕೂರ್ಗ್ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ನ ನೃತ್ಯ ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಪ್ರಥಮ ಬಹುಮಾನ, ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ ಛದ್ಮವೇಶ ಸ್ಪರ್ಧೆಯಲ್ಲಿ ತೃತೀಯ ಹಾಗೂ ಕೊಡಗು ಜಿಲ್ಲಾ ಘಟಕ ಆಯೋಜಿಸಿದ ಸಮರ್ಥ ಕನ್ನಡಿಗರು ಕನ್ನಡ ಹಬ್ಬದ ಛದ್ಮವೇಶ ಸ್ಪರ್ಧೆಯಲ್ಲಿ ಪ್ರಥಮ, ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಬೆಳ್ಳಿ ಮಹೋತ್ಸವದ ಅಂಗವಾಗಿ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿರುವ ದೀಕ್ಷಾ, ಮುಳಿಯ ಜ್ಯುವೆಲರ್ಸ್ ಅವರು ಏರ್ಪಡಿಸಿದ ಛದ್ಮವೇಶ ಸ್ಪರ್ಧೆಯಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾಳೆ. ಸೂಪರ್ ಕಿಡ್ಸ್ ಚಾನೆಲ್ – ವಾವ್ ಸಿನಿಮಾ ಚಾನೆಲ್ ಆಯೋಜಿಸಿದ ವಾವ್ ಕೊಡಗು ಟ್ಯಾಲೆಂಟ್ಸ್ ಚಾಂಪಿಯನ್ ಶಿಪ್ನಲ್ಲಿ ಕೊಡಗು ಟ್ಯಾಲೆಂಟ್ ಅವಾರ್ಡ್ ಪಡೆದಿರುತ್ತಾಳೆ. ಅಲ್ಲದೆ ಹಲವಾರು ವೇದಿಕೆಯಲ್ಲಿ ತನ್ನ ಪ್ರತಿಭೆಯನ್ನು ಹೊರಹೊಮ್ಮಿದ್ದಾಳೆ. ಈಕೆ ಬಿಟ್ಟಂಗಾಲದ ನಿವಾಸಿಗಳಾದ ಕೆ.ಎ.ನವೀನ್ ಕುಮಾರ್- ಎ.ಎಸ್.ನಿತ್ಯ…
ಮಡಿಕೇರಿ ಜ.19 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅನಾವರಣಗೊಳಿಸಿದರು. ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಗೌರವ ಕಾರ್ಯದರ್ಶಿ ಕಡ್ಲೆರ ತುಳಸಿ ಮೋಹನ್, ನಿರ್ದೇಶಕಿ ಪ್ರೇಮ ರಾಘವಯ್ಯ ಮತ್ತಿತರರು ಉಪಸ್ಥಿತರಿದ್ದರು. ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಸಭಾಂಗಣದಲ್ಲಿ ಜ.28 ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.






