ಮಡಿಕೇರಿ NEWS DESK ಜ.1 : ಕಳೆದ 30 ವರ್ಷಗಳಿಂದ ಕೊಡಗಿನ ಮನೆ ಮಾತಾಗಿರುವ ಮಡಿಕೇರಿಯ ಪ್ರತಿಷ್ಠಿತ ಎಲೆಕ್ಟ್ರಾನಿಕ್ & ಫರ್ನಿಚರ್ ಶೋರೂಮ್ “ವ್ಯಾಂಡಮ್ ಎಂಟರ್ ಪ್ರೈಸಸ್” ಸಂಸ್ಥೆಯ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಭವ್ಯವಾಗಿ ಬಿಡುಗಡೆಗೊಳಿಸಲಾಯಿತು. ಈ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಖ್ಯಾತ ಹಿರಿಯ ವಕೀಲರು, ಲೇಖಕರು, ಸಾಹಿತಿಗಳು ಹಾಗೂ ವಿಮರ್ಶಕರಾದ ಕೆ.ಪಿ.ಬಾಲಸುಬ್ರಹ್ಮಣ್ಯ ಹಾಗೂ ಹಿರಿಯರಾದ ಆಶಾ ಬಾಲಸುಬ್ರಹ್ಮಣ್ಯ, ಬೆಂಗಳೂರು ನಗರದ ಪ್ರತಿಷ್ಠಿತ “Tooth Fix” Dental Health Care ಸಂಸ್ಥೆಯ ಡೆಂಟಲ್ ಸರ್ಜನ್ ಡಾ.ಅನಿರುದ್ಧ್ ಕೆ.ಬಿ ಹಾಗೂ ಡೆಂಟಲ್ ಓರಲ್ ಸರ್ಜರಿ ತಜ್ಞೆ ಡಾ.ಪವಿತ್ರಾ ಭಟ್ ಅವರ ಅವರ ಉಪಸ್ಥಿತಿಯಲ್ಲಿ ನಡೆಯಿತು. ವ್ಯಾಂಡಮ್ ಎಂಟರ್ ಪ್ರೈಸಸ್ ನ ಮಾಲೀಕ ಕೆ.ಕೆ.ದಾಮೋದರ್ ಅವರು ಮಾತನಾಡಿ ವ್ಯಾಂಡಮ್ ಎಂಟರ್ ಪ್ರೈಸಸ್ ಸಂಸ್ಥೆಯ ಯಶಸ್ವಿ ಪಯಣಕ್ಕೆ ಇದು ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ ಎಂದರು.
ಲೇಖಕ: admin
ಮಡಿಕೇರಿ NEWS DESK ಜ.1 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿಂದುಮಣಿ ಅವರು ಇಂದು ನಗರದ ಎಸ್ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿಗೆ ವರ್ಗಾವಣೆಗೊಂಡ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರ ಹಸ್ತಾಂತರಿಸಿದರು.
ಮಡಿಕೇರಿ NEWS DESK ಜ.1 : ಮೂಲನಿವಾಸಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಬುಡಕಟ್ಟು ಜನಾಂಗಕ್ಕೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆಯನ್ನು ಒಳಗೊಂಡAತೆ ಹತ್ತು ಗೌರವಾನ್ವಿತ ಗುರಿಗಳು ಮತ್ತು ಸಂವಿಧಾನಿಕ ಆಶಯಗಳನ್ನು ಈಡೇರಿಸಲು ಸುದೀರ್ಘ ಪಯಣವನ್ನು ಮುಂದುವರೆಸಿರುವ ಕೊಡವ ನ್ಯಾಷನಲ್ ಸಂಘಟನೆ ನೂತನ ವರ್ಷದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಆಂತರಿಕ ರಾಜಕೀಯ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕು ಸೇರಿದಂತೆ ಸಂವಿಧಾನ ಬದ್ಧ ಹಕ್ಕುಗಳಿಗಾಗಿ ತನ್ನ ಗುರಿಯನ್ನು ಪ್ರತಿಪಾದಿಸಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ನಿಂದ ಎಲ್ಲರಿಗೂ ಜಾಗತಿಕ ಹೊಸ ವರ್ಷದ ಪ್ರಯುಕ್ತ ಸಿಎನ್ಸಿ ಸರ್ವರಿಗೂ ಸಮೃದ್ಧ, ಸುಖ, ಶಾಂತಿ ಮತ್ತು ನೆಮ್ಮದಿಯನ್ನು ಹಾರೈಸುವುದರೊಂದಿಗೆ 2026 ರ ಸದಾಶಯವನ್ನು ಕೋರುತ್ತದೆ. ಕೊಡವ ಪಂಚಾಂಗದ ಪ್ರಕಾರ ಆದಿವಾಸಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಏಪ್ರಿಲ್ 14 ರಂದು “ಎಡ್ಮ್ಯಾರ್ ಒಂದ್” ಎಂಬ ಹೊಸ ವರ್ಷವನ್ನು ಆಚರಿಸುತ್ತದೆ. ಸಿಎನ್ಸಿ ಇದರ ಪ್ರಮುಖ ರೂವಾರಿಯಾಗಿದೆ. ಆದರೆ…
ಮಡಿಕೇರಿ ಜ.1 NEWS DESK : 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಶನಿವಾರಸಂತೆ ಟೌನ್ ಫೀಡರ್ನಲ್ಲಿ ಜನವರಿ, 02 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ. 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಎಫ್5 ಹೊದ್ದೂರು ಹಾಗೂ ಪಾರಾಣೆ ಫೀಡರ್ಗಳಲ್ಲಿ ಜನವರಿ, 02 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಪಾಲೂರು, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ, ನರಿಯಂದಡ,…
ಮಡಿಕೇರಿ ಜ.1 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮ ಪ್ರಗತಿ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವಿದ್ಯುತ್, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನಗರಾಭಿವೃದ್ಧಿ, ನೀರಾವರಿ ಹೀಗೆ ವಿವಿಧ ಇಲಾಖೆಗಳು ನಿಗಧಿ ಮಾಡಿರುವ ಶೇಕಡಾವಾರು ಪ್ರಗತಿ ಸಾಧನೆಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. :: ಜಿಲ್ಲಾ ಜಾಗೃತಿ ಸಮಿತಿ ಸಭೆ :: ಸಫಾಯಿ ಕರ್ಮಚಾರಿಗಳ/ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯದ…
ಮಡಿಕೇರಿ ಜ.1 NEWS DESK : ಪರಿಶಿಷ್ಟ ಸಮುದಾಯದ ಯುವಕನನ್ನು ವಿವಾಹವಾದ ಕಾರಣಕ್ಕಾಗಿ ಯುವತಿಯನ್ನು ಆಕೆಯ ತಂದೆ ಮತ್ತಿತರರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಗಲ್ಲುಶಿಕ್ಷೆಗೆ ಗುರಿ ಪಡಿಸಬೇಕೆಂದು ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕರಾದ ಜೆ.ಎಲ್.ಜನಾರ್ಧನ್ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹುಬ್ಬಳ್ಳಿ ತಾಲ್ಲೂಕು ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿಯ ಮರ್ಯಾದಾ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಜಾತಿ ವ್ಯವಸ್ಥೆ ಇನ್ನೂ ಕೂಡ ಜೀವಂತವಾಗಿರುವುದಕ್ಕೆ ಈ ಘಟನೆ ಸ್ಪಷ್ಟ ಸಾಕ್ಷಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳೇ ಆಗಿದ್ದರೂ ಸಂವಿಧಾನದ ರಕ್ಷಣೆಯಡಿ ಪ್ರತಿಯೊಬ್ಬರು ಸ್ವತಂತ್ರವಾಗಿ ಬದುಕಲು ಸಾಧ್ಯವಾಗದೆ ಇರುವುದು ವಿಷಾದಕರ ಎಂದು ತಿಳಿಸಿದ್ದಾರೆ. ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಈ ಮರ್ಯಾದಾ ಹತ್ಯೆ ಪ್ರಕರಣ ಕಪ್ಪುಚುಕ್ಕೆಯಾಗಿದೆ. ಮೃತ ಯುವತಿಯ ಪತಿ, ಪರಿಶಿಷ್ಟ ಸಮುದಾಯದ ವಿವೇಕಾನಂದ…
ಮಡಿಕೇರಿ ಜ.1 NEWS DESK : ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ ಎಂದು ಸಾಹಿತಿ ಉ.ರಾ.ನಾಗೇಶ್ ಅವರು ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಅವರು ಹೊಯ್ಸಳ ಶೈಲಿಯ ಕಲ್ಯಾಣ ಚಾಲುಕ್ಯರ ದೇವಾಲಯಗಳಾದ ಬೇಲೂರು ಮತ್ತು ಹಳೇಬೀಡುವಿನಂತಹ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ ಎಂದು ಅವರು ಹೇಳಿದರು. ‘ಜಕಣಾಚಾರಿ ಅವರು ತುಮಕೂರು ಜಿಲ್ಲೆಯ ಕೈದಾಳ ಗ್ರಾಮದಲ್ಲಿ ಜನಿಸಿ ಸುಮಾರು 80 ವರ್ಷಗಳ ಕಾಲ ಬದುಕಿ 150 ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಿಸಿ ಅಮರಶಿಲ್ಪಿ ಬಿರುದು ಹೊಂದಿದ್ದಾರೆ ಎಂದು ಉ.ರಾ.ನಾಗೇಶ್ ಅವರು ತಿಳಿಸಿದರು.’ ಬಾಲ್ಯದಿಂದಲೇ ಶಿಲ್ಪಕಲೆಗೆ ತನ್ನನ್ನು ಅರ್ಪಿಸಿಕೊಂಡು ದೇಶದಾದ್ಯಂತ ಸಂಚರಿಸಿ ನೂರಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ ಎಂದರು. ಕರ್ನಾಟಕ ಜನಪದ ಸಂಸ್ಕøತಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರವಾಗಿದ್ದು, ರಾಜ್ಯ ಸರ್ಕಾರವು ಮಾಸ್ಟರ್ ಶಿಲ್ಪಿಗಳಿಗಾಗಿ ‘ಅಮರಶಿಲ್ಪಿ…
ಕುಶಾಲನಗರ ಜ.1 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಎಂಬ ವಿಷಯವಾರು ಕೀಳೆರಿಮೆ ಹಾಗೂ ವ್ಯತ್ಯಾಸವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ಅವರ ಇಚ್ಛೆ ಹಾಗೂ ಆಸಕ್ತಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಎಲ್ಲಾ ವಿಭಾಗಗಳು ಮುಖ್ಯವಾಗಿವೆ. ಚನ್ನಾಗಿ ಓದಿ ಉತ್ತಮ ಅಂಕಗಳಿಸಿದಲ್ಲಿ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯವಿದೆ ಎಂದರು. ಈ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಪ್ರಮಾಣ ಜಾಸ್ತಿ ಇದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಹೆಚ್ಚಿನ ಆದ್ಯತೆ ನೀಡಲಾಗಿದೆ.ಅದು ನಿಮ್ಮ ಹಕ್ಕು ಕೂಡ ಆಗಿದೆ. ಹೆಣ್ಣು ಮಕ್ಕಳು ವಿದ್ಯಾವಂತರಾದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಡಕುಟುಂಬದಲ್ಲಿ ಹುಟ್ಟಿದ್ದರು ಕೂಡ ಅವರು ಪುಸ್ತಕಗಳನ್ನು ಸಂಗ್ರಹಿಸಿ ಅಧ್ಯಯನ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಶ್ವದಲ್ಲಿಯೇ ಶ್ರೇಷ್ಠ ಜ್ಞಾನಿ ಎನಿಸಿಕೊಂಡರು. ಈ…
ಮಡಿಕೇರಿ ಜ.1 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹೊಸ ವರ್ಷದ ಪ್ರಯುಕ್ತ ಟ್ರ್ಯಾಕ್ಶೂಟ್ ಅನ್ನು ವಿತರಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ಎಸ್ ಡಿಎಂಸಿಯ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ಜ.1 NEWS DESK : ಏರ್ ಮಾರ್ಷಲ್ ಸೀತೆಪಲ್ಲಿ ಶ್ರೀನಿವಾಸ್ ಅವರು 2026ರ ಜ.1 ರಂದು ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ನ ವಾಯುಪಡೆಯ ಕಮಾಂಡಿಂಗ್-ಇನ್-ಚೀಫ್ (ಎಒಸಿ-ಇನ್-ಸಿ) ಆಗಿ ಅಧಿಕಾರ ವಹಿಸಿಕೊಂಡರು. ಹೊಸ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಏರ್ ಮಾರ್ಷಲ್ ತರಬೇತಿ ಕಮಾಂಡ್ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛವಿರಿಸುವ ಮೂಲಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಏರ್ ಮಾರ್ಷಲ್ ಶ್ರೀನಿವಾಸ್ ಅವರನ್ನು 1987 ರ ಜೂ.13 ರಂದು ಐಎಎಫ್ ನ ಫೈಟರ್ ವಿಭಾಗದಲ್ಲಿ ನಿಯೋಜಿಸಲಾಗಿತ್ತು. ಅವರು ಮಿಗ್-21, ಇಸ್ಕ್ರಾ, ಕಿರಣ್, ಪಿಸಿ-7 ಎಂಕೆ II, ಎಚ್ ಪಿಟಿ-32 ಮತ್ತು ಮೈಕ್ರೋಲೈಟ್ ಸೇರಿದಂತೆ ಇತರ ವಿಮಾನಗಳಲ್ಲಿ 4200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ. ಅವರು‘ಎ ಶ್ರೇಣಿಯ’ಅರ್ಹ ಫ್ಲೈಯಿಂಗ್ ಬೋಧಕರಾಗಿದ್ದು, ಚೇತಕ್ / ಚೀತಾ ಹೆಲಿಕಾಪ್ಟರ್ನಲ್ಲಿ 2 ನೇ ಪೈಲಟ್ ಮತ್ತು ಪೆಚೋರಾ ಕ್ಷಿಪಣಿ ವ್ಯವಸ್ಥೆಯಲ್ಲಿ ಕಾರ್ಯಾಚರಣೆ ಅಧಿಕಾರಿಯಾಗಿಯೂ ಅವರು ಅರ್ಹತೆ ಪಡೆದಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ…






