ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಲೇಖಕ: admin
ವಿರಾಜಪೇಟೆ ಜ.3 : : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಡಾಂಬರಿಕರಣ, ಚರಂಡಿ, ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ರೂ, 3.5 ಕೋಟಿ ಅನುದಾನದಲ್ಲಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ನಗರದ ಜನತೆಗೆ ಕುಡಿಯುವ ನೀರು ಹೆಚ್ಚಿನ ಪೂರೈಕೆಗಾಗಿ ರೂ,65 ಕೋಟಿ ಅನುದಾನ ಮಂಜುರಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂ, 25 ಲಕ್ಷ ಅನುದಾನದಲ್ಲಿ ವಿರಾಜಪೇಟೆಯ ಸುಂಕದಕಟ್ಟೆ ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿ ಈಗಾಗಲೇ ನಗರದ ಎಲ್ಲಾ ಮನೆ ಮನೆಗಳಿಗು ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದ್ದರು ಮುಂದೆಯು ಕುಡಿಯುವ ನೀರಿನ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ 65 ಕೋಟಿ ರೂ, ಅನುದಾನ ಮಂಜೂರು ಮಾಡಲಾಗಿದ್ದು ಮುಂದಿನ ದಿನದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದ ಶಾಸಕ ಬೋಪಯ್ಯ ಅವರು ಸರಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳು ಕಳಪೆಯಾಗದಂತೆ ಸ್ಥಳಿಯರು ಗಮನ ಹರಿಸಬೇಕು ಹಾಗೂ ಗುತ್ತಿಗೆದಾರರು…
ಮಡಿಕೇರಿ ಜ.2 : ಅಗ್ನಿ ಆಕಸ್ಮಿಕದಿಂದ ರಬ್ಬರ್ ಹಾಳೆಗಳು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಕೃಷಿಕ ಸೂರಜ್ ಹೊಸೂರು ಎಂಬುವವರ ಮನೆಯಲ್ಲಿ ರಬ್ಬರ್ ಹಾಳೆಗಳ ದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಸಂಭಿಸಿದೆ. ಒಂದೂವರೆ ಲಕ್ಷ ರೂ. ಗೂ ಅಧಿಕ ಮೌಲ್ಯದ ರಬ್ಬರ್ ಹಾಳೆಗಳು ಸುಟ್ಟು ಕರಕಲಾಗಿದ್ದು, ಯಂತ್ರಗಳಿಗೂ ಹಾನಿಯಾಗಿದೆ. ಪೊಲೀಸರು ಹಾಗೂ ಸಂಬAಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜ.2 : ರಾಜಕೀಯ ಪಕ್ಷಗಳು ಜನ ಹಾಗೂ ಸಮಾಜವನ್ನು ಮರೆತರೆ ನಾಶವಾಗುತ್ತವೆ, ದೇಶದಲ್ಲಿ ಈಗಾಗಲೇ ಕೆಲವು ರಾಜಕೀಯ ಪಕ್ಷಗಳು ಹೀಗೆ ಆಗಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಬಿಜೆಪಿ ಹಾಗೂ ಮಡಿಕೇರಿ ನಗರ ಬಿಜೆಪಿ ವತಿಯಿಂದ ನಗರದ ವಿದ್ಯಾನಗರದ ಬೂತ್ ನಲ್ಲಿ ಸೋಮವಾರ ನಡೆದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಸಾಧನೆ ಮತ್ತು ಯೋಜನೆಯನ್ನು ಜನರಿಗೆ ತಿಳಿಸುವುದೇ ಬೂತ್ ನ ಮುಖ್ಯ ಕೆಲಸ. ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಬೂತ್ ಗಳನ್ನು ಶಕ್ತಿಶಾಲಿಯಾಗಿ ಮಾಡಬೇಕೆಂದು ಕರೆ ನೀಡಿದರು. ಬಿಜೆಪಿ ಪಕ್ಷ ಹೊರಟಿರುವುದು ದೇಶ ಕಟ್ಟಲು. ಪ್ರಪಂಚದ ಗುರುವಾಗವ ನಿಟ್ಟಿನಲ್ಲಿ ಅಧಿಕಾರ ಹಿಡಿಯಲು ನಮ್ಮ ಪಣ. ಗೆಲ್ಲಲು ಮಾತ್ರ ನಾವು ಕಾರ್ಯಕ್ರಮ ಮಾಡುತ್ತಿಲ್ಲ. ಬಿಜೆಪಿ ಸರ್ಕಾರದ ಎಲ್ಲಾ ಕಾರ್ಯಕ್ರಮವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕೆಂದರು. ವಾಜಪೇಯಿ ಸರ್ಕಾರದಲ್ಲಿ ಸರ್ವ ಶಿಕ್ಷಣ ಅಭಿಯಾನ ಮಾಡಿದ್ದೇವೆ. ಪ್ರಧಾನಿ ಮೋದಿ…
ಮಡಿಕೇರಿ ಜ.2 : ನಾವು ನಮ್ಮ ಗ್ರಾಮದ ಸ್ವಚ್ಛತೆ ಕಾಪಾಡುವುದರ ಜೊತೆಗೆ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಕೊಡಗಿನ ಪರಿಸರ ಮತ್ತು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಕರೆ ನೀಡಿದ್ದಾರೆ. ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಪ್ರಮುಖ ಪ್ರವಾಸಿತಾಣ ಅಬ್ಬಿಪಾಲ್ಸ್ ನಲ್ಲಿ ವೇದಿಕೆ ವತಿಯಿಂದ ಕುವೆಂಪು ಜನ್ಮ ದಿನದ ಅಂಗವಾಗಿ ನಡೆದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿತಾಣವಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿತಾಣಗಳನ್ನು ಹೊಂದಿರುವ ಪ್ರತಿ ಗ್ರಾ.ಪಂ ಗಳು ಪ್ರವಾಸಿಗರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಮತ್ತು ಜಾಗೃತಿ ಫಲಕಗಳನ್ನು ಅಳವಡಿಸಬೇಕು ಎಂದರು. ವೇದಿಕೆಯ ಕಾರ್ಯದರ್ಶಿ ನವೀನ್ ಅಜ್ಜಳಿ ಮಾತನಾಡಿ ಗ್ರಾಮ ಗ್ರಾಮಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು, ಎಲ್ಲಾ ಪ್ರದೇಶಗಳು ಕಸವಿಲ್ಲದೆ ಸುಂದರವಾಗಿ ಕಂಡಾಗ ಪ್ರವಾಸಿಗರು ಕೂಡ ಕಸ ಹಾಕದೆ ಸ್ವಚ್ಛತೆ ಕಾಪಾಡುತ್ತಾರೆ. ರಸ್ತೆಯ ಇಕ್ಕೆಲಗಳು…
ಕುಶಾಲನಗರ ಜ.2 : ಕುಶಾಲನಗರ ತಾಲೂಕಿನ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿದರು. ಶಾಲಾ ಮಕ್ಕಳ ಕಲಿಕೆಯ ಬಗ್ಗೆ ಮತ್ತು ಶಾಲಾ ಅಭಿವೃದ್ಧಿ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಶೈಕ್ಷಣಿಕ ಪ್ರಗತಿಯ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ನೂತನ ಕಟ್ಟಡ ನಿರ್ಮಾಣದ ಕುರಿತು ಅವಶ್ಯಕತೆ ಇರುವ ಅನುದಾನದ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭಜಿಲ್ಲಾ ಸಾರ್ವಜನಿಕ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ್, ತಾಲೂಕು ತಹಶೀಲ್ದಾರ್ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಮಹೇಶ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಣ್ಣಯ್ಯ, ಮುಖ್ಯ ಶಿಕ್ಷಕಿ ಕಾಮಕ್ಷಿ ಮತ್ತಿತರರು ಇದ್ದರು.
ಸುಂಟಿಕೊಪ್ಪ ಜ.2 : ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಜ್ಞಾನ ಮಾದರಿ ತಯಾರಿಕೆ ಹಾಗೂ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಸಂತ ಕ್ಲಾರ ಕಾನ್ವೆಂಟಿನ ಸಿಸ್ಟರ್ ನಿರ್ಮಲ, ಸಂತ ಅಂತೋಣಿ ಶಾಲೆಯ ಸಹಶಿಕ್ಷಕಿ ಯಿವಾಬೆನ್ಸಿಸ್ ಹಾಗೂ ಪ್ರೀತಿ ಉದ್ಘಾಟಿಸಿದರು. ಮಕ್ಕಳಿಗೆ ವಿಜ್ಞಾನದ ಕುರಿತು ಆರಿವು ಮೂಡಿಸುವ ಮತ್ತು ಜ್ಞಾನವನ್ನು ವೃದ್ಧಿಸುವ ದಿಸೆಯಲ್ಲಿ ಮಕ್ಕಳೇ ತಯಾರಿಸಿರುವ ವಿಜ್ಞಾನ ಮಾದರಿಗಳನ್ನು ಅದರ ಬಗ್ಗೆ ನಿಕಾರ ಮಾಹಿತಿಯನ್ನು ಒದಗಿಸುವ ಸ್ಪರ್ಧೇಯನ್ನು ಆಯೋಜಿಸಲಾಗಿತ್ತು. ಶಾಲೆಯ ವಿದ್ಯಾರ್ಥಿಗಳು ಹುರುಪಿನಿಂದ ವಿಜ್ಞಾನದ ಮಾದರಿಗಳನ್ನು ಹನಿನೀರು, ವಿದ್ಯುತ್ ತಯಾರಿಕ ಸ್ಥಾವರಗಳು, ಕೃಷಿ, ಆರೋಗ್ಯ, ಹವಾಮಾನ ಸಂಬಂಧಿಸಿದ ಮಾದರಿಗಳನ್ನು ತಯಾರಿಸಿ ತಂದಿದ್ದು, ಇದರಿಂದ ಭೂಮಿಗೆ ದೊರುಕುವ ಪ್ರಯೋಜನಗಳ ಬಗ್ಗೆ ವಿವರಣೆಯನ್ನು ನೀಡುವ ಮೂಲಕ ಮಕ್ಕಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದರು.
ಮಡಿಕೇರಿ ಜ.2 : ವೈಷ್ಣವಿ ಫುಟ್ಬಾಲ್ ಕ್ಲಬ್ ವತಿಯಿಂದ ಮರಗೋಡುವಿನ ಗ್ರಾ.ಪಂ ಸುತ್ತ ಮುತ್ತ ಸ್ವಚ್ಛತಾ ಶ್ರಮದಾನ ನಡೆಯಿತು. ವಿಷ್ಣವಿ ಫುಟ್ಬಾಲ್ ಕ್ಲಬ್ 15ಕ್ಕೂ ಅಧಿಕ ಕಾರ್ಯಕರ್ತರು ರಸ್ತೆ ಬದಿ ಎಸೆಯಲಾಗಿದ್ದ ಪ್ಲಾಸ್ಟಿಕ್, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಸುಮಾರು 5 ಚೀಲ ಕಸ ಸಂಗ್ರಹಿಸಿ ಪಂಚಾಯಿತಿಗೆ ನೀಡಿದರು. ಶ್ರಮದಾನದಲ್ಲಿ ಕೊಡಗು ಜಿಲ್ಲಾ ಪುಟ್ಬಾಲ್ ಸಂಸ್ಥೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ತೀರ್ಪುಗಾರ ದರ್ಶನ್ ಸುಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ವಿರಾಜಪೇಟೆ ಜ.2 : ಆಕ್ಸ್ಫರ್ಡ್ ಎಫ್.ಸಿ. ವಿರಾಜಪೇಟೆ ಕೊಡಗು ವತಿಯಿಂದ ನಗರದ ಸಂತ ಅನ್ನಮ್ಮ ಕಾಲೇಜು ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 3ವರ್ಷದ ಅಖಿಲ ಭಾರತ ಪುರುಷರ ಮುಕ್ತ ನೈನ್ಸ್ (09) ರಾಷ್ಟ್ರ ಮಟ್ಟದ ಕಾಲ್ಚೆಂಡು ಪಂದ್ಯಾವಳಿ ನಡೆಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಕಾಲ್ಚೆಂಡು ಒದೆಯುವ ಮೂಲಕ ಫೈನಲ್ ಪಂದ್ಯಾವಳಿಗೆ ಚಾಲನೆ ನೀಡಿ, ಶುಭಹಾರೈಸಿದರು. ಭಾರತೀಯ ಸೇನೆಯ ಸೇನಾಧಿಕಾರಿ ಜೆ.ಸಿ.ಓ ಎಂ.ಎಲ್.ಲೋಹಿತ್ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಣಬಹುದು. ಕ್ರೀಡೆಯಲ್ಲಿ ಸಾಧನೆ ಮಾಡಿದ ಯುವ ತರುಣರಿಗೆ ಸೇನೆಯಲ್ಲಿ ವಿಫಲ ಅವಕಾಶಗಳಿವೆ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಾರೀರಿಕ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೃಡಕಾಯ ದೇಹ ಸಿರಿಯನ್ನು ಗಳಿಸಬಹುದಾಗಿದೆ. ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಿದರು. ವಿರಾಜಪೇಟೆ ಆಕ್ಸ್ಫರ್ಡ್ ಎಫ್.ಸಿ.ಅಧ್ಯಕ್ಷ ರೆನ್ಸಾನ್ ಚಾಕೋ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಇಗಲ್ಸ್ ಸ್ವೀಚ್ಗೆರ್ಸ್ನ ಪ್ರಧಾನ ನಿರ್ದೇಶಕರಾದ ಮಧು ನಾಣಯ್ಯ, ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ…
ಮಡಿಕೇರಿ ಜ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯು ಜನವರಿ, 3 ಮತ್ತು 4 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಜನವರಿ, 3 ರಂದು ಬೆಳಗೆ 10.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ…






