ಲೇಖಕ: admin

ಮಡಿಕೇರಿ ಜ.19 : ಭಾರತೀಯ ಜನತಾ ಪಾರ್ಟಿ ಹಾಗೂ ಗ್ರಾಮಾಂತರ ವೃತ್ತಿಪರ ಪ್ರಕೋಷ್ಠದ ವತಿಯಿಂದ ಜ.22 ರಂದು ಮರಗೋಡಿನಲ್ಲಿ ಉಚಿತ ವೈದ್ಯಕೀಯ, ಶಸ್ತ್ರಚಿಕಿತ್ಸಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮೋಹನ್ ಅಪ್ಪಾಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಬೆಳಗ್ಗೆ 10.30 ಗಂಟೆಗೆ ಶಿಬಿರಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಉಚಿತ ವೈದ್ಯಕೀಯ ದಂತ ತಜ್ಞರಿಂದ ಸಲಹೆ ಮತ್ತು ಚಿಕಿತ್ಸೆ ಹಾಗೂ ಸಮಾಲೋಚನೆ, ದಂತ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ, ಶ್ರವಣ ತಪಾಸಣಾ ಶಿಬಿರ, ಸಾಮಾನ್ಯ ವೈದ್ಯಕೀಯ ಚಿಕಿತ್ಸೆ, ಮೂತ್ರ ಶಾಸ್ತ್ರಜ್ಞರು ಹಾಗೂ ಸ್ತ್ರೀ ರೋಗ ತಜ್ಞರಿಂದ ಸಮಾಲೋಚನೆ, ಗಂಡು ಮತ್ತು ಹೆಣ್ಣು ಬಂಜೆತನ ಸಲಹೆಗಳು, ಫಲಾನುಭವಿಗಳಿಗೆ ಉಚಿತ ಲ್ಯಾಬ್ ಹಾಗೂ ಶಸ್ತ್ರ ಚಿಕಿತ್ಸೆಗಳು, ಮೂಲ ಔಷಧಿಗಳು, ರೋಗ ನಿರೋಧಕ ಪಾನೀಯ ನೀಡಲಾಗುವುದು…

Read More

ಮಡಿಕೇರಿ ಜ.19 : ಸುಳ್ಯದ ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಎರಡು ನೂತನ ಶಾಖೆಗಳನ್ನು ನಾಪೋಕ್ಲು ಮತ್ತು ಸೋಮವಾರಪೇಟೆಯಲ್ಲಿ ಆರಂಭಿಸಲಾಗುತ್ತಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್‍ನಲ್ಲಿ 18ನೇ ಶಾಖೆಯ ಉದ್ಘಾಟನೆ ಜ.23 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಶಾಖೆಯ ಕಛೇರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಮಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಕೃಷ್ಣಪ್ರಸಾದ್ ಎಂಎಸ್. ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ನಾಪೋಕ್ಲು ಗ್ರಾಪಂ ಅಧ್ಯಕ್ಷರಾದ ಪಾರ್ವತಿ, ಪ್ರಥಮ ಠೇವಣಿ ಪತ್ರವನ್ನು ಮಡಿಕೇರಿ ಸರ್ವೋದಯ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಂಬೆಕಲ್ಲು, ಪ್ರಥಮ ಉಳಿತಾಯ ಖಾತೆ ಪತ್ರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ತುಳಸಿ ಮೋಹನ್ ಕಡ್ಲೇರ ವಿತರಿಸಲಿದ್ದಾರೆ. ಮುಖ್ಯ…

Read More

ಮಡಿಕೇರಿ ಜ.19 : ಬೂತ್ ಮಟ್ಟದಿಂದ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಜ.21 ರಿಂದ 29ರ ವರೆಗೆ ಬೂತ್ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಪ್ರತಿಮನೆಯನ್ನು ಬಿಜೆಪಿ ಮನೆಯನ್ನಾಗಿಸುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಕಾರ್ಯಕರ್ತರ ಮನೆ ಮೇಲೆ ಪಕ್ಷದ ಧ್ವಜ ಹಾರಿಸುವ ಮೂಲಕ ಒಂದನೇ ಹಂತದ ಅಭಿಯಾನವನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತದ ಅಭಿಯಾನಕ್ಕೆ ಜ.21 ರಂದು ಚಾಲನೆ ದೊರೆಯಲಿದೆ ಎಂದರು. 9 ದಿನಗಳವರೆಗೆ ನಡೆಯಲಿರುವ ಅಭಿಯಾನದಲ್ಲಿ ಒಂದು ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದ್ದು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು 543 ಬೂತ್‍ಗಳಲ್ಲಿಯೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು. ಸರ್ಕಾರದ ಯೋಜನೆಯನ್ನು ಪ್ರತಿಬೂತ್‍ನಲ್ಲಿ 10 ಗೋಡೆ ಬರಹಗಳ ಮೂಲಕ ಗಮನ ಸೆಳೆಯುವುದು, ಎಲ್ಲಾ ಬೂತ್‍ಗಳಲ್ಲಿ ಈಗಾಗಲೇ ವಾಟ್ಸ್‍ಅಪ್ ಗ್ರೂಪ್ ತಯಾರಿಸಿ ಡಿಜಿಟಲ್ ಸಂಪರ್ಕ ಹೊಂದುವುದು, ಮನೆಗಳ ಮೇಲೆ ಮತ್ತು…

Read More

ನಾಪೋಕ್ಲು ಜ.19 : ಉತ್ತಮ ವ್ಯಕ್ತಿತ್ವದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ ಹೇಳಿದರು. ಹೊದವಾಡ ರಾಫಲ್ಸ್ ಇಂಟರ್ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಮುಂದೆ ಬರಬೇಕಾದರೆ ಕೇವಲ ಶಿಕ್ಷಣ ಪಡೆದರೆ ಸಾಲದು ಎಲ್ಲಾ ರೀತಿಯ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ದೇಶ-ವಿದೇಶಗಳಲ್ಲಿ ಇಂಗ್ಲಿಷ್ ಭಾಷೆಯ ಅಗತ್ಯವಿದೆ. ಆಳವಾದ ಅಧ್ಯಯನದಿಂದ ಮುಂದೆ ಬರಲು ಸಾಧ್ಯ ಎಂದ ಜಗತ್ ತಿಮ್ಮಯ್ಯ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜೊತೆಗೆ ಪ್ರತಿಯೊಬ್ಬರು ಧನಾತ್ಮಕ ಚಿಂತನೆ, ಶಿಸ್ತು, ಸಮಯ ಪಾಲನೆ ಇತರ ಮಾತುಗಳನ್ನು ಆಲಿಸುವ ವ್ಯವದಾನವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯ ಅಬ್ದುಲ್ ಅಜೀಜ್, ಖಾಲಿದ್ ಹಾಜಿ ಹಾಕತ್ತೂರು, ಶಿಕ್ಷಕ ಮೆಹಬೂಬ್ ಸಾಬ್ ನಮ್ಮ ಅನಿಸಿಕೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.…

Read More

ಮಡಿಕೇರಿ ಜ.19 : ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕ್ರೀಡಾಕೂಟಗಳು ಸ್ಫೂರ್ತಿ ತುಂಬುತ್ತದೆ ಎಂದು ಕೊಡವ ಟಗ್ ಆಫ್ ವಾರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಪೊನ್ನೋಲತಂಡ ಕಿರಣ್ ಪೊನ್ನಪ್ಪ ಅಭಿಪ್ರಾಯಪಟ್ಟರು. ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಿರುವ ಕೊಡಗು ಪ್ರೆಸ್‍ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊನ್ನಂಪೇಟೆ ತಾಲೂಕು ಬೇಗೂರುವಿನ ಕೇವ್ ರಿಟ್ಝ್‍ರೆಸಾಟ್ರ್ನಲ್ಲಿ ಮಾತನಾಡಿದರು. ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯುತ್ತಿದೆ ಎನ್ನುವುದಕ್ಕೆ ವಿಶಿಷ್ಟ ರೀತಿಯಲ್ಲಿ ಟ್ರೋಫಿ ಅನಾವರಣ ಮಾಡಿರುವುದೇ ಸಾಕ್ಷಿ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದ ಪಾಲಿಬೆಟ್ಟ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಜನರಲ್ ಸರ್ಜನ್ ಡಾ.ಪಿ.ಎಸ್.ಲೋಹಿತ್ ಮಾತನಾಡಿ ಕೌಟುಂಬಿಕ ಚೌಕಟ್ಟಿನೊಳಗೆ ಬದುಕುವುದರ ಜೊತೆಗೆ ಸಮಾಜಕ್ಕೆ ತುಡಿಯುವ ಪತ್ರಕರ್ತರ ಸೇವೆ ಅಭಿನಂದನಾರ್ಹ ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾರೈ ಮಾತನಾಡಿ, ಕೊಡಗು ಪ್ರೆಸ್‍ಕ್ಲಬ್ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ಬಾರಿಯ ಕ್ರಿಕೆಟ್ ಪಂದ್ಯಾವಳಿ ಜಿಲ್ಲೆಯಲಿ ದೊಡ್ಡ…

Read More

ನಾಪೋಕ್ಲು ಜ.19 : ರಾಷ್ಟ್ರದ ಭರವಸೆಯ ಕ್ರೀಡಾಪಟು ಕೊಡಗು ಜಿಲ್ಲೆಯ ಪಾಲೂರು ಗ್ರಾಮದ ಸೂದನ ಎಸ್. ಡಾಲಿ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದ್ದಾರೆ. ಜ.11 ರಿಂದ 15 ರವರೆಗೆ ಶ್ರೀಲಂಕಾದ ಸುಗತಾದಾಸ ಕ್ರೀಡಾಂಗಣದಲ್ಲಿ ನಡೆದ 800 ಮತ್ತು 1500 ಮೀ.ಸ್ಟಿಪಲ್ ಚೇಸ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ 3000 ಮೀ. ಸ್ಟಿಪಲ್ ಚೇಸ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿ ಪ್ರಸಂಸೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಕ್ರೀಡಾಂಗಣದಲ್ಲಿ ನಡೆದ 42ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೊಡಗಿನ ಮಾಸ್ಟರ್ ಅಸೋಸಿಯೇಷನ್ 15 ಕ್ರೀಡಾಪಟುಗಳು ಭಾಗವಹಿಸಿ ಚಿನ್ನ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಈ ಕ್ರೀಡಾಪಟುಗಳಲ್ಲಿ ಸೂದನ ಎಸ್ ಡಾಲಿ ಒಬ್ಬರು 800 ಮೀಟರ್, 1500ಮೀಟರ್ ಹಾಗೂ 5000 ಮೀಟರ್ ಓಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಚಿನ್ನದ ಪದಕವನ್ನು ಗಳಿಸಿದ್ದು ಜಿಲ್ಲೆಗೆ ಕೀರ್ತಿ…

Read More

ಮಡಿಕೇರಿ ಜ.19 :  ಬಿಟ್ಟಂಗಾಲ ಸಮೀಪದ ಕಂಡಂಗಾಲ ನಿವಾಸಿ, ವಿರಾಜಪೇಟೆಯ ಕರ್ನಾಟಕ ಸಂಘ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಮೂಕಚಂಡ ಅರುಣ್ ಅಪ್ಪಣ್ಣ (63) ಇಂದು (ಜ.19) ಬೆಳಗಿನ ಜಾವ ನಿಧನರಾದರು. ಅರುಣ್ ಅಪ್ಪಣ್ಣ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಬೇರಳಿನಾಡಿನ ಊರು ತಕ್ಕರಾಗಿದ್ದರು ಹಾಗೂ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿ ಕೋಲ್ ಮುಂದ್’ನಲ್ಲಿ ಸುಧೀರ್ಘ ಅವಧಿಯ ಕಾರ್ಯದರ್ಶಿ ಆಗಿದ್ದರು. ಮೃತರು ಪತ್ನಿ ಹಾಗೂ ಪುತ್ರ   ಮಾದಾಪುರದ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ದೈಹಿಕ ನಿರ್ದೇಶಕ  ನಿರನ್ ನಾಚಪ್ಪ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ((ಜ.19) ಮಧ್ಯಾಹ್ನದ ನಂತರ 3 ಗಂಟೆಗೆ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಜ.19 : ಕಾಲೇಜು ಶಿಕ್ಷಣ ಇಲಾಖೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‍ಮನೆ ಕೆಫೆ ಸಹಕಾರದಲ್ಲಿ ರಾಜ್ಯ ಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮವು ಜ.20 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.19 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ ರಾಜ್ಯದ ಎಲ್ಲಾ ಆಹಾರ ವಸ್ತುಗಳ ತಯಾರಕರು, ರಿಲೇಬಲ್, ರಿಪ್ಯಾಕಿಂಗ್ ಆಮದುದಾರರು ಮತ್ತು ತಯಾರಕ-ರಪ್ತುದಾರರು ತಮ್ಮ ಘಟಕದ ಆಹಾರ ಪದಾರ್ಥ ವಹಿವಾಟಿನ 2020-21 ಮತ್ತು 2021-22 ಹಾಗೂ 2022-23 ನೇ ಸಾಲಿನ ವಾರ್ಷಿಕ ವರಮಾನ ವಿವರಗಳನ್ನು ಪ್ರತಿ ಆರ್ಥಿಕ ವರ್ಷದ ಮೇ-31 ರ ಕಾಲಮಿತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಧಿಕೃತ ಅಂರ್ತಜಾಲ https://foscos.fssai.gov.in ರಲ್ಲಿ ನಮೂದಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಈಗಾಗಲೇ ಅಧಿಕೃತ ಅಂರ್ತಜಾಲ ತಾಣದಲ್ಲಿಯೂ ಮಾಹಿತಿ ನೀಡಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಆಹಾರ ಪರವಾನಗಿ ಪಡೆದಿರುವ ಎಲ್ಲಾ ಆಹಾರ ಪದಾರ್ಥ ತಯಾರಕರು ಮತ್ತು ಪ್ಯಾಕರ್ಸ್, ರಿಲೇಬಲ್‍ದಾರರು, ಆಮದುದಾರರು ಹಾಗೂ ತಯಾರಕ-ರಪ್ತುದಾರರು ತಮ್ಮ ವಾರ್ಷಿಕ ವರಮಾನ ವಿವರವನ್ನು ಮತ್ತು ತಾವು ತಯಾರಿಸುವ ಅಥವಾ ರಿಲೇಬಲ್, ರಿಪ್ಯಾಕಿಂಗ್ ಮಾಡುವ ಆಹಾರ ಪದಾರ್ಥಗಳನ್ನು ಪ್ರತಿ 06 ತಿಂಗಳಿಗೊಮ್ಮ ರಾಷ್ಟ್ರೀಯ ಪ್ರಯೋಗಾಲಯ ಮಾನ್ಯತಾ ಮಂಡಳಿಯಿಂದ (ಎನ್‍ಎಬಿಎಲ್) ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರಕ್ಕೆ ನೋಂದಾಯಿತ…

Read More

ವಿರಾಜಪೇಟೆ ಜ.19 : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಓಜಸ್ವಿ ಫೌಂಡೇಶನ್ ಸಹಯೋಗದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕಾರ್ಯಾಗಾರ ನಡೆಸಲಾಯಿತು. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೈಸೂರಿನ ಅಂತಾರಾಷ್ಟ್ರೀಯ ಲೈಫ್ ಸ್ಕಿಲ್ ಕೋಚ್, ಚೇತನ್ ರಾಂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ವಿಧ್ಯಾರ್ಥಿಗಳಿಗೆ ಪ್ರೇರಣಾ ಹಾಗೂ ಪರೀಕ್ಷೆಯ ಗೆಲುವಿನ ಸೂತ್ರಗಳನ್ನು, ಓದಿನ ಮಹತ್ವ, ಸಮಯ ನಿರ್ವಹಣೆ, ಏಕಾಗ್ರತೆ ಹಾಗೂ ಪರೀಕ್ಷೆಯನ್ನು ಎದುರಿಸಲು ಬೇಕಾದ ಎಲ್ಲಾ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ತಿಳಿಸಿ ಕೊಟ್ಟರು. ಪರೀಕ್ಷೆಯ ಭಯ, ಆತಂಕ ಬಿಟ್ಟು, ಪರೀಕ್ಷೆ ಒಂದು ಹಬ್ಬದಂತೆ ಸಂಭ್ರಮಿಸಿ ಎಂದು ವಿದ್ಯಾರ್ಥಿ ಗಳಿಗೆ ಉತ್ತೇಜನ ನೀಡಿದರು. ವಿರಾಜಪೇಟೆ ತಾಲೂಕಿನ ಸುಮಾರು 800 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಓಜಸ್ವಿ ಫೌಂಡೇಶನ್ನಿನ ಸಂಸ್ಥಾಪಕಿ ಡಾ.ಕವಿತ ಪಿ.ಸಿ., ಕ್ಷೇತ್ರ ಸಂಪನ್ಮೂಲ ಅಧಿಕಾರಿ ವನಜಾಕ್ಷಿ, ಶಿಕ್ಷಣ ಇಲಾಖೆಯ ಗಾಯತ್ರಿ, ಎಸ್‍ಎಸ್‍ಎಲ್‍ಸಿ ನೋಡಲ್…

Read More